Homeರಾಷ್ಟ್ರೀಯಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

ಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

- Advertisement -
- Advertisement -

2018 ರಲ್ಲಿ ಮಾಡಿದ್ದ ಟ್ವೀಟ್‌ನ ವಿರುದ್ಧ ದಾಖಲಿಸಲಾದ ಪ್ರಕರಣದ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಪ್ರಕಟಿಸುವ ಮೊದಲೇ ಸೋರಿಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌‌‌ ಅವರ ವಕೀಲರು ಅಘಾತ ವ್ಯಕ್ತಪಡಿಸಿದ್ದಾರೆ. ನ್ಯಾಯಾಧೀಶರು ತೀರ್ಪು ಪ್ರಕಟಿಸುವ ಸುಮಾರು 4:30 ಗಂಟೆಗಳಿಗಿಂತಲೂ ಮೊದಲೇ ಮಾಧ್ಯಮ ಸಂಸ್ಥೆಗಳು ವರದಿಗಳನ್ನು ಪ್ರಕಟಿಸಿವೆ ಎಂದು ಅವರು ಶನಿವಾರ ಆರೋಪಿಸಿದ್ದಾರೆ.

ನ್ಯಾಯಾಧೀಶರು ಶನಿವಾರ ಸಂಜೆ 7 ಗಂಟೆಗೆ ಆದೇಶವನ್ನು ಪ್ರಕಟಿಸಿದ್ದಾರಾದರೂ, ಕೆಲವು ಸುದ್ದಿ ವಾಹಿನಿಗಳು ಮತ್ತು ಏಜೆನ್ಸಿಗಳು ಮಧ್ಯಾಹ್ನ 2.30 ರ ಸುಮಾರಿಗೆ ಜುಬೈರ್‌ಗೆ ಜಾಮೀನು ನಿರಾಕರಿಸಲಾಗಿದೆ ಮತ್ತು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ಆದೇಶದ ಕುರಿತ ಮಾಧ್ಯಮ ವರದಿಗಳನ್ನು ನಿರಾಕರಿಸಿದ ಜುಬೇರ್‌ ಅವರ ವಕೀಲ ಸೌತಿಕ್ ಬ್ಯಾನರ್ಜಿ, ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ಜಾಮೀನು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

“ಊಟದ ವಿರಾಮದ ನಂತರ ನ್ಯಾಯಾಧೀಶರು ಇನ್ನೂ ನ್ಯಾಯಾಲಯಕ್ಕೆ ಬರುವ ಮೊದಲೇ ನಮ್ಮ ಜಾಮೀನು ತಿರಸ್ಕರಿಸಲಾಗಿದೆ ಮತ್ತು 14 ದಿನಗಳ ನ್ಯಾಯಾಂಗ ಬಂಧನ ನೀಡಲಾಗಿದೆ ಎಂದು ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಮಾಧ್ಯಮಗಳಲ್ಲಿ ಸೋರಿಕೆ ಮಾಡಿರುವುದನ್ನು ನೋಡಿ ನನಗೆ ಆಘಾತವಾಗಿದೆ” ಎಂದು ಅವರು ಹೇಳಿದ್ದಾರೆ.

“ಈ ಸುದ್ದಿಗಳನ್ನು ಟ್ವಿಟರ್ ಪೋಸ್ಟ್‌ಗಳನ್ನು ನೋಡಿ ನಾನು ತಿಳಿದುಕೊಂಡೆ. ಈ ಸುದ್ದಿ ಮಾಡಿರುವ ಸುದ್ದಿ ವಾಹಿನಿಗಳ… ಕೆಲವು ಕಾನೂನು ವರದಿಗಾರರು ಈ ಸುದ್ದಿಯನ್ನು ಮಾಡಿದ್ದಾರೆ. ಅವರು ಕೆಪಿಎಸ್ ಮಲ್ಹೋತ್ರಾ ಅವರನ್ನು ಈ ಮಾಹಿತಿಯ ಮೂಲವೆಂದು ಉಲ್ಲೇಖಿಸುತ್ತಿದ್ದಾರೆ” ಎಂದು ಸೌತಿಕ್ ಬ್ಯಾನರ್ಜಿ ಹೇಳಿದ್ದಾರೆ.

“ಇದು ಅತ್ಯಂತ ದೊಡ್ಡ ಹಗರಣವಾಗಿದ್ದು, ನ್ಯಾಯಾಧೀಶರು ಕೋರ್ಟ್‌ಗೆ ಬಂದು ಆದೇಶವನ್ನು ಪ್ರಕಟಿಸುವ ಮೊದಲೇ, ಪೊಲೀಸರು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ. ಇದು ದೇಶದ ಕಾನೂನಿನ ಆಡಳಿತದ ಸ್ಥಿತಿಯನ್ನು ಹೇಳುತ್ತದೆ. ನಮಗೆ ಬಂದಿರುವ ಆದೇಶ ಏನೆಂದು ಕೆಪಿಎಸ್ ಮಲ್ಹೋತ್ರಾ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಗಂಭೀರ ಆತ್ಮಾವಲೋಕನವನ್ನು ಮಾಡಬೇಕು” ಎಂದು ವಕೀಲ ಸೌತಿಕ್ ಹೇಳಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು! 

