Homeಮುಖಪುಟಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

- Advertisement -
- Advertisement -

ಗುಜರಾತ್‌ನ ವಡ್ಗಾಮ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬನಸ್ಕಾಂತದ ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ ಒಂದು ದಿನದ ನಂತರ, ಗುಜರಾತ್‌ನಾದ್ಯಂತ ದಲಿತರು ಪ್ರತಿಭಟನೆಗೆ ಇಳಿದಿದ್ದಾರೆ.

ಏಪ್ರಿಲ್ 21 ರಂದು, ಅಹಮದಾಬಾದ್‌ನ ಧೋಲ್ಕಾ ತಾಲೂಕಿನ ಸರೋಡಾ ಗ್ರಾಮದಲ್ಲಿ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್‌‌ಡಿಎಎಂ) ಸದಸ್ಯರಾದ ಲಕ್ಷಿಂಬೆನ್ ಮೆಹರಿಯಾ ಮತ್ತು ಹೇಮಾಬೆನ್ ನೇತೃತ್ವದಲ್ಲಿ ದಲಿತ ಮಹಿಳೆಯರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಬಂಧಿಸಿ ಅದೇ ದಿನ ಬಿಡುಗಡೆ ಮಾಡಲಾಯಿತು.

ಅದೇ ದಿನ ಆರ್‌ಡಿಎಎಂನ ದಲಿತ ಕಾರ್ಯಕರ್ತರು ರಾಜ್‌ಕೋಟ್‌ನ ಕೊತ್ತಸಂಗನಿ ತಾಲೂಕಿನಲ್ಲಿ ಪ್ರತಿಭಟನೆಯ ಸಂಕೇತವಾಗಿ ‘ರಸ್ತಾ ರೋಕೋ’ ನಡೆಸಿದರು. ಏಪ್ರಿಲ್ 22 ಮತ್ತು 23ರಂದು ಭಾವನಗರ, ಗಧ್ರಾ, ಗಿರ್ ಸೋಮನಾಥ್‌ನ ಸೂತ್ರಪದ, ಕಚ್‌ನ ರಾಪರ್, ಬನಸ್ಕಾಂತದ ಧನೇರಾ ಮತ್ತು ಬೋಟಾಡ್‌ನಲ್ಲಿ ಪ್ರತಿಭಟನೆಗಳನ್ನು ನಡೆಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್ 22 ರಂದು ಅಹಮದಾಬಾದ್‌ನ ಯಶೋದಾನಗರ, ಅಸರ್ವ, ಬಾಪುನಗರ ಪ್ರದೇಶಗಳಲ್ಲಿ ದಲಿತ ಕಾರ್ಯಕರ್ತರು ರ್‍ಯಾಲಿ ನಡೆಸಿದ್ದಾರೆ.

“ಜಿಗ್ನೇಶ್ ಮೇವಾನಿಯವರ ಬಂಧನದಿಂದ ದಲಿತರು ನಿರಾಶೆಗೊಂಡಿದ್ದಾರೆ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಆದರೆ ರಾಜ್ಯದ ವಿಧಾನಸಭೆಯ ಚುನಾಯಿತ ಸದಸ್ಯರಿಗೆಯೇ ಇಂತಹ ಸ್ಥಿತಿ ಬಂದರೆ ಇತರ ದಲಿತ ಕಾರ್ಯಕರ್ತರ ಪರಿಸ್ಥಿತಿ ಬಂದೆ ಯೋಚಿಸಿದರೂ ಭಯವಾಗುತ್ತದೆ. ಅವರು (ಮೇವಾನಿ) ನಮಗೆ ಶಾಸಕರಿಗಿಂತ ಹೆಚ್ಚು; ಅವರು ನಮ್ಮ ಸಹ ಕಾರ್ಯಕರ್ತ. ಗುಜರಾತ್‌ನ ದಲಿತರು ಮೇವಾನಿ ಬಂಧನದಿಂದ ಮಾತ್ರವಲ್ಲ, ನಮ್ಮ ಆರ್‌‌ಡಿಎಎಂ ಸದಸ್ಯರಾದ ಜಗದೀಶ್ ಚಾವ್ಡಾ ಮತ್ತು ಕಮಲೇಶ್ ಕಟಾರಿಯಾ ಅವರಿಗೆ ಗುಜರಾತ್ ಪೊಲೀಸರು ನೀಡಿರುವ ಕಿರುಕುಳದಿಂದಲೂ ವಿಚಲಿತರಾಗಿದ್ದಾರೆ” ಎಂದು ಆರ್‌‌ಡಿಎಎಂನ ಸದಸ್ಯ ಯಶ್ ಮಕ್ವಾನಾ ‘ನ್ಯೂಸ್‌ಕ್ಲಿಕ್‌’ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

