Homeಅಂತರಾಷ್ಟ್ರೀಯಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಕೈಗೊಂಡಿರುವ ಕ್ರಮ ಜಾರಿ ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ.

- Advertisement -
- Advertisement -

ಉಕ್ರೇನ್- ರಷ್ಯಾ ಯುದ್ಧದ ಸಂಬಂಧ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಬಂಧನ ವಾರಂಟ್ ಹೊರಡಿಸುವ ಪ್ರಮುಖ ಕ್ರಮವನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ಐಸಿಸಿ) ತೆಗೆದುಕೊಂಡಿದೆ.

ಮಕ್ಕಳನ್ನು ಗಡೀಪಾರು ಮಾಡುವ ಯುದ್ಧ ಅಪರಾಧದ ಆರೋಪ ಹೊತ್ತಿರುವ ರಷ್ಯಾದ ಅಧ್ಯಕ್ಷರು ನಿಜವಾಗಿಯೂ ಹೇಗ್‌ನಲ್ಲಿ ವಿಚಾರಣೆಗೆ ನಿಲ್ಲುವ ಸಾಧ್ಯತೆಯಿದೆಯೇ ಎಂಬ ಪ್ರಶ್ನೆ ಸದ್ಯಕ್ಕೆ ಹುಟ್ಟಿಕೊಂಡಿದೆ.

ಪುಟಿನ್ ಮತ್ತು ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ಅವರು ಐಸಿಸಿ ಸದಸ್ಯ ದೇಶಗಳಿಗೆ ಪ್ರಯಾಣಿಸಿದರೆ ಬಂಧನ ವಾರಂಟ್‌ಗಳನ್ನು ಎದುರಿಸುವ ಸಾಧ್ಯತೆ ಇದೆ. ಆದರೆ ಈ ಕ್ರಮವನ್ನು ಐಸಿಸಿ ಸದಸ್ಯ ರಾಷ್ಟ್ರಗಳು ಜರುಗಿಸುತ್ತವೆಯೇ ಎಂಬುದು ಸದ್ಯದ ಪ್ರಶ್ನೆ.

ಪುಟಿನ್ ಆ 123 ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶಕ್ಕೆ ಕಾಲಿಟ್ಟರೆ ಬಂಧನಕ್ಕೆ ಹೊಣೆಯಾಗುತ್ತಾರೆಯೇ ಎಂದು ಕೇಳಿದಾಗ ‘ಅದು ಸರಿ’ ಎಂದು ಐಸಿಸಿ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಎಎಫ್‌ಪಿಗೆ ತಿಳಿಸಿದ್ದಾರೆ.

ಆದರೆ ಈ ಕ್ರಮದಿಂದಾಗಿ ಪುಟಿನ್‌ ಅವರ ಪ್ರಯಾಣವನ್ನು ಕಷ್ಟಕರವಾಗಿಸಬಹುದು. ನ್ಯಾಯಾಲಯವು ತನ್ನ ವಾರಂಟ್‌ಗಳನ್ನು ಜಾರಿಗೊಳಿಸಲು ತನ್ನದೇ ಆದ ಪೋಲೀಸ್ ಬಲವನ್ನು ಹೊಂದಿಲ್ಲ. ಐಸಿಸಿ ವ್ಯಾಪ್ತಿಯ ದೇಶಗಳ ಮೇಲೆ ಈ ಕ್ರಮ ಅವಲಂಬಿತವಾಗಿದೆ.

ವಿಶೇಷವಾಗಿ ಪುಟಿನ್‌ ಅಂಥವರ ವಿಚಾರದಲ್ಲಿ ಐಸಿಸಿ ಸದಸ್ಯ ದೇಶಗಳು ಯಾವತ್ತೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ.

ಸುಡಾನ್‌ನ ಮಾಜಿ ನಾಯಕ ಒಮರ್ ಅಲ್-ಬಶೀರ್ ಅವರು ಐಸಿಸಿ ವಾರಂಟ್‌ಗೆ ಒಳಪಟ್ಟಿದ್ದರೂ ಸಹ ದಕ್ಷಿಣ ಆಫ್ರಿಕಾ ಮತ್ತು ಜೋರ್ಡಾನ್ ಸೇರಿದಂತೆ ಹಲವಾರು ಐಸಿಸಿ ಸದಸ್ಯ ರಾಷ್ಟ್ರಗಳಿಗೆ ಭೇಟಿ ನೀಡುವಲ್ಲಿ ಯಶಸ್ವಿಯಾಗಿದ್ದರು.

