Homeಮುಖಪುಟರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ 'ಪುರುಷಾಧಿಪತ್ಯ ಅಳಿಸಿ' ಟೀಶರ್ಟ್ ಈಗ ಚರ್ಚಿತ ವಿಷಯ

ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ಟೀಶರ್ಟ್ ಮೇಲೆ "Roses are Red, Violets are Blue, Lets Smash Patriarchy, Me and You" (ಗುಲಾಬಿಗಳು ಕೆಂಪು, ನೇರಳೆಗಳು ನೀಲಿ, ಪಿತೃಪ್ರಧಾನತೆಯನ್ನು ಅಳಿಸೋಣ, ನಾನು ಮತ್ತು ನೀವು" ಎಂದು ಬರೆದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮಾದಕವಸ್ತು ಸಂಬಂಧಿತ ಆರೋಪಕ್ಕೆ ಮೂರು ದಿನಗಳ ಕಾಲ ಪ್ರಶ್ನಿಸಿದ ನಂತರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ರಿಯಾ ಚಕ್ರವರ್ತಿ ಅವರನ್ನು ಇಂದು ಬಂಧಿಸಿದೆ.

“ರಿಯಾ ಅವರನ್ನು ಬಂಧಿಸಿದ ಮಾಹಿತಿಯನ್ನು ಕುಟುಂಬಕ್ಕೆ ಈಗಾಗಲೇ ನೀಡಲಾಗಿದೆ” ಎಂದು ಎನ್‌ಸಿಬಿಯ ಉಪನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ.

ಬಂಧನದ ನಂತರ ಆಕೆಯನ್ನು ವೈದ್ಯಕೀಯ ತಪಾಸಣೆ ಮತ್ತು ಕೊರೊನಾ ಪರೀಕ್ಷೆಗಳಿಗಾಗಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ತನ್ನ ಬಾಂದ್ರಾ ಅಪಾರ್ಟ್‌ಮೆಂಟ್‌ನ‌ಲ್ಲಿ ಶವವಾಗಿ ಪತ್ತೆಯಾಗಿದ್ದರು. ತನ್ನ ಮಗನನ್ನು ಆತ್ಮಹತ್ಯೆಗೆ ದೂಡಿದ್ದಾರೆ ಮತ್ತು ಅವನ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಪಾಟ್ನಾದಲ್ಲಿ ರಿಯಾ ಚಕ್ರವರ್ತಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಆದರೆ ರಿಯಾ ಹಲವಾರು ಸಂದರ್ಭಗಳಲ್ಲಿ ಆರೋಪಗಳನ್ನು ನಿರಾಕರಿಸಿದ್ದರು.

ಸುಶಾಂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ರಿಯಾ ಸೇರಿದಂತೆ ಸಾಕಷ್ಟು ಮಂದಿಯನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ ರಿಯಾಗೆ ಡ್ರಗ್ ಜಾಲದೊಂದಿಗೆ ಸಂಪರ್ಕವಿದೆ ಎಂದು ಅನುಮಾನಿಸಲಾಗಿತ್ತು. ಅಲ್ಲದೆ ಡ್ರಗ್ಸ್ ಬಗ್ಗೆ ರಿಯಾ ಅವರ ಮೊಬೈಲ್ನಲ್ಲಿ ನಡೆಸಲಾಗಿದ್ದ ಸಂಭಾಷಣೆಯ ದಾಖಲೆ ಹೊರ ಬಿದ್ದಿತ್ತು. ಇದೇ ಕಾರಣದಿಂದ NCB ರಿಯಾ ಅವರನ್ನು ವಿಚಾರಣೆಗೆ ಒಳಪಡಿಸಿತ್ತು.

ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ಇಂದು ಮೂರನೇ ದಿನ ರಿಯಾ ಎಂದಿನಂತೆ NCB ನಡೆಸುತ್ತಿರುವ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ನಟಿ ರಿಯಾ ಅವರನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ. ಅದಕ್ಕೂ ಮೊದಲು ಇದೇ ಪ್ರಕರದಲ್ಲಿ ರಿಯಾ ಅವರ ಸಹೋದರ ಶೋವಿಕ್, ಸುಶಾಂತ್ ಮನೆಯಲ್ಲಿ ಕೆಲಸಕ್ಕಿದ್ದ ದೀಪೇಶ್ ಸಾವಂತ್ ಹಾಗೂ ಸುಶಾಂತ್ ಅವರ ಮನೆಯ ವ್ಯವಸ್ಥಾಪಕ ಸ್ಯಾಮುಯೆಲ್ ಮಿರಾಂಡ ಅವರನ್ನು NCB ಅಧಿಕಾರಿಗಳು ವಿಚಾರಣೆ ನಡೆಸಿ ವಶಕ್ಕೆ ಪಡೆದಿದ್ದರು.

ಇಂದು ವಿಚಾರಣಗೆ ಹಾಜರಾಗಿದ್ದ ರಿಯಾ ತೊಟ್ಟಿದ್ದ ಕಪ್ಪು ಬಣ್ಣದ ಟೀಶರ್ಟ್ ಚರ್ಚಾ ವಿಷಯವಾಗಿದೆ. ಈ ಟೀಶರ್ಟ್ ‘Roses are Red’ ಬ್ರಾಂಡ್ ನದ್ದಾಗಿದ್ದು, ಈ ಬ್ರಾಂಡ್ ಬಟ್ಟೆಗಳ ಮೇಲೆ ಕ್ರಾಂತಿಕಾರಕ ಮತ್ತು ಪ್ರಗತಿಪರ ಬರವಣಿಗೆಗಳನ್ನು ಬರೆಯಲಾಗಿರುತ್ತದೆ. ಅಂತಹ ಬರವಣಿಗೆಯಿರುವ ಬಟ್ಟೆಯೊಂದನ್ನು ಇಂದು ರಿಯಾ ಧರಿಸಿದ್ದು ಗಮನ ಸೆಳೆದಿದೆ.

ಅದರ ಮೇಲೆ “Roses are Red, Violets are Blue, Lets Smash Patriarchy, Me and You” (ಗುಲಾಬಿಗಳು ಕೆಂಪು, ನೇರಳೆಗಳು ನೀಲಿ, ಪಿತೃಪ್ರಧಾನತೆಯನ್ನು ಅಳಿಸೋಣ, ನಾನು ಮತ್ತು ನೀವು” ಎಂದು ಬರೆದಿತ್ತು. ಇದು ಈಗ ಚರ್ಚೆಗೆ ಗ್ರಾಸವಾಗಿದೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ:ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...