HomeಮುಖಪುಟPFI ಸಂಬಂಧ ಆರೋಪ; ಹತ್ರಾಸ್‌ಗೆ ಹೊರಟ ಕೇರಳದ ಪತ್ರಕರ್ತ ಸೇರಿ ಮೂವರ ಬಂಧನ

PFI ಸಂಬಂಧ ಆರೋಪ; ಹತ್ರಾಸ್‌ಗೆ ಹೊರಟ ಕೇರಳದ ಪತ್ರಕರ್ತ ಸೇರಿ ಮೂವರ ಬಂಧನ

ಪತ್ರಕರ್ತನ ಶೀಘ್ರ ಬಿಡುಗಡೆಗಾಗಿ 'ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್' ಯುಪಿ ಸಿಎಂ ಆದಿತ್ಯನಾಥ್‌ರವರಿಗೆ ಪತ್ರ ಬರೆದಿದೆ.

- Advertisement -
- Advertisement -

PFI ಜೊತೆಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ ಕೇರಳ ಮೂಲದ ಜನಪ್ರಿಯ ವೆಬ್‌ಸೈಟ್‌ ಒಂದರ ಪತ್ರಕರ್ತ ಸೇರಿದಂತೆ ಇತರ ಮೂವರನ್ನು ಉತ್ತರ ಪ್ರದೇಶ ಪೊಲೀಸರು ಮಥುರಾದಲ್ಲಿ ಬಂಧಿಸಿದ್ದಾರೆ. ಇವರು ವರದಿ ಮಾಡುವುದಕ್ಕಾಗಿ ದೆಹಲಿಯಿಂದ ಹತ್ರಾಸ್‌ಗೆ ಹೊರಟಿದ್ದರು ಎನ್ನಲಾಗಿದೆ.

ಬಂಧಿತರನ್ನು ಅತೀಕ್-ಉರ್ ರೆಹಮಾನ್, ಸಿದ್ದೀಕ್ ಕಪ್ಪನ್, ಮಸೂದ್ ಅಹ್ಮದ್ ಮತ್ತು ಆಲಂ ಎಂದು ಗುರುತಿಸಲಾಗಿದೆ. ’ಸಂಶಯಾಸ್ಪದ ವ್ಯಕ್ತಿಗಳು ದೆಹಲಿಯಿಂದ ಹತ್ರಾಸ್‌ಗೆ ತೆರಳುತ್ತಿದ್ದಾರೆ’ ಎಂಬ ಮಾಹಿತಿ ಮೇರೆಗೆ ಅವರನ್ನು ಟೋಲ್‌‌ನಲ್ಲಿ ತಡೆಯಲಾಯಿತು. ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್ ಮತ್ತು ಕೆಲ ಪುಸ್ತಕಗಳನ್ನು ಒಯ್ಯುತ್ತಿದ್ದರಿಂದ ’ರಾಜ್ಯದ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಹುದು’ ಎಂದು ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಮ್ಮ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ಪತ್ರಕರ್ತನಿಗೆ ಪಿಎಫ್‌ಐ ಮತ್ತು ಅದರ ವಿದ್ಯಾರ್ಥಿ ಘಟಕದೊಂದಿಗೆ ಸಂಬಂಧವಿದೆ. ಹಗಾಗಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ಸಿದ್ದೀಕ್ ಕಪ್ಪನ್ ಪಕತ್ರಕರ್ತರಾಗಿದ್ದು, ’ಹತ್ರಾಸ್‌‌ನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿಗಾಗಿ ಹೊರಟಿದ್ದರು’ ಎಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಅವರು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ದೆಹಲಿ ಘಟಕದ ಕಾರ್ಯದರ್ಶಿಯೂ ಆಗಿದ್ದಾರೆ.

ಸಂಘವು ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಬರೆದ ಪತ್ರದಲ್ಲಿ, ಅವರನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದೆ.

