Homeಮುಖಪುಟಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದೇ ದಿನದಲ್ಲಿ ಅರೆಸ್ಟ್‌‌ ವಾರೆಂಟ್‌‌!

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದೇ ದಿನದಲ್ಲಿ ಅರೆಸ್ಟ್‌‌ ವಾರೆಂಟ್‌‌!

- Advertisement -
- Advertisement -

ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರವನ್ನು ತೊರೆದು ಬಿಜೆಪಿಯಿಂದ ಹೊರ ನಡೆಯುವುದಾಗಿ ಹೇಳಿದ್ದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು, 2014 ರಲ್ಲಿ ಮಾಡಿದ್ದ ದ್ವೇಷದ ಭಾಷಣದ ಮೇಲೆ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದೇ ದಿನಕ್ಕೆ ಸುಲ್ತಾನ್‌ಪುರದಲ್ಲಿ ಅವರ ಬಂಧನಕ್ಕೆ ವಾರಂಟ್ ಹೊರಡಿಸಲಾಗಿದೆ.

ಈ ಪ್ರಕರಣದಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸ್ವಾಮಿ ಪ್ರಸಾದ್‌ ಅವರನ್ನು ಕೇಳಲಾಗಿತ್ತು, ಆದರೆ ಅವರು ಹಾಜರಾಗಿರಲಿಲ್ಲ. ಇದೀಗ ಪ್ರಕರಣದಲ್ಲಿ ಜನವರಿ 24 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಅವರನ್ನು ಈಗ ಕೇಳಲಾಗಿದೆ. ಪ್ರಕರಣದ ದಾಖಲಾಗಿದ್ದಾಗ ಅವರು ಮಾಯಾವತಿ ನಾಯಕತ್ವದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ದಲ್ಲಿ ಇದ್ದರು.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ಮದುವೆಯ ಸಂದರ್ಭದಲ್ಲಿ ಗೌರಿ ಅಥವಾ ಗಣೇಶನನ್ನು ಪೂಜಿಸಬಾರದು. ಇದು ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದಾರಿತಪ್ಪಿಸಲು ಮತ್ತು ಗುಲಾಮರನ್ನಾಗಿ ಮಾಡಲು ಮೇಲ್ಜಾತಿಗಳ ಪಿತೂರಿಯಾಗಿದೆ ಎಂದು ಸ್ವಾಮಿ ಪ್ರಸಾದ್‌ ಅವರು ಸಭೆಯೊಂದರಲ್ಲಿ ಹೇಳಿದ್ದರು.

2016 ರಲ್ಲಿ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ಹೊರಡಿಸಿದ್ದ ವಾರಂಟ್ ಅನ್ನು ತಡೆಹಿಡಿದಿತ್ತು. ಅಂದಿನಿಂದ ಈ ಪ್ರಕರಣದಲ್ಲಿ ಹಲವು ವಿಚಾರಣೆಗಳು ನಡೆದಿವೆ.

ಜನವರಿ 6 ರಂದು ಸುಲ್ತಾನ್‌ಪುರ ನ್ಯಾಯಾಲಯ ಜನವರಿ 12 ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿತ್ತು. ಅವರು ಇಂದು ಹಾಜರಾಗದೇ ಇದ್ದುದಕ್ಕೆ ಇಂದು ನ್ಯಾಯಾಲಯವು ಅವರ ವಾರೆಂಟ್‌ ಅನ್ನು ನವೀಕರಿಸಿದೆ.

ಇದನ್ನೂ ಓದಿ:ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಪ್ರತ್ಯೇಕ ಜೈಲು ಆವರಣ ನಿರ್ಮಿಸಿ: ರಾಜ್ಯಗಳಿಗೆ ಒಕ್ಕೂಟ ಸರ್ಕಾರ

ಹಿಂದುಳಿದ ಜಾತಿಯ ಪ್ರಬಲ ನಾಯಕರಾದ ಸ್ವಾಮಿ ಪ್ರಸಾದ್‌ ಅವರು ಉತ್ತರ ಪ್ರದೇಶವು ಚುನಾವಣೆಗೆ ಸಜ್ಜಾಗುತ್ತಿರುವ ಹೊತ್ತಿಗೆ ಸರ್ಕಾರದಿಂದ ಹೊರನಡೆದು ಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದಾರೆ. ತಮ್ಮೊಂದಿಗೆ ಇನ್ನಷ್ಟು ಸಚಿವರು ಮತ್ತು ಶಾಸಕರನ್ನು ಕರೆದುಕೊಂಡು ಹೋಗುವುದಾಗಿ ಬೆದರಿಕೆ ಕೂಡಾ ಹಾಕಿದ್ದಾರೆ; ಇವರ ನಂತರ ಈಗಾಗಲೇ ಐವರು ರಾಜೀನಾಮೆ ನೀಡಿದ್ದಾರೆ.

ನನ್ನ ನಡೆಯು ಬಿಜೆಪಿಯಲ್ಲಿ ಭೂಕಂಪ ಉಂಟುಮಾಡಿದೆ ಎಂದು ಹೇಳಿರುವ ಅವರು, “ನಾನು ಸಚಿವ ಸ್ಥಾನವನ್ನು ಮಾತ್ರ ತ್ಯಜಿಸಿದ್ದೇನೆ. ಶೀಘ್ರದಲ್ಲೇ ಬಿಜೆಪಿಯನ್ನು ತೊರೆಯುತ್ತೇನೆ. ಸದ್ಯಕ್ಕೆ ನಾನು ಸಮಾಜವಾದಿ ಪಕ್ಷಕ್ಕೆ ಸೇರುತ್ತಿಲ್ಲ” ಎಂದು ಸ್ವಾಮಿ ಪ್ರಸಾದ್‌‌ ಹೇಳಿದ್ದು, ಶುಕ್ರವಾದಂದು ಈ ಬಗ್ಗೆ ಬಹಿರಂಗ ಪಡಿಸುವುದಾಗಿ ಹೇಳಿದ್ದಾರೆ.

‘‘ನಾನು ಬಿಜೆಪಿಯನ್ನು ತಿರಸ್ಕರಿಸಿದ್ದೇನೆ… ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’’ ಎಂದು ಅವರು ಘೋಷಿಸಿದ್ದಾರೆ.

ಸ್ವಾಮಿ ಪ್ರಸಾದ್‌ ಅವರು ಎರಡು ತಿಂಗಳ ಹಿಂದೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಆದಿತ್ಯನಾಥ್ ಅವರ ಕಾರ್ಯಶೈಲಿಯ ಬಗ್ಗೆ ದೂರು ನೀಡಿದ್ದರು ಎಂದು ವರದಿಯಾಗಿದೆ. ಆದರೆ ಕೇಂದ್ರ ನಾಯಕತ್ವವು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...