Homeಮುಖಪುಟನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

- Advertisement -
- Advertisement -

ರೈಲ್ವೆ ಇಲಾಖೆ ಪ್ರಾರಂಭಿಸಲಿರುವ ವಿಶೇಷ ಪ್ರಯಾಣಿಕ ರೈಲು ಸೇವೆಯ ಬಗ್ಗೆ “ನಕಲಿ ಸುದ್ದಿ” ಪ್ರಸಾರ ಮಾಡಿದ್ದಕ್ಕಾಗಿ 43 ವರ್ಷದ ಪತ್ರಕರ್ತ ರಾಹುಲ್ ಕುಲಕರ್ಣಿಯನ್ನು ಮುಂಬೈ ಪೊಲೀಸರು ಬಂಧಿಸಿದ ನಾಲ್ಕು ತಿಂಗಳ ನಂತರ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತರನ್ನಾಗಿ ಮಾಡಲಾಗಿದೆ.

ಪ್ರಮುಖ ಮರಾಠಿ ಸುದ್ದಿ ಚಾನೆಲ್ ಎಬಿಪಿ ಮಝಾದ ಕಾರ್ಯನಿರ್ವಾಹಕ ಸಂಪಾದಕ ಕುಲಕರ್ಣಿಯನ್ನು ಏಪ್ರಿಲ್ 14 ರಂದು ಸಾವಿರಾರು ಜನರು ಸೇರಿದ್ದ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಬಂಧಿಸಲಾಗಿತ್ತು.

ಬಾಂದ್ರಾದ 12 ನೇ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 83 ಪುಟಗಳ ಪ್ರಕರಣ ಮುಚ್ಚುವ ವರದಿಯನ್ನು ಸಲ್ಲಿಸಿರುವ ಪೊಲೀಸರು ವಿಶೇಷ ರೈಲುಗಳನ್ನು ಪ್ರಾರಂಭಿಸುವ ಸ್ಥಳ ಮತ್ತು ದಿನವನ್ನು ಕುಲಕರ್ಣಿಯ ಸುದ್ದಿಯಲ್ಲಿ ಉಲ್ಲೇಖಿಸಿಲ್ಲ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಜನರು ರಾಹುಲ್ ಕುಲಕರ್ಣಿ ಅವರ ಸುದ್ದಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವರದಿ ತೀರ್ಮಾನಿಸಿದೆ.

ತಪ್ಪು ಮಾಹಿತಿಗಳ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ವಿವರವಾದ ತನಿಖೆ ನಡೆಸಿದ ನಂತರ ಪೊಲೀಸರು ಜುಲೈ ತಿಂಗಳ ಅಂತ್ಯದಲ್ಲಿ ಮುಚ್ಚುವ ವರದಿಯನ್ನು ಸಲ್ಲಿಸಿದರು. ದೂರುದಾರ ಮತ್ತು ರೈಲ್ವೆ ನಿಲ್ದಾಣಗಳ ಹೊರಗೆ ಸೇರಿದ್ದ ಜನರು ಸೇರಿದಂತೆ 11 ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 14 ರಂದು ಕುಲಕರ್ಣಿ ತಮ್ಮ ಸುದ್ದಿ ಚಾನೆಲ್ ಎಬಿಪಿ ಮಝಾದಲ್ಲಿ, ದಕ್ಷಿಣ-ಮಧ್ಯ ರೈಲ್ವೆ ಇಲಾಖೆ ಶೀಘ್ರದಲ್ಲೇ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ರೈಲು ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಸುದ್ಧಿ ಪ್ರಸಾರ ಮಾಡಿತ್ತು.

ಈ ಸುದ್ದಿ ಬೆಳಿಗ್ಗೆ 9 ರಿಂದ 11:30 ರ ನಡುವೆ ಪ್ರಸಾರವಾಗಿತ್ತು. ಈ ಸುದ್ದಿಯಿಂದ ಪ್ರೇರಿತರಾದ ಜನ ಮಧ್ಯಾಹ್ನ 3:45 ರ ಸುಮಾರಿಗೆ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಒಂದೇ ಸ್ಥಳದಲ್ಲಿ ಹಲವಾರು ಜನರು ಸೇರಲು ಪ್ರಾರಂಭಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಸೇರಿದ್ದ ಬಹುಪಾಲು ಜನರು ಹತ್ತಿರದ ಶಾಸ್ತ್ರಿನಗರ, ಖುರೇಶಿನಗರ, ಮಹಾರಾಷ್ಟ್ರ ನಗರ ಮತ್ತು ನರ್ಗಿಸ್ ದತ್ ನಗರ ಕೊಳೆಗೇರಿ ಪ್ರದೇಶಕ್ಕೆ ಸೇರಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ತೀವ್ರ ಲಾಠಿ ಪ್ರಹಾರ ನಡೆಸಿದ್ದರು.

