Homeಮುಖಪುಟಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

- Advertisement -
- Advertisement -

ಗುಜರಾತ್‌ನ ವಡ್ಗಾಮ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬನಸ್ಕಾಂತದ ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ ಒಂದು ದಿನದ ನಂತರ, ಗುಜರಾತ್‌ನಾದ್ಯಂತ ದಲಿತರು ಪ್ರತಿಭಟನೆಗೆ ಇಳಿದಿದ್ದಾರೆ.

ಏಪ್ರಿಲ್ 21 ರಂದು, ಅಹಮದಾಬಾದ್‌ನ ಧೋಲ್ಕಾ ತಾಲೂಕಿನ ಸರೋಡಾ ಗ್ರಾಮದಲ್ಲಿ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್‌‌ಡಿಎಎಂ) ಸದಸ್ಯರಾದ ಲಕ್ಷಿಂಬೆನ್ ಮೆಹರಿಯಾ ಮತ್ತು ಹೇಮಾಬೆನ್ ನೇತೃತ್ವದಲ್ಲಿ ದಲಿತ ಮಹಿಳೆಯರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಬಂಧಿಸಿ ಅದೇ ದಿನ ಬಿಡುಗಡೆ ಮಾಡಲಾಯಿತು.

ಅದೇ ದಿನ ಆರ್‌ಡಿಎಎಂನ ದಲಿತ ಕಾರ್ಯಕರ್ತರು ರಾಜ್‌ಕೋಟ್‌ನ ಕೊತ್ತಸಂಗನಿ ತಾಲೂಕಿನಲ್ಲಿ ಪ್ರತಿಭಟನೆಯ ಸಂಕೇತವಾಗಿ ‘ರಸ್ತಾ ರೋಕೋ’ ನಡೆಸಿದರು. ಏಪ್ರಿಲ್ 22 ಮತ್ತು 23ರಂದು ಭಾವನಗರ, ಗಧ್ರಾ, ಗಿರ್ ಸೋಮನಾಥ್‌ನ ಸೂತ್ರಪದ, ಕಚ್‌ನ ರಾಪರ್, ಬನಸ್ಕಾಂತದ ಧನೇರಾ ಮತ್ತು ಬೋಟಾಡ್‌ನಲ್ಲಿ ಪ್ರತಿಭಟನೆಗಳನ್ನು ನಡೆಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್ 22 ರಂದು ಅಹಮದಾಬಾದ್‌ನ ಯಶೋದಾನಗರ, ಅಸರ್ವ, ಬಾಪುನಗರ ಪ್ರದೇಶಗಳಲ್ಲಿ ದಲಿತ ಕಾರ್ಯಕರ್ತರು ರ್‍ಯಾಲಿ ನಡೆಸಿದ್ದಾರೆ.

“ಜಿಗ್ನೇಶ್ ಮೇವಾನಿಯವರ ಬಂಧನದಿಂದ ದಲಿತರು ನಿರಾಶೆಗೊಂಡಿದ್ದಾರೆ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಆದರೆ ರಾಜ್ಯದ ವಿಧಾನಸಭೆಯ ಚುನಾಯಿತ ಸದಸ್ಯರಿಗೆಯೇ ಇಂತಹ ಸ್ಥಿತಿ ಬಂದರೆ ಇತರ ದಲಿತ ಕಾರ್ಯಕರ್ತರ ಪರಿಸ್ಥಿತಿ ಬಂದೆ ಯೋಚಿಸಿದರೂ ಭಯವಾಗುತ್ತದೆ. ಅವರು (ಮೇವಾನಿ) ನಮಗೆ ಶಾಸಕರಿಗಿಂತ ಹೆಚ್ಚು; ಅವರು ನಮ್ಮ ಸಹ ಕಾರ್ಯಕರ್ತ. ಗುಜರಾತ್‌ನ ದಲಿತರು ಮೇವಾನಿ ಬಂಧನದಿಂದ ಮಾತ್ರವಲ್ಲ, ನಮ್ಮ ಆರ್‌‌ಡಿಎಎಂ ಸದಸ್ಯರಾದ ಜಗದೀಶ್ ಚಾವ್ಡಾ ಮತ್ತು ಕಮಲೇಶ್ ಕಟಾರಿಯಾ ಅವರಿಗೆ ಗುಜರಾತ್ ಪೊಲೀಸರು ನೀಡಿರುವ ಕಿರುಕುಳದಿಂದಲೂ ವಿಚಲಿತರಾಗಿದ್ದಾರೆ” ಎಂದು ಆರ್‌‌ಡಿಎಎಂನ ಸದಸ್ಯ ಯಶ್ ಮಕ್ವಾನಾ ‘ನ್ಯೂಸ್‌ಕ್ಲಿಕ್‌’ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

