Homeರಾಷ್ಟ್ರೀಯಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

ಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

- Advertisement -
- Advertisement -

2018 ರಲ್ಲಿ ಮಾಡಿದ್ದ ಟ್ವೀಟ್‌ನ ವಿರುದ್ಧ ದಾಖಲಿಸಲಾದ ಪ್ರಕರಣದ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಪ್ರಕಟಿಸುವ ಮೊದಲೇ ಸೋರಿಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌‌‌ ಅವರ ವಕೀಲರು ಅಘಾತ ವ್ಯಕ್ತಪಡಿಸಿದ್ದಾರೆ. ನ್ಯಾಯಾಧೀಶರು ತೀರ್ಪು ಪ್ರಕಟಿಸುವ ಸುಮಾರು 4:30 ಗಂಟೆಗಳಿಗಿಂತಲೂ ಮೊದಲೇ ಮಾಧ್ಯಮ ಸಂಸ್ಥೆಗಳು ವರದಿಗಳನ್ನು ಪ್ರಕಟಿಸಿವೆ ಎಂದು ಅವರು ಶನಿವಾರ ಆರೋಪಿಸಿದ್ದಾರೆ.

ನ್ಯಾಯಾಧೀಶರು ಶನಿವಾರ ಸಂಜೆ 7 ಗಂಟೆಗೆ ಆದೇಶವನ್ನು ಪ್ರಕಟಿಸಿದ್ದಾರಾದರೂ, ಕೆಲವು ಸುದ್ದಿ ವಾಹಿನಿಗಳು ಮತ್ತು ಏಜೆನ್ಸಿಗಳು ಮಧ್ಯಾಹ್ನ 2.30 ರ ಸುಮಾರಿಗೆ ಜುಬೈರ್‌ಗೆ ಜಾಮೀನು ನಿರಾಕರಿಸಲಾಗಿದೆ ಮತ್ತು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ಆದೇಶದ ಕುರಿತ ಮಾಧ್ಯಮ ವರದಿಗಳನ್ನು ನಿರಾಕರಿಸಿದ ಜುಬೇರ್‌ ಅವರ ವಕೀಲ ಸೌತಿಕ್ ಬ್ಯಾನರ್ಜಿ, ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ಜಾಮೀನು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

“ಊಟದ ವಿರಾಮದ ನಂತರ ನ್ಯಾಯಾಧೀಶರು ಇನ್ನೂ ನ್ಯಾಯಾಲಯಕ್ಕೆ ಬರುವ ಮೊದಲೇ ನಮ್ಮ ಜಾಮೀನು ತಿರಸ್ಕರಿಸಲಾಗಿದೆ ಮತ್ತು 14 ದಿನಗಳ ನ್ಯಾಯಾಂಗ ಬಂಧನ ನೀಡಲಾಗಿದೆ ಎಂದು ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಮಾಧ್ಯಮಗಳಲ್ಲಿ ಸೋರಿಕೆ ಮಾಡಿರುವುದನ್ನು ನೋಡಿ ನನಗೆ ಆಘಾತವಾಗಿದೆ” ಎಂದು ಅವರು ಹೇಳಿದ್ದಾರೆ.

“ಈ ಸುದ್ದಿಗಳನ್ನು ಟ್ವಿಟರ್ ಪೋಸ್ಟ್‌ಗಳನ್ನು ನೋಡಿ ನಾನು ತಿಳಿದುಕೊಂಡೆ. ಈ ಸುದ್ದಿ ಮಾಡಿರುವ ಸುದ್ದಿ ವಾಹಿನಿಗಳ… ಕೆಲವು ಕಾನೂನು ವರದಿಗಾರರು ಈ ಸುದ್ದಿಯನ್ನು ಮಾಡಿದ್ದಾರೆ. ಅವರು ಕೆಪಿಎಸ್ ಮಲ್ಹೋತ್ರಾ ಅವರನ್ನು ಈ ಮಾಹಿತಿಯ ಮೂಲವೆಂದು ಉಲ್ಲೇಖಿಸುತ್ತಿದ್ದಾರೆ” ಎಂದು ಸೌತಿಕ್ ಬ್ಯಾನರ್ಜಿ ಹೇಳಿದ್ದಾರೆ.

“ಇದು ಅತ್ಯಂತ ದೊಡ್ಡ ಹಗರಣವಾಗಿದ್ದು, ನ್ಯಾಯಾಧೀಶರು ಕೋರ್ಟ್‌ಗೆ ಬಂದು ಆದೇಶವನ್ನು ಪ್ರಕಟಿಸುವ ಮೊದಲೇ, ಪೊಲೀಸರು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ. ಇದು ದೇಶದ ಕಾನೂನಿನ ಆಡಳಿತದ ಸ್ಥಿತಿಯನ್ನು ಹೇಳುತ್ತದೆ. ನಮಗೆ ಬಂದಿರುವ ಆದೇಶ ಏನೆಂದು ಕೆಪಿಎಸ್ ಮಲ್ಹೋತ್ರಾ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಗಂಭೀರ ಆತ್ಮಾವಲೋಕನವನ್ನು ಮಾಡಬೇಕು” ಎಂದು ವಕೀಲ ಸೌತಿಕ್ ಹೇಳಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು! 