ಮೂಲತಃ ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ ವಲಸೆ ಕಾರ್ಮಿಕರು ನಿಲ್ದಾಣದ ಹೊರಗೆ ಒಟ್ಟುಗೂಡಿದ್ದರು. ಅವರು ಬಾಂದ್ರಾ ನಿಲ್ದಾಣದ ಸುತ್ತ ಮುತ್ತ ವಾಸಿಸುತ್ತಿದ್ದರು ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಪೊಲೀಸರು ಸಂಗ್ರಹಿಸಿದ ಸಾಕ್ಷಿ ಸಾಕ್ಷ್ಯಗಳು ಕುಲಕರ್ಣಿಯ ಸುದ್ದಿಗಳನ್ನು ವೀಕ್ಷಿಸಿಲ್ಲ ಎಂದು ಹೇಳಿಕೊಂಡಿವೆ. ವಾಸ್ತವದಲ್ಲಿ ತಮ್ಮ ನಿವಾಸದ ಸುತ್ತಲೂ ಬಾಯಿಂದ ಬಾಯಿಗೆ ಹರಡಿದ ಸಂಭಾಷಣೆಗಳ ಆಧಾರದ ಮೇಲೆ ಒಟ್ಟುಗೂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಬಾಂದ್ರಾ ವೆಸ್ಟರ್ನ್ ರೈಲ್ವೆ ನಿಲ್ದಾಣವು ಸ್ಥಳೀಯ ರೈಲುಗಳನ್ನು ಮಾತ್ರ ಓಡಿಸುತ್ತದೆ ಎಂಬುದು ಸಾಮಾನ್ಯ ತಿಳುವಳಿಕೆ. ಇನ್ನೊಂದು ರೈಲು ನಿಲ್ದಾಣ ಬಾಂದ್ರಾ ಟರ್ಮಿನಸ್ ಹೊರರಾಜ್ಯದ ರೈಲುಗಳಿಗೆ ಮೀಸಲಾಗಿರುತ್ತದೆ. ಈ ಹೊರ ರಾಜ್ಯದ ರೈಲು ನಿಲ್ದಾಣದಲ್ಲಿ ಜನಸಮೂಹ ಸೇರಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಜನಸಮೂಹ ಸೇರುತ್ತಿದ್ದಂತೆಯೇ, ಮಹಾರಾಷ್ಟ್ರ ರಾಜ್ಯ ಸರ್ಕಾರವು, ಎಬಿಪಿ ಮಝಾ ಸುದ್ದಿ ಸಂಸ್ಥೆ ಮತ್ತು ಕುಲಕರ್ಣಿಯನ್ನು ವದಂತಿಯನ್ನು ಹುಟ್ಟುಹಾಕಿದೆ ಎಂದು ಟೀಕಿಸಿತ್ತು. ಸಾಂಕ್ರಾಮಿಕ ಸಮಯದಲ್ಲಿ ಜನರ ಅವ್ಯವಸ್ಥೆ ಮತ್ತು ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದ ಕಾರಣಕ್ಕಾಗಿ ಕುಲಕರ್ಣಿಯ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಉಸ್ಮಾನಾಬಾದ್ ನಿವಾಸಿ ಕುಲಕರ್ಣಿಯನ್ನು ಬಂಧಿಸಿ ಮುಂಬೈಗೆ ಕರೆತಂದು ಒಂದು ದಿನ ಬಂಧನದಲ್ಲಿಡಲಾಗಿತ್ತು.

ಅಂತಿಮ ವರದಿಯಲ್ಲಿ, ಪೊಲೀಸರು ವದಂತಿಯನ್ನು ದುರುಪಯೋಗ ಮಾಡಿದ್ದಕ್ಕಾಗಿ ವಿನಯ್ ದುಬೆ ಎಂಬ ಇನ್ನೊಬ್ಬ ವ್ಯಕ್ತಿಯ ಮೇಲೆ ಆರೋಪ ಹೊರಿಸಿದ್ದಾರೆ. ದುಬೆಯ ಪ್ರಚೋದನೆಯನ್ನು ಅನುಸರಿಸಿ ಜನಸಮೂಹವು ಒಟ್ಟುಗೂಡಿದೆ. ಇಲ್ಲಿ ಕುಲಕರ್ಣಿಯ ಪಾತ್ರವಿಲ್ಲ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಕನಿಷ್ಠ 15 ಇತರ ವರದಿಗಾರರ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಕೊರೊನಾ ಎದುರಿಸಲು ರಾಜ್ಯ ಸರ್ಕಾರದ ವಿಫಲತೆ ಮತ್ತು ಸಾಮಾನ್ಯ ಜನರು ಮತ್ತು ಕೊರೊನಾ ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ಮಾಡಿದ ಹೆಚ್ಚಿನ ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸುಮಾರು ಎರಡು ದಶಕಗಳನ್ನು ಕಳೆದಿರುವ ಕುಲಕರ್ಣಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ಸಲ್ಲಿಸಿ, ರಾಜ್ಯದ ನಿರ್ಧಾರವನ್ನು ವಿರೋಧಿಸಿದ್ದರು. ಅವರು ಮಾಡಿದ್ದ ಸುದ್ಧಿ, ರೈಲ್ವೆ ಇಲಾಖೆಯಿಂದ ದೊರೆತ ವಿಶ್ವಾಸಾರ್ಹ ಅಧಿಕೃತ ಮೂಲವನ್ನು ಆಧರಿಸಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರು ಮತ್ತು ಗೃಹ ಇಲಾಖೆ ಸುದ್ದಿಯ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಆಸಕ್ತಿ ತೋರದೆ ನನ್ನನ್ನು ಬಂಧಿಸಿದ್ದರು. ಬಾಂದ್ರಾ  ನಿಲ್ದಾಣದಿಂದ ಯಾವುದೇ ಹೊರ ರಾಜ್ಯದ ರೈಲುಗಳನ್ನು ಓಡಿಸುವುದಿಲ್ಲ ಎಂದು ಮುಂಬೈ ನಲ್ಲಿರುವ ಯಾರಿಗಾದರೂ ತಿಳಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆಗಾರರ ​​ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು, ನನ್ನನ್ನು ಬಲಿಪಶುವನ್ನಾಗಿ ಮಾಡಿ, ಬಂಧಿಸುವ ಮೂಲಕ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: Fact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...