“ಯಶೋದಾನಗರದಲ್ಲಿ ನಡೆದ ನಮ್ಮ ಪ್ರತಿಭಟನೆಯ ನಂತರ ಸುಮಾರು 150 ಪ್ರತಿಭಟನಾಕಾರರನ್ನು ಸ್ಥಳೀಯ ಪೊಲೀಸರು ಬಂಧಿಸಿದರು. ಕೆಲವು ಗಂಟೆಗಳ ನಂತರ ಬಿಡುಗಡೆ ಮಾಡಿದರು. ಆದರೆ, ಪ್ರತಿಭಟನೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿವೆ. 2016ರ ಊನಾ ಘಟನೆಯ ಬಳಿಕ ಬೀದಿಗಿಳಿದಂತೆ ಮತ್ತೊಮ್ಮೆ ದೊಡ್ಡ ಸಂಖ್ಯೆಯಲ್ಲಿ ದಲಿತರು ಮತ್ತೆ ಹೋರಾಟಕ್ಕೆ ಧುಮುಕಬಹುದು” ಎಂದು ಮಕ್ವಾನಾ ಎಚ್ಚರಿಸಿದ್ದಾರೆ.

PC: NewsClick

ಮೆವಾನಿಯ ಆಪ್ತ ಸಹಾಯಕ ಮತ್ತು ಆರ್‌ಡಿಎಎಂ ಸದಸ್ಯ ಕಮಲೇಶ್ ಕಟಾರಿಯಾ ಅವರನ್ನು ಯಶೋದಾನಗರದಲ್ಲಿ ನಡೆದ ಪ್ರತಿಭಟನೆಯ ನಡುವೆ ಅಹಮದಾಬಾದ್ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿತ್ತು. ಅದೇ ಸಮಯದಲ್ಲಿ, ಅಹಮದಾಬಾದ್‌ನ ರಾಖಿಯಾಲ್‌ನಲ್ಲಿರುವ ಕಮಲೇಶ್‌ ಅವರ ಮನೆಯನ್ನು ಪೊಲೀಸರ ತಂಡ ಶೋಧಿಸಿದೆ.

