Homeಕರ್ನಾಟಕಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

“ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ”

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಂ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪತ್ರಿಕಾ ವರದಿಗಳನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಅವರು, “ಭಾರತೀಯ ಜನತಾ ಪಕ್ಷ ಹೇಳಿಕೊಂಡು ಬರುತ್ತಿರುವ ‘ರಾಮ ರಾಜ್ಯ’ದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?” ಎಂದು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದಲ್ಲಿ ನಡೆದ ಹಲ್ಲೆ ಕೇವಲ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದದ್ದಲ್ಲ, ಅದು ಅವರು ಮಾರಾಟ ನಡೆಸುತ್ತಿದ್ದ ಕಲ್ಲಂಗಡಿ ಬೆಳೆಯುವ ರೈತರ ಮೇಲೆ ನಡೆದಿರುವ ದೌರ್ಜನ್ಯವೂ ಆಗಿದೆ. ಈ ಗೂಂಡಾಗಳನ್ನು ಹೀಗೆ ಸ್ವತಂತ್ರವಾಗಿ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲು ತಟ್ಟಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರವನ್ನೇ ಸಂಘ ಪರಿವಾರಕ್ಕೆ ಔಟ್ ಸೋರ್ಸ್ ಮಾಡಿ, ಅಲ್ಲಿನ ಪುಂಡರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡ ಹಾಗೆ ಕಾಣುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇದೊಂದು ಶಾಶ್ವತ ಕಳಂಕ.

ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಕನಸುಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎನ್ನುವುದು ಅವರಿಗೆ ತಿಳಿದಿಲ್ಲ ಎಂದಿದ್ದಾರೆ.

ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ದುರುದ್ದೇಶದಿಂದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ನಡೆಸುತ್ತಿರುವ ಪುಂಡಾಟಿಕಗಳಿಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಶಾಂತಿ ಮತ್ತು ಸೌಹಾರ್ದ ಪ್ರಿಯ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಇದನ್ನು ಕನ್ನಡಿಗರು ಎಂದೂ ಕ್ಷಮಿಸರು ಎಂದು ಎಚ್ಚರಿಸಿದ್ದಾರೆ.

ಇದು ಮುಖ್ಯಮಂತ್ರಿಗಳೇ ಮಾಡಿರುವ ಪಾಪದ ಫಲ. ಬೀದಿಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರವೇ ಕೊಲೆ, ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ರಾಜ್ಯದಲ್ಲಿ ಪ್ರಾರಂಭವಾಗಿದ್ದು. ಇದರಿಂದ ಕಾನೂನು ವ್ಯವಸ್ಥೆಯೇ ಕುಸಿದುಬಿದ್ದು ನಾಗರಿಕ ಯುದ್ಧಕ್ಕೆ ದಾರಿಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

ಸಂಘ ಪರಿವಾರದ ಜೊತೆಗಿನ ಸಹಯೋಗದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹರಡುತ್ತಿರುವ ಕೋಮುದ್ವೇಷದ ವಾತಾವರಣದಿಂದ ರಾಜ್ಯದ ಉದ್ಯಮಿಗಳು ಬೇಸತ್ತುಹೋಗಿ ಹೊರ ರಾಜ್ಯದ ಕಡೆ ಮುಖಮಾಡುತ್ತಿದ್ದಾರೆ. ಕಿರಣ್ ಮಜುಮ್‌ದಾರ್ ಶಾ ಅವರಂತಹ ಖ್ಯಾತನಾಮರು ಕೂಡಾ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವುದ ಕಳವಳಕಾರಿ ಬೆಳವಣಿಗೆ ಎಂದು ಎಚ್ಚರಿಸಿದ್ದಾರೆ.

ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ. ಮುಖ್ಯಮಂತ್ರಿಗಳು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಡಪಾಯಿ ಮುಸ್ಲಿಮನ ಮೇಲೆ ಶ್ರೀರಾಮಸೇನೆಯ ಗೂಂಡಾಗಿರಿ: ಅನ್ಯಾಯದ ವಿರುದ್ಧ ಮಿಡಿದ ಮನಸ್ಸುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...