Homeಮುಖಪುಟಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

- Advertisement -
- Advertisement -

ಗುಜರಾತ್‌ನ ವಡ್ಗಾಮ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬನಸ್ಕಾಂತದ ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ ಒಂದು ದಿನದ ನಂತರ, ಗುಜರಾತ್‌ನಾದ್ಯಂತ ದಲಿತರು ಪ್ರತಿಭಟನೆಗೆ ಇಳಿದಿದ್ದಾರೆ.

ಏಪ್ರಿಲ್ 21 ರಂದು, ಅಹಮದಾಬಾದ್‌ನ ಧೋಲ್ಕಾ ತಾಲೂಕಿನ ಸರೋಡಾ ಗ್ರಾಮದಲ್ಲಿ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್‌‌ಡಿಎಎಂ) ಸದಸ್ಯರಾದ ಲಕ್ಷಿಂಬೆನ್ ಮೆಹರಿಯಾ ಮತ್ತು ಹೇಮಾಬೆನ್ ನೇತೃತ್ವದಲ್ಲಿ ದಲಿತ ಮಹಿಳೆಯರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಬಂಧಿಸಿ ಅದೇ ದಿನ ಬಿಡುಗಡೆ ಮಾಡಲಾಯಿತು.

ಅದೇ ದಿನ ಆರ್‌ಡಿಎಎಂನ ದಲಿತ ಕಾರ್ಯಕರ್ತರು ರಾಜ್‌ಕೋಟ್‌ನ ಕೊತ್ತಸಂಗನಿ ತಾಲೂಕಿನಲ್ಲಿ ಪ್ರತಿಭಟನೆಯ ಸಂಕೇತವಾಗಿ ‘ರಸ್ತಾ ರೋಕೋ’ ನಡೆಸಿದರು. ಏಪ್ರಿಲ್ 22 ಮತ್ತು 23ರಂದು ಭಾವನಗರ, ಗಧ್ರಾ, ಗಿರ್ ಸೋಮನಾಥ್‌ನ ಸೂತ್ರಪದ, ಕಚ್‌ನ ರಾಪರ್, ಬನಸ್ಕಾಂತದ ಧನೇರಾ ಮತ್ತು ಬೋಟಾಡ್‌ನಲ್ಲಿ ಪ್ರತಿಭಟನೆಗಳನ್ನು ನಡೆಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್ 22 ರಂದು ಅಹಮದಾಬಾದ್‌ನ ಯಶೋದಾನಗರ, ಅಸರ್ವ, ಬಾಪುನಗರ ಪ್ರದೇಶಗಳಲ್ಲಿ ದಲಿತ ಕಾರ್ಯಕರ್ತರು ರ್‍ಯಾಲಿ ನಡೆಸಿದ್ದಾರೆ.

“ಜಿಗ್ನೇಶ್ ಮೇವಾನಿಯವರ ಬಂಧನದಿಂದ ದಲಿತರು ನಿರಾಶೆಗೊಂಡಿದ್ದಾರೆ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಆದರೆ ರಾಜ್ಯದ ವಿಧಾನಸಭೆಯ ಚುನಾಯಿತ ಸದಸ್ಯರಿಗೆಯೇ ಇಂತಹ ಸ್ಥಿತಿ ಬಂದರೆ ಇತರ ದಲಿತ ಕಾರ್ಯಕರ್ತರ ಪರಿಸ್ಥಿತಿ ಬಂದೆ ಯೋಚಿಸಿದರೂ ಭಯವಾಗುತ್ತದೆ. ಅವರು (ಮೇವಾನಿ) ನಮಗೆ ಶಾಸಕರಿಗಿಂತ ಹೆಚ್ಚು; ಅವರು ನಮ್ಮ ಸಹ ಕಾರ್ಯಕರ್ತ. ಗುಜರಾತ್‌ನ ದಲಿತರು ಮೇವಾನಿ ಬಂಧನದಿಂದ ಮಾತ್ರವಲ್ಲ, ನಮ್ಮ ಆರ್‌‌ಡಿಎಎಂ ಸದಸ್ಯರಾದ ಜಗದೀಶ್ ಚಾವ್ಡಾ ಮತ್ತು ಕಮಲೇಶ್ ಕಟಾರಿಯಾ ಅವರಿಗೆ ಗುಜರಾತ್ ಪೊಲೀಸರು ನೀಡಿರುವ ಕಿರುಕುಳದಿಂದಲೂ ವಿಚಲಿತರಾಗಿದ್ದಾರೆ” ಎಂದು ಆರ್‌‌ಡಿಎಎಂನ ಸದಸ್ಯ ಯಶ್ ಮಕ್ವಾನಾ ‘ನ್ಯೂಸ್‌ಕ್ಲಿಕ್‌’ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

