Homeಕರ್ನಾಟಕಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ; ಎತ್ತ ಸಾಗುತ್ತಿದೆ ಭಾರತ?

ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ; ಎತ್ತ ಸಾಗುತ್ತಿದೆ ಭಾರತ?

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ

- Advertisement -
- Advertisement -

ದೇಶಕ್ಕೆ ಒಲಂಪಿಕ್ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಇಂದು (ಭಾನುವಾರ) ಬಂಧಿಸಿದ್ದಾರೆ. ಜಂತರ್‌ಮಂತರ್‌ನಲ್ಲಿ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದ ದೇಶದ ಮಹತ್ವದ ಕುಸ್ತಿಪಟುಗಳನ್ನು ಎಳೆದಾಡಿ ವಶಕ್ಕೆ ಪಡೆಯಲಾಗಿದೆ.

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಹೊಸ ಸಂಸತ್ತಿನ ಕಟ್ಟಡದ ಕಡೆಗೆ ಕುಸ್ತಿಪಟುಗಳು ತೆರಳಲು ಪ್ರಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ. ಮಹಿಳಾ ಮಹಾಪಂಚಾಯತ್ ನಡೆಸುವ ಮೂಲಕ ಪ್ರಧಾನಿ ಮೋದಿಯವರ ಗಮನ ಸೆಳೆಯಲು ಕುಸ್ತಿಪಟುಗಳು ಬಯಸಿದ್ದರು.

ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬಿಜೆಪಿ ಸಂಸದ, ಭಾರತೀಯ ಕುಸ್ತಿ ಪೆಡರೇಷನ್‌ ಮುಖ್ಯಸ್ಥ ಬ್ರಿಜ್‌ಭೂಷಣ್ ಶರಣ್ ಸಿಂಗ್ ಬಂಧನ ಮಾಡಬೇಕೆಂದು ಆಗ್ರಹಿಸಿ ಕುಸ್ತಿಪಟುಗಳು ಒಂದು ತಿಂಗಳಿಗಿಂತ ಹೆಚ್ಚು ಕಾಲ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಜಂತರ್ ಮಂತರ್‌ನಲ್ಲಿ ಅಸ್ತವ್ಯಸ್ತವಾಗಿರುವ ದೃಶ್ಯಗಳು ಕಂಡುಬಂದಿವೆ. ವಿನೇಶ್ ಫೋಗಟ್ ಮತ್ತು ಅವರ ಸೋದರಸಂಬಂಧಿ ಸಂಗೀತಾ ಫೋಗಟ್ ಬ್ಯಾರಿಕೇಡ್‌ಗಳನ್ನು ಭೇದಿಸಲು ಪ್ರಯತ್ನಿಸಿದಾಗ ಕುಸ್ತಿಪಟುಗಳು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ತಿಕ್ಕಾಟ ನಡೆಯಿತು.

ಪೊಲೀಸರು ಎಳೆದಾಡುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿರುವ ಸಾಕ್ಷಿ ಮಲ್ಲಿಕ್‌, “ನಮ್ಮ ಚಾಂಪಿಯನ್‌ಗಳನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ. ಜಗತ್ತು ನಮ್ಮನ್ನು ನೋಡುತ್ತಿದೆ” ಎಂದು ನೊಂದು ನುಡಿದಿದ್ದಾರೆ.

ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಘಟನೆಯ ಫೋಟೋಗಳನ್ನು ಹಂಚಿಕೊಂಡಿದ್ದು, “ಇದು ಭಯಾನಕ. ಜೈಲಿನಲ್ಲಿ ಇರಬೇಕಾದದನು ಸ್ವತಂತ್ರವಾಗಿ ತಿರುಗಾಡುತ್ತಿದ್ದಾನೆ. ಗೌರವ ಕಾಪಾಡಬೇಕಾದವರನ್ನು ದೆಹಲಿಯ ಬೀದಿಗಳಲ್ಲಿ ಎಳೆದು ತರಲಾಗುತ್ತಿದೆ. ನಾವು ಹಿಟ್ಲರ್ ಆಳ್ವಿಕೆಯ ಬಗ್ಗೆ ಕೇಳಿದ್ದೇವೆ. ಆದರೆ ಈಗ ನಾವು ಮೋದಿಯವರ ಆಡಳಿತದಲ್ಲಿ ಅದನ್ನು ನೋಡುತ್ತಿದ್ದೇವೆ. ಮೋದಿ ಸರ್ಕಾರವು ಅಪರಾಧಿಯನ್ನು ರಕ್ಷಿಸಲು ಇನ್ನು ಎಷ್ಟರ ಮಟ್ಟಿಗೆ ಹೋಗುತ್ತಿದೆ. ಸ್ವಲ್ಪ ನಾಚಿಕೆ ಇರಲಿ” ಎಂದು ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ, “ದೆಹಲಿ ಪೊಲೀಸರು ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಇತರ ಕುಸ್ತಿಪಟುಗಳ ಮೇಲೆ ದೌರ್ಜನ್ಯ ನಡೆಸಿದ ರೀತಿಯನ್ನು ಬಲವಾಗಿ ಖಂಡಿಸುತ್ತೇನೆ. ನಮ್ಮ ಚಾಂಪಿಯನ್‌ಗಳನ್ನು ಈ ರೀತಿ ನಡೆಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಅವರನ್ನು ಕೂಡಲೇ ಪೊಲೀಸರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸುತ್ತೇನೆ. ನಾನು ನಮ್ಮ ಕುಸ್ತಿಪಟುಗಳ ಪರವಾಗಿ ನಿಲ್ಲುತ್ತೇನೆ” ಎಂದಿದ್ದಾರೆ.

