Homeಮುಖಪುಟಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

- Advertisement -
- Advertisement -

ಗುಜರಾತ್‌ನ ವಡ್ಗಾಮ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬನಸ್ಕಾಂತದ ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ ಒಂದು ದಿನದ ನಂತರ, ಗುಜರಾತ್‌ನಾದ್ಯಂತ ದಲಿತರು ಪ್ರತಿಭಟನೆಗೆ ಇಳಿದಿದ್ದಾರೆ.

ಏಪ್ರಿಲ್ 21 ರಂದು, ಅಹಮದಾಬಾದ್‌ನ ಧೋಲ್ಕಾ ತಾಲೂಕಿನ ಸರೋಡಾ ಗ್ರಾಮದಲ್ಲಿ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್‌‌ಡಿಎಎಂ) ಸದಸ್ಯರಾದ ಲಕ್ಷಿಂಬೆನ್ ಮೆಹರಿಯಾ ಮತ್ತು ಹೇಮಾಬೆನ್ ನೇತೃತ್ವದಲ್ಲಿ ದಲಿತ ಮಹಿಳೆಯರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಬಂಧಿಸಿ ಅದೇ ದಿನ ಬಿಡುಗಡೆ ಮಾಡಲಾಯಿತು.

ಅದೇ ದಿನ ಆರ್‌ಡಿಎಎಂನ ದಲಿತ ಕಾರ್ಯಕರ್ತರು ರಾಜ್‌ಕೋಟ್‌ನ ಕೊತ್ತಸಂಗನಿ ತಾಲೂಕಿನಲ್ಲಿ ಪ್ರತಿಭಟನೆಯ ಸಂಕೇತವಾಗಿ ‘ರಸ್ತಾ ರೋಕೋ’ ನಡೆಸಿದರು. ಏಪ್ರಿಲ್ 22 ಮತ್ತು 23ರಂದು ಭಾವನಗರ, ಗಧ್ರಾ, ಗಿರ್ ಸೋಮನಾಥ್‌ನ ಸೂತ್ರಪದ, ಕಚ್‌ನ ರಾಪರ್, ಬನಸ್ಕಾಂತದ ಧನೇರಾ ಮತ್ತು ಬೋಟಾಡ್‌ನಲ್ಲಿ ಪ್ರತಿಭಟನೆಗಳನ್ನು ನಡೆಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್ 22 ರಂದು ಅಹಮದಾಬಾದ್‌ನ ಯಶೋದಾನಗರ, ಅಸರ್ವ, ಬಾಪುನಗರ ಪ್ರದೇಶಗಳಲ್ಲಿ ದಲಿತ ಕಾರ್ಯಕರ್ತರು ರ್‍ಯಾಲಿ ನಡೆಸಿದ್ದಾರೆ.

“ಜಿಗ್ನೇಶ್ ಮೇವಾನಿಯವರ ಬಂಧನದಿಂದ ದಲಿತರು ನಿರಾಶೆಗೊಂಡಿದ್ದಾರೆ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಆದರೆ ರಾಜ್ಯದ ವಿಧಾನಸಭೆಯ ಚುನಾಯಿತ ಸದಸ್ಯರಿಗೆಯೇ ಇಂತಹ ಸ್ಥಿತಿ ಬಂದರೆ ಇತರ ದಲಿತ ಕಾರ್ಯಕರ್ತರ ಪರಿಸ್ಥಿತಿ ಬಂದೆ ಯೋಚಿಸಿದರೂ ಭಯವಾಗುತ್ತದೆ. ಅವರು (ಮೇವಾನಿ) ನಮಗೆ ಶಾಸಕರಿಗಿಂತ ಹೆಚ್ಚು; ಅವರು ನಮ್ಮ ಸಹ ಕಾರ್ಯಕರ್ತ. ಗುಜರಾತ್‌ನ ದಲಿತರು ಮೇವಾನಿ ಬಂಧನದಿಂದ ಮಾತ್ರವಲ್ಲ, ನಮ್ಮ ಆರ್‌‌ಡಿಎಎಂ ಸದಸ್ಯರಾದ ಜಗದೀಶ್ ಚಾವ್ಡಾ ಮತ್ತು ಕಮಲೇಶ್ ಕಟಾರಿಯಾ ಅವರಿಗೆ ಗುಜರಾತ್ ಪೊಲೀಸರು ನೀಡಿರುವ ಕಿರುಕುಳದಿಂದಲೂ ವಿಚಲಿತರಾಗಿದ್ದಾರೆ” ಎಂದು ಆರ್‌‌ಡಿಎಎಂನ ಸದಸ್ಯ ಯಶ್ ಮಕ್ವಾನಾ ‘ನ್ಯೂಸ್‌ಕ್ಲಿಕ್‌’ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

