Homeಅಂತರಾಷ್ಟ್ರೀಯಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಕೈಗೊಂಡಿರುವ ಕ್ರಮ ಜಾರಿ ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ.

- Advertisement -
- Advertisement -

ಉಕ್ರೇನ್- ರಷ್ಯಾ ಯುದ್ಧದ ಸಂಬಂಧ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಬಂಧನ ವಾರಂಟ್ ಹೊರಡಿಸುವ ಪ್ರಮುಖ ಕ್ರಮವನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ಐಸಿಸಿ) ತೆಗೆದುಕೊಂಡಿದೆ.

ಮಕ್ಕಳನ್ನು ಗಡೀಪಾರು ಮಾಡುವ ಯುದ್ಧ ಅಪರಾಧದ ಆರೋಪ ಹೊತ್ತಿರುವ ರಷ್ಯಾದ ಅಧ್ಯಕ್ಷರು ನಿಜವಾಗಿಯೂ ಹೇಗ್‌ನಲ್ಲಿ ವಿಚಾರಣೆಗೆ ನಿಲ್ಲುವ ಸಾಧ್ಯತೆಯಿದೆಯೇ ಎಂಬ ಪ್ರಶ್ನೆ ಸದ್ಯಕ್ಕೆ ಹುಟ್ಟಿಕೊಂಡಿದೆ.

ಪುಟಿನ್ ಮತ್ತು ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ಅವರು ಐಸಿಸಿ ಸದಸ್ಯ ದೇಶಗಳಿಗೆ ಪ್ರಯಾಣಿಸಿದರೆ ಬಂಧನ ವಾರಂಟ್‌ಗಳನ್ನು ಎದುರಿಸುವ ಸಾಧ್ಯತೆ ಇದೆ. ಆದರೆ ಈ ಕ್ರಮವನ್ನು ಐಸಿಸಿ ಸದಸ್ಯ ರಾಷ್ಟ್ರಗಳು ಜರುಗಿಸುತ್ತವೆಯೇ ಎಂಬುದು ಸದ್ಯದ ಪ್ರಶ್ನೆ.

ಪುಟಿನ್ ಆ 123 ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶಕ್ಕೆ ಕಾಲಿಟ್ಟರೆ ಬಂಧನಕ್ಕೆ ಹೊಣೆಯಾಗುತ್ತಾರೆಯೇ ಎಂದು ಕೇಳಿದಾಗ ‘ಅದು ಸರಿ’ ಎಂದು ಐಸಿಸಿ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಎಎಫ್‌ಪಿಗೆ ತಿಳಿಸಿದ್ದಾರೆ.

ಆದರೆ ಈ ಕ್ರಮದಿಂದಾಗಿ ಪುಟಿನ್‌ ಅವರ ಪ್ರಯಾಣವನ್ನು ಕಷ್ಟಕರವಾಗಿಸಬಹುದು. ನ್ಯಾಯಾಲಯವು ತನ್ನ ವಾರಂಟ್‌ಗಳನ್ನು ಜಾರಿಗೊಳಿಸಲು ತನ್ನದೇ ಆದ ಪೋಲೀಸ್ ಬಲವನ್ನು ಹೊಂದಿಲ್ಲ. ಐಸಿಸಿ ವ್ಯಾಪ್ತಿಯ ದೇಶಗಳ ಮೇಲೆ ಈ ಕ್ರಮ ಅವಲಂಬಿತವಾಗಿದೆ.

ವಿಶೇಷವಾಗಿ ಪುಟಿನ್‌ ಅಂಥವರ ವಿಚಾರದಲ್ಲಿ ಐಸಿಸಿ ಸದಸ್ಯ ದೇಶಗಳು ಯಾವತ್ತೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ.

ಸುಡಾನ್‌ನ ಮಾಜಿ ನಾಯಕ ಒಮರ್ ಅಲ್-ಬಶೀರ್ ಅವರು ಐಸಿಸಿ ವಾರಂಟ್‌ಗೆ ಒಳಪಟ್ಟಿದ್ದರೂ ಸಹ ದಕ್ಷಿಣ ಆಫ್ರಿಕಾ ಮತ್ತು ಜೋರ್ಡಾನ್ ಸೇರಿದಂತೆ ಹಲವಾರು ಐಸಿಸಿ ಸದಸ್ಯ ರಾಷ್ಟ್ರಗಳಿಗೆ ಭೇಟಿ ನೀಡುವಲ್ಲಿ ಯಶಸ್ವಿಯಾಗಿದ್ದರು.

