Homeಮುಖಪುಟನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

- Advertisement -
- Advertisement -

ರೈಲ್ವೆ ಇಲಾಖೆ ಪ್ರಾರಂಭಿಸಲಿರುವ ವಿಶೇಷ ಪ್ರಯಾಣಿಕ ರೈಲು ಸೇವೆಯ ಬಗ್ಗೆ “ನಕಲಿ ಸುದ್ದಿ” ಪ್ರಸಾರ ಮಾಡಿದ್ದಕ್ಕಾಗಿ 43 ವರ್ಷದ ಪತ್ರಕರ್ತ ರಾಹುಲ್ ಕುಲಕರ್ಣಿಯನ್ನು ಮುಂಬೈ ಪೊಲೀಸರು ಬಂಧಿಸಿದ ನಾಲ್ಕು ತಿಂಗಳ ನಂತರ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತರನ್ನಾಗಿ ಮಾಡಲಾಗಿದೆ.

ಪ್ರಮುಖ ಮರಾಠಿ ಸುದ್ದಿ ಚಾನೆಲ್ ಎಬಿಪಿ ಮಝಾದ ಕಾರ್ಯನಿರ್ವಾಹಕ ಸಂಪಾದಕ ಕುಲಕರ್ಣಿಯನ್ನು ಏಪ್ರಿಲ್ 14 ರಂದು ಸಾವಿರಾರು ಜನರು ಸೇರಿದ್ದ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಬಂಧಿಸಲಾಗಿತ್ತು.

ಬಾಂದ್ರಾದ 12 ನೇ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 83 ಪುಟಗಳ ಪ್ರಕರಣ ಮುಚ್ಚುವ ವರದಿಯನ್ನು ಸಲ್ಲಿಸಿರುವ ಪೊಲೀಸರು ವಿಶೇಷ ರೈಲುಗಳನ್ನು ಪ್ರಾರಂಭಿಸುವ ಸ್ಥಳ ಮತ್ತು ದಿನವನ್ನು ಕುಲಕರ್ಣಿಯ ಸುದ್ದಿಯಲ್ಲಿ ಉಲ್ಲೇಖಿಸಿಲ್ಲ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಜನರು ರಾಹುಲ್ ಕುಲಕರ್ಣಿ ಅವರ ಸುದ್ದಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವರದಿ ತೀರ್ಮಾನಿಸಿದೆ.

ತಪ್ಪು ಮಾಹಿತಿಗಳ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ವಿವರವಾದ ತನಿಖೆ ನಡೆಸಿದ ನಂತರ ಪೊಲೀಸರು ಜುಲೈ ತಿಂಗಳ ಅಂತ್ಯದಲ್ಲಿ ಮುಚ್ಚುವ ವರದಿಯನ್ನು ಸಲ್ಲಿಸಿದರು. ದೂರುದಾರ ಮತ್ತು ರೈಲ್ವೆ ನಿಲ್ದಾಣಗಳ ಹೊರಗೆ ಸೇರಿದ್ದ ಜನರು ಸೇರಿದಂತೆ 11 ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 14 ರಂದು ಕುಲಕರ್ಣಿ ತಮ್ಮ ಸುದ್ದಿ ಚಾನೆಲ್ ಎಬಿಪಿ ಮಝಾದಲ್ಲಿ, ದಕ್ಷಿಣ-ಮಧ್ಯ ರೈಲ್ವೆ ಇಲಾಖೆ ಶೀಘ್ರದಲ್ಲೇ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ರೈಲು ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಸುದ್ಧಿ ಪ್ರಸಾರ ಮಾಡಿತ್ತು.

ಈ ಸುದ್ದಿ ಬೆಳಿಗ್ಗೆ 9 ರಿಂದ 11:30 ರ ನಡುವೆ ಪ್ರಸಾರವಾಗಿತ್ತು. ಈ ಸುದ್ದಿಯಿಂದ ಪ್ರೇರಿತರಾದ ಜನ ಮಧ್ಯಾಹ್ನ 3:45 ರ ಸುಮಾರಿಗೆ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಒಂದೇ ಸ್ಥಳದಲ್ಲಿ ಹಲವಾರು ಜನರು ಸೇರಲು ಪ್ರಾರಂಭಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಸೇರಿದ್ದ ಬಹುಪಾಲು ಜನರು ಹತ್ತಿರದ ಶಾಸ್ತ್ರಿನಗರ, ಖುರೇಶಿನಗರ, ಮಹಾರಾಷ್ಟ್ರ ನಗರ ಮತ್ತು ನರ್ಗಿಸ್ ದತ್ ನಗರ ಕೊಳೆಗೇರಿ ಪ್ರದೇಶಕ್ಕೆ ಸೇರಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ತೀವ್ರ ಲಾಠಿ ಪ್ರಹಾರ ನಡೆಸಿದ್ದರು.