“ಯಶೋದಾನಗರದಲ್ಲಿ ನಡೆದ ನಮ್ಮ ಪ್ರತಿಭಟನೆಯ ನಂತರ ಸುಮಾರು 150 ಪ್ರತಿಭಟನಾಕಾರರನ್ನು ಸ್ಥಳೀಯ ಪೊಲೀಸರು ಬಂಧಿಸಿದರು. ಕೆಲವು ಗಂಟೆಗಳ ನಂತರ ಬಿಡುಗಡೆ ಮಾಡಿದರು. ಆದರೆ, ಪ್ರತಿಭಟನೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿವೆ. 2016ರ ಊನಾ ಘಟನೆಯ ಬಳಿಕ ಬೀದಿಗಿಳಿದಂತೆ ಮತ್ತೊಮ್ಮೆ ದೊಡ್ಡ ಸಂಖ್ಯೆಯಲ್ಲಿ ದಲಿತರು ಮತ್ತೆ ಹೋರಾಟಕ್ಕೆ ಧುಮುಕಬಹುದು” ಎಂದು ಮಕ್ವಾನಾ ಎಚ್ಚರಿಸಿದ್ದಾರೆ.

PC: NewsClick

ಮೆವಾನಿಯ ಆಪ್ತ ಸಹಾಯಕ ಮತ್ತು ಆರ್‌ಡಿಎಎಂ ಸದಸ್ಯ ಕಮಲೇಶ್ ಕಟಾರಿಯಾ ಅವರನ್ನು ಯಶೋದಾನಗರದಲ್ಲಿ ನಡೆದ ಪ್ರತಿಭಟನೆಯ ನಡುವೆ ಅಹಮದಾಬಾದ್ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿತ್ತು. ಅದೇ ಸಮಯದಲ್ಲಿ, ಅಹಮದಾಬಾದ್‌ನ ರಾಖಿಯಾಲ್‌ನಲ್ಲಿರುವ ಕಮಲೇಶ್‌ ಅವರ ಮನೆಯನ್ನು ಪೊಲೀಸರ ತಂಡ ಶೋಧಿಸಿದೆ.

