Homeಕರ್ನಾಟಕಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

“ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ”

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಂ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪತ್ರಿಕಾ ವರದಿಗಳನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಅವರು, “ಭಾರತೀಯ ಜನತಾ ಪಕ್ಷ ಹೇಳಿಕೊಂಡು ಬರುತ್ತಿರುವ ‘ರಾಮ ರಾಜ್ಯ’ದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?” ಎಂದು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದಲ್ಲಿ ನಡೆದ ಹಲ್ಲೆ ಕೇವಲ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದದ್ದಲ್ಲ, ಅದು ಅವರು ಮಾರಾಟ ನಡೆಸುತ್ತಿದ್ದ ಕಲ್ಲಂಗಡಿ ಬೆಳೆಯುವ ರೈತರ ಮೇಲೆ ನಡೆದಿರುವ ದೌರ್ಜನ್ಯವೂ ಆಗಿದೆ. ಈ ಗೂಂಡಾಗಳನ್ನು ಹೀಗೆ ಸ್ವತಂತ್ರವಾಗಿ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲು ತಟ್ಟಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರವನ್ನೇ ಸಂಘ ಪರಿವಾರಕ್ಕೆ ಔಟ್ ಸೋರ್ಸ್ ಮಾಡಿ, ಅಲ್ಲಿನ ಪುಂಡರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡ ಹಾಗೆ ಕಾಣುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇದೊಂದು ಶಾಶ್ವತ ಕಳಂಕ.

ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಕನಸುಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎನ್ನುವುದು ಅವರಿಗೆ ತಿಳಿದಿಲ್ಲ ಎಂದಿದ್ದಾರೆ.

ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ದುರುದ್ದೇಶದಿಂದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ನಡೆಸುತ್ತಿರುವ ಪುಂಡಾಟಿಕಗಳಿಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಶಾಂತಿ ಮತ್ತು ಸೌಹಾರ್ದ ಪ್ರಿಯ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಇದನ್ನು ಕನ್ನಡಿಗರು ಎಂದೂ ಕ್ಷಮಿಸರು ಎಂದು ಎಚ್ಚರಿಸಿದ್ದಾರೆ.

ಇದು ಮುಖ್ಯಮಂತ್ರಿಗಳೇ ಮಾಡಿರುವ ಪಾಪದ ಫಲ. ಬೀದಿಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರವೇ ಕೊಲೆ, ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ರಾಜ್ಯದಲ್ಲಿ ಪ್ರಾರಂಭವಾಗಿದ್ದು. ಇದರಿಂದ ಕಾನೂನು ವ್ಯವಸ್ಥೆಯೇ ಕುಸಿದುಬಿದ್ದು ನಾಗರಿಕ ಯುದ್ಧಕ್ಕೆ ದಾರಿಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

ಸಂಘ ಪರಿವಾರದ ಜೊತೆಗಿನ ಸಹಯೋಗದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹರಡುತ್ತಿರುವ ಕೋಮುದ್ವೇಷದ ವಾತಾವರಣದಿಂದ ರಾಜ್ಯದ ಉದ್ಯಮಿಗಳು ಬೇಸತ್ತುಹೋಗಿ ಹೊರ ರಾಜ್ಯದ ಕಡೆ ಮುಖಮಾಡುತ್ತಿದ್ದಾರೆ. ಕಿರಣ್ ಮಜುಮ್‌ದಾರ್ ಶಾ ಅವರಂತಹ ಖ್ಯಾತನಾಮರು ಕೂಡಾ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವುದ ಕಳವಳಕಾರಿ ಬೆಳವಣಿಗೆ ಎಂದು ಎಚ್ಚರಿಸಿದ್ದಾರೆ.

ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ. ಮುಖ್ಯಮಂತ್ರಿಗಳು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಡಪಾಯಿ ಮುಸ್ಲಿಮನ ಮೇಲೆ ಶ್ರೀರಾಮಸೇನೆಯ ಗೂಂಡಾಗಿರಿ: ಅನ್ಯಾಯದ ವಿರುದ್ಧ ಮಿಡಿದ ಮನಸ್ಸುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...