Homeಅಂತರಾಷ್ಟ್ರೀಯಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ಉಕ್ರೇನ್‌ ಯುದ್ಧ ಸಂಬಂಧ ಪುಟಿನ್ ವಿರುದ್ಧ ಅರೆಸ್ಟ್ ವಾರೆಂಟ್; ಐಸಿಸಿ ಕ್ರಮ ಜಾರಿ ಸಾಧ್ಯವೆ?

ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಕೈಗೊಂಡಿರುವ ಕ್ರಮ ಜಾರಿ ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ.

- Advertisement -
- Advertisement -

ಉಕ್ರೇನ್- ರಷ್ಯಾ ಯುದ್ಧದ ಸಂಬಂಧ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಬಂಧನ ವಾರಂಟ್ ಹೊರಡಿಸುವ ಪ್ರಮುಖ ಕ್ರಮವನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ಐಸಿಸಿ) ತೆಗೆದುಕೊಂಡಿದೆ.

ಮಕ್ಕಳನ್ನು ಗಡೀಪಾರು ಮಾಡುವ ಯುದ್ಧ ಅಪರಾಧದ ಆರೋಪ ಹೊತ್ತಿರುವ ರಷ್ಯಾದ ಅಧ್ಯಕ್ಷರು ನಿಜವಾಗಿಯೂ ಹೇಗ್‌ನಲ್ಲಿ ವಿಚಾರಣೆಗೆ ನಿಲ್ಲುವ ಸಾಧ್ಯತೆಯಿದೆಯೇ ಎಂಬ ಪ್ರಶ್ನೆ ಸದ್ಯಕ್ಕೆ ಹುಟ್ಟಿಕೊಂಡಿದೆ.

ಪುಟಿನ್ ಮತ್ತು ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ಅವರು ಐಸಿಸಿ ಸದಸ್ಯ ದೇಶಗಳಿಗೆ ಪ್ರಯಾಣಿಸಿದರೆ ಬಂಧನ ವಾರಂಟ್‌ಗಳನ್ನು ಎದುರಿಸುವ ಸಾಧ್ಯತೆ ಇದೆ. ಆದರೆ ಈ ಕ್ರಮವನ್ನು ಐಸಿಸಿ ಸದಸ್ಯ ರಾಷ್ಟ್ರಗಳು ಜರುಗಿಸುತ್ತವೆಯೇ ಎಂಬುದು ಸದ್ಯದ ಪ್ರಶ್ನೆ.

ಪುಟಿನ್ ಆ 123 ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶಕ್ಕೆ ಕಾಲಿಟ್ಟರೆ ಬಂಧನಕ್ಕೆ ಹೊಣೆಯಾಗುತ್ತಾರೆಯೇ ಎಂದು ಕೇಳಿದಾಗ ‘ಅದು ಸರಿ’ ಎಂದು ಐಸಿಸಿ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಎಎಫ್‌ಪಿಗೆ ತಿಳಿಸಿದ್ದಾರೆ.

ಆದರೆ ಈ ಕ್ರಮದಿಂದಾಗಿ ಪುಟಿನ್‌ ಅವರ ಪ್ರಯಾಣವನ್ನು ಕಷ್ಟಕರವಾಗಿಸಬಹುದು. ನ್ಯಾಯಾಲಯವು ತನ್ನ ವಾರಂಟ್‌ಗಳನ್ನು ಜಾರಿಗೊಳಿಸಲು ತನ್ನದೇ ಆದ ಪೋಲೀಸ್ ಬಲವನ್ನು ಹೊಂದಿಲ್ಲ. ಐಸಿಸಿ ವ್ಯಾಪ್ತಿಯ ದೇಶಗಳ ಮೇಲೆ ಈ ಕ್ರಮ ಅವಲಂಬಿತವಾಗಿದೆ.

ವಿಶೇಷವಾಗಿ ಪುಟಿನ್‌ ಅಂಥವರ ವಿಚಾರದಲ್ಲಿ ಐಸಿಸಿ ಸದಸ್ಯ ದೇಶಗಳು ಯಾವತ್ತೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ.

ಸುಡಾನ್‌ನ ಮಾಜಿ ನಾಯಕ ಒಮರ್ ಅಲ್-ಬಶೀರ್ ಅವರು ಐಸಿಸಿ ವಾರಂಟ್‌ಗೆ ಒಳಪಟ್ಟಿದ್ದರೂ ಸಹ ದಕ್ಷಿಣ ಆಫ್ರಿಕಾ ಮತ್ತು ಜೋರ್ಡಾನ್ ಸೇರಿದಂತೆ ಹಲವಾರು ಐಸಿಸಿ ಸದಸ್ಯ ರಾಷ್ಟ್ರಗಳಿಗೆ ಭೇಟಿ ನೀಡುವಲ್ಲಿ ಯಶಸ್ವಿಯಾಗಿದ್ದರು.

