Homeರಾಷ್ಟ್ರೀಯಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

ಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

- Advertisement -
- Advertisement -

2018 ರಲ್ಲಿ ಮಾಡಿದ್ದ ಟ್ವೀಟ್‌ನ ವಿರುದ್ಧ ದಾಖಲಿಸಲಾದ ಪ್ರಕರಣದ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಪ್ರಕಟಿಸುವ ಮೊದಲೇ ಸೋರಿಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌‌‌ ಅವರ ವಕೀಲರು ಅಘಾತ ವ್ಯಕ್ತಪಡಿಸಿದ್ದಾರೆ. ನ್ಯಾಯಾಧೀಶರು ತೀರ್ಪು ಪ್ರಕಟಿಸುವ ಸುಮಾರು 4:30 ಗಂಟೆಗಳಿಗಿಂತಲೂ ಮೊದಲೇ ಮಾಧ್ಯಮ ಸಂಸ್ಥೆಗಳು ವರದಿಗಳನ್ನು ಪ್ರಕಟಿಸಿವೆ ಎಂದು ಅವರು ಶನಿವಾರ ಆರೋಪಿಸಿದ್ದಾರೆ.

ನ್ಯಾಯಾಧೀಶರು ಶನಿವಾರ ಸಂಜೆ 7 ಗಂಟೆಗೆ ಆದೇಶವನ್ನು ಪ್ರಕಟಿಸಿದ್ದಾರಾದರೂ, ಕೆಲವು ಸುದ್ದಿ ವಾಹಿನಿಗಳು ಮತ್ತು ಏಜೆನ್ಸಿಗಳು ಮಧ್ಯಾಹ್ನ 2.30 ರ ಸುಮಾರಿಗೆ ಜುಬೈರ್‌ಗೆ ಜಾಮೀನು ನಿರಾಕರಿಸಲಾಗಿದೆ ಮತ್ತು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ಆದೇಶದ ಕುರಿತ ಮಾಧ್ಯಮ ವರದಿಗಳನ್ನು ನಿರಾಕರಿಸಿದ ಜುಬೇರ್‌ ಅವರ ವಕೀಲ ಸೌತಿಕ್ ಬ್ಯಾನರ್ಜಿ, ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ಜಾಮೀನು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

“ಊಟದ ವಿರಾಮದ ನಂತರ ನ್ಯಾಯಾಧೀಶರು ಇನ್ನೂ ನ್ಯಾಯಾಲಯಕ್ಕೆ ಬರುವ ಮೊದಲೇ ನಮ್ಮ ಜಾಮೀನು ತಿರಸ್ಕರಿಸಲಾಗಿದೆ ಮತ್ತು 14 ದಿನಗಳ ನ್ಯಾಯಾಂಗ ಬಂಧನ ನೀಡಲಾಗಿದೆ ಎಂದು ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಮಾಧ್ಯಮಗಳಲ್ಲಿ ಸೋರಿಕೆ ಮಾಡಿರುವುದನ್ನು ನೋಡಿ ನನಗೆ ಆಘಾತವಾಗಿದೆ” ಎಂದು ಅವರು ಹೇಳಿದ್ದಾರೆ.

“ಈ ಸುದ್ದಿಗಳನ್ನು ಟ್ವಿಟರ್ ಪೋಸ್ಟ್‌ಗಳನ್ನು ನೋಡಿ ನಾನು ತಿಳಿದುಕೊಂಡೆ. ಈ ಸುದ್ದಿ ಮಾಡಿರುವ ಸುದ್ದಿ ವಾಹಿನಿಗಳ… ಕೆಲವು ಕಾನೂನು ವರದಿಗಾರರು ಈ ಸುದ್ದಿಯನ್ನು ಮಾಡಿದ್ದಾರೆ. ಅವರು ಕೆಪಿಎಸ್ ಮಲ್ಹೋತ್ರಾ ಅವರನ್ನು ಈ ಮಾಹಿತಿಯ ಮೂಲವೆಂದು ಉಲ್ಲೇಖಿಸುತ್ತಿದ್ದಾರೆ” ಎಂದು ಸೌತಿಕ್ ಬ್ಯಾನರ್ಜಿ ಹೇಳಿದ್ದಾರೆ.

“ಇದು ಅತ್ಯಂತ ದೊಡ್ಡ ಹಗರಣವಾಗಿದ್ದು, ನ್ಯಾಯಾಧೀಶರು ಕೋರ್ಟ್‌ಗೆ ಬಂದು ಆದೇಶವನ್ನು ಪ್ರಕಟಿಸುವ ಮೊದಲೇ, ಪೊಲೀಸರು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ. ಇದು ದೇಶದ ಕಾನೂನಿನ ಆಡಳಿತದ ಸ್ಥಿತಿಯನ್ನು ಹೇಳುತ್ತದೆ. ನಮಗೆ ಬಂದಿರುವ ಆದೇಶ ಏನೆಂದು ಕೆಪಿಎಸ್ ಮಲ್ಹೋತ್ರಾ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಗಂಭೀರ ಆತ್ಮಾವಲೋಕನವನ್ನು ಮಾಡಬೇಕು” ಎಂದು ವಕೀಲ ಸೌತಿಕ್ ಹೇಳಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು! 

