Homeಮುಖಪುಟಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದೇ ದಿನದಲ್ಲಿ ಅರೆಸ್ಟ್‌‌ ವಾರೆಂಟ್‌‌!

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದೇ ದಿನದಲ್ಲಿ ಅರೆಸ್ಟ್‌‌ ವಾರೆಂಟ್‌‌!

- Advertisement -
- Advertisement -

ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರವನ್ನು ತೊರೆದು ಬಿಜೆಪಿಯಿಂದ ಹೊರ ನಡೆಯುವುದಾಗಿ ಹೇಳಿದ್ದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು, 2014 ರಲ್ಲಿ ಮಾಡಿದ್ದ ದ್ವೇಷದ ಭಾಷಣದ ಮೇಲೆ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದೇ ದಿನಕ್ಕೆ ಸುಲ್ತಾನ್‌ಪುರದಲ್ಲಿ ಅವರ ಬಂಧನಕ್ಕೆ ವಾರಂಟ್ ಹೊರಡಿಸಲಾಗಿದೆ.

ಈ ಪ್ರಕರಣದಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸ್ವಾಮಿ ಪ್ರಸಾದ್‌ ಅವರನ್ನು ಕೇಳಲಾಗಿತ್ತು, ಆದರೆ ಅವರು ಹಾಜರಾಗಿರಲಿಲ್ಲ. ಇದೀಗ ಪ್ರಕರಣದಲ್ಲಿ ಜನವರಿ 24 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಅವರನ್ನು ಈಗ ಕೇಳಲಾಗಿದೆ. ಪ್ರಕರಣದ ದಾಖಲಾಗಿದ್ದಾಗ ಅವರು ಮಾಯಾವತಿ ನಾಯಕತ್ವದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ದಲ್ಲಿ ಇದ್ದರು.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ಮದುವೆಯ ಸಂದರ್ಭದಲ್ಲಿ ಗೌರಿ ಅಥವಾ ಗಣೇಶನನ್ನು ಪೂಜಿಸಬಾರದು. ಇದು ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದಾರಿತಪ್ಪಿಸಲು ಮತ್ತು ಗುಲಾಮರನ್ನಾಗಿ ಮಾಡಲು ಮೇಲ್ಜಾತಿಗಳ ಪಿತೂರಿಯಾಗಿದೆ ಎಂದು ಸ್ವಾಮಿ ಪ್ರಸಾದ್‌ ಅವರು ಸಭೆಯೊಂದರಲ್ಲಿ ಹೇಳಿದ್ದರು.

2016 ರಲ್ಲಿ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ಹೊರಡಿಸಿದ್ದ ವಾರಂಟ್ ಅನ್ನು ತಡೆಹಿಡಿದಿತ್ತು. ಅಂದಿನಿಂದ ಈ ಪ್ರಕರಣದಲ್ಲಿ ಹಲವು ವಿಚಾರಣೆಗಳು ನಡೆದಿವೆ.

ಜನವರಿ 6 ರಂದು ಸುಲ್ತಾನ್‌ಪುರ ನ್ಯಾಯಾಲಯ ಜನವರಿ 12 ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿತ್ತು. ಅವರು ಇಂದು ಹಾಜರಾಗದೇ ಇದ್ದುದಕ್ಕೆ ಇಂದು ನ್ಯಾಯಾಲಯವು ಅವರ ವಾರೆಂಟ್‌ ಅನ್ನು ನವೀಕರಿಸಿದೆ.

ಇದನ್ನೂ ಓದಿ:ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಪ್ರತ್ಯೇಕ ಜೈಲು ಆವರಣ ನಿರ್ಮಿಸಿ: ರಾಜ್ಯಗಳಿಗೆ ಒಕ್ಕೂಟ ಸರ್ಕಾರ

ಹಿಂದುಳಿದ ಜಾತಿಯ ಪ್ರಬಲ ನಾಯಕರಾದ ಸ್ವಾಮಿ ಪ್ರಸಾದ್‌ ಅವರು ಉತ್ತರ ಪ್ರದೇಶವು ಚುನಾವಣೆಗೆ ಸಜ್ಜಾಗುತ್ತಿರುವ ಹೊತ್ತಿಗೆ ಸರ್ಕಾರದಿಂದ ಹೊರನಡೆದು ಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದಾರೆ. ತಮ್ಮೊಂದಿಗೆ ಇನ್ನಷ್ಟು ಸಚಿವರು ಮತ್ತು ಶಾಸಕರನ್ನು ಕರೆದುಕೊಂಡು ಹೋಗುವುದಾಗಿ ಬೆದರಿಕೆ ಕೂಡಾ ಹಾಕಿದ್ದಾರೆ; ಇವರ ನಂತರ ಈಗಾಗಲೇ ಐವರು ರಾಜೀನಾಮೆ ನೀಡಿದ್ದಾರೆ.

ನನ್ನ ನಡೆಯು ಬಿಜೆಪಿಯಲ್ಲಿ ಭೂಕಂಪ ಉಂಟುಮಾಡಿದೆ ಎಂದು ಹೇಳಿರುವ ಅವರು, “ನಾನು ಸಚಿವ ಸ್ಥಾನವನ್ನು ಮಾತ್ರ ತ್ಯಜಿಸಿದ್ದೇನೆ. ಶೀಘ್ರದಲ್ಲೇ ಬಿಜೆಪಿಯನ್ನು ತೊರೆಯುತ್ತೇನೆ. ಸದ್ಯಕ್ಕೆ ನಾನು ಸಮಾಜವಾದಿ ಪಕ್ಷಕ್ಕೆ ಸೇರುತ್ತಿಲ್ಲ” ಎಂದು ಸ್ವಾಮಿ ಪ್ರಸಾದ್‌‌ ಹೇಳಿದ್ದು, ಶುಕ್ರವಾದಂದು ಈ ಬಗ್ಗೆ ಬಹಿರಂಗ ಪಡಿಸುವುದಾಗಿ ಹೇಳಿದ್ದಾರೆ.

‘‘ನಾನು ಬಿಜೆಪಿಯನ್ನು ತಿರಸ್ಕರಿಸಿದ್ದೇನೆ… ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’’ ಎಂದು ಅವರು ಘೋಷಿಸಿದ್ದಾರೆ.

ಸ್ವಾಮಿ ಪ್ರಸಾದ್‌ ಅವರು ಎರಡು ತಿಂಗಳ ಹಿಂದೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಆದಿತ್ಯನಾಥ್ ಅವರ ಕಾರ್ಯಶೈಲಿಯ ಬಗ್ಗೆ ದೂರು ನೀಡಿದ್ದರು ಎಂದು ವರದಿಯಾಗಿದೆ. ಆದರೆ ಕೇಂದ್ರ ನಾಯಕತ್ವವು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...