Homeಅಂತರಾಷ್ಟ್ರೀಯಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಕೈಗೊಂಡಿರುವ ಕ್ರಮ ಜಾರಿ ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ.

- Advertisement -
- Advertisement -

ಉಕ್ರೇನ್- ರಷ್ಯಾ ಯುದ್ಧದ ಸಂಬಂಧ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಬಂಧನ ವಾರಂಟ್ ಹೊರಡಿಸುವ ಪ್ರಮುಖ ಕ್ರಮವನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ಐಸಿಸಿ) ತೆಗೆದುಕೊಂಡಿದೆ.

ಮಕ್ಕಳನ್ನು ಗಡೀಪಾರು ಮಾಡುವ ಯುದ್ಧ ಅಪರಾಧದ ಆರೋಪ ಹೊತ್ತಿರುವ ರಷ್ಯಾದ ಅಧ್ಯಕ್ಷರು ನಿಜವಾಗಿಯೂ ಹೇಗ್‌ನಲ್ಲಿ ವಿಚಾರಣೆಗೆ ನಿಲ್ಲುವ ಸಾಧ್ಯತೆಯಿದೆಯೇ ಎಂಬ ಪ್ರಶ್ನೆ ಸದ್ಯಕ್ಕೆ ಹುಟ್ಟಿಕೊಂಡಿದೆ.

ಪುಟಿನ್ ಮತ್ತು ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ಅವರು ಐಸಿಸಿ ಸದಸ್ಯ ದೇಶಗಳಿಗೆ ಪ್ರಯಾಣಿಸಿದರೆ ಬಂಧನ ವಾರಂಟ್‌ಗಳನ್ನು ಎದುರಿಸುವ ಸಾಧ್ಯತೆ ಇದೆ. ಆದರೆ ಈ ಕ್ರಮವನ್ನು ಐಸಿಸಿ ಸದಸ್ಯ ರಾಷ್ಟ್ರಗಳು ಜರುಗಿಸುತ್ತವೆಯೇ ಎಂಬುದು ಸದ್ಯದ ಪ್ರಶ್ನೆ.

ಪುಟಿನ್ ಆ 123 ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶಕ್ಕೆ ಕಾಲಿಟ್ಟರೆ ಬಂಧನಕ್ಕೆ ಹೊಣೆಯಾಗುತ್ತಾರೆಯೇ ಎಂದು ಕೇಳಿದಾಗ ‘ಅದು ಸರಿ’ ಎಂದು ಐಸಿಸಿ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಎಎಫ್‌ಪಿಗೆ ತಿಳಿಸಿದ್ದಾರೆ.

ಆದರೆ ಈ ಕ್ರಮದಿಂದಾಗಿ ಪುಟಿನ್‌ ಅವರ ಪ್ರಯಾಣವನ್ನು ಕಷ್ಟಕರವಾಗಿಸಬಹುದು. ನ್ಯಾಯಾಲಯವು ತನ್ನ ವಾರಂಟ್‌ಗಳನ್ನು ಜಾರಿಗೊಳಿಸಲು ತನ್ನದೇ ಆದ ಪೋಲೀಸ್ ಬಲವನ್ನು ಹೊಂದಿಲ್ಲ. ಐಸಿಸಿ ವ್ಯಾಪ್ತಿಯ ದೇಶಗಳ ಮೇಲೆ ಈ ಕ್ರಮ ಅವಲಂಬಿತವಾಗಿದೆ.

ವಿಶೇಷವಾಗಿ ಪುಟಿನ್‌ ಅಂಥವರ ವಿಚಾರದಲ್ಲಿ ಐಸಿಸಿ ಸದಸ್ಯ ದೇಶಗಳು ಯಾವತ್ತೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ.

ಸುಡಾನ್‌ನ ಮಾಜಿ ನಾಯಕ ಒಮರ್ ಅಲ್-ಬಶೀರ್ ಅವರು ಐಸಿಸಿ ವಾರಂಟ್‌ಗೆ ಒಳಪಟ್ಟಿದ್ದರೂ ಸಹ ದಕ್ಷಿಣ ಆಫ್ರಿಕಾ ಮತ್ತು ಜೋರ್ಡಾನ್ ಸೇರಿದಂತೆ ಹಲವಾರು ಐಸಿಸಿ ಸದಸ್ಯ ರಾಷ್ಟ್ರಗಳಿಗೆ ಭೇಟಿ ನೀಡುವಲ್ಲಿ ಯಶಸ್ವಿಯಾಗಿದ್ದರು.