“ಯಶೋದಾನಗರದಲ್ಲಿ ನಡೆದ ನಮ್ಮ ಪ್ರತಿಭಟನೆಯ ನಂತರ ಸುಮಾರು 150 ಪ್ರತಿಭಟನಾಕಾರರನ್ನು ಸ್ಥಳೀಯ ಪೊಲೀಸರು ಬಂಧಿಸಿದರು. ಕೆಲವು ಗಂಟೆಗಳ ನಂತರ ಬಿಡುಗಡೆ ಮಾಡಿದರು. ಆದರೆ, ಪ್ರತಿಭಟನೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿವೆ. 2016ರ ಊನಾ ಘಟನೆಯ ಬಳಿಕ ಬೀದಿಗಿಳಿದಂತೆ ಮತ್ತೊಮ್ಮೆ ದೊಡ್ಡ ಸಂಖ್ಯೆಯಲ್ಲಿ ದಲಿತರು ಮತ್ತೆ ಹೋರಾಟಕ್ಕೆ ಧುಮುಕಬಹುದು” ಎಂದು ಮಕ್ವಾನಾ ಎಚ್ಚರಿಸಿದ್ದಾರೆ.

PC: NewsClick

ಮೆವಾನಿಯ ಆಪ್ತ ಸಹಾಯಕ ಮತ್ತು ಆರ್‌ಡಿಎಎಂ ಸದಸ್ಯ ಕಮಲೇಶ್ ಕಟಾರಿಯಾ ಅವರನ್ನು ಯಶೋದಾನಗರದಲ್ಲಿ ನಡೆದ ಪ್ರತಿಭಟನೆಯ ನಡುವೆ ಅಹಮದಾಬಾದ್ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿತ್ತು. ಅದೇ ಸಮಯದಲ್ಲಿ, ಅಹಮದಾಬಾದ್‌ನ ರಾಖಿಯಾಲ್‌ನಲ್ಲಿರುವ ಕಮಲೇಶ್‌ ಅವರ ಮನೆಯನ್ನು ಪೊಲೀಸರ ತಂಡ ಶೋಧಿಸಿದೆ.

