Homeರಾಷ್ಟ್ರೀಯಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

ಜುಬೇರ್‌‌‌ ಬಂಧನ: ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲೇ ‘ಆದೇಶ’ ಸೋರಿಕೆ ಮಾಡಿದ ದೆಹಲಿ ಪೊಲೀಸ್!

- Advertisement -
- Advertisement -

2018 ರಲ್ಲಿ ಮಾಡಿದ್ದ ಟ್ವೀಟ್‌ನ ವಿರುದ್ಧ ದಾಖಲಿಸಲಾದ ಪ್ರಕರಣದ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಪ್ರಕಟಿಸುವ ಮೊದಲೇ ಸೋರಿಕೆಯಾಗಿದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್‌‌‌ ಅವರ ವಕೀಲರು ಅಘಾತ ವ್ಯಕ್ತಪಡಿಸಿದ್ದಾರೆ. ನ್ಯಾಯಾಧೀಶರು ತೀರ್ಪು ಪ್ರಕಟಿಸುವ ಸುಮಾರು 4:30 ಗಂಟೆಗಳಿಗಿಂತಲೂ ಮೊದಲೇ ಮಾಧ್ಯಮ ಸಂಸ್ಥೆಗಳು ವರದಿಗಳನ್ನು ಪ್ರಕಟಿಸಿವೆ ಎಂದು ಅವರು ಶನಿವಾರ ಆರೋಪಿಸಿದ್ದಾರೆ.

ನ್ಯಾಯಾಧೀಶರು ಶನಿವಾರ ಸಂಜೆ 7 ಗಂಟೆಗೆ ಆದೇಶವನ್ನು ಪ್ರಕಟಿಸಿದ್ದಾರಾದರೂ, ಕೆಲವು ಸುದ್ದಿ ವಾಹಿನಿಗಳು ಮತ್ತು ಏಜೆನ್ಸಿಗಳು ಮಧ್ಯಾಹ್ನ 2.30 ರ ಸುಮಾರಿಗೆ ಜುಬೈರ್‌ಗೆ ಜಾಮೀನು ನಿರಾಕರಿಸಲಾಗಿದೆ ಮತ್ತು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ಆದೇಶದ ಕುರಿತ ಮಾಧ್ಯಮ ವರದಿಗಳನ್ನು ನಿರಾಕರಿಸಿದ ಜುಬೇರ್‌ ಅವರ ವಕೀಲ ಸೌತಿಕ್ ಬ್ಯಾನರ್ಜಿ, ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ಜಾಮೀನು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

“ಊಟದ ವಿರಾಮದ ನಂತರ ನ್ಯಾಯಾಧೀಶರು ಇನ್ನೂ ನ್ಯಾಯಾಲಯಕ್ಕೆ ಬರುವ ಮೊದಲೇ ನಮ್ಮ ಜಾಮೀನು ತಿರಸ್ಕರಿಸಲಾಗಿದೆ ಮತ್ತು 14 ದಿನಗಳ ನ್ಯಾಯಾಂಗ ಬಂಧನ ನೀಡಲಾಗಿದೆ ಎಂದು ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಮಾಧ್ಯಮಗಳಲ್ಲಿ ಸೋರಿಕೆ ಮಾಡಿರುವುದನ್ನು ನೋಡಿ ನನಗೆ ಆಘಾತವಾಗಿದೆ” ಎಂದು ಅವರು ಹೇಳಿದ್ದಾರೆ.