ಜುಬೈರ್ ಅವರ ವಕೀಲರ ಪತ್ರಿಕಾ ಹೇಳಿಕೆಯ ನಂತರ, ಕೆಲವು ಮಾಧ್ಯಮಗಳು ವರದಿಯನ್ನು ಹಿಂತೆಗೆದುಕೊಂಡವು ಅಥವಾ ತಿದ್ದುಪಡಿ ಮಾಡಿದವು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿಸಿಪಿ, “ಇದು ನನ್ನ ತನಿಖಾಧಿಕಾರಿ ಹೇಳಿರುವ ಮಾತಾಗಿದ್ದು, ಗದ್ದಲದಿಂದಾಗಿ ನನಗೆ ಅದು ತಪ್ಪಾಗಿ ಕೇಳಿದೆ. ಈ ಅಜಾಗರೂಕತೆಯಿಂದ ಸಂದೇಶ ತಪ್ಪಾಗಿ ಪ್ರಸಾರ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಆಲ್ಟ್‌ನ್ಯೂಸ್‌ನ ಮೊಹಮ್ಮದ್ ಜುಬೇರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಮಾಧ್ಯಮಗಳಿಗೆ ತಪ್ಪಾಗಿ ತಿಳಿಸಿದ್ದೇನೆ ಎಂದು ದೆಹಲಿ ಪೊಲೀಸ್ ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ” ಎಂದು ಪಿಟಿಐ ಟ್ವೀಟ್ ಮಾಡಿದೆ.

ಇದನ್ನೂ ಓದಿ:  ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

“ಮಾಹಿತಿಯನ್ನು ದೆಹಲಿ ಪೊಲೀಸರು ಒದಗಿಸಿದ್ದಾರೆ. ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ” ಎಂದು ANI ಸುದ್ದಿಯನ್ನು ಮತ್ತೇ ಅಪ್‌ಡೇಟ್‌ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. U ppl posting jubair news at least 2 time update in a day but did not find single news news about Jihadies act on Kanayya’s death news…how you ppl become independent news agency and you are one sided agent that’s against India

  2. ಜುಬೇರ್ ನಂತ ಅಯೋಗ್ಯನ ಪರ ಇರೋ ಅಯೋಗ್ಯರನ್ನಾ ದೇಶದಿಂದ ಒದ್ದು ಓಡಿಸುವ ಕೆಲಸ ಜನ ಮಾಡುವ ಮೊದಲು ಸರಕಾರ ಮಾಡಬೇಕಿದೆ .ಈ ಜುಬೇರ್ ನಂತ ಹಿಂದೂ ವಿರೋಧಿಯನ್ನ ಸಾರ್ವಜನಿಕ ಪ್ರದೇಶದಲ್ಲಿ ಗಲ್ಲಿಗೇರಿಸಬೇಕಿದೆ.

  3. ಹುಚ್ಚು ನಾಯಿಗಳಿಗೇನು ಗೊತ್ತು ಜುಬೈರ್ ಬಗ್ಗೆ. ಅವರ ಬಗ್ಗೆ ಯಾಕೆ ಇಷ್ಟು ಕಿಡಿ ಅಂದ್ರೆ ಈ ಅವಿವೇಕಿಗಳು,2 ಭಿಕ್ಷುಕರು, ಮತ್ತೆ ಒಂದು ದೇಶದ ದೊಡ್ಡ ಸುಳ್ಳಿನ ಪಕ್ಷದ ರಾಜಕಾರಣಿಗಳು, ಅದರ ಪಟಾಲಂಗಳು ಹೇಳುವ ಸುಳ್ಳನ್ನು ಸುಳ್ಳು ಎಂದು ನಿಜವಾದ ಸುದ್ದಿಯನ್ನು ಜನರ ಮುಂದೆ ಇಡುವ ವ್ಯಕ್ತಿ ಅದ್ಕೆ ಜುಬೈರ್ ಅಂದ್ರೆ ಅಂಡಿಗೆ ಮೆಣಸಿನಕಾಯಿ ತುದಿ ಕಟ್ ಮಾಡಿ ಏರಿಸ್ಕೊಳೋದು ಭೋ… ಡಿ ಮ## ಲೆ ಅವಿವೇಕಿ 2 ಬೆಗ್ಗೆರ್ಸ್ ಸತ್ಯ ಹೇಳೋಕು ಆಗಲ್ಲ ಒಪ್ಕೋಳೋಕು ಆಗಲ್ಲ ಅಂದ್ರೆ ನಿಮ್ಮ ಚಡ್ಡಿಯೊಳಗಿನ ಕೂದಲಿಗೆ ನೇಣು ಬಿಗಿದುಕೊಂಡು ಸಾಯಿರೋ ದರ್ಬೇಸಿ ಮುಂಡೇವಾ. ನಿಮ್ಮಿಂದ ದೇಶ ಅದೋ ಗತಿಗೆ ಬಂದಾಯ್ತು 😡😡😡😡ಥೂ… ನಿಮ್ಮ ಹಡಬಿಟ್ಟಿ ಜನ್ಮಕ್ಕೆ ನನ್ನ ಹಳೆ ಎಕ್ಕಡ

  4. ಬಿಜೆಪಿ ವಿರುದ್ದ ಮಾತಾಡಿದ ಎಲ್ಲರನ್ನೂ ಕಳ್ಳ ಕೇಸಿನಲ್ಲಿ ಸಿಕ್ಕಿಸಿ ಜೈಲಿಗಟ್ಟುವ ಬಿಜೆಪಿಯ ಜಾಯಮಾನ ಖಂಡನೀಯ.
    ರಾಜಕೀಯ ಮಾಡಬಹುದು ಆದರೆ ನಿರಪರಾಧಿಗಳನ್ನು ಹಿಂಸಿಸುವುದು ಎಷ್ಟು ಸರಿ.
    ಈ ನಡವಳಿಕೆ ಬಿಜೆಪಿಗೆ ತಕ್ಕುದಲ್ಲ.
    ಎಲ್ಲಕ್ಕೂ ಬೆಲೆ ತೆತ್ತಬೇಕಾದ ಸಂಧರ್ಭ ಒದಗಿ ಬರಲಿದೆ.
    ಕಾಲವೇ ಉತ್ತರಿಸಲಿದೆ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...