“ಮಧ್ಯಾಹ್ನ 3.30ರ ಸುಮಾರಿಗೆ ನನ್ನ ಮನೆಗೆ ಪೊಲೀಸರು ಬಂದಿದ್ದಾರೆ ಎಂದು ನನ್ನ ಹೆಂಡತಿ ಕರೆ ಮಾಡಿ ನನಗೆ ತಿಳಿಸಿದಳು. ಆದರೆ ನಾನು ಮನೆಗೆ ತಲುಪುವ ಮೊದಲೇ ನನ್ನನ್ನು ಪೋಲೀಸರು ಅಸರ್ವಾ ಬಳಿ ಕರೆದೊಯ್ದರು. ಅದೇ ರಾತ್ರಿ ನನ್ನನ್ನು ಬಿಡುಗಡೆ ಮಾಡಲಾಯಿತು. ನನ್ನ ಸುರಕ್ಷತೆಯನ್ನು ನೆನೆಸಿಕೊಂಡು ನನ್ನ ಮನೆಯವರು ಹೆದರುತ್ತಿದ್ದರು. ಪೊಲೀಸರು ನನ್ನ ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಗೋಡೆಗಳು ಟೊಳ್ಳಾಗಿವೆಯೇ ಎಂದು ಪರೀಕ್ಷಿಸಲು ಅವರು ಗೋಡೆಗಳನ್ನು ಬಡಿದರು, ಹಾಸಿಗೆಯನ್ನು ಹೊರತೆಗೆದರು. ಸ್ನಾನಗೃಹ, ಪಾತ್ರೆಗಳು ಮತ್ತು ನಮ್ಮ ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಸಹ ಬಿಡದೆ ಪರಿಶೀಲಿಸಿದರು” ಎಂದು ಕಮಲೇಶ್ ಕಟಾರಿಯಾ ‘ನ್ಯೂಸ್‌ಕ್ಲಿಕ್‌’ಗೆ ತಿಳಿಸಿದ್ದಾರೆ.

ಅಹಮದಾಬಾದ್ ಕ್ರೈಂ ಬ್ರಾಂಚ್ ಆವರಣದಲ್ಲಿ ನಾನು ಕುಳಿತಿರುವಾಗಲೇ ಅವರು ನನ್ನ ಮೊಬೈಲ್ ವಶಕ್ಕೆ ಪಡೆದಿದ್ದಾರೆ ಎಂದು ಕಟಾರಿಯಾ ಮಾಹಿತಿ ಹಂಚಿಕೊಂಡಿದ್ದಾರೆ. ಪೊಲೀಸರ ಮತ್ತೊಂದು ತಂಡವು ಅದೇ ಸಮಯದಲ್ಲಿ, ಅದೇ ದಿನ ಮೇಘನಿನಗರದಲ್ಲಿರುವ ಜಗದೀಶ್ ಚಾವ್ಡಾ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದೆ.

ಇದನ್ನೂ ಓದಿರಿ: ಗ್ರೌಂಡ್‌ ರಿಪೋರ್ಟ್: ಪೆದ್ದನಹಳ್ಳಿಯಲ್ಲಿ ದಲಿತರ ಹತ್ಯೆ; ನೊಂದ ಕುಟುಂಬಗಳ ನೋವಿನ ಕಥೆ ಇದು

“ನಾನು ಕೆಲವು ಕೆಲಸದ ನಿಮಿತ್ತ ನೆರೆಹೊರೆಯಲ್ಲಿದ್ದೆ. ನಮ್ಮ ಮನೆಗೆ ಸುಮಾರು 18 ರಿಂದ 20 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ ಎಂದು ನನ್ನ ಸಹೋದರ ನಮಗೆ ತಿಳಿಸಲು ಕರೆ ಮಾಡಿದ. ನನ್ನ ಮನೆಗೆ ಬರುವ ಪೊಲೀಸರ ದೊಡ್ಡ ಸಂಖ್ಯೆಯನ್ನು ನೋಡಿ ನನ್ನ ಕುಟುಂಬ ಮತ್ತು ನೆರೆಹೊರೆಯವರು ಭಯಗೊಂಡರು. ಪೊಲೀಸರು ನನ್ನ ಮನೆಯಲ್ಲಿ ಹುಡುಕಾಟ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಾವು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಜಿಗ್ನೇಶ್ ಮೇವಾನಿ, ಕಮಲೇಶ್ ಕಟಾರಿಯಾ ಮತ್ತು ನನ್ನ ಹೆಸರನ್ನು ಹೊಂದಿರುವ ಸರ್ಚ್‌ ಆರ್ಡರ್‌‌ ಮಾತ್ರ ನನಗೆ ತೋರಿಸಲಾಯಿತು. ಅವರು ನನ್ನ ಚಂದ್‌ಖೇಡಾದ ಮನೆಯ ಪ್ರತಿಯೊಂದು ಮೂಲೆಯನ್ನು ಹುಡುಕಿದರು. ಕಂಪ್ಯೂಟರ್ ವಶಪಡಿಸಿಕೊಂಡರು” ಎಂದು ಜಗದೀಶ್ ಚಾವ್ಡಾ ಮಾಹಿತಿ ನೀಡಿದ್ದಾರೆ.

