Homeರಾಷ್ಟ್ರೀಯಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

ಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

- Advertisement -
- Advertisement -

2018 ರಲ್ಲಿ ಮಾಡಿದ್ದ ಟ್ವೀಟ್‌ನ ವಿರುದ್ಧ ದಾಖಲಿಸಲಾದ ಪ್ರಕರಣದ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಪ್ರಕಟಿಸುವ ಮೊದಲೇ ಸೋರಿಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌‌‌ ಅವರ ವಕೀಲರು ಅಘಾತ ವ್ಯಕ್ತಪಡಿಸಿದ್ದಾರೆ. ನ್ಯಾಯಾಧೀಶರು ತೀರ್ಪು ಪ್ರಕಟಿಸುವ ಸುಮಾರು 4:30 ಗಂಟೆಗಳಿಗಿಂತಲೂ ಮೊದಲೇ ಮಾಧ್ಯಮ ಸಂಸ್ಥೆಗಳು ವರದಿಗಳನ್ನು ಪ್ರಕಟಿಸಿವೆ ಎಂದು ಅವರು ಶನಿವಾರ ಆರೋಪಿಸಿದ್ದಾರೆ.

ನ್ಯಾಯಾಧೀಶರು ಶನಿವಾರ ಸಂಜೆ 7 ಗಂಟೆಗೆ ಆದೇಶವನ್ನು ಪ್ರಕಟಿಸಿದ್ದಾರಾದರೂ, ಕೆಲವು ಸುದ್ದಿ ವಾಹಿನಿಗಳು ಮತ್ತು ಏಜೆನ್ಸಿಗಳು ಮಧ್ಯಾಹ್ನ 2.30 ರ ಸುಮಾರಿಗೆ ಜುಬೈರ್‌ಗೆ ಜಾಮೀನು ನಿರಾಕರಿಸಲಾಗಿದೆ ಮತ್ತು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ಆದೇಶದ ಕುರಿತ ಮಾಧ್ಯಮ ವರದಿಗಳನ್ನು ನಿರಾಕರಿಸಿದ ಜುಬೇರ್‌ ಅವರ ವಕೀಲ ಸೌತಿಕ್ ಬ್ಯಾನರ್ಜಿ, ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ಜಾಮೀನು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

“ಊಟದ ವಿರಾಮದ ನಂತರ ನ್ಯಾಯಾಧೀಶರು ಇನ್ನೂ ನ್ಯಾಯಾಲಯಕ್ಕೆ ಬರುವ ಮೊದಲೇ ನಮ್ಮ ಜಾಮೀನು ತಿರಸ್ಕರಿಸಲಾಗಿದೆ ಮತ್ತು 14 ದಿನಗಳ ನ್ಯಾಯಾಂಗ ಬಂಧನ ನೀಡಲಾಗಿದೆ ಎಂದು ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಮಾಧ್ಯಮಗಳಲ್ಲಿ ಸೋರಿಕೆ ಮಾಡಿರುವುದನ್ನು ನೋಡಿ ನನಗೆ ಆಘಾತವಾಗಿದೆ” ಎಂದು ಅವರು ಹೇಳಿದ್ದಾರೆ.

“ಈ ಸುದ್ದಿಗಳನ್ನು ಟ್ವಿಟರ್ ಪೋಸ್ಟ್‌ಗಳನ್ನು ನೋಡಿ ನಾನು ತಿಳಿದುಕೊಂಡೆ. ಈ ಸುದ್ದಿ ಮಾಡಿರುವ ಸುದ್ದಿ ವಾಹಿನಿಗಳ… ಕೆಲವು ಕಾನೂನು ವರದಿಗಾರರು ಈ ಸುದ್ದಿಯನ್ನು ಮಾಡಿದ್ದಾರೆ. ಅವರು ಕೆಪಿಎಸ್ ಮಲ್ಹೋತ್ರಾ ಅವರನ್ನು ಈ ಮಾಹಿತಿಯ ಮೂಲವೆಂದು ಉಲ್ಲೇಖಿಸುತ್ತಿದ್ದಾರೆ” ಎಂದು ಸೌತಿಕ್ ಬ್ಯಾನರ್ಜಿ ಹೇಳಿದ್ದಾರೆ.

“ಇದು ಅತ್ಯಂತ ದೊಡ್ಡ ಹಗರಣವಾಗಿದ್ದು, ನ್ಯಾಯಾಧೀಶರು ಕೋರ್ಟ್‌ಗೆ ಬಂದು ಆದೇಶವನ್ನು ಪ್ರಕಟಿಸುವ ಮೊದಲೇ, ಪೊಲೀಸರು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ. ಇದು ದೇಶದ ಕಾನೂನಿನ ಆಡಳಿತದ ಸ್ಥಿತಿಯನ್ನು ಹೇಳುತ್ತದೆ. ನಮಗೆ ಬಂದಿರುವ ಆದೇಶ ಏನೆಂದು ಕೆಪಿಎಸ್ ಮಲ್ಹೋತ್ರಾ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಗಂಭೀರ ಆತ್ಮಾವಲೋಕನವನ್ನು ಮಾಡಬೇಕು” ಎಂದು ವಕೀಲ ಸೌತಿಕ್ ಹೇಳಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು! 