“ಈ ಸುದ್ದಿಗಳನ್ನು ಟ್ವಿಟರ್ ಪೋಸ್ಟ್‌ಗಳನ್ನು ನೋಡಿ ನಾನು ತಿಳಿದುಕೊಂಡೆ. ಈ ಸುದ್ದಿ ಮಾಡಿರುವ ಸುದ್ದಿ ವಾಹಿನಿಗಳ… ಕೆಲವು ಕಾನೂನು ವರದಿಗಾರರು ಈ ಸುದ್ದಿಯನ್ನು ಮಾಡಿದ್ದಾರೆ. ಅವರು ಕೆಪಿಎಸ್ ಮಲ್ಹೋತ್ರಾ ಅವರನ್ನು ಈ ಮಾಹಿತಿಯ ಮೂಲವೆಂದು ಉಲ್ಲೇಖಿಸುತ್ತಿದ್ದಾರೆ” ಎಂದು ಸೌತಿಕ್ ಬ್ಯಾನರ್ಜಿ ಹೇಳಿದ್ದಾರೆ.

“ಇದು ಅತ್ಯಂತ ದೊಡ್ಡ ಹಗರಣವಾಗಿದ್ದು, ನ್ಯಾಯಾಧೀಶರು ಕೋರ್ಟ್‌ಗೆ ಬಂದು ಆದೇಶವನ್ನು ಪ್ರಕಟಿಸುವ ಮೊದಲೇ, ಪೊಲೀಸರು ಆದೇಶವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ. ಇದು ದೇಶದ ಕಾನೂನಿನ ಆಡಳಿತದ ಸ್ಥಿತಿಯನ್ನು ಹೇಳುತ್ತದೆ. ನಮಗೆ ಬಂದಿರುವ ಆದೇಶ ಏನೆಂದು ಕೆಪಿಎಸ್ ಮಲ್ಹೋತ್ರಾ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಗಂಭೀರ ಆತ್ಮಾವಲೋಕನವನ್ನು ಮಾಡಬೇಕು” ಎಂದು ವಕೀಲ ಸೌತಿಕ್ ಹೇಳಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು! 

ಜುಬೈರ್ ಅವರ ವಕೀಲರ ಪತ್ರಿಕಾ ಹೇಳಿಕೆಯ ನಂತರ, ಕೆಲವು ಮಾಧ್ಯಮಗಳು ವರದಿಯನ್ನು ಹಿಂತೆಗೆದುಕೊಂಡವು ಅಥವಾ ತಿದ್ದುಪಡಿ ಮಾಡಿದವು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿಸಿಪಿ, “ಇದು ನನ್ನ ತನಿಖಾಧಿಕಾರಿ ಹೇಳಿರುವ ಮಾತಾಗಿದ್ದು, ಗದ್ದಲದಿಂದಾಗಿ ನನಗೆ ಅದು ತಪ್ಪಾಗಿ ಕೇಳಿದೆ. ಈ ಅಜಾಗರೂಕತೆಯಿಂದ ಸಂದೇಶ ತಪ್ಪಾಗಿ ಪ್ರಸಾರ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಆಲ್ಟ್‌ನ್ಯೂಸ್‌ನ ಮೊಹಮ್ಮದ್ ಜುಬೇರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಮಾಧ್ಯಮಗಳಿಗೆ ತಪ್ಪಾಗಿ ತಿಳಿಸಿದ್ದೇನೆ ಎಂದು ದೆಹಲಿ ಪೊಲೀಸ್ ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ” ಎಂದು ಪಿಟಿಐ ಟ್ವೀಟ್ ಮಾಡಿದೆ.

ಇದನ್ನೂ ಓದಿ:  ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

“ಮಾಹಿತಿಯನ್ನು ದೆಹಲಿ ಪೊಲೀಸರು ಒದಗಿಸಿದ್ದಾರೆ. ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ” ಎಂದು ANI ಸುದ್ದಿಯನ್ನು ಮತ್ತೇ ಅಪ್‌ಡೇಟ್‌ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. U ppl posting jubair news at least 2 time update in a day but did not find single news news about Jihadies act on Kanayya’s death news…how you ppl become independent news agency and you are one sided agent that’s against India

  2. ಜುಬೇರ್ ನಂತ ಅಯೋಗ್ಯನ ಪರ ಇರೋ ಅಯೋಗ್ಯರನ್ನಾ ದೇಶದಿಂದ ಒದ್ದು ಓಡಿಸುವ ಕೆಲಸ ಜನ ಮಾಡುವ ಮೊದಲು ಸರಕಾರ ಮಾಡಬೇಕಿದೆ .ಈ ಜುಬೇರ್ ನಂತ ಹಿಂದೂ ವಿರೋಧಿಯನ್ನ ಸಾರ್ವಜನಿಕ ಪ್ರದೇಶದಲ್ಲಿ ಗಲ್ಲಿಗೇರಿಸಬೇಕಿದೆ.