“ಅದಾದ ನಂತರ, ಅವರು ನನ್ನನ್ನು ಅಹಮದಾಬಾದ್‌ನ ಗಾಯಕ್ವಾಡ್ ಹವೇಲಿಯಲ್ಲಿರುವ ಅಪರಾಧ ವಿಭಾಗದ ಆವರಣಕ್ಕೆ ಕರೆದೊಯ್ದರು. ನನ್ನನ್ನು ಕತ್ತಲೆಯ ಕೋಣೆಯಲ್ಲಿ ದೀರ್ಘಕಾಲ ಕೂರಿಸಿದರು. ಸುಮಾರು ಒಂದು ಗಂಟೆಯ ನಂತರ ಕೆಲವು ಪೊಲೀಸ್ ಸಿಬ್ಬಂದಿ ಪ್ರಶ್ನೆಗಳನ್ನು ಕೇಳಿದರು. ಮೇವಾನಿಯವರ ಜೊತೆಗಿನ ನನ್ನ ಒಡನಾಟದ ಬಗ್ಗೆ ವಿಚಾರಿಸಿದರು. ಮೊಬೈಲ್‌ ವಶಕ್ಕೆ ಪಡೆದುಕೊಂಡರು” ಎಂದು ತಿಳಿಸಿದ್ದಾರೆ.

ತಮ್ಮ ಮೊಬೈಲ್ ಫೋನ್‌ಗಳು, ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಪಡಿಸಿಕೊಂಡಿರುವುದನ್ನು ಅಂಗೀಕರಿಸುವ ದಾಖಲೆಗಳಿಗೆ ಕಟಾರಿಯಾ ಮತ್ತು ಚಾವ್ಡಾ ಇಬ್ಬರೂ ಸಹಿ ಹಾಕಬೇಕಾಯಿತು. ಸುಮಾರು ಒಂದು ತಿಂಗಳ ನಂತರ ಫೋನ್‌ಗಳನ್ನು ಅಸ್ಸಾಂನಿಂದ ವಾಪಸ್‌ ಪಡೆಯುವಂತೆ ಸೂಚಿಸಲಾಗಿದೆ.

“ನಾಳೆ, ನಾವು ಅಹಮದಾಬಾದ್‌ನಲ್ಲಿ ಮತ್ತೊಂದು ಪ್ರತಿಭಟನೆಯನ್ನು ಯೋಜಿಸುತ್ತಿದ್ದೇವೆ. ನಾವು ವಡಾಜ್‌ನಲ್ಲಿರುವ ಕಲೆಕ್ಟರ್ ಕಚೇರಿಗೆ ಮೆರವಣಿಗೆ ಮಾಡುತ್ತೇವೆ, ಧರಣಿ ನಡೆಸುತ್ತೇವೆ” ಎಂದು ಯಶ್ ಮಕ್ವಾನಾ ತಿಳಿಸಿದ್ದಾರೆ.

ಜಾಮೀನು ದೊರೆತ ಬಳಿಕವೂ ಪೊಲೀಸರು ಮತ್ತೆ ಜಿಗ್ನೇಶ್ ಅವರನ್ನು ಬಂಧಿಸಿದ್ದಾರೆ. ಗುಜರಾತ್‌ನಲ್ಲಿ ದಲಿತ ಸಂಘಟನೆಗಳು ಬೃಹತ್‌ ಪ್ರತಿಭಟನೆಗೆ ಮುಂದಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...