Homeಕರ್ನಾಟಕವಿಜಯೋತ್ಸವದ ಮೆರವಣಿಗೆಯಲ್ಲಿ ತಲವಾರ್ ಝಳಪಿಸಿದ ಯತ್ನಾಳ ಬೆಂಬಲಿಗನ ಬಂಧನ

ವಿಜಯೋತ್ಸವದ ಮೆರವಣಿಗೆಯಲ್ಲಿ ತಲವಾರ್ ಝಳಪಿಸಿದ ಯತ್ನಾಳ ಬೆಂಬಲಿಗನ ಬಂಧನ

- Advertisement -
- Advertisement -

ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ವಿಜಯಪುರ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಗೆಲುವು ಸಾಧಿಸಿದರು. ಯತ್ನಾಳ ಗೆಲುವಿನ ಬೆನ್ನಲ್ಲೇ ಅವರ ಬೆಂಬಲಿಗರು ನಗರದಲ್ಲಿ ವಿಜಯೋತ್ಸವ ಆಚರಿಸಿದರು. ಈ ವೇಳೆ ಯತ್ನಾಳ ಬೆಂಬಲಿಗ ಮಹೇಶ ಹಳ್ಳದಮನಿ(26) ಎನ್ನುವ ವ್ಯಕ್ತಿಯು ತಲವಾರ್ ಝಳಪಿಸಿದ್ದನು. ಇದೀಗ ಆತನನ್ನು ಬಂಧಿಸಲಾಗಿದೆ.

ಯತ್ನಾಳ ವಿಜಯೋತ್ಸವದಲ್ಲಿ ಆರೋಪಿಯು ತಲವಾರ್‌ ಝಳಪಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಭಾನುವಾರವೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

ಈ ಹಿಂದೆ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಹಿರೇಹರಕುಣಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ್ದ ಯತ್ನಾಳ ಅವರು, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಯೋಗಿ ಮಾದರಿಯ ಆಡಳಿತ ಜಾರಿಗೆ ಬರುತ್ತದೆ ಎಂದಿದ್ದರು. ಮುಂದುವರೆದು, ”ಹಿಂದೂ ಮತ್ತು ದೇಶದ ವಿರುದ್ಧ ಯಾರಾದರು ಮಾತಾಡಿದರೆ ಶೂಟ್ ಮಾಡುವುದು ಖಚಿತ, ಯಾರಾದರೂ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ​ ಎನ್​ಕೌಂಟರ್ ನಿಶ್ಚಿತ, ರಸ್ತೆ ಮಧ್ಯೆಯೇ ನಿಲ್ಲಿಸಿ ಗುಂಡು ಹಾರಿಸಲಾಗುತ್ತದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಘಟನೆ ಬೆನ್ನಲ್ಲೇ ಯತ್ನಾಳ ಅವರ ವಿವಾದಾತ್ಮಕ ಹೇಳಿಕೆಯೊಂದಿಗೆ ವಿಜಯೋತ್ಸವದಲ್ಲಿ ಅವರ ಬೆಂಬಲಿಗ ತಲವಾರ್ ಝಳಪಿಸಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ವಿಜಯೋತ್ಸವ ಆಚರಿಸಿದರೆ ಗಲಾಟೆಗಳು ನಡೆಯಬಹುದು ಎನ್ನುವ ಕಾರಣಕ್ಕೆ ಮುನ್ನೆಚರಿಕಾ ಕ್ರಮವಾಗಿ ಎಲ್ಲ ಕಡೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಆದರೆ ಯತ್ನಾಳ ಜಯಗಳಿಸುತ್ತಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಶನಿವಾರ ದೊಡ್ಡ ಪ್ರಮಾಣದಲ್ಲಿ ವಿಜಯೋತ್ಸವ ಆಚರಿಸಿದ್ದರು. ಈ ವೇಳೆ ಯುವಕನೊಬ್ಬ ತಲವಾರ್ ಝಳಪಿಸಿದ್ದನು. ಇದು ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬಬಲೇಶ್ವರ ಬಿಜೆಪಿ ಅಭ್ಯರ್ಥಿಯ ಮಗನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ; ಗೂಂಡಾ ಅಭ್ಯರ್ಥಿ ಎಂದ ಕಾಂಗ್ರೆಸ್

ವಿಜಯಪುರ ಜಿಲ್ಲೆಯಲ್ಲಿ ಇಂತಹ ಘಟನೆಗಳು ಸಾಮಾನ್ಯ ಎನ್ನುವಂತಾಗಿ ಹೋಗಿದೆ. ಏಕೆಂದರೆ ಕೆಲದಿನಗಳ ಹಿಂದೆ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಬಲೇಶ್ವರ ಕ್ಷೇತ್ರದಲ್ಲಿ ವಿಜುಗೌಡ ಪಾಟೀಲ ಅವರಿಗೆ ಟಿಕೆಟ್‌ ನೀಡಲಾಯಿತು. ಈ ವೇಳೆ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿತ್ತು.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರು ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿದ್ದರು. ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿ, ”ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದರು.

ಬಿಜೆಪಿ ಒಬ್ಬ ಗೂಂಡಾ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ತನ್ನ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ ಎಂದು ಅವರು ಆರೋಪ ಮಾಡಿದ್ದರು.

”ಬಿಜೆಪಿ, ಆರ್‌ಎಸ್‌ಎಸ್‌ನವರು ಯಾವಾಗಲೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತಾರೆ, ಇದಕ್ಕೆ ಸೂಕ್ತ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದರು. ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ತೆರೆಯ ಮುಂದೆ ಮತದಾರರ ಕಾಲಿಗೆ ಬಿದ್ದು, ಮೊಸಳೆ ಕಣ್ಣೀರು ಸುರಿಸಿ ಮತಯಾಚನೆ ಮಾಡುತ್ತಿದ್ದರು, ತೆರೆಯ ಹಿಂದೆ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದಾರೆ” ಎಂದು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...