2019ರಲ್ಲಿ ಪದಚ್ಯುತಗೊಂಡಿದ್ದರೂ, ಸುಡಾನ್ ಇನ್ನೂ ಅವರನ್ನು ಹಸ್ತಾಂತರಿಸಿಲ್ಲ.

ಕೊಲಂಬಿಯಾ ಕಾನೂನು ಶಾಲೆಯ ಪ್ರೊಫೆಸರ್ ಮ್ಯಾಥ್ಯೂ ವ್ಯಾಕ್ಸ್‌ಮನ್ ಪ್ರತಿಕ್ರಿಯಿಸಿ, “ಇದು ಐಸಿಸಿಯ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಆದರೆ ನಾವು ಪುಟಿನ್ ಅವರನ್ನು ಬಂಧಿಸುವುದನ್ನು ನೋಡುವ ಸಾಧ್ಯತೆಗಳು ಕಡಿಮೆ” ಎಂದಿದ್ದಾರೆ.

ಮುಖ್ಯ ಅಡಚಣೆಗಳೇನು?

ಯುನೈಟೆಡ್ ಸ್ಟೇಟ್ಸ್, ಚೀನಾ ದೇಶಗಳ ಹಾಗೆ ರಶಿಯಾ ಕೂಡ ಐಸಿಸಿ ಸದಸ್ಯತ್ವ ಹೊಂದಿಲ್ಲ.

ಐಸಿಸಿಯು ಪುಟಿನ್ ವಿರುದ್ಧ ಆರೋಪಗಳನ್ನು ಸಲ್ಲಿಸಲು ಸಾಧ್ಯವಾಯಿತು. ಏಕೆಂದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉಕ್ರೇನ್ ತನ್ನ ಅಧಿಕಾರ ವ್ಯಾಪ್ತಿಯನ್ನು ಒಪ್ಪಿಕೊಂಡಿದೆ, ಆದರೂ ಕೀವ್ (ಉಕ್ರೇನ್ ರಾಜಧಾನಿ) ಕೂಡ ಸದಸ್ಯತ್ವವನ್ನು ಹೊಂದಿಲ್ಲ.

ಇದನ್ನೂ ಓದಿರಿ: ಉಕ್ರೇನ್‌ನಿಂದ ರಷ್ಯಾ ಪಡೆ ಹಿಂತೆಗೆದುಕೊಳ್ಳುವ ನಿರ್ಣಯದ ಮೇಲೆ ಮತದಾನ: ದೂರ ಉಳಿದ ಭಾರತ

ಆದರೆ ಪುಟಿನ್ ವಿರುದ್ಧದ ವಾರಂಟ್‌ಗಳನ್ನು ಮಾಸ್ಕೋ (ರಷ್ಯಾ) ವಜಾಗೊಳಿಸಿದೆ.

ಯಾವುದೇ ಸಂದರ್ಭದಲ್ಲಿ ರಷ್ಯಾ ತನ್ನ ನಾಗರಿಕರನ್ನು ಹಸ್ತಾಂತರಿಸುವುದಿಲ್ಲ.

ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, “ಈ ನ್ಯಾಯಾಲಯದ ನ್ಯಾಯವ್ಯಾಪ್ತಿಯನ್ನು ರಷ್ಯಾ ಗುರುತಿಸುವುದಿಲ್ಲ. ಆದ್ದರಿಂದ ಕಾನೂನು ದೃಷ್ಟಿಕೋನದಿಂದ, ಈ ನ್ಯಾಯಾಲಯದ ನಿರ್ಧಾರಗಳು ಅನೂರ್ಜಿತವಾಗಿವೆ” ಎಂದು ಹೇಳಿದ್ದಾರೆ.

ರಷ್ಯಾ ವಾಸ್ತವವಾಗಿ ನ್ಯಾಯಾಲಯದ ಮಹತ್ವದ ನಿರ್ಧಾರವಾದ ರೋಮ್ ಶಾಸನಕ್ಕೆ ಸಹಿ ಹಾಕಿತು. ಆದರೆ ಸದಸ್ಯರಾಗಲು ಅದನ್ನು ಅಂಗೀಕರಿಸಲಿಲ್ಲ. ನಂತರ ಜಾರ್ಜಿಯಾದಲ್ಲಿ 2008 ರ ಯುದ್ಧದ ಬಗ್ಗೆ ಐಸಿಸಿ ತನಿಖೆಯನ್ನು ಪ್ರಾರಂಭಿಸಿದ ನಂತರ 2016ರಲ್ಲಿ ಪುಟಿನ್ ಅವರ ಆದೇಶದ ಮೇರೆಗೆ ತನ್ನ ಸಹಿಯನ್ನೂ ಹಿಂತೆಗೆದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...