2019ರಲ್ಲಿ ಪದಚ್ಯುತಗೊಂಡಿದ್ದರೂ, ಸುಡಾನ್ ಇನ್ನೂ ಅವರನ್ನು ಹಸ್ತಾಂತರಿಸಿಲ್ಲ.

ಕೊಲಂಬಿಯಾ ಕಾನೂನು ಶಾಲೆಯ ಪ್ರೊಫೆಸರ್ ಮ್ಯಾಥ್ಯೂ ವ್ಯಾಕ್ಸ್‌ಮನ್ ಪ್ರತಿಕ್ರಿಯಿಸಿ, “ಇದು ಐಸಿಸಿಯ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಆದರೆ ನಾವು ಪುಟಿನ್ ಅವರನ್ನು ಬಂಧಿಸುವುದನ್ನು ನೋಡುವ ಸಾಧ್ಯತೆಗಳು ಕಡಿಮೆ” ಎಂದಿದ್ದಾರೆ.

ಮುಖ್ಯ ಅಡಚಣೆಗಳೇನು?

ಯುನೈಟೆಡ್ ಸ್ಟೇಟ್ಸ್, ಚೀನಾ ದೇಶಗಳ ಹಾಗೆ ರಶಿಯಾ ಕೂಡ ಐಸಿಸಿ ಸದಸ್ಯತ್ವ ಹೊಂದಿಲ್ಲ.

ಐಸಿಸಿಯು ಪುಟಿನ್ ವಿರುದ್ಧ ಆರೋಪಗಳನ್ನು ಸಲ್ಲಿಸಲು ಸಾಧ್ಯವಾಯಿತು. ಏಕೆಂದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉಕ್ರೇನ್ ತನ್ನ ಅಧಿಕಾರ ವ್ಯಾಪ್ತಿಯನ್ನು ಒಪ್ಪಿಕೊಂಡಿದೆ, ಆದರೂ ಕೀವ್ (ಉಕ್ರೇನ್ ರಾಜಧಾನಿ) ಕೂಡ ಸದಸ್ಯತ್ವವನ್ನು ಹೊಂದಿಲ್ಲ.

ಇದನ್ನೂ ಓದಿರಿ: ಉಕ್ರೇನ್‌ನಿಂದ ರಷ್ಯಾ ಪಡೆ ಹಿಂತೆಗೆದುಕೊಳ್ಳುವ ನಿರ್ಣಯದ ಮೇಲೆ ಮತದಾನ: ದೂರ ಉಳಿದ ಭಾರತ

ಆದರೆ ಪುಟಿನ್ ವಿರುದ್ಧದ ವಾರಂಟ್‌ಗಳನ್ನು ಮಾಸ್ಕೋ (ರಷ್ಯಾ) ವಜಾಗೊಳಿಸಿದೆ.

ಯಾವುದೇ ಸಂದರ್ಭದಲ್ಲಿ ರಷ್ಯಾ ತನ್ನ ನಾಗರಿಕರನ್ನು ಹಸ್ತಾಂತರಿಸುವುದಿಲ್ಲ.

ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, “ಈ ನ್ಯಾಯಾಲಯದ ನ್ಯಾಯವ್ಯಾಪ್ತಿಯನ್ನು ರಷ್ಯಾ ಗುರುತಿಸುವುದಿಲ್ಲ. ಆದ್ದರಿಂದ ಕಾನೂನು ದೃಷ್ಟಿಕೋನದಿಂದ, ಈ ನ್ಯಾಯಾಲಯದ ನಿರ್ಧಾರಗಳು ಅನೂರ್ಜಿತವಾಗಿವೆ” ಎಂದು ಹೇಳಿದ್ದಾರೆ.

ರಷ್ಯಾ ವಾಸ್ತವವಾಗಿ ನ್ಯಾಯಾಲಯದ ಮಹತ್ವದ ನಿರ್ಧಾರವಾದ ರೋಮ್ ಶಾಸನಕ್ಕೆ ಸಹಿ ಹಾಕಿತು. ಆದರೆ ಸದಸ್ಯರಾಗಲು ಅದನ್ನು ಅಂಗೀಕರಿಸಲಿಲ್ಲ. ನಂತರ ಜಾರ್ಜಿಯಾದಲ್ಲಿ 2008 ರ ಯುದ್ಧದ ಬಗ್ಗೆ ಐಸಿಸಿ ತನಿಖೆಯನ್ನು ಪ್ರಾರಂಭಿಸಿದ ನಂತರ 2016ರಲ್ಲಿ ಪುಟಿನ್ ಅವರ ಆದೇಶದ ಮೇರೆಗೆ ತನ್ನ ಸಹಿಯನ್ನೂ ಹಿಂತೆಗೆದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...