“ಯಶೋದಾನಗರದಲ್ಲಿ ನಡೆದ ನಮ್ಮ ಪ್ರತಿಭಟನೆಯ ನಂತರ ಸುಮಾರು 150 ಪ್ರತಿಭಟನಾಕಾರರನ್ನು ಸ್ಥಳೀಯ ಪೊಲೀಸರು ಬಂಧಿಸಿದರು. ಕೆಲವು ಗಂಟೆಗಳ ನಂತರ ಬಿಡುಗಡೆ ಮಾಡಿದರು. ಆದರೆ, ಪ್ರತಿಭಟನೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿವೆ. 2016ರ ಊನಾ ಘಟನೆಯ ಬಳಿಕ ಬೀದಿಗಿಳಿದಂತೆ ಮತ್ತೊಮ್ಮೆ ದೊಡ್ಡ ಸಂಖ್ಯೆಯಲ್ಲಿ ದಲಿತರು ಮತ್ತೆ ಹೋರಾಟಕ್ಕೆ ಧುಮುಕಬಹುದು” ಎಂದು ಮಕ್ವಾನಾ ಎಚ್ಚರಿಸಿದ್ದಾರೆ.

PC: NewsClick

ಮೆವಾನಿಯ ಆಪ್ತ ಸಹಾಯಕ ಮತ್ತು ಆರ್‌ಡಿಎಎಂ ಸದಸ್ಯ ಕಮಲೇಶ್ ಕಟಾರಿಯಾ ಅವರನ್ನು ಯಶೋದಾನಗರದಲ್ಲಿ ನಡೆದ ಪ್ರತಿಭಟನೆಯ ನಡುವೆ ಅಹಮದಾಬಾದ್ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿತ್ತು. ಅದೇ ಸಮಯದಲ್ಲಿ, ಅಹಮದಾಬಾದ್‌ನ ರಾಖಿಯಾಲ್‌ನಲ್ಲಿರುವ ಕಮಲೇಶ್‌ ಅವರ ಮನೆಯನ್ನು ಪೊಲೀಸರ ತಂಡ ಶೋಧಿಸಿದೆ.