“ಮಧ್ಯಾಹ್ನ 3.30ರ ಸುಮಾರಿಗೆ ನನ್ನ ಮನೆಗೆ ಪೊಲೀಸರು ಬಂದಿದ್ದಾರೆ ಎಂದು ನನ್ನ ಹೆಂಡತಿ ಕರೆ ಮಾಡಿ ನನಗೆ ತಿಳಿಸಿದಳು. ಆದರೆ ನಾನು ಮನೆಗೆ ತಲುಪುವ ಮೊದಲೇ ನನ್ನನ್ನು ಪೋಲೀಸರು ಅಸರ್ವಾ ಬಳಿ ಕರೆದೊಯ್ದರು. ಅದೇ ರಾತ್ರಿ ನನ್ನನ್ನು ಬಿಡುಗಡೆ ಮಾಡಲಾಯಿತು. ನನ್ನ ಸುರಕ್ಷತೆಯನ್ನು ನೆನೆಸಿಕೊಂಡು ನನ್ನ ಮನೆಯವರು ಹೆದರುತ್ತಿದ್ದರು. ಪೊಲೀಸರು ನನ್ನ ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಗೋಡೆಗಳು ಟೊಳ್ಳಾಗಿವೆಯೇ ಎಂದು ಪರೀಕ್ಷಿಸಲು ಅವರು ಗೋಡೆಗಳನ್ನು ಬಡಿದರು, ಹಾಸಿಗೆಯನ್ನು ಹೊರತೆಗೆದರು. ಸ್ನಾನಗೃಹ, ಪಾತ್ರೆಗಳು ಮತ್ತು ನಮ್ಮ ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಸಹ ಬಿಡದೆ ಪರಿಶೀಲಿಸಿದರು” ಎಂದು ಕಮಲೇಶ್ ಕಟಾರಿಯಾ ‘ನ್ಯೂಸ್‌ಕ್ಲಿಕ್‌’ಗೆ ತಿಳಿಸಿದ್ದಾರೆ.

ಅಹಮದಾಬಾದ್ ಕ್ರೈಂ ಬ್ರಾಂಚ್ ಆವರಣದಲ್ಲಿ ನಾನು ಕುಳಿತಿರುವಾಗಲೇ ಅವರು ನನ್ನ ಮೊಬೈಲ್ ವಶಕ್ಕೆ ಪಡೆದಿದ್ದಾರೆ ಎಂದು ಕಟಾರಿಯಾ ಮಾಹಿತಿ ಹಂಚಿಕೊಂಡಿದ್ದಾರೆ. ಪೊಲೀಸರ ಮತ್ತೊಂದು ತಂಡವು ಅದೇ ಸಮಯದಲ್ಲಿ, ಅದೇ ದಿನ ಮೇಘನಿನಗರದಲ್ಲಿರುವ ಜಗದೀಶ್ ಚಾವ್ಡಾ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದೆ.

ಇದನ್ನೂ ಓದಿರಿ: ಗ್ರೌಂಡ್‌ ರಿಪೋರ್ಟ್: ಪೆದ್ದನಹಳ್ಳಿಯಲ್ಲಿ ದಲಿತರ ಹತ್ಯೆ; ನೊಂದ ಕುಟುಂಬಗಳ ನೋವಿನ ಕಥೆ ಇದು

“ನಾನು ಕೆಲವು ಕೆಲಸದ ನಿಮಿತ್ತ ನೆರೆಹೊರೆಯಲ್ಲಿದ್ದೆ. ನಮ್ಮ ಮನೆಗೆ ಸುಮಾರು 18 ರಿಂದ 20 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ ಎಂದು ನನ್ನ ಸಹೋದರ ನಮಗೆ ತಿಳಿಸಲು ಕರೆ ಮಾಡಿದ. ನನ್ನ ಮನೆಗೆ ಬರುವ ಪೊಲೀಸರ ದೊಡ್ಡ ಸಂಖ್ಯೆಯನ್ನು ನೋಡಿ ನನ್ನ ಕುಟುಂಬ ಮತ್ತು ನೆರೆಹೊರೆಯವರು ಭಯಗೊಂಡರು. ಪೊಲೀಸರು ನನ್ನ ಮನೆಯಲ್ಲಿ ಹುಡುಕಾಟ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಾವು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಜಿಗ್ನೇಶ್ ಮೇವಾನಿ, ಕಮಲೇಶ್ ಕಟಾರಿಯಾ ಮತ್ತು ನನ್ನ ಹೆಸರನ್ನು ಹೊಂದಿರುವ ಸರ್ಚ್‌ ಆರ್ಡರ್‌‌ ಮಾತ್ರ ನನಗೆ ತೋರಿಸಲಾಯಿತು. ಅವರು ನನ್ನ ಚಂದ್‌ಖೇಡಾದ ಮನೆಯ ಪ್ರತಿಯೊಂದು ಮೂಲೆಯನ್ನು ಹುಡುಕಿದರು. ಕಂಪ್ಯೂಟರ್ ವಶಪಡಿಸಿಕೊಂಡರು” ಎಂದು ಜಗದೀಶ್ ಚಾವ್ಡಾ ಮಾಹಿತಿ ನೀಡಿದ್ದಾರೆ.

