Homeಅಂತರಾಷ್ಟ್ರೀಯಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಬಂಧನಕ್ಕೆ ವಾರೆಂಟ್!

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಬಂಧನಕ್ಕೆ ವಾರೆಂಟ್!

ನಾಲ್ಕು ವಾರಗಳ ಕಾಲ ವಿದೇಶದಲ್ಲಿರಲು ಕಳೆದ ವರ್ಷದ ನವೆಂಬರ್‌ನಲ್ಲಿ ಅವರು ಲಂಡನ್‌ಗೆ ಪ್ರಯಾಣಿಸಿದ್ದರು.

- Advertisement -
- Advertisement -

ಅಕ್ರಮ ಭೂ ಹಂಚಿಕೆ ಪ್ರಕರಣದ ಸಂಬಂಧಿಸಿದಂತೆ, ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್‌ ಷರೀಫ್‌ ಅವರ ಬಂಧನಕ್ಕೆ ಪಾಕಿಸ್ತಾನ ಸರ್ಕಾರವು ವಾರೆಂಟ್‌ ಹೊರಡಿಸಿದೆ. ನವಾಜ್ ಷರೀಫ್‌ ಸೇರಿದಂತೆ ಅವರ ಪುತ್ರಿ ಮರಿಯಂ ಹಾಗೂ ಅಳಿಯ ಮಹಮ್ಮದ್‌ ಸಫ್ದಾರ್‌ ಕೂಡಾ ಅಕ್ರಮ ಭೂ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.

ಪ್ರಸ್ತುತ ನವಾಜ್‌ ಷರೀಫ್ ಲಂಡನ್‌ನಲ್ಲಿ ವಾಸಿಸುತ್ತಿದ್ದು, ವಿದೇಶದಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಮಾಡಿಕೊಂಡಿದ್ದ ಮನವಿಗೆ ಲಾಹೋರ್‌ ಹೈಕೋರ್ಟ್‌ ಅನುಮತಿ ನೀಡಿದ್ದರಿಂದ, ನಾಲ್ಕು ವಾರಗಳ ಕಾಲ ವಿದೇಶದಲ್ಲಿರಲು ಕಳೆದ ವರ್ಷದ ನವೆಂಬರ್‌ನಲ್ಲಿ ಲಂಡನ್‌ಗೆ ಪ್ರಯಾಣಿಸಿದ್ದರು.

ಇದನ್ನೂ ಓದಿ: ನಿವೃತ್ತಿಯಾದ ನ್ಯಾಯಮೂರ್ತಿ ಅರುಣ್ ಮಿಶ್ರಾರವರ 5 ವಿವಾದಿತ ಪ್ರಕರಣಗಳು

ಡಿಸೆಂಬರ್‌ 2018 ರಂದು ಅಲ್‌ ಅಜಿಜಿಯಾ ಸ್ಟೀಲ್‌ ಮಿಲ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನವಾಜ್‌ ಷರೀಫ್‌ಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಈ ಎರಡೂ ಪ್ರಕರಣಗಳಲ್ಲಿಯೂ ಅವರಿಗೆ ಜಾಮೀನು ನೀಡಲಾಗಿತ್ತು.

“ಫಾಕಿಸ್ತಾನಕ್ಕೆ ಮರಳಲು ನವಾಜ್ ಷರೀಫ್‌ಗೆ ಎಂಟು ವಾರಗಳ ಗಡುವು ನೀಡಲಾಗಿತ್ತು. ಅವರ ಆರೋಗ್ಯ ಹದಗೆಟ್ಟಿರುವುದರಿಂದ ಇನ್ನೂ ಹಿಂತಿರುಗಿಲ್ಲ” ಎಂದು ನವಾಜ್‌ ಷರೀಫ್‌ ಪರ ವಕೀಲರು ತಿಳಿಸಿದ್ದಾರೆ.

ನವಾಜ್ ಷರೀಫ್‌ ಬಂಧನಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಸರ್ಕಾರವು ಹೊರಡಿಸಿರುವ ವಾರೆಂಟ್,‌ ಲಂಡನ್‌ನಲ್ಲಿರುವ ಪಾಕಿಸ್ತಾನ ಹೈ ಕಮಿಷನ್‌ಗೆ ಗುರುವಾರವೇ ತಲುಪಿದ್ದು, ಇದರ ಕುರಿತು ಹೈ ಕಮಿಷನ್‌ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಪಾಕಿಸ್ತಾನಿ ದಿನ ಪತ್ರಿಕೆ ’ದಿ ಡಾನ್’‌ ವರದಿ ಮಾಡಿದೆ.

ಇದನ್ನೂ ಓದಿ: ಮೋದಿ ಎರಡನೆಯ ಬಾರಿಗೆ ಅಧಿಕಾರಕ್ಕೆ ಬರಲು ಯಾರು ಕಾರಣರು? – ಎಚ್‌.ಎಸ್ ದೊರೆಸ್ವಾಮಿ

ತನ್ನ ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದ ವಿಚಾರಣೆಯ ಸಂಧರ್ಭ ಖುದ್ದು ಹಾಜರಾತಿಗೆ ವಿನಾಯಿತಿ ನೀಡಬೇಕೆಂದು ಕೋರಿ ನವಾಜ್ ಷರೀಫ್‌ ಅರ್ಜಿ ಸಲ್ಲಿಸಿದ್ದರಾದರೂ, ಇದನ್ನು ಇಸ್ಲಾಮಾಬಾದ್‌ ಹೈಕೋರ್ಟ್‌ ವಜಾಗೊಳಿಸಿತ್ತು.


ಇದನ್ನೂ ಓದಿ: ಸಂವಿಧಾನ ಬದಲಾಯಿಸುವ ಹುನ್ನಾರವನ್ನು ಜನರೇ ಪ್ರಶ್ನಿಸಿ ತಡೆಗಟ್ಟಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...