“ಅವರನ್ನು ಹತ್ರಾಸ್ ಟೋಲ್ ಪ್ಲಾಜಾದಿಂದ ಉತ್ತರ ಪ್ರದೇಶ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ವಶಕ್ಕೆ ಪಡೆದುಕೊಂಡ ಬಗ್ಗೆಗಿನ ಯಾವುದೇ ಮಾಹಿತಿ ಹತ್ರಾಸ್ ಪೊಲೀಸ್‌ ಠಾಣೆಯಾಗಲಿ, ರಾಜ್ಯ ಪೊಲೀಸ್‌ ಇಲಾಖೆಯಾಗಲಿ ಒದಗಿಸಿಲ್ಲ. ನಾವು ಸೇರಿದಂತೆ ದೆಹಲಿ ಮೂಲದ ಕೆಲವು ವಕೀಲರು ಅವರನ್ನು ಸಂಪರ್ಕಿಸಲು ಮಾಡಿದ ಪ್ರಯತ್ನಗಳು ಯಶಸ್ವಿಯಾಗಲಿಲ್ಲ” ಎಂದು ಪತ್ರಕರ್ತರ ಸಂಘವು ತಮ್ಮ ಪತ್ರದಲ್ಲಿ ಒತ್ತಿ ಹೇಳಿದೆ.

ಇದನ್ನೂ ಓದಿ: ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

“ನಮಗೆ ತಿಳಿದಿರುವಂತೆ ಅವರಿಗೆ ಪಿಎಫ್‌ಐಯೊಂದಿಗೆ ಯಾವುದೇ ಸಂಬಂಧಗಳಿಲ್ಲ. ಅವರು ನಿನ್ನೆ (ಸೋಮವಾರ) ಬೆಳಿಗ್ಗೆ ಹತ್ರಾಸ್‌ಗೆ ಹೊರಟಿರುವುದಾಗಿ ಹೇಳಿದ್ದರು. ಇದರ ನಂತರ ಅವರನ್ನು ಸಂಪರ್ಕಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಆದರೆ ಸಾಧ್ಯವಾಗುತ್ತಿಲ್ಲ. ಅವರ ಬಂಧನವಾಗಿದೆ ಎಂಬುವುದು ಮಾಧ್ಯಮಗಳ ವರದಿಯಿಂದ ತಿಳಿಯಿತು” ಎಂದು ಸಿದ್ದೀಕ್ ಕಪ್ಪನ್ ಅವರೊಂದಿಗೆ ಕೆಲಸ ಮಾಡುತ್ತಿರುವ ಮಲಯಾಳಂ ವೆಬ್‌ಸೈಟ್ ಅಳಿಮುಖಮ್‌ನ ಸಂಪಾದಕ ಕೆ.ಎನ್.ಅಶೋಕ್ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನಿರ್ವಹಿಸಿದ ರೀತಿಯ ಬಗ್ಗೆ ಭಾರಿ ಟೀಕೆಗಳನ್ನು ಎದುರಿಸುತ್ತಿರುವ ಉತ್ತರ ಪ್ರದೇಶ ಪೊಲೀಸರು, ಹತ್ರಾಸ್ ಘಟನೆಯಲ್ಲಿ ಪಿತೂರಿ ಮಾಡಲಾಗುತ್ತಿದೆ ಎಂದು 18 ಜನರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಪೊಲೀಸರು ದಾಖಲಿಸಿದ ಎಫ್‌ಐಆರ್‌‌ನಲ್ಲಿ, ಹತ್ರಾಸ್‌ ಘಟನೆಯನ್ನು ಇಟ್ಟುಕೊಂಡು ರಾಜ್ಯದ ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರದ ದೂರು ದಾಖಲಿಸಲು 900 ಕಿ.ಮೀ ಪ್ರಯಾಣಿಸಿದ ಸಂತ್ರಸ್ತೆ!

ನಮ್ಮ ಯೂಟ್ಯೂನ್ ಚಾನೆಲ್‌ಗೆ Subscribe ಆಗಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...