Homeಕರ್ನಾಟಕಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

“ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ”

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಂ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪತ್ರಿಕಾ ವರದಿಗಳನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಅವರು, “ಭಾರತೀಯ ಜನತಾ ಪಕ್ಷ ಹೇಳಿಕೊಂಡು ಬರುತ್ತಿರುವ ‘ರಾಮ ರಾಜ್ಯ’ದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?” ಎಂದು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದಲ್ಲಿ ನಡೆದ ಹಲ್ಲೆ ಕೇವಲ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದದ್ದಲ್ಲ, ಅದು ಅವರು ಮಾರಾಟ ನಡೆಸುತ್ತಿದ್ದ ಕಲ್ಲಂಗಡಿ ಬೆಳೆಯುವ ರೈತರ ಮೇಲೆ ನಡೆದಿರುವ ದೌರ್ಜನ್ಯವೂ ಆಗಿದೆ. ಈ ಗೂಂಡಾಗಳನ್ನು ಹೀಗೆ ಸ್ವತಂತ್ರವಾಗಿ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲು ತಟ್ಟಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರವನ್ನೇ ಸಂಘ ಪರಿವಾರಕ್ಕೆ ಔಟ್ ಸೋರ್ಸ್ ಮಾಡಿ, ಅಲ್ಲಿನ ಪುಂಡರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡ ಹಾಗೆ ಕಾಣುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇದೊಂದು ಶಾಶ್ವತ ಕಳಂಕ.

ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಕನಸುಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎನ್ನುವುದು ಅವರಿಗೆ ತಿಳಿದಿಲ್ಲ ಎಂದಿದ್ದಾರೆ.

ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ದುರುದ್ದೇಶದಿಂದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ನಡೆಸುತ್ತಿರುವ ಪುಂಡಾಟಿಕಗಳಿಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಶಾಂತಿ ಮತ್ತು ಸೌಹಾರ್ದ ಪ್ರಿಯ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಇದನ್ನು ಕನ್ನಡಿಗರು ಎಂದೂ ಕ್ಷಮಿಸರು ಎಂದು ಎಚ್ಚರಿಸಿದ್ದಾರೆ.

ಇದು ಮುಖ್ಯಮಂತ್ರಿಗಳೇ ಮಾಡಿರುವ ಪಾಪದ ಫಲ. ಬೀದಿಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರವೇ ಕೊಲೆ, ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ರಾಜ್ಯದಲ್ಲಿ ಪ್ರಾರಂಭವಾಗಿದ್ದು. ಇದರಿಂದ ಕಾನೂನು ವ್ಯವಸ್ಥೆಯೇ ಕುಸಿದುಬಿದ್ದು ನಾಗರಿಕ ಯುದ್ಧಕ್ಕೆ ದಾರಿಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

ಸಂಘ ಪರಿವಾರದ ಜೊತೆಗಿನ ಸಹಯೋಗದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹರಡುತ್ತಿರುವ ಕೋಮುದ್ವೇಷದ ವಾತಾವರಣದಿಂದ ರಾಜ್ಯದ ಉದ್ಯಮಿಗಳು ಬೇಸತ್ತುಹೋಗಿ ಹೊರ ರಾಜ್ಯದ ಕಡೆ ಮುಖಮಾಡುತ್ತಿದ್ದಾರೆ. ಕಿರಣ್ ಮಜುಮ್‌ದಾರ್ ಶಾ ಅವರಂತಹ ಖ್ಯಾತನಾಮರು ಕೂಡಾ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವುದ ಕಳವಳಕಾರಿ ಬೆಳವಣಿಗೆ ಎಂದು ಎಚ್ಚರಿಸಿದ್ದಾರೆ.

ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ. ಮುಖ್ಯಮಂತ್ರಿಗಳು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಡಪಾಯಿ ಮುಸ್ಲಿಮನ ಮೇಲೆ ಶ್ರೀರಾಮಸೇನೆಯ ಗೂಂಡಾಗಿರಿ: ಅನ್ಯಾಯದ ವಿರುದ್ಧ ಮಿಡಿದ ಮನಸ್ಸುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...