“ಮಧ್ಯಾಹ್ನ 3.30ರ ಸುಮಾರಿಗೆ ನನ್ನ ಮನೆಗೆ ಪೊಲೀಸರು ಬಂದಿದ್ದಾರೆ ಎಂದು ನನ್ನ ಹೆಂಡತಿ ಕರೆ ಮಾಡಿ ನನಗೆ ತಿಳಿಸಿದಳು. ಆದರೆ ನಾನು ಮನೆಗೆ ತಲುಪುವ ಮೊದಲೇ ನನ್ನನ್ನು ಪೋಲೀಸರು ಅಸರ್ವಾ ಬಳಿ ಕರೆದೊಯ್ದರು. ಅದೇ ರಾತ್ರಿ ನನ್ನನ್ನು ಬಿಡುಗಡೆ ಮಾಡಲಾಯಿತು. ನನ್ನ ಸುರಕ್ಷತೆಯನ್ನು ನೆನೆಸಿಕೊಂಡು ನನ್ನ ಮನೆಯವರು ಹೆದರುತ್ತಿದ್ದರು. ಪೊಲೀಸರು ನನ್ನ ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಗೋಡೆಗಳು ಟೊಳ್ಳಾಗಿವೆಯೇ ಎಂದು ಪರೀಕ್ಷಿಸಲು ಅವರು ಗೋಡೆಗಳನ್ನು ಬಡಿದರು, ಹಾಸಿಗೆಯನ್ನು ಹೊರತೆಗೆದರು. ಸ್ನಾನಗೃಹ, ಪಾತ್ರೆಗಳು ಮತ್ತು ನಮ್ಮ ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಸಹ ಬಿಡದೆ ಪರಿಶೀಲಿಸಿದರು” ಎಂದು ಕಮಲೇಶ್ ಕಟಾರಿಯಾ ‘ನ್ಯೂಸ್‌ಕ್ಲಿಕ್‌’ಗೆ ತಿಳಿಸಿದ್ದಾರೆ.

ಅಹಮದಾಬಾದ್ ಕ್ರೈಂ ಬ್ರಾಂಚ್ ಆವರಣದಲ್ಲಿ ನಾನು ಕುಳಿತಿರುವಾಗಲೇ ಅವರು ನನ್ನ ಮೊಬೈಲ್ ವಶಕ್ಕೆ ಪಡೆದಿದ್ದಾರೆ ಎಂದು ಕಟಾರಿಯಾ ಮಾಹಿತಿ ಹಂಚಿಕೊಂಡಿದ್ದಾರೆ. ಪೊಲೀಸರ ಮತ್ತೊಂದು ತಂಡವು ಅದೇ ಸಮಯದಲ್ಲಿ, ಅದೇ ದಿನ ಮೇಘನಿನಗರದಲ್ಲಿರುವ ಜಗದೀಶ್ ಚಾವ್ಡಾ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದೆ.

ಇದನ್ನೂ ಓದಿರಿ: ಗ್ರೌಂಡ್‌ ರಿಪೋರ್ಟ್: ಪೆದ್ದನಹಳ್ಳಿಯಲ್ಲಿ ದಲಿತರ ಹತ್ಯೆ; ನೊಂದ ಕುಟುಂಬಗಳ ನೋವಿನ ಕಥೆ ಇದು

“ನಾನು ಕೆಲವು ಕೆಲಸದ ನಿಮಿತ್ತ ನೆರೆಹೊರೆಯಲ್ಲಿದ್ದೆ. ನಮ್ಮ ಮನೆಗೆ ಸುಮಾರು 18 ರಿಂದ 20 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ ಎಂದು ನನ್ನ ಸಹೋದರ ನಮಗೆ ತಿಳಿಸಲು ಕರೆ ಮಾಡಿದ. ನನ್ನ ಮನೆಗೆ ಬರುವ ಪೊಲೀಸರ ದೊಡ್ಡ ಸಂಖ್ಯೆಯನ್ನು ನೋಡಿ ನನ್ನ ಕುಟುಂಬ ಮತ್ತು ನೆರೆಹೊರೆಯವರು ಭಯಗೊಂಡರು. ಪೊಲೀಸರು ನನ್ನ ಮನೆಯಲ್ಲಿ ಹುಡುಕಾಟ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಾವು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಜಿಗ್ನೇಶ್ ಮೇವಾನಿ, ಕಮಲೇಶ್ ಕಟಾರಿಯಾ ಮತ್ತು ನನ್ನ ಹೆಸರನ್ನು ಹೊಂದಿರುವ ಸರ್ಚ್‌ ಆರ್ಡರ್‌‌ ಮಾತ್ರ ನನಗೆ ತೋರಿಸಲಾಯಿತು. ಅವರು ನನ್ನ ಚಂದ್‌ಖೇಡಾದ ಮನೆಯ ಪ್ರತಿಯೊಂದು ಮೂಲೆಯನ್ನು ಹುಡುಕಿದರು. ಕಂಪ್ಯೂಟರ್ ವಶಪಡಿಸಿಕೊಂಡರು” ಎಂದು ಜಗದೀಶ್ ಚಾವ್ಡಾ ಮಾಹಿತಿ ನೀಡಿದ್ದಾರೆ.

