Homeಅಂತರಾಷ್ಟ್ರೀಯಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಕೈಗೊಂಡಿರುವ ಕ್ರಮ ಜಾರಿ ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ.

- Advertisement -
- Advertisement -

ಉಕ್ರೇನ್- ರಷ್ಯಾ ಯುದ್ಧದ ಸಂಬಂಧ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಬಂಧನ ವಾರಂಟ್ ಹೊರಡಿಸುವ ಪ್ರಮುಖ ಕ್ರಮವನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ಐಸಿಸಿ) ತೆಗೆದುಕೊಂಡಿದೆ.

ಮಕ್ಕಳನ್ನು ಗಡೀಪಾರು ಮಾಡುವ ಯುದ್ಧ ಅಪರಾಧದ ಆರೋಪ ಹೊತ್ತಿರುವ ರಷ್ಯಾದ ಅಧ್ಯಕ್ಷರು ನಿಜವಾಗಿಯೂ ಹೇಗ್‌ನಲ್ಲಿ ವಿಚಾರಣೆಗೆ ನಿಲ್ಲುವ ಸಾಧ್ಯತೆಯಿದೆಯೇ ಎಂಬ ಪ್ರಶ್ನೆ ಸದ್ಯಕ್ಕೆ ಹುಟ್ಟಿಕೊಂಡಿದೆ.

ಪುಟಿನ್ ಮತ್ತು ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ಅವರು ಐಸಿಸಿ ಸದಸ್ಯ ದೇಶಗಳಿಗೆ ಪ್ರಯಾಣಿಸಿದರೆ ಬಂಧನ ವಾರಂಟ್‌ಗಳನ್ನು ಎದುರಿಸುವ ಸಾಧ್ಯತೆ ಇದೆ. ಆದರೆ ಈ ಕ್ರಮವನ್ನು ಐಸಿಸಿ ಸದಸ್ಯ ರಾಷ್ಟ್ರಗಳು ಜರುಗಿಸುತ್ತವೆಯೇ ಎಂಬುದು ಸದ್ಯದ ಪ್ರಶ್ನೆ.

ಪುಟಿನ್ ಆ 123 ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶಕ್ಕೆ ಕಾಲಿಟ್ಟರೆ ಬಂಧನಕ್ಕೆ ಹೊಣೆಯಾಗುತ್ತಾರೆಯೇ ಎಂದು ಕೇಳಿದಾಗ ‘ಅದು ಸರಿ’ ಎಂದು ಐಸಿಸಿ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಎಎಫ್‌ಪಿಗೆ ತಿಳಿಸಿದ್ದಾರೆ.

ಆದರೆ ಈ ಕ್ರಮದಿಂದಾಗಿ ಪುಟಿನ್‌ ಅವರ ಪ್ರಯಾಣವನ್ನು ಕಷ್ಟಕರವಾಗಿಸಬಹುದು. ನ್ಯಾಯಾಲಯವು ತನ್ನ ವಾರಂಟ್‌ಗಳನ್ನು ಜಾರಿಗೊಳಿಸಲು ತನ್ನದೇ ಆದ ಪೋಲೀಸ್ ಬಲವನ್ನು ಹೊಂದಿಲ್ಲ. ಐಸಿಸಿ ವ್ಯಾಪ್ತಿಯ ದೇಶಗಳ ಮೇಲೆ ಈ ಕ್ರಮ ಅವಲಂಬಿತವಾಗಿದೆ.

ವಿಶೇಷವಾಗಿ ಪುಟಿನ್‌ ಅಂಥವರ ವಿಚಾರದಲ್ಲಿ ಐಸಿಸಿ ಸದಸ್ಯ ದೇಶಗಳು ಯಾವತ್ತೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ.

ಸುಡಾನ್‌ನ ಮಾಜಿ ನಾಯಕ ಒಮರ್ ಅಲ್-ಬಶೀರ್ ಅವರು ಐಸಿಸಿ ವಾರಂಟ್‌ಗೆ ಒಳಪಟ್ಟಿದ್ದರೂ ಸಹ ದಕ್ಷಿಣ ಆಫ್ರಿಕಾ ಮತ್ತು ಜೋರ್ಡಾನ್ ಸೇರಿದಂತೆ ಹಲವಾರು ಐಸಿಸಿ ಸದಸ್ಯ ರಾಷ್ಟ್ರಗಳಿಗೆ ಭೇಟಿ ನೀಡುವಲ್ಲಿ ಯಶಸ್ವಿಯಾಗಿದ್ದರು.

