Homeಮುಖಪುಟನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

- Advertisement -
- Advertisement -

ರೈಲ್ವೆ ಇಲಾಖೆ ಪ್ರಾರಂಭಿಸಲಿರುವ ವಿಶೇಷ ಪ್ರಯಾಣಿಕ ರೈಲು ಸೇವೆಯ ಬಗ್ಗೆ “ನಕಲಿ ಸುದ್ದಿ” ಪ್ರಸಾರ ಮಾಡಿದ್ದಕ್ಕಾಗಿ 43 ವರ್ಷದ ಪತ್ರಕರ್ತ ರಾಹುಲ್ ಕುಲಕರ್ಣಿಯನ್ನು ಮುಂಬೈ ಪೊಲೀಸರು ಬಂಧಿಸಿದ ನಾಲ್ಕು ತಿಂಗಳ ನಂತರ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತರನ್ನಾಗಿ ಮಾಡಲಾಗಿದೆ.

ಪ್ರಮುಖ ಮರಾಠಿ ಸುದ್ದಿ ಚಾನೆಲ್ ಎಬಿಪಿ ಮಝಾದ ಕಾರ್ಯನಿರ್ವಾಹಕ ಸಂಪಾದಕ ಕುಲಕರ್ಣಿಯನ್ನು ಏಪ್ರಿಲ್ 14 ರಂದು ಸಾವಿರಾರು ಜನರು ಸೇರಿದ್ದ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಬಂಧಿಸಲಾಗಿತ್ತು.

ಬಾಂದ್ರಾದ 12 ನೇ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 83 ಪುಟಗಳ ಪ್ರಕರಣ ಮುಚ್ಚುವ ವರದಿಯನ್ನು ಸಲ್ಲಿಸಿರುವ ಪೊಲೀಸರು ವಿಶೇಷ ರೈಲುಗಳನ್ನು ಪ್ರಾರಂಭಿಸುವ ಸ್ಥಳ ಮತ್ತು ದಿನವನ್ನು ಕುಲಕರ್ಣಿಯ ಸುದ್ದಿಯಲ್ಲಿ ಉಲ್ಲೇಖಿಸಿಲ್ಲ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಜನರು ರಾಹುಲ್ ಕುಲಕರ್ಣಿ ಅವರ ಸುದ್ದಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವರದಿ ತೀರ್ಮಾನಿಸಿದೆ.

ತಪ್ಪು ಮಾಹಿತಿಗಳ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ವಿವರವಾದ ತನಿಖೆ ನಡೆಸಿದ ನಂತರ ಪೊಲೀಸರು ಜುಲೈ ತಿಂಗಳ ಅಂತ್ಯದಲ್ಲಿ ಮುಚ್ಚುವ ವರದಿಯನ್ನು ಸಲ್ಲಿಸಿದರು. ದೂರುದಾರ ಮತ್ತು ರೈಲ್ವೆ ನಿಲ್ದಾಣಗಳ ಹೊರಗೆ ಸೇರಿದ್ದ ಜನರು ಸೇರಿದಂತೆ 11 ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 14 ರಂದು ಕುಲಕರ್ಣಿ ತಮ್ಮ ಸುದ್ದಿ ಚಾನೆಲ್ ಎಬಿಪಿ ಮಝಾದಲ್ಲಿ, ದಕ್ಷಿಣ-ಮಧ್ಯ ರೈಲ್ವೆ ಇಲಾಖೆ ಶೀಘ್ರದಲ್ಲೇ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ರೈಲು ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಸುದ್ಧಿ ಪ್ರಸಾರ ಮಾಡಿತ್ತು.

ಈ ಸುದ್ದಿ ಬೆಳಿಗ್ಗೆ 9 ರಿಂದ 11:30 ರ ನಡುವೆ ಪ್ರಸಾರವಾಗಿತ್ತು. ಈ ಸುದ್ದಿಯಿಂದ ಪ್ರೇರಿತರಾದ ಜನ ಮಧ್ಯಾಹ್ನ 3:45 ರ ಸುಮಾರಿಗೆ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಒಂದೇ ಸ್ಥಳದಲ್ಲಿ ಹಲವಾರು ಜನರು ಸೇರಲು ಪ್ರಾರಂಭಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಸೇರಿದ್ದ ಬಹುಪಾಲು ಜನರು ಹತ್ತಿರದ ಶಾಸ್ತ್ರಿನಗರ, ಖುರೇಶಿನಗರ, ಮಹಾರಾಷ್ಟ್ರ ನಗರ ಮತ್ತು ನರ್ಗಿಸ್ ದತ್ ನಗರ ಕೊಳೆಗೇರಿ ಪ್ರದೇಶಕ್ಕೆ ಸೇರಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ತೀವ್ರ ಲಾಠಿ ಪ್ರಹಾರ ನಡೆಸಿದ್ದರು.