“ಅದಾದ ನಂತರ, ಅವರು ನನ್ನನ್ನು ಅಹಮದಾಬಾದ್‌ನ ಗಾಯಕ್ವಾಡ್ ಹವೇಲಿಯಲ್ಲಿರುವ ಅಪರಾಧ ವಿಭಾಗದ ಆವರಣಕ್ಕೆ ಕರೆದೊಯ್ದರು. ನನ್ನನ್ನು ಕತ್ತಲೆಯ ಕೋಣೆಯಲ್ಲಿ ದೀರ್ಘಕಾಲ ಕೂರಿಸಿದರು. ಸುಮಾರು ಒಂದು ಗಂಟೆಯ ನಂತರ ಕೆಲವು ಪೊಲೀಸ್ ಸಿಬ್ಬಂದಿ ಪ್ರಶ್ನೆಗಳನ್ನು ಕೇಳಿದರು. ಮೇವಾನಿಯವರ ಜೊತೆಗಿನ ನನ್ನ ಒಡನಾಟದ ಬಗ್ಗೆ ವಿಚಾರಿಸಿದರು. ಮೊಬೈಲ್‌ ವಶಕ್ಕೆ ಪಡೆದುಕೊಂಡರು” ಎಂದು ತಿಳಿಸಿದ್ದಾರೆ.

ತಮ್ಮ ಮೊಬೈಲ್ ಫೋನ್‌ಗಳು, ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಪಡಿಸಿಕೊಂಡಿರುವುದನ್ನು ಅಂಗೀಕರಿಸುವ ದಾಖಲೆಗಳಿಗೆ ಕಟಾರಿಯಾ ಮತ್ತು ಚಾವ್ಡಾ ಇಬ್ಬರೂ ಸಹಿ ಹಾಕಬೇಕಾಯಿತು. ಸುಮಾರು ಒಂದು ತಿಂಗಳ ನಂತರ ಫೋನ್‌ಗಳನ್ನು ಅಸ್ಸಾಂನಿಂದ ವಾಪಸ್‌ ಪಡೆಯುವಂತೆ ಸೂಚಿಸಲಾಗಿದೆ.

“ನಾಳೆ, ನಾವು ಅಹಮದಾಬಾದ್‌ನಲ್ಲಿ ಮತ್ತೊಂದು ಪ್ರತಿಭಟನೆಯನ್ನು ಯೋಜಿಸುತ್ತಿದ್ದೇವೆ. ನಾವು ವಡಾಜ್‌ನಲ್ಲಿರುವ ಕಲೆಕ್ಟರ್ ಕಚೇರಿಗೆ ಮೆರವಣಿಗೆ ಮಾಡುತ್ತೇವೆ, ಧರಣಿ ನಡೆಸುತ್ತೇವೆ” ಎಂದು ಯಶ್ ಮಕ್ವಾನಾ ತಿಳಿಸಿದ್ದಾರೆ.

ಜಾಮೀನು ದೊರೆತ ಬಳಿಕವೂ ಪೊಲೀಸರು ಮತ್ತೆ ಜಿಗ್ನೇಶ್ ಅವರನ್ನು ಬಂಧಿಸಿದ್ದಾರೆ. ಗುಜರಾತ್‌ನಲ್ಲಿ ದಲಿತ ಸಂಘಟನೆಗಳು ಬೃಹತ್‌ ಪ್ರತಿಭಟನೆಗೆ ಮುಂದಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...