Homeಕರ್ನಾಟಕಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

“ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ”

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಂ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪತ್ರಿಕಾ ವರದಿಗಳನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಅವರು, “ಭಾರತೀಯ ಜನತಾ ಪಕ್ಷ ಹೇಳಿಕೊಂಡು ಬರುತ್ತಿರುವ ‘ರಾಮ ರಾಜ್ಯ’ದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?” ಎಂದು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದಲ್ಲಿ ನಡೆದ ಹಲ್ಲೆ ಕೇವಲ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದದ್ದಲ್ಲ, ಅದು ಅವರು ಮಾರಾಟ ನಡೆಸುತ್ತಿದ್ದ ಕಲ್ಲಂಗಡಿ ಬೆಳೆಯುವ ರೈತರ ಮೇಲೆ ನಡೆದಿರುವ ದೌರ್ಜನ್ಯವೂ ಆಗಿದೆ. ಈ ಗೂಂಡಾಗಳನ್ನು ಹೀಗೆ ಸ್ವತಂತ್ರವಾಗಿ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲು ತಟ್ಟಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರವನ್ನೇ ಸಂಘ ಪರಿವಾರಕ್ಕೆ ಔಟ್ ಸೋರ್ಸ್ ಮಾಡಿ, ಅಲ್ಲಿನ ಪುಂಡರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡ ಹಾಗೆ ಕಾಣುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇದೊಂದು ಶಾಶ್ವತ ಕಳಂಕ.

ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಕನಸುಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎನ್ನುವುದು ಅವರಿಗೆ ತಿಳಿದಿಲ್ಲ ಎಂದಿದ್ದಾರೆ.

ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ದುರುದ್ದೇಶದಿಂದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ನಡೆಸುತ್ತಿರುವ ಪುಂಡಾಟಿಕಗಳಿಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಶಾಂತಿ ಮತ್ತು ಸೌಹಾರ್ದ ಪ್ರಿಯ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಇದನ್ನು ಕನ್ನಡಿಗರು ಎಂದೂ ಕ್ಷಮಿಸರು ಎಂದು ಎಚ್ಚರಿಸಿದ್ದಾರೆ.

ಇದು ಮುಖ್ಯಮಂತ್ರಿಗಳೇ ಮಾಡಿರುವ ಪಾಪದ ಫಲ. ಬೀದಿಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರವೇ ಕೊಲೆ, ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ರಾಜ್ಯದಲ್ಲಿ ಪ್ರಾರಂಭವಾಗಿದ್ದು. ಇದರಿಂದ ಕಾನೂನು ವ್ಯವಸ್ಥೆಯೇ ಕುಸಿದುಬಿದ್ದು ನಾಗರಿಕ ಯುದ್ಧಕ್ಕೆ ದಾರಿಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

ಸಂಘ ಪರಿವಾರದ ಜೊತೆಗಿನ ಸಹಯೋಗದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹರಡುತ್ತಿರುವ ಕೋಮುದ್ವೇಷದ ವಾತಾವರಣದಿಂದ ರಾಜ್ಯದ ಉದ್ಯಮಿಗಳು ಬೇಸತ್ತುಹೋಗಿ ಹೊರ ರಾಜ್ಯದ ಕಡೆ ಮುಖಮಾಡುತ್ತಿದ್ದಾರೆ. ಕಿರಣ್ ಮಜುಮ್‌ದಾರ್ ಶಾ ಅವರಂತಹ ಖ್ಯಾತನಾಮರು ಕೂಡಾ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವುದ ಕಳವಳಕಾರಿ ಬೆಳವಣಿಗೆ ಎಂದು ಎಚ್ಚರಿಸಿದ್ದಾರೆ.

ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ. ಮುಖ್ಯಮಂತ್ರಿಗಳು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಡಪಾಯಿ ಮುಸ್ಲಿಮನ ಮೇಲೆ ಶ್ರೀರಾಮಸೇನೆಯ ಗೂಂಡಾಗಿರಿ: ಅನ್ಯಾಯದ ವಿರುದ್ಧ ಮಿಡಿದ ಮನಸ್ಸುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....