ಮೂಲತಃ ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ ವಲಸೆ ಕಾರ್ಮಿಕರು ನಿಲ್ದಾಣದ ಹೊರಗೆ ಒಟ್ಟುಗೂಡಿದ್ದರು. ಅವರು ಬಾಂದ್ರಾ ನಿಲ್ದಾಣದ ಸುತ್ತ ಮುತ್ತ ವಾಸಿಸುತ್ತಿದ್ದರು ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಪೊಲೀಸರು ಸಂಗ್ರಹಿಸಿದ ಸಾಕ್ಷಿ ಸಾಕ್ಷ್ಯಗಳು ಕುಲಕರ್ಣಿಯ ಸುದ್ದಿಗಳನ್ನು ವೀಕ್ಷಿಸಿಲ್ಲ ಎಂದು ಹೇಳಿಕೊಂಡಿವೆ. ವಾಸ್ತವದಲ್ಲಿ ತಮ್ಮ ನಿವಾಸದ ಸುತ್ತಲೂ ಬಾಯಿಂದ ಬಾಯಿಗೆ ಹರಡಿದ ಸಂಭಾಷಣೆಗಳ ಆಧಾರದ ಮೇಲೆ ಒಟ್ಟುಗೂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಬಾಂದ್ರಾ ವೆಸ್ಟರ್ನ್ ರೈಲ್ವೆ ನಿಲ್ದಾಣವು ಸ್ಥಳೀಯ ರೈಲುಗಳನ್ನು ಮಾತ್ರ ಓಡಿಸುತ್ತದೆ ಎಂಬುದು ಸಾಮಾನ್ಯ ತಿಳುವಳಿಕೆ. ಇನ್ನೊಂದು ರೈಲು ನಿಲ್ದಾಣ ಬಾಂದ್ರಾ ಟರ್ಮಿನಸ್ ಹೊರರಾಜ್ಯದ ರೈಲುಗಳಿಗೆ ಮೀಸಲಾಗಿರುತ್ತದೆ. ಈ ಹೊರ ರಾಜ್ಯದ ರೈಲು ನಿಲ್ದಾಣದಲ್ಲಿ ಜನಸಮೂಹ ಸೇರಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಜನಸಮೂಹ ಸೇರುತ್ತಿದ್ದಂತೆಯೇ, ಮಹಾರಾಷ್ಟ್ರ ರಾಜ್ಯ ಸರ್ಕಾರವು, ಎಬಿಪಿ ಮಝಾ ಸುದ್ದಿ ಸಂಸ್ಥೆ ಮತ್ತು ಕುಲಕರ್ಣಿಯನ್ನು ವದಂತಿಯನ್ನು ಹುಟ್ಟುಹಾಕಿದೆ ಎಂದು ಟೀಕಿಸಿತ್ತು. ಸಾಂಕ್ರಾಮಿಕ ಸಮಯದಲ್ಲಿ ಜನರ ಅವ್ಯವಸ್ಥೆ ಮತ್ತು ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದ ಕಾರಣಕ್ಕಾಗಿ ಕುಲಕರ್ಣಿಯ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಉಸ್ಮಾನಾಬಾದ್ ನಿವಾಸಿ ಕುಲಕರ್ಣಿಯನ್ನು ಬಂಧಿಸಿ ಮುಂಬೈಗೆ ಕರೆತಂದು ಒಂದು ದಿನ ಬಂಧನದಲ್ಲಿಡಲಾಗಿತ್ತು.

ಅಂತಿಮ ವರದಿಯಲ್ಲಿ, ಪೊಲೀಸರು ವದಂತಿಯನ್ನು ದುರುಪಯೋಗ ಮಾಡಿದ್ದಕ್ಕಾಗಿ ವಿನಯ್ ದುಬೆ ಎಂಬ ಇನ್ನೊಬ್ಬ ವ್ಯಕ್ತಿಯ ಮೇಲೆ ಆರೋಪ ಹೊರಿಸಿದ್ದಾರೆ. ದುಬೆಯ ಪ್ರಚೋದನೆಯನ್ನು ಅನುಸರಿಸಿ ಜನಸಮೂಹವು ಒಟ್ಟುಗೂಡಿದೆ. ಇಲ್ಲಿ ಕುಲಕರ್ಣಿಯ ಪಾತ್ರವಿಲ್ಲ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಕನಿಷ್ಠ 15 ಇತರ ವರದಿಗಾರರ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಕೊರೊನಾ ಎದುರಿಸಲು ರಾಜ್ಯ ಸರ್ಕಾರದ ವಿಫಲತೆ ಮತ್ತು ಸಾಮಾನ್ಯ ಜನರು ಮತ್ತು ಕೊರೊನಾ ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ಮಾಡಿದ ಹೆಚ್ಚಿನ ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸುಮಾರು ಎರಡು ದಶಕಗಳನ್ನು ಕಳೆದಿರುವ ಕುಲಕರ್ಣಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ಸಲ್ಲಿಸಿ, ರಾಜ್ಯದ ನಿರ್ಧಾರವನ್ನು ವಿರೋಧಿಸಿದ್ದರು. ಅವರು ಮಾಡಿದ್ದ ಸುದ್ಧಿ, ರೈಲ್ವೆ ಇಲಾಖೆಯಿಂದ ದೊರೆತ ವಿಶ್ವಾಸಾರ್ಹ ಅಧಿಕೃತ ಮೂಲವನ್ನು ಆಧರಿಸಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರು ಮತ್ತು ಗೃಹ ಇಲಾಖೆ ಸುದ್ದಿಯ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಆಸಕ್ತಿ ತೋರದೆ ನನ್ನನ್ನು ಬಂಧಿಸಿದ್ದರು. ಬಾಂದ್ರಾ  ನಿಲ್ದಾಣದಿಂದ ಯಾವುದೇ ಹೊರ ರಾಜ್ಯದ ರೈಲುಗಳನ್ನು ಓಡಿಸುವುದಿಲ್ಲ ಎಂದು ಮುಂಬೈ ನಲ್ಲಿರುವ ಯಾರಿಗಾದರೂ ತಿಳಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆಗಾರರ ​​ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು, ನನ್ನನ್ನು ಬಲಿಪಶುವನ್ನಾಗಿ ಮಾಡಿ, ಬಂಧಿಸುವ ಮೂಲಕ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: Fact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...