ಎಲ್ಲಾ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಲವಂತವಾಗಿ ಬಸ್‌ಗಳಿಗೆ ಹತ್ತಿಸಿದರು. “ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ. ನಾವು ಸೂಕ್ತ ಸಮಯದಲ್ಲಿ ವಿಚಾರಣೆಯ ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಸಿಪಿ ದೇವೇಂದ್ರ ಪಾಠಕ್ ಹೇಳಿದ್ದಾರೆ.

ಏಪ್ರಿಲ್ 23 ರಂದು ಕುಸ್ತಿಪಟುಗಳು ವ್ರೆಸ್ಟಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತಮ್ಮ ಆಂದೋಲನವನ್ನು ಪುನರಾರಂಭಿಸಿದ್ದರು. ಪ್ರತಿಭಟನಾ ಸ್ಥಳವನ್ನು ಪೊಲೀಸ್ ಅಧಿಕಾರಿಗಳು ತೆರವುಗೊಳಿಸುತ್ತಿರುವುದು ಕಂಡುಬಂದಿದೆ.

‘ಮಹಿಳಾ ಸಮ್ಮಾನ್ ಮಹಾಪಂಚಾಯತ್’ಗೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಕರೆ ನೀಡಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದರು.

ಭಾನುವಾರ ದೆಹಲಿಯ ಲುಟಿಯನ್ಸ್ ಪ್ರದೇಶದಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಮತ್ತು ಹಲವಾರು ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು.

ಸಂಸತ್ ಭವನದಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಯಾವುದೇ ಬೆಲೆ ತೆತ್ತಾದರೂ ಹೊಸ ಸಂಸತ್ ಭವನದ ಬಳಿ ತಮ್ಮ ‘ಮಹಾಪಂಚಾಯತ್’ ನಡೆಸುವುದಾಗಿ ಹೇಳಿದ್ದರು.

ಇದನ್ನೂ ಓದಿರಿ: ಪೋಕ್ಸೋ ಕಾಯ್ದೆ ದುರುಪಯೋಗ ಆಗುತ್ತಿದೆ: ಆರೋಪಿ ಬ್ರಿಜ್‌ ಭೂಷಣ್‌ ಹೇಳಿಕೆ

ಮಹಾ ಪಂಚಾಯತ್‌ ನಡೆಸಲು ಅನುಮತಿ ನೀಡಿರಲಿಲ್ಲ. ಪ್ರತಿಭಟನಾಕಾರರು ಹೊಸ ಸಂಸತ್‌ ಕಟ್ಟಡದ ಕಡೆಗೆ ಹೋಗದಂತೆ ಸೂಚಿಸಲಾಗಿತ್ತು. ಕುಸ್ತಿಪಟುಗಳು ಯಾವುದೇ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಬಾರದು ಎಂದು ಪೊಲೀಸರು ತಿಳಿಸಿದ್ದಾರೆ.

ಒಲಂಪಿಕ್ ಪದಕ ವಿಜೇತರಾದ ಬಜರಂಜ್ ಪೂನಿಯಾ, ಸಾಕ್ಷಿ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ವಿಜೇತ ವಿನೇಶ್ ಸೇರಿದಂತೆ ಹಲವು ಮುಂಚೂಣಿ ಕುಸ್ತಿಪಟುಗಳು ಹೋರಾಟದಲ್ಲಿ ನಿರತರಾಗಿದ್ದಾರೆ. ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಮತ್ತು ಓರ್ವ ಅಪ್ರಾಪ್ತ ಯುವತಿಗೆ ಬ್ರಿಜ್‌ ಭೂಷಣ್‌ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದರೆ. ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸದ ನಂತರ ಎರಡು ಎಫ್‌ಐಆರ್‌ಗಳನ್ನು ಬ್ರಿಜ್‌ ಭೂಷಣ್ ವಿರುದ್ಧ ದಾಖಲಿಸಲಾಗಿದೆ. ಆದರೆ ಅವರ ಬಂಧನವಾಗಿಲ್ಲ.

ದೇಶಕ್ಕೆ ಮಹತ್ವದ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳ ಸ್ಥಿತಿ ಇದಾಗಿದೆ. ದೇಶ ಎತ್ತ ಸಾಗುತ್ತಿದೆ ಎಂಬ ಪ್ರಶ್ನೆ ಉದ್ಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...