Homeಕರ್ನಾಟಕಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

- Advertisement -
- Advertisement -

ಇಂದು ಮಂಡ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲೆಯನ್ನು ಭಾದಿಸುತ್ತಿರುವ ಸಮಸ್ಯೆಗಳ ಬಗೆಹರಿಸುವಂತೆ ಮನವಿ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯನ್ನು ಕಾಡುತ್ತಿರುವ ಬೆಲೆಯೇರಿಕೆ, ಮಹಿಳೆಯರ ಮೇಲಿನ ಅತ್ಯಾಚಾರಗಳು, ರೈತರ ಸಮಸ್ಯೆ ಮತ್ತು ಕಾರ್ಖಾನೆಗಳಲ್ಲಿ ದುಡಿವವರಿಗೆ ಕೆಲಸದ ಅವಧಿ ಹೆಚ್ಚಳದಂತಹ ಸಮಸ್ಯೆಗಳನ್ನು ಈ ಕೂಡಲೇ ನಿಯಂತ್ರಣಕ್ಕೆತರುವಂತೆ ಆಗ್ರಹ ಪತ್ರ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಸಿದ್ದರಾಜು, ಪೂರ್ಣಿಮ, ಶಿಲ್ಪ ಮತ್ತು ನಗರಗೆರೆ ಜಗದೀಶ್‌ರವರನ್ನು ಬಂಧಿಸಿಡಲಾಗಿದೆ.

ದಿನಬಳಕೆ ವಸ್ತುಗಳ ಬೆಲೆಗಳು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ದುಬಾರಿಯಾಗಿದೆ. ಜೀವನ ವೆಚ್ಚವನ್ನು ನಿರ್ವಹಿಸುವ ಹೊಣೆ ಹೊತ್ತ ಹೆಣ್ಣುಜೀವಗಳು ಇಂತಹ ಬೆಲೆಯೇರಿಕೆಯನ್ನು ಸಹಿಸಲಾಗದೆ ನಲುಗುತ್ತಿವೆ. ಬಡವರು, ದಲಿತ-ದಮನಿತರು ಮತ್ತು ಮಹಿಳೆಯರ ಬದುಕನ್ನು ನರಕವಾಗಿಸಿರುವ ಬೆಲೆಯೇರಿಕೆಯನ್ನು ಕೂಡಲೇ ನಿಯಂತ್ರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಅಲ್ಲದೆ ಎಕ್ಸ್‌ಪ್ರೆಸ್‌ನಿಂದಾಗಿ ಉದ್ಯೋಗ ಕಳೆದುಕೊಳ್ಳುವ ಜನರಿಗೆ ಪುನರ್‌ವಸತಿ ಕಲ್ಪಿಸಬೇಕು ಎನ್ನಲಾಗಿದೆ.

ಮಹಿಳೆಯರ ಮೇಲಿನ ಅತ್ಯಾಚಾರಗಳುಒಂದೆಡೆ ವಿಪರೀತ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಅದರ ಬರ್ಬರತೆಯೂ ಹೆಚ್ಚುತ್ತಿದೆ. ಪುಟ್ಟ ಮಕ್ಕಳೂ ಈ ದೌರ್ಜನ್ಯದಿಂದ ಕೊಲೆಯಾಗುತ್ತಿರುವ ಕ್ರೂರವಾದ ಸಂದರ್ಭದಲ್ಲಿ, ಅತ್ಯಾಚಾರಿಗಳನ್ನು ನೀವು ಪ್ರತಿನಿಧಿಸುವ ಪಕ್ಷವು ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಶಿಕ್ಷೆಯಿಂದ ವಿನಾಯಿತಿ ನೀಡಿ ಬಿಡುಗಡೆ ಮಾಡುತ್ತಿರುವುದು, ಅತ್ಯಾಚಾರಿಗಳನ್ನುರಕ್ಷಣೆ ಮಾಡುತ್ತಿರುವುದು, ಜೊತೆಗೆ ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಕರೆಕೊಡುವ ವ್ಯಕ್ತಿಗಳೀಗೂ ಪಕ್ಷದ ಮುಖ್ಯ ಹುದ್ದೆಗಳಲ್ಲಿ ಮುಂದುವರೆಯುವ ಅವಕಾಶ ನೀಡುತ್ತಿರುವುದು ತೀವ್ರವಾಗಿ ಖಂಡನಾರ್ಹ. ವಿಶೇಷವಾಗಿ ದಲಿತ, ಅಲ್ಪಸಂಖ್ಯಾತ, ದುಡಿಯುವ ಮಹಿಳೆಯರ ಮೇಲಿನ ಅತ್ಯಾಚಾರಗಳ ವಿಚಾರದಲ್ಲಿ ಸರ್ಕಾರದ ಸಮ್ಮತಿಯು ನಿಚ್ಚಳವಾಗಿ ಕಾಣುತ್ತಿದೆ. ಭಾರತದ ಮಹಿಳೆಯರೂ ಕೂಡಾ ಈ ದೇಶದ ಪ್ರಜೆಗಳೇ. ಅವರಿಗೆ ಸಂವಿಧಾನ ಬದ್ಧವಾದ ರಕ್ಷಣೆಯ ಹಕ್ಕನ್ನು ನಾವು ಆಗ್ರಹಿಸುತ್ತೇವೆ ಎಂದ ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