“ಮಧ್ಯಾಹ್ನ 3.30ರ ಸುಮಾರಿಗೆ ನನ್ನ ಮನೆಗೆ ಪೊಲೀಸರು ಬಂದಿದ್ದಾರೆ ಎಂದು ನನ್ನ ಹೆಂಡತಿ ಕರೆ ಮಾಡಿ ನನಗೆ ತಿಳಿಸಿದಳು. ಆದರೆ ನಾನು ಮನೆಗೆ ತಲುಪುವ ಮೊದಲೇ ನನ್ನನ್ನು ಪೋಲೀಸರು ಅಸರ್ವಾ ಬಳಿ ಕರೆದೊಯ್ದರು. ಅದೇ ರಾತ್ರಿ ನನ್ನನ್ನು ಬಿಡುಗಡೆ ಮಾಡಲಾಯಿತು. ನನ್ನ ಸುರಕ್ಷತೆಯನ್ನು ನೆನೆಸಿಕೊಂಡು ನನ್ನ ಮನೆಯವರು ಹೆದರುತ್ತಿದ್ದರು. ಪೊಲೀಸರು ನನ್ನ ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಗೋಡೆಗಳು ಟೊಳ್ಳಾಗಿವೆಯೇ ಎಂದು ಪರೀಕ್ಷಿಸಲು ಅವರು ಗೋಡೆಗಳನ್ನು ಬಡಿದರು, ಹಾಸಿಗೆಯನ್ನು ಹೊರತೆಗೆದರು. ಸ್ನಾನಗೃಹ, ಪಾತ್ರೆಗಳು ಮತ್ತು ನಮ್ಮ ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಸಹ ಬಿಡದೆ ಪರಿಶೀಲಿಸಿದರು” ಎಂದು ಕಮಲೇಶ್ ಕಟಾರಿಯಾ ‘ನ್ಯೂಸ್‌ಕ್ಲಿಕ್‌’ಗೆ ತಿಳಿಸಿದ್ದಾರೆ.

ಅಹಮದಾಬಾದ್ ಕ್ರೈಂ ಬ್ರಾಂಚ್ ಆವರಣದಲ್ಲಿ ನಾನು ಕುಳಿತಿರುವಾಗಲೇ ಅವರು ನನ್ನ ಮೊಬೈಲ್ ವಶಕ್ಕೆ ಪಡೆದಿದ್ದಾರೆ ಎಂದು ಕಟಾರಿಯಾ ಮಾಹಿತಿ ಹಂಚಿಕೊಂಡಿದ್ದಾರೆ. ಪೊಲೀಸರ ಮತ್ತೊಂದು ತಂಡವು ಅದೇ ಸಮಯದಲ್ಲಿ, ಅದೇ ದಿನ ಮೇಘನಿನಗರದಲ್ಲಿರುವ ಜಗದೀಶ್ ಚಾವ್ಡಾ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದೆ.

ಇದನ್ನೂ ಓದಿರಿ: ಗ್ರೌಂಡ್‌ ರಿಪೋರ್ಟ್: ಪೆದ್ದನಹಳ್ಳಿಯಲ್ಲಿ ದಲಿತರ ಹತ್ಯೆ; ನೊಂದ ಕುಟುಂಬಗಳ ನೋವಿನ ಕಥೆ ಇದು

“ನಾನು ಕೆಲವು ಕೆಲಸದ ನಿಮಿತ್ತ ನೆರೆಹೊರೆಯಲ್ಲಿದ್ದೆ. ನಮ್ಮ ಮನೆಗೆ ಸುಮಾರು 18 ರಿಂದ 20 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ ಎಂದು ನನ್ನ ಸಹೋದರ ನಮಗೆ ತಿಳಿಸಲು ಕರೆ ಮಾಡಿದ. ನನ್ನ ಮನೆಗೆ ಬರುವ ಪೊಲೀಸರ ದೊಡ್ಡ ಸಂಖ್ಯೆಯನ್ನು ನೋಡಿ ನನ್ನ ಕುಟುಂಬ ಮತ್ತು ನೆರೆಹೊರೆಯವರು ಭಯಗೊಂಡರು. ಪೊಲೀಸರು ನನ್ನ ಮನೆಯಲ್ಲಿ ಹುಡುಕಾಟ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಾವು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಜಿಗ್ನೇಶ್ ಮೇವಾನಿ, ಕಮಲೇಶ್ ಕಟಾರಿಯಾ ಮತ್ತು ನನ್ನ ಹೆಸರನ್ನು ಹೊಂದಿರುವ ಸರ್ಚ್‌ ಆರ್ಡರ್‌‌ ಮಾತ್ರ ನನಗೆ ತೋರಿಸಲಾಯಿತು. ಅವರು ನನ್ನ ಚಂದ್‌ಖೇಡಾದ ಮನೆಯ ಪ್ರತಿಯೊಂದು ಮೂಲೆಯನ್ನು ಹುಡುಕಿದರು. ಕಂಪ್ಯೂಟರ್ ವಶಪಡಿಸಿಕೊಂಡರು” ಎಂದು ಜಗದೀಶ್ ಚಾವ್ಡಾ ಮಾಹಿತಿ ನೀಡಿದ್ದಾರೆ.