  3. ಹುಚ್ಚು ನಾಯಿಗಳಿಗೇನು ಗೊತ್ತು ಜುಬೈರ್ ಬಗ್ಗೆ. ಅವರ ಬಗ್ಗೆ ಯಾಕೆ ಇಷ್ಟು ಕಿಡಿ ಅಂದ್ರೆ ಈ ಅವಿವೇಕಿಗಳು,2 ಭಿಕ್ಷುಕರು, ಮತ್ತೆ ಒಂದು ದೇಶದ ದೊಡ್ಡ ಸುಳ್ಳಿನ ಪಕ್ಷದ ರಾಜಕಾರಣಿಗಳು, ಅದರ ಪಟಾಲಂಗಳು ಹೇಳುವ ಸುಳ್ಳನ್ನು ಸುಳ್ಳು ಎಂದು ನಿಜವಾದ ಸುದ್ದಿಯನ್ನು ಜನರ ಮುಂದೆ ಇಡುವ ವ್ಯಕ್ತಿ ಅದ್ಕೆ ಜುಬೈರ್ ಅಂದ್ರೆ ಅಂಡಿಗೆ ಮೆಣಸಿನಕಾಯಿ ತುದಿ ಕಟ್ ಮಾಡಿ ಏರಿಸ್ಕೊಳೋದು ಭೋ… ಡಿ ಮ## ಲೆ ಅವಿವೇಕಿ 2 ಬೆಗ್ಗೆರ್ಸ್ ಸತ್ಯ ಹೇಳೋಕು ಆಗಲ್ಲ ಒಪ್ಕೋಳೋಕು ಆಗಲ್ಲ ಅಂದ್ರೆ ನಿಮ್ಮ ಚಡ್ಡಿಯೊಳಗಿನ ಕೂದಲಿಗೆ ನೇಣು ಬಿಗಿದುಕೊಂಡು ಸಾಯಿರೋ ದರ್ಬೇಸಿ ಮುಂಡೇವಾ. ನಿಮ್ಮಿಂದ ದೇಶ ಅದೋ ಗತಿಗೆ ಬಂದಾಯ್ತು 😡😡😡😡ಥೂ… ನಿಮ್ಮ ಹಡಬಿಟ್ಟಿ ಜನ್ಮಕ್ಕೆ ನನ್ನ ಹಳೆ ಎಕ್ಕಡ

  4. ಬಿಜೆಪಿ ವಿರುದ್ದ ಮಾತಾಡಿದ ಎಲ್ಲರನ್ನೂ ಕಳ್ಳ ಕೇಸಿನಲ್ಲಿ ಸಿಕ್ಕಿಸಿ ಜೈಲಿಗಟ್ಟುವ ಬಿಜೆಪಿಯ ಜಾಯಮಾನ ಖಂಡನೀಯ.
    ರಾಜಕೀಯ ಮಾಡಬಹುದು ಆದರೆ ನಿರಪರಾಧಿಗಳನ್ನು ಹಿಂಸಿಸುವುದು ಎಷ್ಟು ಸರಿ.
    ಈ ನಡವಳಿಕೆ ಬಿಜೆಪಿಗೆ ತಕ್ಕುದಲ್ಲ.
    ಎಲ್ಲಕ್ಕೂ ಬೆಲೆ ತೆತ್ತಬೇಕಾದ ಸಂಧರ್ಭ ಒದಗಿ ಬರಲಿದೆ.
    ಕಾಲವೇ ಉತ್ತರಿಸಲಿದೆ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....