2019ರಲ್ಲಿ ಪದಚ್ಯುತಗೊಂಡಿದ್ದರೂ, ಸುಡಾನ್ ಇನ್ನೂ ಅವರನ್ನು ಹಸ್ತಾಂತರಿಸಿಲ್ಲ.

ಕೊಲಂಬಿಯಾ ಕಾನೂನು ಶಾಲೆಯ ಪ್ರೊಫೆಸರ್ ಮ್ಯಾಥ್ಯೂ ವ್ಯಾಕ್ಸ್‌ಮನ್ ಪ್ರತಿಕ್ರಿಯಿಸಿ, “ಇದು ಐಸಿಸಿಯ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಆದರೆ ನಾವು ಪುಟಿನ್ ಅವರನ್ನು ಬಂಧಿಸುವುದನ್ನು ನೋಡುವ ಸಾಧ್ಯತೆಗಳು ಕಡಿಮೆ” ಎಂದಿದ್ದಾರೆ.

ಮುಖ್ಯ ಅಡಚಣೆಗಳೇನು?

ಯುನೈಟೆಡ್ ಸ್ಟೇಟ್ಸ್, ಚೀನಾ ದೇಶಗಳ ಹಾಗೆ ರಶಿಯಾ ಕೂಡ ಐಸಿಸಿ ಸದಸ್ಯತ್ವ ಹೊಂದಿಲ್ಲ.

ಐಸಿಸಿಯು ಪುಟಿನ್ ವಿರುದ್ಧ ಆರೋಪಗಳನ್ನು ಸಲ್ಲಿಸಲು ಸಾಧ್ಯವಾಯಿತು. ಏಕೆಂದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉಕ್ರೇನ್ ತನ್ನ ಅಧಿಕಾರ ವ್ಯಾಪ್ತಿಯನ್ನು ಒಪ್ಪಿಕೊಂಡಿದೆ, ಆದರೂ ಕೀವ್ (ಉಕ್ರೇನ್ ರಾಜಧಾನಿ) ಕೂಡ ಸದಸ್ಯತ್ವವನ್ನು ಹೊಂದಿಲ್ಲ.

ಇದನ್ನೂ ಓದಿರಿ: ಉಕ್ರೇನ್‌ನಿಂದ ರಷ್ಯಾ ಪಡೆ ಹಿಂತೆಗೆದುಕೊಳ್ಳುವ ನಿರ್ಣಯದ ಮೇಲೆ ಮತದಾನ: ದೂರ ಉಳಿದ ಭಾರತ

ಆದರೆ ಪುಟಿನ್ ವಿರುದ್ಧದ ವಾರಂಟ್‌ಗಳನ್ನು ಮಾಸ್ಕೋ (ರಷ್ಯಾ) ವಜಾಗೊಳಿಸಿದೆ.

ಯಾವುದೇ ಸಂದರ್ಭದಲ್ಲಿ ರಷ್ಯಾ ತನ್ನ ನಾಗರಿಕರನ್ನು ಹಸ್ತಾಂತರಿಸುವುದಿಲ್ಲ.

ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, “ಈ ನ್ಯಾಯಾಲಯದ ನ್ಯಾಯವ್ಯಾಪ್ತಿಯನ್ನು ರಷ್ಯಾ ಗುರುತಿಸುವುದಿಲ್ಲ. ಆದ್ದರಿಂದ ಕಾನೂನು ದೃಷ್ಟಿಕೋನದಿಂದ, ಈ ನ್ಯಾಯಾಲಯದ ನಿರ್ಧಾರಗಳು ಅನೂರ್ಜಿತವಾಗಿವೆ” ಎಂದು ಹೇಳಿದ್ದಾರೆ.

ರಷ್ಯಾ ವಾಸ್ತವವಾಗಿ ನ್ಯಾಯಾಲಯದ ಮಹತ್ವದ ನಿರ್ಧಾರವಾದ ರೋಮ್ ಶಾಸನಕ್ಕೆ ಸಹಿ ಹಾಕಿತು. ಆದರೆ ಸದಸ್ಯರಾಗಲು ಅದನ್ನು ಅಂಗೀಕರಿಸಲಿಲ್ಲ. ನಂತರ ಜಾರ್ಜಿಯಾದಲ್ಲಿ 2008 ರ ಯುದ್ಧದ ಬಗ್ಗೆ ಐಸಿಸಿ ತನಿಖೆಯನ್ನು ಪ್ರಾರಂಭಿಸಿದ ನಂತರ 2016ರಲ್ಲಿ ಪುಟಿನ್ ಅವರ ಆದೇಶದ ಮೇರೆಗೆ ತನ್ನ ಸಹಿಯನ್ನೂ ಹಿಂತೆಗೆದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...