Homeಕರ್ನಾಟಕಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

- Advertisement -
- Advertisement -

ಇಂದು ಮಂಡ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲೆಯನ್ನು ಭಾದಿಸುತ್ತಿರುವ ಸಮಸ್ಯೆಗಳ ಬಗೆಹರಿಸುವಂತೆ ಮನವಿ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯನ್ನು ಕಾಡುತ್ತಿರುವ ಬೆಲೆಯೇರಿಕೆ, ಮಹಿಳೆಯರ ಮೇಲಿನ ಅತ್ಯಾಚಾರಗಳು, ರೈತರ ಸಮಸ್ಯೆ ಮತ್ತು ಕಾರ್ಖಾನೆಗಳಲ್ಲಿ ದುಡಿವವರಿಗೆ ಕೆಲಸದ ಅವಧಿ ಹೆಚ್ಚಳದಂತಹ ಸಮಸ್ಯೆಗಳನ್ನು ಈ ಕೂಡಲೇ ನಿಯಂತ್ರಣಕ್ಕೆತರುವಂತೆ ಆಗ್ರಹ ಪತ್ರ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಸಿದ್ದರಾಜು, ಪೂರ್ಣಿಮ, ಶಿಲ್ಪ ಮತ್ತು ನಗರಗೆರೆ ಜಗದೀಶ್‌ರವರನ್ನು ಬಂಧಿಸಿಡಲಾಗಿದೆ.

ದಿನಬಳಕೆ ವಸ್ತುಗಳ ಬೆಲೆಗಳು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ದುಬಾರಿಯಾಗಿದೆ. ಜೀವನ ವೆಚ್ಚವನ್ನು ನಿರ್ವಹಿಸುವ ಹೊಣೆ ಹೊತ್ತ ಹೆಣ್ಣುಜೀವಗಳು ಇಂತಹ ಬೆಲೆಯೇರಿಕೆಯನ್ನು ಸಹಿಸಲಾಗದೆ ನಲುಗುತ್ತಿವೆ. ಬಡವರು, ದಲಿತ-ದಮನಿತರು ಮತ್ತು ಮಹಿಳೆಯರ ಬದುಕನ್ನು ನರಕವಾಗಿಸಿರುವ ಬೆಲೆಯೇರಿಕೆಯನ್ನು ಕೂಡಲೇ ನಿಯಂತ್ರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಅಲ್ಲದೆ ಎಕ್ಸ್‌ಪ್ರೆಸ್‌ನಿಂದಾಗಿ ಉದ್ಯೋಗ ಕಳೆದುಕೊಳ್ಳುವ ಜನರಿಗೆ ಪುನರ್‌ವಸತಿ ಕಲ್ಪಿಸಬೇಕು ಎನ್ನಲಾಗಿದೆ.

ಮಹಿಳೆಯರ ಮೇಲಿನ ಅತ್ಯಾಚಾರಗಳುಒಂದೆಡೆ ವಿಪರೀತ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಅದರ ಬರ್ಬರತೆಯೂ ಹೆಚ್ಚುತ್ತಿದೆ. ಪುಟ್ಟ ಮಕ್ಕಳೂ ಈ ದೌರ್ಜನ್ಯದಿಂದ ಕೊಲೆಯಾಗುತ್ತಿರುವ ಕ್ರೂರವಾದ ಸಂದರ್ಭದಲ್ಲಿ, ಅತ್ಯಾಚಾರಿಗಳನ್ನು ನೀವು ಪ್ರತಿನಿಧಿಸುವ ಪಕ್ಷವು ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಶಿಕ್ಷೆಯಿಂದ ವಿನಾಯಿತಿ ನೀಡಿ ಬಿಡುಗಡೆ ಮಾಡುತ್ತಿರುವುದು, ಅತ್ಯಾಚಾರಿಗಳನ್ನುರಕ್ಷಣೆ ಮಾಡುತ್ತಿರುವುದು, ಜೊತೆಗೆ ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಕರೆಕೊಡುವ ವ್ಯಕ್ತಿಗಳೀಗೂ ಪಕ್ಷದ ಮುಖ್ಯ ಹುದ್ದೆಗಳಲ್ಲಿ ಮುಂದುವರೆಯುವ ಅವಕಾಶ ನೀಡುತ್ತಿರುವುದು ತೀವ್ರವಾಗಿ ಖಂಡನಾರ್ಹ. ವಿಶೇಷವಾಗಿ ದಲಿತ, ಅಲ್ಪಸಂಖ್ಯಾತ, ದುಡಿಯುವ ಮಹಿಳೆಯರ ಮೇಲಿನ ಅತ್ಯಾಚಾರಗಳ ವಿಚಾರದಲ್ಲಿ ಸರ್ಕಾರದ ಸಮ್ಮತಿಯು ನಿಚ್ಚಳವಾಗಿ ಕಾಣುತ್ತಿದೆ. ಭಾರತದ ಮಹಿಳೆಯರೂ ಕೂಡಾ ಈ ದೇಶದ ಪ್ರಜೆಗಳೇ. ಅವರಿಗೆ ಸಂವಿಧಾನ ಬದ್ಧವಾದ ರಕ್ಷಣೆಯ ಹಕ್ಕನ್ನು ನಾವು ಆಗ್ರಹಿಸುತ್ತೇವೆ ಎಂದ ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