ಜುಬೈರ್ ಅವರ ವಕೀಲರ ಪತ್ರಿಕಾ ಹೇಳಿಕೆಯ ನಂತರ, ಕೆಲವು ಮಾಧ್ಯಮಗಳು ವರದಿಯನ್ನು ಹಿಂತೆಗೆದುಕೊಂಡವು ಅಥವಾ ತಿದ್ದುಪಡಿ ಮಾಡಿದವು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿಸಿಪಿ, “ಇದು ನನ್ನ ತನಿಖಾಧಿಕಾರಿ ಹೇಳಿರುವ ಮಾತಾಗಿದ್ದು, ಗದ್ದಲದಿಂದಾಗಿ ನನಗೆ ಅದು ತಪ್ಪಾಗಿ ಕೇಳಿದೆ. ಈ ಅಜಾಗರೂಕತೆಯಿಂದ ಸಂದೇಶ ತಪ್ಪಾಗಿ ಪ್ರಸಾರ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಆಲ್ಟ್‌ನ್ಯೂಸ್‌ನ ಮೊಹಮ್ಮದ್ ಜುಬೇರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಮಾಧ್ಯಮಗಳಿಗೆ ತಪ್ಪಾಗಿ ತಿಳಿಸಿದ್ದೇನೆ ಎಂದು ದೆಹಲಿ ಪೊಲೀಸ್ ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ” ಎಂದು ಪಿಟಿಐ ಟ್ವೀಟ್ ಮಾಡಿದೆ.

ಇದನ್ನೂ ಓದಿ:  ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

“ಮಾಹಿತಿಯನ್ನು ದೆಹಲಿ ಪೊಲೀಸರು ಒದಗಿಸಿದ್ದಾರೆ. ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ” ಎಂದು ANI ಸುದ್ದಿಯನ್ನು ಮತ್ತೇ ಅಪ್‌ಡೇಟ್‌ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. U ppl posting jubair news at least 2 time update in a day but did not find single news news about Jihadies act on Kanayya’s death news…how you ppl become independent news agency and you are one sided agent that’s against India

  2. ಜುಬೇರ್ ನಂತ ಅಯೋಗ್ಯನ ಪರ ಇರೋ ಅಯೋಗ್ಯರನ್ನಾ ದೇಶದಿಂದ ಒದ್ದು ಓಡಿಸುವ ಕೆಲಸ ಜನ ಮಾಡುವ ಮೊದಲು ಸರಕಾರ ಮಾಡಬೇಕಿದೆ .ಈ ಜುಬೇರ್ ನಂತ ಹಿಂದೂ ವಿರೋಧಿಯನ್ನ ಸಾರ್ವಜನಿಕ ಪ್ರದೇಶದಲ್ಲಿ ಗಲ್ಲಿಗೇರಿಸಬೇಕಿದೆ.

  3. ಹುಚ್ಚು ನಾಯಿಗಳಿಗೇನು ಗೊತ್ತು ಜುಬೈರ್ ಬಗ್ಗೆ. ಅವರ ಬಗ್ಗೆ ಯಾಕೆ ಇಷ್ಟು ಕಿಡಿ ಅಂದ್ರೆ ಈ ಅವಿವೇಕಿಗಳು,2 ಭಿಕ್ಷುಕರು, ಮತ್ತೆ ಒಂದು ದೇಶದ ದೊಡ್ಡ ಸುಳ್ಳಿನ ಪಕ್ಷದ ರಾಜಕಾರಣಿಗಳು, ಅದರ ಪಟಾಲಂಗಳು ಹೇಳುವ ಸುಳ್ಳನ್ನು ಸುಳ್ಳು ಎಂದು ನಿಜವಾದ ಸುದ್ದಿಯನ್ನು ಜನರ ಮುಂದೆ ಇಡುವ ವ್ಯಕ್ತಿ ಅದ್ಕೆ ಜುಬೈರ್ ಅಂದ್ರೆ ಅಂಡಿಗೆ ಮೆಣಸಿನಕಾಯಿ ತುದಿ ಕಟ್ ಮಾಡಿ ಏರಿಸ್ಕೊಳೋದು ಭೋ… ಡಿ ಮ## ಲೆ ಅವಿವೇಕಿ 2 ಬೆಗ್ಗೆರ್ಸ್ ಸತ್ಯ ಹೇಳೋಕು ಆಗಲ್ಲ ಒಪ್ಕೋಳೋಕು ಆಗಲ್ಲ ಅಂದ್ರೆ ನಿಮ್ಮ ಚಡ್ಡಿಯೊಳಗಿನ ಕೂದಲಿಗೆ ನೇಣು ಬಿಗಿದುಕೊಂಡು ಸಾಯಿರೋ ದರ್ಬೇಸಿ ಮುಂಡೇವಾ. ನಿಮ್ಮಿಂದ ದೇಶ ಅದೋ ಗತಿಗೆ ಬಂದಾಯ್ತು 😡😡😡😡ಥೂ… ನಿಮ್ಮ ಹಡಬಿಟ್ಟಿ ಜನ್ಮಕ್ಕೆ ನನ್ನ ಹಳೆ ಎಕ್ಕಡ

  4. ಬಿಜೆಪಿ ವಿರುದ್ದ ಮಾತಾಡಿದ ಎಲ್ಲರನ್ನೂ ಕಳ್ಳ ಕೇಸಿನಲ್ಲಿ ಸಿಕ್ಕಿಸಿ ಜೈಲಿಗಟ್ಟುವ ಬಿಜೆಪಿಯ ಜಾಯಮಾನ ಖಂಡನೀಯ.
    ರಾಜಕೀಯ ಮಾಡಬಹುದು ಆದರೆ ನಿರಪರಾಧಿಗಳನ್ನು ಹಿಂಸಿಸುವುದು ಎಷ್ಟು ಸರಿ.
    ಈ ನಡವಳಿಕೆ ಬಿಜೆಪಿಗೆ ತಕ್ಕುದಲ್ಲ.
    ಎಲ್ಲಕ್ಕೂ ಬೆಲೆ ತೆತ್ತಬೇಕಾದ ಸಂಧರ್ಭ ಒದಗಿ ಬರಲಿದೆ.
    ಕಾಲವೇ ಉತ್ತರಿಸಲಿದೆ

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...