Homeಕರ್ನಾಟಕBreaking News: ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರ ಬಂಧನ

Breaking News: ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರ ಬಂಧನ

- Advertisement -
- Advertisement -

ಅಪ್ರಾಪ್ತ ಬಾಲಕಿಯರಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

ಇಂದು (ಗುರುವಾರ) ಸಂಜೆಯಿಂದಲೇ ಮಠದಲ್ಲಿ ಸ್ವಾಮೀಜಿಯ ವಿಚಾರಣೆಗಳನ್ನು ನಡೆಸಿದ್ದ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು, ರಾತ್ರಿ 10ರ ಸುಮಾರಿಗೆ ಮಠದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

‘ಮುರುಘಾ ಶರಣರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದೇವೆ. ವೈದ್ಯಕೀಯ ತಪಾಸಣೆಗಾಗಿ ಅವರನ್ನು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಕರೆದೊಯ್ಯಲು ಸಿದ್ಧತೆ ನಡೆದಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ್‌ ತಿಳಿಸಿದ್ದಾರೆ.

ಫೋಕ್ಸೋ ಪ್ರಕರಣ ದಾಖಲಾಗಿ ಆರು ದಿನಗಳ ಬಳಿಕ ಪೊಲೀಸರು ಮುರುಘಾ ಶರಣರನ್ನು ವಶಕ್ಕೆ ಪಡೆದಿದ್ದಾರೆ. ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಈ ಬೆಳವಣಿಗೆಯ ಮಧ್ಯೆ ಚಿತ್ರದುರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಮೈಸೂರು ‘ಒಡನಾಡಿ’ ಸಂಸ್ಥೆ ಪ್ರಕರಣವನ್ನು ಹೊರಗೆಳೆದ ಮೇಲೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಆಗಸ್ಟ್ 26ರಂದು ನಗರದ ನಜರಾಬಾದ್​ ಠಾಣೆಯಲ್ಲಿ ದೂರು ದಾಖಲಿಸಿತ್ತು. ನಂತರದ ಬೆಳವಣಿಗೆಯಲ್ಲಿ ಈ ಪ್ರಕರಣವು ಚಿತ್ರದುರ್ಗ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು.

ಬಂಧನದ ಭೀತಿಯಲ್ಲಿದ್ದ ಮುರುಘಾ ಶರಣರು, ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್​, ಶುಕ್ರವಾರಕ್ಕೆ ಮುಂದೂಡಿತ್ತು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇಂದು ಸಂಜೆ ವೇಳೆಗೆ ಎಲ್ಲ ಆರೋಪಿಗಳ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾಗಿತ್ತು. ಸ್ವಾಮೀಜಿ ವಿರುದ್ಧ ಪೋಕ್ಸೋ ಜೊತೆಗೆ ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿತ್ತು.

ಜಿಲ್ಲಾ ಆಸ್ಪತ್ರೆಯ ಹೊಸ ಕಟ್ಟಡದಲ್ಲಿ ಮುರುಘಾ ಶರಣರ ಸಲುವಾಗಿಯೇ ಕಳೆದ ಮೂರು ದಿನಗಳಿಂದ ವಿಶೇಷ ವಾರ್ಡ್‌ ಸಿದ್ಧಪಡಿಸಲಾಗಿದೆ. ಅದೇ ವಾರ್ಡ್‌ನಲ್ಲಿ ಶರಣರನ್ನು ದಾಖಲಿಸಲಾಗುತ್ತದೆ ಎಂದು ತಿಳಿದುಬಂದಿರುವುದಾಗಿ ಪ್ರಜಾವಾಣಿ ವರದಿ ಮಾಡಿದೆ.

ಆರೋಪಿಯನ್ನು ಬಂಧಿಸುವಲ್ಲಿ ವಿಳಂಬವಾಗುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ‘ಸ್ವಾಮೀಜಿಗೊಂದು ನ್ಯಾಯ, ಸಾಮಾನ್ಯರಿಗೊಂದು ನ್ಯಾಯವೇ?’ ಎಂಬ ಪ್ರಶ್ನೆಯನ್ನು ಜನರು ಕೇಳಲಾರಂಭಿಸಿದ್ದರು. “ತನಿಖೆ ನಡೆಯುತ್ತಿದೆ. ಸೂಕ್ತ ಸಾಕ್ಷಿಗಳು ಸಿಕ್ಕ ತಕ್ಷಣ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದರು.

ಬಿಲ್ಕಿಸ್ ಬಾನು ಅವರನ್ನು ಅತ್ಯಾಚಾರ ಮಾಡಿದ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದನ್ನು ಖಂಡಿಸಿ ಹಾಗೂ ಮುರುಘಾ ಶರಣರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನಾಳೆ (ಶುಕ್ರವಾರ) ರಾಜ್ಯಾದ್ಯಂತ ಪ್ರತಿಭಟನೆಗಳನ್ನೂ ಹಲವು ಸಂಘಟನೆಗಳು ಕೈಗೊಂಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈತನ ಬಂಧನ ಆಗದೆ ಹೋಗಿದ್ರೆ ಆ ಪೊಲೀಸ್ನವರ ಇನ್ಸ್ಪೆಕ್ಟರ್ ,ಡಿ ಎಸ್ ಪಿ, ಎಸ್ ಪಿ, ಅವರ ಗುತ್ತಿಗೆಗೆ ಬರ್ತದಲ್ಲ ಅದಕ್ಕೆ ಬಂಧಿಸಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...