ಮಂಡ್ಯ ಜಿಲ್ಲೆಯು ಎಲ್ಲಾ ರೀತಿಯ ಸಂಪತ್ತು ಹೊಂದಿದ್ದರೂ ಸಹ ಅದರ ಫಲ ಜಿಲ್ಲೆಯ ಜನರಿಗೆ ಸಿಗುತ್ತಿಲ್ಲ. ಮುಖ್ಯವಾಗಿ ರೈತರು ಎಷ್ಟೇ ಬೆಳೆದರೂ ಸಮರ್ಪಕ ಬೆಲೆ ಇಲ್ಲದೆ ಕಷ್ಟ ಅನುಭವಿಸುತ್ತಿದ್ದಾರೆ. ಇನ್ನು ನೀವು ಜಾರಿಗೊಳಿಸಿದಂತಹ ಕರಾಳ ಕೃಷಿ ಕಾನೂನುಗಳನ್ನು ವಾಪಸ್ ಪಡೆದರೂ ಸಹ ರಾಜ್ಯ ಸರ್ಕಾರ ವಾಪಸ್ ಪಡೆಯದ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಕೂಡಲೇ ರಾಜ್ಯದ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದಿದ್ದಾರೆ. ಜೊತೆಗೆ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಈಚೆಗೆ ತಮ್ಮದೇ ಪಕ್ಷ ಆಳ್ವಿಕೆಯಲ್ಲಿರುವ ನಮ್ಮ ರಾಜ್ಯದಲ್ಲಿ ಮಹಿಳೆಯರನ್ನೂ ಒಳಗೊಂಡಂತೆ ಎಲ್ಲ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವುದು, ಮಹಿಳಾ ಕಾರ್ಮಿಕರಿಗೆ ಯಾವುದೇ ವಿಶೇಷ ರಕ್ಷಣೆಯ ನೀತಿಯಿಲ್ಲದೆ ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಅವಕಾಶ ನೀಡಿರುವುದು ಅತಿದೊಡ್ಡ ಕಾರ್ಮಿಕ ವಿರೋಧೀತನವಾಗಿದೆ. ಎಲ್ಲ ಕಾರ್ಮಿಕರಿಗೂ ಇದು ಹಾನಿಕರವಾದರೂ ಮಹಿಳಾ ಕಾರ್ಮಿಕರು ಈಗಾಗಲೇ ಮನೆಗೆಲಸ ಮತ್ತು ಹೆಚ್ಚು ಶ್ರಮಹಾಕಬೇಕಾದ ಹೊರಗಿನ ಕೆಲಸ ಎರಡರ ಹೊರೆಯನ್ನೂ ಹೊತ್ತವರಾಗಿ, ಹೆಚ್ಚುವರಿ ಕೆಲಸದ ಅವಧಿಯು ಅವರ ಆರೋಗ್ಯ ಮತ್ತು ಬದುಕಿನ ಮೇಲೆ ಅತ್ಯಂತ ಗಂಭೀರವಾದ ದುಷ್ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಲಾಗಿದೆ.

ಈ ಎಲ್ಲ ವಿಷಯಗಳಲ್ಲೂ ಕೂಡಲೇ ನಿಯಂತ್ರಿಸಿ, ಮಹಿಳಾ ವಿರೋಧಿ, ಜನವಿರೋಧಿ ನೀತಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತೇವೆ. ಇವಿಷ್ಟೇ ಅಲ್ಲದೆ, ಬಡಜನರ ಭೂಮಿ ಮತ್ತು ವಸತಿಯ ಹಕ್ಕನ್ನು ಕಸಿಯುವ ಪ್ರಯತ್ನಗಳನ್ನು, ಅಲ್ಪಸಂಖ್ಯಾತರು ಮತ್ತು ಅಂಚಿಗೊತ್ತಲ್ಪಟ್ಟವೆ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಈ ತಕ್ಷಣದಲ್ಲೇ ನಿಲುಗಡೆಗೆ ತರಬೇಕು. ಸಂವಿಧಾನಬದ್ಧವಾದ, ಪ್ರಜಾತಾಂತ್ರಿಕ, ಜಾತ್ಯತೀತ, ನಾಗರೀಕವಾದ ಬದುಕಿನ ಪರಿಸ್ಥಿತಿಯನ್ನು ಕಲ್ಪಿಸಬೇಕೆಂದು ನೀವಿಂದು ಭೇಟಿಕೊಡುತ್ತಿರುವ ಮಂಡ್ಯ ಜಿಲ್ಲೆಯ ಎಲ್ಲ ಜನತೆ ಮತ್ತು ಮಹಿಳೆಯರ ಪರವಾಗಿ ಈ ಮೂಲಕ ಆಗ್ರಹಿಸುತ್ತಿದ್ದೇವೆ.

ದೇಶದ ಪ್ರಜೆಗಳಾಗಿ ಗೌರವಯುತವಾಗಿ ಹಕ್ಕೊತ್ತಾಯ ಸಲ್ಲಿಸಲು ಬಂದ ನಮ್ಮನ್ನು ತಡೆದು ಪೊಲೀಸರು ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಕೂಡನೇ ನಮ್ಮನ್ನು ಬಿಡುಗಡೆ ಮಾಡಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆಯಲ್ಲಿಯೇ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಬಂಧಿತ ಹೋರಾಟಗಾರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಠಾಣೆಯಿಂದಲೇ ಪತ್ರ ಬರೆದಿದ್ದಾರೆ.

ಪೊಲೀಸರು ಈ ಕೂಡಲೇ ಬಂಧಿತ ಮುಖಂಡರನ್ನು ಬಿಡುಗಡೆಗೊಳಿಸದಿದ್ದರೆ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಪ್ರತಿಭಟನಾಕಾರರ ಪರವಾಗಿ ಠಾಣೆಗೆ ಹಾಜರಾದ ಹಾಜರಾದ ಪ್ರಗತಿಪರ ವಕೀಲರಾದ ಬಿ ಟಿ ವಿಶ್ವನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದ ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರ ದುರುಪಯೋಗ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...