ಮಂಡ್ಯ ಜಿಲ್ಲೆಯು ಎಲ್ಲಾ ರೀತಿಯ ಸಂಪತ್ತು ಹೊಂದಿದ್ದರೂ ಸಹ ಅದರ ಫಲ ಜಿಲ್ಲೆಯ ಜನರಿಗೆ ಸಿಗುತ್ತಿಲ್ಲ. ಮುಖ್ಯವಾಗಿ ರೈತರು ಎಷ್ಟೇ ಬೆಳೆದರೂ ಸಮರ್ಪಕ ಬೆಲೆ ಇಲ್ಲದೆ ಕಷ್ಟ ಅನುಭವಿಸುತ್ತಿದ್ದಾರೆ. ಇನ್ನು ನೀವು ಜಾರಿಗೊಳಿಸಿದಂತಹ ಕರಾಳ ಕೃಷಿ ಕಾನೂನುಗಳನ್ನು ವಾಪಸ್ ಪಡೆದರೂ ಸಹ ರಾಜ್ಯ ಸರ್ಕಾರ ವಾಪಸ್ ಪಡೆಯದ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಕೂಡಲೇ ರಾಜ್ಯದ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದಿದ್ದಾರೆ. ಜೊತೆಗೆ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಈಚೆಗೆ ತಮ್ಮದೇ ಪಕ್ಷ ಆಳ್ವಿಕೆಯಲ್ಲಿರುವ ನಮ್ಮ ರಾಜ್ಯದಲ್ಲಿ ಮಹಿಳೆಯರನ್ನೂ ಒಳಗೊಂಡಂತೆ ಎಲ್ಲ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವುದು, ಮಹಿಳಾ ಕಾರ್ಮಿಕರಿಗೆ ಯಾವುದೇ ವಿಶೇಷ ರಕ್ಷಣೆಯ ನೀತಿಯಿಲ್ಲದೆ ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಅವಕಾಶ ನೀಡಿರುವುದು ಅತಿದೊಡ್ಡ ಕಾರ್ಮಿಕ ವಿರೋಧೀತನವಾಗಿದೆ. ಎಲ್ಲ ಕಾರ್ಮಿಕರಿಗೂ ಇದು ಹಾನಿಕರವಾದರೂ ಮಹಿಳಾ ಕಾರ್ಮಿಕರು ಈಗಾಗಲೇ ಮನೆಗೆಲಸ ಮತ್ತು ಹೆಚ್ಚು ಶ್ರಮಹಾಕಬೇಕಾದ ಹೊರಗಿನ ಕೆಲಸ ಎರಡರ ಹೊರೆಯನ್ನೂ ಹೊತ್ತವರಾಗಿ, ಹೆಚ್ಚುವರಿ ಕೆಲಸದ ಅವಧಿಯು ಅವರ ಆರೋಗ್ಯ ಮತ್ತು ಬದುಕಿನ ಮೇಲೆ ಅತ್ಯಂತ ಗಂಭೀರವಾದ ದುಷ್ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಲಾಗಿದೆ.

ಈ ಎಲ್ಲ ವಿಷಯಗಳಲ್ಲೂ ಕೂಡಲೇ ನಿಯಂತ್ರಿಸಿ, ಮಹಿಳಾ ವಿರೋಧಿ, ಜನವಿರೋಧಿ ನೀತಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತೇವೆ. ಇವಿಷ್ಟೇ ಅಲ್ಲದೆ, ಬಡಜನರ ಭೂಮಿ ಮತ್ತು ವಸತಿಯ ಹಕ್ಕನ್ನು ಕಸಿಯುವ ಪ್ರಯತ್ನಗಳನ್ನು, ಅಲ್ಪಸಂಖ್ಯಾತರು ಮತ್ತು ಅಂಚಿಗೊತ್ತಲ್ಪಟ್ಟವೆ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಈ ತಕ್ಷಣದಲ್ಲೇ ನಿಲುಗಡೆಗೆ ತರಬೇಕು. ಸಂವಿಧಾನಬದ್ಧವಾದ, ಪ್ರಜಾತಾಂತ್ರಿಕ, ಜಾತ್ಯತೀತ, ನಾಗರೀಕವಾದ ಬದುಕಿನ ಪರಿಸ್ಥಿತಿಯನ್ನು ಕಲ್ಪಿಸಬೇಕೆಂದು ನೀವಿಂದು ಭೇಟಿಕೊಡುತ್ತಿರುವ ಮಂಡ್ಯ ಜಿಲ್ಲೆಯ ಎಲ್ಲ ಜನತೆ ಮತ್ತು ಮಹಿಳೆಯರ ಪರವಾಗಿ ಈ ಮೂಲಕ ಆಗ್ರಹಿಸುತ್ತಿದ್ದೇವೆ.

ದೇಶದ ಪ್ರಜೆಗಳಾಗಿ ಗೌರವಯುತವಾಗಿ ಹಕ್ಕೊತ್ತಾಯ ಸಲ್ಲಿಸಲು ಬಂದ ನಮ್ಮನ್ನು ತಡೆದು ಪೊಲೀಸರು ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಕೂಡನೇ ನಮ್ಮನ್ನು ಬಿಡುಗಡೆ ಮಾಡಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆಯಲ್ಲಿಯೇ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಬಂಧಿತ ಹೋರಾಟಗಾರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಠಾಣೆಯಿಂದಲೇ ಪತ್ರ ಬರೆದಿದ್ದಾರೆ.

ಪೊಲೀಸರು ಈ ಕೂಡಲೇ ಬಂಧಿತ ಮುಖಂಡರನ್ನು ಬಿಡುಗಡೆಗೊಳಿಸದಿದ್ದರೆ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಪ್ರತಿಭಟನಾಕಾರರ ಪರವಾಗಿ ಠಾಣೆಗೆ ಹಾಜರಾದ ಹಾಜರಾದ ಪ್ರಗತಿಪರ ವಕೀಲರಾದ ಬಿ ಟಿ ವಿಶ್ವನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದ ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರ ದುರುಪಯೋಗ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...