ಜುಬೈರ್ ಅವರ ವಕೀಲರ ಪತ್ರಿಕಾ ಹೇಳಿಕೆಯ ನಂತರ, ಕೆಲವು ಮಾಧ್ಯಮಗಳು ವರದಿಯನ್ನು ಹಿಂತೆಗೆದುಕೊಂಡವು ಅಥವಾ ತಿದ್ದುಪಡಿ ಮಾಡಿದವು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿಸಿಪಿ, “ಇದು ನನ್ನ ತನಿಖಾಧಿಕಾರಿ ಹೇಳಿರುವ ಮಾತಾಗಿದ್ದು, ಗದ್ದಲದಿಂದಾಗಿ ನನಗೆ ಅದು ತಪ್ಪಾಗಿ ಕೇಳಿದೆ. ಈ ಅಜಾಗರೂಕತೆಯಿಂದ ಸಂದೇಶ ತಪ್ಪಾಗಿ ಪ್ರಸಾರ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಆಲ್ಟ್‌ನ್ಯೂಸ್‌ನ ಮೊಹಮ್ಮದ್ ಜುಬೇರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಮಾಧ್ಯಮಗಳಿಗೆ ತಪ್ಪಾಗಿ ತಿಳಿಸಿದ್ದೇನೆ ಎಂದು ದೆಹಲಿ ಪೊಲೀಸ್ ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ” ಎಂದು ಪಿಟಿಐ ಟ್ವೀಟ್ ಮಾಡಿದೆ.

ಇದನ್ನೂ ಓದಿ:  ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

“ಮಾಹಿತಿಯನ್ನು ದೆಹಲಿ ಪೊಲೀಸರು ಒದಗಿಸಿದ್ದಾರೆ. ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ” ಎಂದು ANI ಸುದ್ದಿಯನ್ನು ಮತ್ತೇ ಅಪ್‌ಡೇಟ್‌ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. U ppl posting jubair news at least 2 time update in a day but did not find single news news about Jihadies act on Kanayya’s death news…how you ppl become independent news agency and you are one sided agent that’s against India

  2. ಜುಬೇರ್ ನಂತ ಅಯೋಗ್ಯನ ಪರ ಇರೋ ಅಯೋಗ್ಯರನ್ನಾ ದೇಶದಿಂದ ಒದ್ದು ಓಡಿಸುವ ಕೆಲಸ ಜನ ಮಾಡುವ ಮೊದಲು ಸರಕಾರ ಮಾಡಬೇಕಿದೆ .ಈ ಜುಬೇರ್ ನಂತ ಹಿಂದೂ ವಿರೋಧಿಯನ್ನ ಸಾರ್ವಜನಿಕ ಪ್ರದೇಶದಲ್ಲಿ ಗಲ್ಲಿಗೇರಿಸಬೇಕಿದೆ.

  3. ಹುಚ್ಚು ನಾಯಿಗಳಿಗೇನು ಗೊತ್ತು ಜುಬೈರ್ ಬಗ್ಗೆ. ಅವರ ಬಗ್ಗೆ ಯಾಕೆ ಇಷ್ಟು ಕಿಡಿ ಅಂದ್ರೆ ಈ ಅವಿವೇಕಿಗಳು,2 ಭಿಕ್ಷುಕರು, ಮತ್ತೆ ಒಂದು ದೇಶದ ದೊಡ್ಡ ಸುಳ್ಳಿನ ಪಕ್ಷದ ರಾಜಕಾರಣಿಗಳು, ಅದರ ಪಟಾಲಂಗಳು ಹೇಳುವ ಸುಳ್ಳನ್ನು ಸುಳ್ಳು ಎಂದು ನಿಜವಾದ ಸುದ್ದಿಯನ್ನು ಜನರ ಮುಂದೆ ಇಡುವ ವ್ಯಕ್ತಿ ಅದ್ಕೆ ಜುಬೈರ್ ಅಂದ್ರೆ ಅಂಡಿಗೆ ಮೆಣಸಿನಕಾಯಿ ತುದಿ ಕಟ್ ಮಾಡಿ ಏರಿಸ್ಕೊಳೋದು ಭೋ… ಡಿ ಮ## ಲೆ ಅವಿವೇಕಿ 2 ಬೆಗ್ಗೆರ್ಸ್ ಸತ್ಯ ಹೇಳೋಕು ಆಗಲ್ಲ ಒಪ್ಕೋಳೋಕು ಆಗಲ್ಲ ಅಂದ್ರೆ ನಿಮ್ಮ ಚಡ್ಡಿಯೊಳಗಿನ ಕೂದಲಿಗೆ ನೇಣು ಬಿಗಿದುಕೊಂಡು ಸಾಯಿರೋ ದರ್ಬೇಸಿ ಮುಂಡೇವಾ. ನಿಮ್ಮಿಂದ ದೇಶ ಅದೋ ಗತಿಗೆ ಬಂದಾಯ್ತು 😡😡😡😡ಥೂ… ನಿಮ್ಮ ಹಡಬಿಟ್ಟಿ ಜನ್ಮಕ್ಕೆ ನನ್ನ ಹಳೆ ಎಕ್ಕಡ

  4. ಬಿಜೆಪಿ ವಿರುದ್ದ ಮಾತಾಡಿದ ಎಲ್ಲರನ್ನೂ ಕಳ್ಳ ಕೇಸಿನಲ್ಲಿ ಸಿಕ್ಕಿಸಿ ಜೈಲಿಗಟ್ಟುವ ಬಿಜೆಪಿಯ ಜಾಯಮಾನ ಖಂಡನೀಯ.
    ರಾಜಕೀಯ ಮಾಡಬಹುದು ಆದರೆ ನಿರಪರಾಧಿಗಳನ್ನು ಹಿಂಸಿಸುವುದು ಎಷ್ಟು ಸರಿ.
    ಈ ನಡವಳಿಕೆ ಬಿಜೆಪಿಗೆ ತಕ್ಕುದಲ್ಲ.
    ಎಲ್ಲಕ್ಕೂ ಬೆಲೆ ತೆತ್ತಬೇಕಾದ ಸಂಧರ್ಭ ಒದಗಿ ಬರಲಿದೆ.
    ಕಾಲವೇ ಉತ್ತರಿಸಲಿದೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...