2019ರಲ್ಲಿ ಪದಚ್ಯುತಗೊಂಡಿದ್ದರೂ, ಸುಡಾನ್ ಇನ್ನೂ ಅವರನ್ನು ಹಸ್ತಾಂತರಿಸಿಲ್ಲ.

ಕೊಲಂಬಿಯಾ ಕಾನೂನು ಶಾಲೆಯ ಪ್ರೊಫೆಸರ್ ಮ್ಯಾಥ್ಯೂ ವ್ಯಾಕ್ಸ್‌ಮನ್ ಪ್ರತಿಕ್ರಿಯಿಸಿ, “ಇದು ಐಸಿಸಿಯ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಆದರೆ ನಾವು ಪುಟಿನ್ ಅವರನ್ನು ಬಂಧಿಸುವುದನ್ನು ನೋಡುವ ಸಾಧ್ಯತೆಗಳು ಕಡಿಮೆ” ಎಂದಿದ್ದಾರೆ.

ಮುಖ್ಯ ಅಡಚಣೆಗಳೇನು?

ಯುನೈಟೆಡ್ ಸ್ಟೇಟ್ಸ್, ಚೀನಾ ದೇಶಗಳ ಹಾಗೆ ರಶಿಯಾ ಕೂಡ ಐಸಿಸಿ ಸದಸ್ಯತ್ವ ಹೊಂದಿಲ್ಲ.

ಐಸಿಸಿಯು ಪುಟಿನ್ ವಿರುದ್ಧ ಆರೋಪಗಳನ್ನು ಸಲ್ಲಿಸಲು ಸಾಧ್ಯವಾಯಿತು. ಏಕೆಂದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉಕ್ರೇನ್ ತನ್ನ ಅಧಿಕಾರ ವ್ಯಾಪ್ತಿಯನ್ನು ಒಪ್ಪಿಕೊಂಡಿದೆ, ಆದರೂ ಕೀವ್ (ಉಕ್ರೇನ್ ರಾಜಧಾನಿ) ಕೂಡ ಸದಸ್ಯತ್ವವನ್ನು ಹೊಂದಿಲ್ಲ.

ಇದನ್ನೂ ಓದಿರಿ: ಉಕ್ರೇನ್‌ನಿಂದ ರಷ್ಯಾ ಪಡೆ ಹಿಂತೆಗೆದುಕೊಳ್ಳುವ ನಿರ್ಣಯದ ಮೇಲೆ ಮತದಾನ: ದೂರ ಉಳಿದ ಭಾರತ

ಆದರೆ ಪುಟಿನ್ ವಿರುದ್ಧದ ವಾರಂಟ್‌ಗಳನ್ನು ಮಾಸ್ಕೋ (ರಷ್ಯಾ) ವಜಾಗೊಳಿಸಿದೆ.

ಯಾವುದೇ ಸಂದರ್ಭದಲ್ಲಿ ರಷ್ಯಾ ತನ್ನ ನಾಗರಿಕರನ್ನು ಹಸ್ತಾಂತರಿಸುವುದಿಲ್ಲ.

ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, “ಈ ನ್ಯಾಯಾಲಯದ ನ್ಯಾಯವ್ಯಾಪ್ತಿಯನ್ನು ರಷ್ಯಾ ಗುರುತಿಸುವುದಿಲ್ಲ. ಆದ್ದರಿಂದ ಕಾನೂನು ದೃಷ್ಟಿಕೋನದಿಂದ, ಈ ನ್ಯಾಯಾಲಯದ ನಿರ್ಧಾರಗಳು ಅನೂರ್ಜಿತವಾಗಿವೆ” ಎಂದು ಹೇಳಿದ್ದಾರೆ.

ರಷ್ಯಾ ವಾಸ್ತವವಾಗಿ ನ್ಯಾಯಾಲಯದ ಮಹತ್ವದ ನಿರ್ಧಾರವಾದ ರೋಮ್ ಶಾಸನಕ್ಕೆ ಸಹಿ ಹಾಕಿತು. ಆದರೆ ಸದಸ್ಯರಾಗಲು ಅದನ್ನು ಅಂಗೀಕರಿಸಲಿಲ್ಲ. ನಂತರ ಜಾರ್ಜಿಯಾದಲ್ಲಿ 2008 ರ ಯುದ್ಧದ ಬಗ್ಗೆ ಐಸಿಸಿ ತನಿಖೆಯನ್ನು ಪ್ರಾರಂಭಿಸಿದ ನಂತರ 2016ರಲ್ಲಿ ಪುಟಿನ್ ಅವರ ಆದೇಶದ ಮೇರೆಗೆ ತನ್ನ ಸಹಿಯನ್ನೂ ಹಿಂತೆಗೆದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...