“ಅದಾದ ನಂತರ, ಅವರು ನನ್ನನ್ನು ಅಹಮದಾಬಾದ್‌ನ ಗಾಯಕ್ವಾಡ್ ಹವೇಲಿಯಲ್ಲಿರುವ ಅಪರಾಧ ವಿಭಾಗದ ಆವರಣಕ್ಕೆ ಕರೆದೊಯ್ದರು. ನನ್ನನ್ನು ಕತ್ತಲೆಯ ಕೋಣೆಯಲ್ಲಿ ದೀರ್ಘಕಾಲ ಕೂರಿಸಿದರು. ಸುಮಾರು ಒಂದು ಗಂಟೆಯ ನಂತರ ಕೆಲವು ಪೊಲೀಸ್ ಸಿಬ್ಬಂದಿ ಪ್ರಶ್ನೆಗಳನ್ನು ಕೇಳಿದರು. ಮೇವಾನಿಯವರ ಜೊತೆಗಿನ ನನ್ನ ಒಡನಾಟದ ಬಗ್ಗೆ ವಿಚಾರಿಸಿದರು. ಮೊಬೈಲ್‌ ವಶಕ್ಕೆ ಪಡೆದುಕೊಂಡರು” ಎಂದು ತಿಳಿಸಿದ್ದಾರೆ.

ತಮ್ಮ ಮೊಬೈಲ್ ಫೋನ್‌ಗಳು, ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಪಡಿಸಿಕೊಂಡಿರುವುದನ್ನು ಅಂಗೀಕರಿಸುವ ದಾಖಲೆಗಳಿಗೆ ಕಟಾರಿಯಾ ಮತ್ತು ಚಾವ್ಡಾ ಇಬ್ಬರೂ ಸಹಿ ಹಾಕಬೇಕಾಯಿತು. ಸುಮಾರು ಒಂದು ತಿಂಗಳ ನಂತರ ಫೋನ್‌ಗಳನ್ನು ಅಸ್ಸಾಂನಿಂದ ವಾಪಸ್‌ ಪಡೆಯುವಂತೆ ಸೂಚಿಸಲಾಗಿದೆ.

“ನಾಳೆ, ನಾವು ಅಹಮದಾಬಾದ್‌ನಲ್ಲಿ ಮತ್ತೊಂದು ಪ್ರತಿಭಟನೆಯನ್ನು ಯೋಜಿಸುತ್ತಿದ್ದೇವೆ. ನಾವು ವಡಾಜ್‌ನಲ್ಲಿರುವ ಕಲೆಕ್ಟರ್ ಕಚೇರಿಗೆ ಮೆರವಣಿಗೆ ಮಾಡುತ್ತೇವೆ, ಧರಣಿ ನಡೆಸುತ್ತೇವೆ” ಎಂದು ಯಶ್ ಮಕ್ವಾನಾ ತಿಳಿಸಿದ್ದಾರೆ.

ಜಾಮೀನು ದೊರೆತ ಬಳಿಕವೂ ಪೊಲೀಸರು ಮತ್ತೆ ಜಿಗ್ನೇಶ್ ಅವರನ್ನು ಬಂಧಿಸಿದ್ದಾರೆ. ಗುಜರಾತ್‌ನಲ್ಲಿ ದಲಿತ ಸಂಘಟನೆಗಳು ಬೃಹತ್‌ ಪ್ರತಿಭಟನೆಗೆ ಮುಂದಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...