Homeಮುಖಪುಟನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

- Advertisement -
- Advertisement -

ರೈಲ್ವೆ ಇಲಾಖೆ ಪ್ರಾರಂಭಿಸಲಿರುವ ವಿಶೇಷ ಪ್ರಯಾಣಿಕ ರೈಲು ಸೇವೆಯ ಬಗ್ಗೆ “ನಕಲಿ ಸುದ್ದಿ” ಪ್ರಸಾರ ಮಾಡಿದ್ದಕ್ಕಾಗಿ 43 ವರ್ಷದ ಪತ್ರಕರ್ತ ರಾಹುಲ್ ಕುಲಕರ್ಣಿಯನ್ನು ಮುಂಬೈ ಪೊಲೀಸರು ಬಂಧಿಸಿದ ನಾಲ್ಕು ತಿಂಗಳ ನಂತರ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತರನ್ನಾಗಿ ಮಾಡಲಾಗಿದೆ.

ಪ್ರಮುಖ ಮರಾಠಿ ಸುದ್ದಿ ಚಾನೆಲ್ ಎಬಿಪಿ ಮಝಾದ ಕಾರ್ಯನಿರ್ವಾಹಕ ಸಂಪಾದಕ ಕುಲಕರ್ಣಿಯನ್ನು ಏಪ್ರಿಲ್ 14 ರಂದು ಸಾವಿರಾರು ಜನರು ಸೇರಿದ್ದ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಬಂಧಿಸಲಾಗಿತ್ತು.

ಬಾಂದ್ರಾದ 12 ನೇ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 83 ಪುಟಗಳ ಪ್ರಕರಣ ಮುಚ್ಚುವ ವರದಿಯನ್ನು ಸಲ್ಲಿಸಿರುವ ಪೊಲೀಸರು ವಿಶೇಷ ರೈಲುಗಳನ್ನು ಪ್ರಾರಂಭಿಸುವ ಸ್ಥಳ ಮತ್ತು ದಿನವನ್ನು ಕುಲಕರ್ಣಿಯ ಸುದ್ದಿಯಲ್ಲಿ ಉಲ್ಲೇಖಿಸಿಲ್ಲ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಜನರು ರಾಹುಲ್ ಕುಲಕರ್ಣಿ ಅವರ ಸುದ್ದಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವರದಿ ತೀರ್ಮಾನಿಸಿದೆ.

ತಪ್ಪು ಮಾಹಿತಿಗಳ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ವಿವರವಾದ ತನಿಖೆ ನಡೆಸಿದ ನಂತರ ಪೊಲೀಸರು ಜುಲೈ ತಿಂಗಳ ಅಂತ್ಯದಲ್ಲಿ ಮುಚ್ಚುವ ವರದಿಯನ್ನು ಸಲ್ಲಿಸಿದರು. ದೂರುದಾರ ಮತ್ತು ರೈಲ್ವೆ ನಿಲ್ದಾಣಗಳ ಹೊರಗೆ ಸೇರಿದ್ದ ಜನರು ಸೇರಿದಂತೆ 11 ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 14 ರಂದು ಕುಲಕರ್ಣಿ ತಮ್ಮ ಸುದ್ದಿ ಚಾನೆಲ್ ಎಬಿಪಿ ಮಝಾದಲ್ಲಿ, ದಕ್ಷಿಣ-ಮಧ್ಯ ರೈಲ್ವೆ ಇಲಾಖೆ ಶೀಘ್ರದಲ್ಲೇ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ರೈಲು ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಸುದ್ಧಿ ಪ್ರಸಾರ ಮಾಡಿತ್ತು.

ಈ ಸುದ್ದಿ ಬೆಳಿಗ್ಗೆ 9 ರಿಂದ 11:30 ರ ನಡುವೆ ಪ್ರಸಾರವಾಗಿತ್ತು. ಈ ಸುದ್ದಿಯಿಂದ ಪ್ರೇರಿತರಾದ ಜನ ಮಧ್ಯಾಹ್ನ 3:45 ರ ಸುಮಾರಿಗೆ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಒಂದೇ ಸ್ಥಳದಲ್ಲಿ ಹಲವಾರು ಜನರು ಸೇರಲು ಪ್ರಾರಂಭಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಸೇರಿದ್ದ ಬಹುಪಾಲು ಜನರು ಹತ್ತಿರದ ಶಾಸ್ತ್ರಿನಗರ, ಖುರೇಶಿನಗರ, ಮಹಾರಾಷ್ಟ್ರ ನಗರ ಮತ್ತು ನರ್ಗಿಸ್ ದತ್ ನಗರ ಕೊಳೆಗೇರಿ ಪ್ರದೇಶಕ್ಕೆ ಸೇರಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ತೀವ್ರ ಲಾಠಿ ಪ್ರಹಾರ ನಡೆಸಿದ್ದರು.