ಜುಬೈರ್ ಅವರ ವಕೀಲರ ಪತ್ರಿಕಾ ಹೇಳಿಕೆಯ ನಂತರ, ಕೆಲವು ಮಾಧ್ಯಮಗಳು ವರದಿಯನ್ನು ಹಿಂತೆಗೆದುಕೊಂಡವು ಅಥವಾ ತಿದ್ದುಪಡಿ ಮಾಡಿದವು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿಸಿಪಿ, “ಇದು ನನ್ನ ತನಿಖಾಧಿಕಾರಿ ಹೇಳಿರುವ ಮಾತಾಗಿದ್ದು, ಗದ್ದಲದಿಂದಾಗಿ ನನಗೆ ಅದು ತಪ್ಪಾಗಿ ಕೇಳಿದೆ. ಈ ಅಜಾಗರೂಕತೆಯಿಂದ ಸಂದೇಶ ತಪ್ಪಾಗಿ ಪ್ರಸಾರ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಆಲ್ಟ್‌ನ್ಯೂಸ್‌ನ ಮೊಹಮ್ಮದ್ ಜುಬೇರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಮಾಧ್ಯಮಗಳಿಗೆ ತಪ್ಪಾಗಿ ತಿಳಿಸಿದ್ದೇನೆ ಎಂದು ದೆಹಲಿ ಪೊಲೀಸ್ ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ” ಎಂದು ಪಿಟಿಐ ಟ್ವೀಟ್ ಮಾಡಿದೆ.

ಇದನ್ನೂ ಓದಿ:  ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

“ಮಾಹಿತಿಯನ್ನು ದೆಹಲಿ ಪೊಲೀಸರು ಒದಗಿಸಿದ್ದಾರೆ. ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ” ಎಂದು ANI ಸುದ್ದಿಯನ್ನು ಮತ್ತೇ ಅಪ್‌ಡೇಟ್‌ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. U ppl posting jubair news at least 2 time update in a day but did not find single news news about Jihadies act on Kanayya’s death news…how you ppl become independent news agency and you are one sided agent that’s against India

  2. ಜುಬೇರ್ ನಂತ ಅಯೋಗ್ಯನ ಪರ ಇರೋ ಅಯೋಗ್ಯರನ್ನಾ ದೇಶದಿಂದ ಒದ್ದು ಓಡಿಸುವ ಕೆಲಸ ಜನ ಮಾಡುವ ಮೊದಲು ಸರಕಾರ ಮಾಡಬೇಕಿದೆ .ಈ ಜುಬೇರ್ ನಂತ ಹಿಂದೂ ವಿರೋಧಿಯನ್ನ ಸಾರ್ವಜನಿಕ ಪ್ರದೇಶದಲ್ಲಿ ಗಲ್ಲಿಗೇರಿಸಬೇಕಿದೆ.

  3. ಹುಚ್ಚು ನಾಯಿಗಳಿಗೇನು ಗೊತ್ತು ಜುಬೈರ್ ಬಗ್ಗೆ. ಅವರ ಬಗ್ಗೆ ಯಾಕೆ ಇಷ್ಟು ಕಿಡಿ ಅಂದ್ರೆ ಈ ಅವಿವೇಕಿಗಳು,2 ಭಿಕ್ಷುಕರು, ಮತ್ತೆ ಒಂದು ದೇಶದ ದೊಡ್ಡ ಸುಳ್ಳಿನ ಪಕ್ಷದ ರಾಜಕಾರಣಿಗಳು, ಅದರ ಪಟಾಲಂಗಳು ಹೇಳುವ ಸುಳ್ಳನ್ನು ಸುಳ್ಳು ಎಂದು ನಿಜವಾದ ಸುದ್ದಿಯನ್ನು ಜನರ ಮುಂದೆ ಇಡುವ ವ್ಯಕ್ತಿ ಅದ್ಕೆ ಜುಬೈರ್ ಅಂದ್ರೆ ಅಂಡಿಗೆ ಮೆಣಸಿನಕಾಯಿ ತುದಿ ಕಟ್ ಮಾಡಿ ಏರಿಸ್ಕೊಳೋದು ಭೋ… ಡಿ ಮ## ಲೆ ಅವಿವೇಕಿ 2 ಬೆಗ್ಗೆರ್ಸ್ ಸತ್ಯ ಹೇಳೋಕು ಆಗಲ್ಲ ಒಪ್ಕೋಳೋಕು ಆಗಲ್ಲ ಅಂದ್ರೆ ನಿಮ್ಮ ಚಡ್ಡಿಯೊಳಗಿನ ಕೂದಲಿಗೆ ನೇಣು ಬಿಗಿದುಕೊಂಡು ಸಾಯಿರೋ ದರ್ಬೇಸಿ ಮುಂಡೇವಾ. ನಿಮ್ಮಿಂದ ದೇಶ ಅದೋ ಗತಿಗೆ ಬಂದಾಯ್ತು 😡😡😡😡ಥೂ… ನಿಮ್ಮ ಹಡಬಿಟ್ಟಿ ಜನ್ಮಕ್ಕೆ ನನ್ನ ಹಳೆ ಎಕ್ಕಡ

  4. ಬಿಜೆಪಿ ವಿರುದ್ದ ಮಾತಾಡಿದ ಎಲ್ಲರನ್ನೂ ಕಳ್ಳ ಕೇಸಿನಲ್ಲಿ ಸಿಕ್ಕಿಸಿ ಜೈಲಿಗಟ್ಟುವ ಬಿಜೆಪಿಯ ಜಾಯಮಾನ ಖಂಡನೀಯ.
    ರಾಜಕೀಯ ಮಾಡಬಹುದು ಆದರೆ ನಿರಪರಾಧಿಗಳನ್ನು ಹಿಂಸಿಸುವುದು ಎಷ್ಟು ಸರಿ.
    ಈ ನಡವಳಿಕೆ ಬಿಜೆಪಿಗೆ ತಕ್ಕುದಲ್ಲ.
    ಎಲ್ಲಕ್ಕೂ ಬೆಲೆ ತೆತ್ತಬೇಕಾದ ಸಂಧರ್ಭ ಒದಗಿ ಬರಲಿದೆ.
    ಕಾಲವೇ ಉತ್ತರಿಸಲಿದೆ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...