Homeಕರ್ನಾಟಕಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

“ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ”

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಂ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪತ್ರಿಕಾ ವರದಿಗಳನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಅವರು, “ಭಾರತೀಯ ಜನತಾ ಪಕ್ಷ ಹೇಳಿಕೊಂಡು ಬರುತ್ತಿರುವ ‘ರಾಮ ರಾಜ್ಯ’ದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?” ಎಂದು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದಲ್ಲಿ ನಡೆದ ಹಲ್ಲೆ ಕೇವಲ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದದ್ದಲ್ಲ, ಅದು ಅವರು ಮಾರಾಟ ನಡೆಸುತ್ತಿದ್ದ ಕಲ್ಲಂಗಡಿ ಬೆಳೆಯುವ ರೈತರ ಮೇಲೆ ನಡೆದಿರುವ ದೌರ್ಜನ್ಯವೂ ಆಗಿದೆ. ಈ ಗೂಂಡಾಗಳನ್ನು ಹೀಗೆ ಸ್ವತಂತ್ರವಾಗಿ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲು ತಟ್ಟಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರವನ್ನೇ ಸಂಘ ಪರಿವಾರಕ್ಕೆ ಔಟ್ ಸೋರ್ಸ್ ಮಾಡಿ, ಅಲ್ಲಿನ ಪುಂಡರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡ ಹಾಗೆ ಕಾಣುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇದೊಂದು ಶಾಶ್ವತ ಕಳಂಕ.

ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಕನಸುಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎನ್ನುವುದು ಅವರಿಗೆ ತಿಳಿದಿಲ್ಲ ಎಂದಿದ್ದಾರೆ.

ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ದುರುದ್ದೇಶದಿಂದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ನಡೆಸುತ್ತಿರುವ ಪುಂಡಾಟಿಕಗಳಿಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಶಾಂತಿ ಮತ್ತು ಸೌಹಾರ್ದ ಪ್ರಿಯ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಇದನ್ನು ಕನ್ನಡಿಗರು ಎಂದೂ ಕ್ಷಮಿಸರು ಎಂದು ಎಚ್ಚರಿಸಿದ್ದಾರೆ.

ಇದು ಮುಖ್ಯಮಂತ್ರಿಗಳೇ ಮಾಡಿರುವ ಪಾಪದ ಫಲ. ಬೀದಿಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರವೇ ಕೊಲೆ, ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ರಾಜ್ಯದಲ್ಲಿ ಪ್ರಾರಂಭವಾಗಿದ್ದು. ಇದರಿಂದ ಕಾನೂನು ವ್ಯವಸ್ಥೆಯೇ ಕುಸಿದುಬಿದ್ದು ನಾಗರಿಕ ಯುದ್ಧಕ್ಕೆ ದಾರಿಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

ಸಂಘ ಪರಿವಾರದ ಜೊತೆಗಿನ ಸಹಯೋಗದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹರಡುತ್ತಿರುವ ಕೋಮುದ್ವೇಷದ ವಾತಾವರಣದಿಂದ ರಾಜ್ಯದ ಉದ್ಯಮಿಗಳು ಬೇಸತ್ತುಹೋಗಿ ಹೊರ ರಾಜ್ಯದ ಕಡೆ ಮುಖಮಾಡುತ್ತಿದ್ದಾರೆ. ಕಿರಣ್ ಮಜುಮ್‌ದಾರ್ ಶಾ ಅವರಂತಹ ಖ್ಯಾತನಾಮರು ಕೂಡಾ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವುದ ಕಳವಳಕಾರಿ ಬೆಳವಣಿಗೆ ಎಂದು ಎಚ್ಚರಿಸಿದ್ದಾರೆ.

ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ. ಮುಖ್ಯಮಂತ್ರಿಗಳು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಡಪಾಯಿ ಮುಸ್ಲಿಮನ ಮೇಲೆ ಶ್ರೀರಾಮಸೇನೆಯ ಗೂಂಡಾಗಿರಿ: ಅನ್ಯಾಯದ ವಿರುದ್ಧ ಮಿಡಿದ ಮನಸ್ಸುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...