ಮೂಲತಃ ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ ವಲಸೆ ಕಾರ್ಮಿಕರು ನಿಲ್ದಾಣದ ಹೊರಗೆ ಒಟ್ಟುಗೂಡಿದ್ದರು. ಅವರು ಬಾಂದ್ರಾ ನಿಲ್ದಾಣದ ಸುತ್ತ ಮುತ್ತ ವಾಸಿಸುತ್ತಿದ್ದರು ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಪೊಲೀಸರು ಸಂಗ್ರಹಿಸಿದ ಸಾಕ್ಷಿ ಸಾಕ್ಷ್ಯಗಳು ಕುಲಕರ್ಣಿಯ ಸುದ್ದಿಗಳನ್ನು ವೀಕ್ಷಿಸಿಲ್ಲ ಎಂದು ಹೇಳಿಕೊಂಡಿವೆ. ವಾಸ್ತವದಲ್ಲಿ ತಮ್ಮ ನಿವಾಸದ ಸುತ್ತಲೂ ಬಾಯಿಂದ ಬಾಯಿಗೆ ಹರಡಿದ ಸಂಭಾಷಣೆಗಳ ಆಧಾರದ ಮೇಲೆ ಒಟ್ಟುಗೂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಬಾಂದ್ರಾ ವೆಸ್ಟರ್ನ್ ರೈಲ್ವೆ ನಿಲ್ದಾಣವು ಸ್ಥಳೀಯ ರೈಲುಗಳನ್ನು ಮಾತ್ರ ಓಡಿಸುತ್ತದೆ ಎಂಬುದು ಸಾಮಾನ್ಯ ತಿಳುವಳಿಕೆ. ಇನ್ನೊಂದು ರೈಲು ನಿಲ್ದಾಣ ಬಾಂದ್ರಾ ಟರ್ಮಿನಸ್ ಹೊರರಾಜ್ಯದ ರೈಲುಗಳಿಗೆ ಮೀಸಲಾಗಿರುತ್ತದೆ. ಈ ಹೊರ ರಾಜ್ಯದ ರೈಲು ನಿಲ್ದಾಣದಲ್ಲಿ ಜನಸಮೂಹ ಸೇರಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಜನಸಮೂಹ ಸೇರುತ್ತಿದ್ದಂತೆಯೇ, ಮಹಾರಾಷ್ಟ್ರ ರಾಜ್ಯ ಸರ್ಕಾರವು, ಎಬಿಪಿ ಮಝಾ ಸುದ್ದಿ ಸಂಸ್ಥೆ ಮತ್ತು ಕುಲಕರ್ಣಿಯನ್ನು ವದಂತಿಯನ್ನು ಹುಟ್ಟುಹಾಕಿದೆ ಎಂದು ಟೀಕಿಸಿತ್ತು. ಸಾಂಕ್ರಾಮಿಕ ಸಮಯದಲ್ಲಿ ಜನರ ಅವ್ಯವಸ್ಥೆ ಮತ್ತು ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದ ಕಾರಣಕ್ಕಾಗಿ ಕುಲಕರ್ಣಿಯ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಉಸ್ಮಾನಾಬಾದ್ ನಿವಾಸಿ ಕುಲಕರ್ಣಿಯನ್ನು ಬಂಧಿಸಿ ಮುಂಬೈಗೆ ಕರೆತಂದು ಒಂದು ದಿನ ಬಂಧನದಲ್ಲಿಡಲಾಗಿತ್ತು.

ಅಂತಿಮ ವರದಿಯಲ್ಲಿ, ಪೊಲೀಸರು ವದಂತಿಯನ್ನು ದುರುಪಯೋಗ ಮಾಡಿದ್ದಕ್ಕಾಗಿ ವಿನಯ್ ದುಬೆ ಎಂಬ ಇನ್ನೊಬ್ಬ ವ್ಯಕ್ತಿಯ ಮೇಲೆ ಆರೋಪ ಹೊರಿಸಿದ್ದಾರೆ. ದುಬೆಯ ಪ್ರಚೋದನೆಯನ್ನು ಅನುಸರಿಸಿ ಜನಸಮೂಹವು ಒಟ್ಟುಗೂಡಿದೆ. ಇಲ್ಲಿ ಕುಲಕರ್ಣಿಯ ಪಾತ್ರವಿಲ್ಲ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಕನಿಷ್ಠ 15 ಇತರ ವರದಿಗಾರರ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಕೊರೊನಾ ಎದುರಿಸಲು ರಾಜ್ಯ ಸರ್ಕಾರದ ವಿಫಲತೆ ಮತ್ತು ಸಾಮಾನ್ಯ ಜನರು ಮತ್ತು ಕೊರೊನಾ ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ಮಾಡಿದ ಹೆಚ್ಚಿನ ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸುಮಾರು ಎರಡು ದಶಕಗಳನ್ನು ಕಳೆದಿರುವ ಕುಲಕರ್ಣಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ಸಲ್ಲಿಸಿ, ರಾಜ್ಯದ ನಿರ್ಧಾರವನ್ನು ವಿರೋಧಿಸಿದ್ದರು. ಅವರು ಮಾಡಿದ್ದ ಸುದ್ಧಿ, ರೈಲ್ವೆ ಇಲಾಖೆಯಿಂದ ದೊರೆತ ವಿಶ್ವಾಸಾರ್ಹ ಅಧಿಕೃತ ಮೂಲವನ್ನು ಆಧರಿಸಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರು ಮತ್ತು ಗೃಹ ಇಲಾಖೆ ಸುದ್ದಿಯ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಆಸಕ್ತಿ ತೋರದೆ ನನ್ನನ್ನು ಬಂಧಿಸಿದ್ದರು. ಬಾಂದ್ರಾ  ನಿಲ್ದಾಣದಿಂದ ಯಾವುದೇ ಹೊರ ರಾಜ್ಯದ ರೈಲುಗಳನ್ನು ಓಡಿಸುವುದಿಲ್ಲ ಎಂದು ಮುಂಬೈ ನಲ್ಲಿರುವ ಯಾರಿಗಾದರೂ ತಿಳಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆಗಾರರ ​​ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು, ನನ್ನನ್ನು ಬಲಿಪಶುವನ್ನಾಗಿ ಮಾಡಿ, ಬಂಧಿಸುವ ಮೂಲಕ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: Fact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...