2019ರಲ್ಲಿ ಪದಚ್ಯುತಗೊಂಡಿದ್ದರೂ, ಸುಡಾನ್ ಇನ್ನೂ ಅವರನ್ನು ಹಸ್ತಾಂತರಿಸಿಲ್ಲ.

ಕೊಲಂಬಿಯಾ ಕಾನೂನು ಶಾಲೆಯ ಪ್ರೊಫೆಸರ್ ಮ್ಯಾಥ್ಯೂ ವ್ಯಾಕ್ಸ್‌ಮನ್ ಪ್ರತಿಕ್ರಿಯಿಸಿ, “ಇದು ಐಸಿಸಿಯ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಆದರೆ ನಾವು ಪುಟಿನ್ ಅವರನ್ನು ಬಂಧಿಸುವುದನ್ನು ನೋಡುವ ಸಾಧ್ಯತೆಗಳು ಕಡಿಮೆ” ಎಂದಿದ್ದಾರೆ.

ಮುಖ್ಯ ಅಡಚಣೆಗಳೇನು?

ಯುನೈಟೆಡ್ ಸ್ಟೇಟ್ಸ್, ಚೀನಾ ದೇಶಗಳ ಹಾಗೆ ರಶಿಯಾ ಕೂಡ ಐಸಿಸಿ ಸದಸ್ಯತ್ವ ಹೊಂದಿಲ್ಲ.

ಐಸಿಸಿಯು ಪುಟಿನ್ ವಿರುದ್ಧ ಆರೋಪಗಳನ್ನು ಸಲ್ಲಿಸಲು ಸಾಧ್ಯವಾಯಿತು. ಏಕೆಂದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉಕ್ರೇನ್ ತನ್ನ ಅಧಿಕಾರ ವ್ಯಾಪ್ತಿಯನ್ನು ಒಪ್ಪಿಕೊಂಡಿದೆ, ಆದರೂ ಕೀವ್ (ಉಕ್ರೇನ್ ರಾಜಧಾನಿ) ಕೂಡ ಸದಸ್ಯತ್ವವನ್ನು ಹೊಂದಿಲ್ಲ.

ಇದನ್ನೂ ಓದಿರಿ: ಉಕ್ರೇನ್‌ನಿಂದ ರಷ್ಯಾ ಪಡೆ ಹಿಂತೆಗೆದುಕೊಳ್ಳುವ ನಿರ್ಣಯದ ಮೇಲೆ ಮತದಾನ: ದೂರ ಉಳಿದ ಭಾರತ

ಆದರೆ ಪುಟಿನ್ ವಿರುದ್ಧದ ವಾರಂಟ್‌ಗಳನ್ನು ಮಾಸ್ಕೋ (ರಷ್ಯಾ) ವಜಾಗೊಳಿಸಿದೆ.

ಯಾವುದೇ ಸಂದರ್ಭದಲ್ಲಿ ರಷ್ಯಾ ತನ್ನ ನಾಗರಿಕರನ್ನು ಹಸ್ತಾಂತರಿಸುವುದಿಲ್ಲ.

ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, “ಈ ನ್ಯಾಯಾಲಯದ ನ್ಯಾಯವ್ಯಾಪ್ತಿಯನ್ನು ರಷ್ಯಾ ಗುರುತಿಸುವುದಿಲ್ಲ. ಆದ್ದರಿಂದ ಕಾನೂನು ದೃಷ್ಟಿಕೋನದಿಂದ, ಈ ನ್ಯಾಯಾಲಯದ ನಿರ್ಧಾರಗಳು ಅನೂರ್ಜಿತವಾಗಿವೆ” ಎಂದು ಹೇಳಿದ್ದಾರೆ.

ರಷ್ಯಾ ವಾಸ್ತವವಾಗಿ ನ್ಯಾಯಾಲಯದ ಮಹತ್ವದ ನಿರ್ಧಾರವಾದ ರೋಮ್ ಶಾಸನಕ್ಕೆ ಸಹಿ ಹಾಕಿತು. ಆದರೆ ಸದಸ್ಯರಾಗಲು ಅದನ್ನು ಅಂಗೀಕರಿಸಲಿಲ್ಲ. ನಂತರ ಜಾರ್ಜಿಯಾದಲ್ಲಿ 2008 ರ ಯುದ್ಧದ ಬಗ್ಗೆ ಐಸಿಸಿ ತನಿಖೆಯನ್ನು ಪ್ರಾರಂಭಿಸಿದ ನಂತರ 2016ರಲ್ಲಿ ಪುಟಿನ್ ಅವರ ಆದೇಶದ ಮೇರೆಗೆ ತನ್ನ ಸಹಿಯನ್ನೂ ಹಿಂತೆಗೆದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...