“ಅದಾದ ನಂತರ, ಅವರು ನನ್ನನ್ನು ಅಹಮದಾಬಾದ್‌ನ ಗಾಯಕ್ವಾಡ್ ಹವೇಲಿಯಲ್ಲಿರುವ ಅಪರಾಧ ವಿಭಾಗದ ಆವರಣಕ್ಕೆ ಕರೆದೊಯ್ದರು. ನನ್ನನ್ನು ಕತ್ತಲೆಯ ಕೋಣೆಯಲ್ಲಿ ದೀರ್ಘಕಾಲ ಕೂರಿಸಿದರು. ಸುಮಾರು ಒಂದು ಗಂಟೆಯ ನಂತರ ಕೆಲವು ಪೊಲೀಸ್ ಸಿಬ್ಬಂದಿ ಪ್ರಶ್ನೆಗಳನ್ನು ಕೇಳಿದರು. ಮೇವಾನಿಯವರ ಜೊತೆಗಿನ ನನ್ನ ಒಡನಾಟದ ಬಗ್ಗೆ ವಿಚಾರಿಸಿದರು. ಮೊಬೈಲ್‌ ವಶಕ್ಕೆ ಪಡೆದುಕೊಂಡರು” ಎಂದು ತಿಳಿಸಿದ್ದಾರೆ.

ತಮ್ಮ ಮೊಬೈಲ್ ಫೋನ್‌ಗಳು, ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಪಡಿಸಿಕೊಂಡಿರುವುದನ್ನು ಅಂಗೀಕರಿಸುವ ದಾಖಲೆಗಳಿಗೆ ಕಟಾರಿಯಾ ಮತ್ತು ಚಾವ್ಡಾ ಇಬ್ಬರೂ ಸಹಿ ಹಾಕಬೇಕಾಯಿತು. ಸುಮಾರು ಒಂದು ತಿಂಗಳ ನಂತರ ಫೋನ್‌ಗಳನ್ನು ಅಸ್ಸಾಂನಿಂದ ವಾಪಸ್‌ ಪಡೆಯುವಂತೆ ಸೂಚಿಸಲಾಗಿದೆ.

“ನಾಳೆ, ನಾವು ಅಹಮದಾಬಾದ್‌ನಲ್ಲಿ ಮತ್ತೊಂದು ಪ್ರತಿಭಟನೆಯನ್ನು ಯೋಜಿಸುತ್ತಿದ್ದೇವೆ. ನಾವು ವಡಾಜ್‌ನಲ್ಲಿರುವ ಕಲೆಕ್ಟರ್ ಕಚೇರಿಗೆ ಮೆರವಣಿಗೆ ಮಾಡುತ್ತೇವೆ, ಧರಣಿ ನಡೆಸುತ್ತೇವೆ” ಎಂದು ಯಶ್ ಮಕ್ವಾನಾ ತಿಳಿಸಿದ್ದಾರೆ.

ಜಾಮೀನು ದೊರೆತ ಬಳಿಕವೂ ಪೊಲೀಸರು ಮತ್ತೆ ಜಿಗ್ನೇಶ್ ಅವರನ್ನು ಬಂಧಿಸಿದ್ದಾರೆ. ಗುಜರಾತ್‌ನಲ್ಲಿ ದಲಿತ ಸಂಘಟನೆಗಳು ಬೃಹತ್‌ ಪ್ರತಿಭಟನೆಗೆ ಮುಂದಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...