ಮೂಲತಃ ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ ವಲಸೆ ಕಾರ್ಮಿಕರು ನಿಲ್ದಾಣದ ಹೊರಗೆ ಒಟ್ಟುಗೂಡಿದ್ದರು. ಅವರು ಬಾಂದ್ರಾ ನಿಲ್ದಾಣದ ಸುತ್ತ ಮುತ್ತ ವಾಸಿಸುತ್ತಿದ್ದರು ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಪೊಲೀಸರು ಸಂಗ್ರಹಿಸಿದ ಸಾಕ್ಷಿ ಸಾಕ್ಷ್ಯಗಳು ಕುಲಕರ್ಣಿಯ ಸುದ್ದಿಗಳನ್ನು ವೀಕ್ಷಿಸಿಲ್ಲ ಎಂದು ಹೇಳಿಕೊಂಡಿವೆ. ವಾಸ್ತವದಲ್ಲಿ ತಮ್ಮ ನಿವಾಸದ ಸುತ್ತಲೂ ಬಾಯಿಂದ ಬಾಯಿಗೆ ಹರಡಿದ ಸಂಭಾಷಣೆಗಳ ಆಧಾರದ ಮೇಲೆ ಒಟ್ಟುಗೂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಬಾಂದ್ರಾ ವೆಸ್ಟರ್ನ್ ರೈಲ್ವೆ ನಿಲ್ದಾಣವು ಸ್ಥಳೀಯ ರೈಲುಗಳನ್ನು ಮಾತ್ರ ಓಡಿಸುತ್ತದೆ ಎಂಬುದು ಸಾಮಾನ್ಯ ತಿಳುವಳಿಕೆ. ಇನ್ನೊಂದು ರೈಲು ನಿಲ್ದಾಣ ಬಾಂದ್ರಾ ಟರ್ಮಿನಸ್ ಹೊರರಾಜ್ಯದ ರೈಲುಗಳಿಗೆ ಮೀಸಲಾಗಿರುತ್ತದೆ. ಈ ಹೊರ ರಾಜ್ಯದ ರೈಲು ನಿಲ್ದಾಣದಲ್ಲಿ ಜನಸಮೂಹ ಸೇರಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಜನಸಮೂಹ ಸೇರುತ್ತಿದ್ದಂತೆಯೇ, ಮಹಾರಾಷ್ಟ್ರ ರಾಜ್ಯ ಸರ್ಕಾರವು, ಎಬಿಪಿ ಮಝಾ ಸುದ್ದಿ ಸಂಸ್ಥೆ ಮತ್ತು ಕುಲಕರ್ಣಿಯನ್ನು ವದಂತಿಯನ್ನು ಹುಟ್ಟುಹಾಕಿದೆ ಎಂದು ಟೀಕಿಸಿತ್ತು. ಸಾಂಕ್ರಾಮಿಕ ಸಮಯದಲ್ಲಿ ಜನರ ಅವ್ಯವಸ್ಥೆ ಮತ್ತು ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದ ಕಾರಣಕ್ಕಾಗಿ ಕುಲಕರ್ಣಿಯ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಉಸ್ಮಾನಾಬಾದ್ ನಿವಾಸಿ ಕುಲಕರ್ಣಿಯನ್ನು ಬಂಧಿಸಿ ಮುಂಬೈಗೆ ಕರೆತಂದು ಒಂದು ದಿನ ಬಂಧನದಲ್ಲಿಡಲಾಗಿತ್ತು.

ಅಂತಿಮ ವರದಿಯಲ್ಲಿ, ಪೊಲೀಸರು ವದಂತಿಯನ್ನು ದುರುಪಯೋಗ ಮಾಡಿದ್ದಕ್ಕಾಗಿ ವಿನಯ್ ದುಬೆ ಎಂಬ ಇನ್ನೊಬ್ಬ ವ್ಯಕ್ತಿಯ ಮೇಲೆ ಆರೋಪ ಹೊರಿಸಿದ್ದಾರೆ. ದುಬೆಯ ಪ್ರಚೋದನೆಯನ್ನು ಅನುಸರಿಸಿ ಜನಸಮೂಹವು ಒಟ್ಟುಗೂಡಿದೆ. ಇಲ್ಲಿ ಕುಲಕರ್ಣಿಯ ಪಾತ್ರವಿಲ್ಲ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಕನಿಷ್ಠ 15 ಇತರ ವರದಿಗಾರರ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಕೊರೊನಾ ಎದುರಿಸಲು ರಾಜ್ಯ ಸರ್ಕಾರದ ವಿಫಲತೆ ಮತ್ತು ಸಾಮಾನ್ಯ ಜನರು ಮತ್ತು ಕೊರೊನಾ ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ಮಾಡಿದ ಹೆಚ್ಚಿನ ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸುಮಾರು ಎರಡು ದಶಕಗಳನ್ನು ಕಳೆದಿರುವ ಕುಲಕರ್ಣಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ಸಲ್ಲಿಸಿ, ರಾಜ್ಯದ ನಿರ್ಧಾರವನ್ನು ವಿರೋಧಿಸಿದ್ದರು. ಅವರು ಮಾಡಿದ್ದ ಸುದ್ಧಿ, ರೈಲ್ವೆ ಇಲಾಖೆಯಿಂದ ದೊರೆತ ವಿಶ್ವಾಸಾರ್ಹ ಅಧಿಕೃತ ಮೂಲವನ್ನು ಆಧರಿಸಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರು ಮತ್ತು ಗೃಹ ಇಲಾಖೆ ಸುದ್ದಿಯ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಆಸಕ್ತಿ ತೋರದೆ ನನ್ನನ್ನು ಬಂಧಿಸಿದ್ದರು. ಬಾಂದ್ರಾ  ನಿಲ್ದಾಣದಿಂದ ಯಾವುದೇ ಹೊರ ರಾಜ್ಯದ ರೈಲುಗಳನ್ನು ಓಡಿಸುವುದಿಲ್ಲ ಎಂದು ಮುಂಬೈ ನಲ್ಲಿರುವ ಯಾರಿಗಾದರೂ ತಿಳಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆಗಾರರ ​​ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು, ನನ್ನನ್ನು ಬಲಿಪಶುವನ್ನಾಗಿ ಮಾಡಿ, ಬಂಧಿಸುವ ಮೂಲಕ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: Fact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...