Homeಮುಖಪುಟನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

- Advertisement -
- Advertisement -

ರೈಲ್ವೆ ಇಲಾಖೆ ಪ್ರಾರಂಭಿಸಲಿರುವ ವಿಶೇಷ ಪ್ರಯಾಣಿಕ ರೈಲು ಸೇವೆಯ ಬಗ್ಗೆ “ನಕಲಿ ಸುದ್ದಿ” ಪ್ರಸಾರ ಮಾಡಿದ್ದಕ್ಕಾಗಿ 43 ವರ್ಷದ ಪತ್ರಕರ್ತ ರಾಹುಲ್ ಕುಲಕರ್ಣಿಯನ್ನು ಮುಂಬೈ ಪೊಲೀಸರು ಬಂಧಿಸಿದ ನಾಲ್ಕು ತಿಂಗಳ ನಂತರ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತರನ್ನಾಗಿ ಮಾಡಲಾಗಿದೆ.

ಪ್ರಮುಖ ಮರಾಠಿ ಸುದ್ದಿ ಚಾನೆಲ್ ಎಬಿಪಿ ಮಝಾದ ಕಾರ್ಯನಿರ್ವಾಹಕ ಸಂಪಾದಕ ಕುಲಕರ್ಣಿಯನ್ನು ಏಪ್ರಿಲ್ 14 ರಂದು ಸಾವಿರಾರು ಜನರು ಸೇರಿದ್ದ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಬಂಧಿಸಲಾಗಿತ್ತು.

ಬಾಂದ್ರಾದ 12 ನೇ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 83 ಪುಟಗಳ ಪ್ರಕರಣ ಮುಚ್ಚುವ ವರದಿಯನ್ನು ಸಲ್ಲಿಸಿರುವ ಪೊಲೀಸರು ವಿಶೇಷ ರೈಲುಗಳನ್ನು ಪ್ರಾರಂಭಿಸುವ ಸ್ಥಳ ಮತ್ತು ದಿನವನ್ನು ಕುಲಕರ್ಣಿಯ ಸುದ್ದಿಯಲ್ಲಿ ಉಲ್ಲೇಖಿಸಿಲ್ಲ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಜನರು ರಾಹುಲ್ ಕುಲಕರ್ಣಿ ಅವರ ಸುದ್ದಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವರದಿ ತೀರ್ಮಾನಿಸಿದೆ.

ತಪ್ಪು ಮಾಹಿತಿಗಳ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ವಿವರವಾದ ತನಿಖೆ ನಡೆಸಿದ ನಂತರ ಪೊಲೀಸರು ಜುಲೈ ತಿಂಗಳ ಅಂತ್ಯದಲ್ಲಿ ಮುಚ್ಚುವ ವರದಿಯನ್ನು ಸಲ್ಲಿಸಿದರು. ದೂರುದಾರ ಮತ್ತು ರೈಲ್ವೆ ನಿಲ್ದಾಣಗಳ ಹೊರಗೆ ಸೇರಿದ್ದ ಜನರು ಸೇರಿದಂತೆ 11 ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 14 ರಂದು ಕುಲಕರ್ಣಿ ತಮ್ಮ ಸುದ್ದಿ ಚಾನೆಲ್ ಎಬಿಪಿ ಮಝಾದಲ್ಲಿ, ದಕ್ಷಿಣ-ಮಧ್ಯ ರೈಲ್ವೆ ಇಲಾಖೆ ಶೀಘ್ರದಲ್ಲೇ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ರೈಲು ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಸುದ್ಧಿ ಪ್ರಸಾರ ಮಾಡಿತ್ತು.

ಈ ಸುದ್ದಿ ಬೆಳಿಗ್ಗೆ 9 ರಿಂದ 11:30 ರ ನಡುವೆ ಪ್ರಸಾರವಾಗಿತ್ತು. ಈ ಸುದ್ದಿಯಿಂದ ಪ್ರೇರಿತರಾದ ಜನ ಮಧ್ಯಾಹ್ನ 3:45 ರ ಸುಮಾರಿಗೆ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಒಂದೇ ಸ್ಥಳದಲ್ಲಿ ಹಲವಾರು ಜನರು ಸೇರಲು ಪ್ರಾರಂಭಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಸೇರಿದ್ದ ಬಹುಪಾಲು ಜನರು ಹತ್ತಿರದ ಶಾಸ್ತ್ರಿನಗರ, ಖುರೇಶಿನಗರ, ಮಹಾರಾಷ್ಟ್ರ ನಗರ ಮತ್ತು ನರ್ಗಿಸ್ ದತ್ ನಗರ ಕೊಳೆಗೇರಿ ಪ್ರದೇಶಕ್ಕೆ ಸೇರಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ತೀವ್ರ ಲಾಠಿ ಪ್ರಹಾರ ನಡೆಸಿದ್ದರು.

ಮೂಲತಃ ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ ವಲಸೆ ಕಾರ್ಮಿಕರು ನಿಲ್ದಾಣದ ಹೊರಗೆ ಒಟ್ಟುಗೂಡಿದ್ದರು. ಅವರು ಬಾಂದ್ರಾ ನಿಲ್ದಾಣದ ಸುತ್ತ ಮುತ್ತ ವಾಸಿಸುತ್ತಿದ್ದರು ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಪೊಲೀಸರು ಸಂಗ್ರಹಿಸಿದ ಸಾಕ್ಷಿ ಸಾಕ್ಷ್ಯಗಳು ಕುಲಕರ್ಣಿಯ ಸುದ್ದಿಗಳನ್ನು ವೀಕ್ಷಿಸಿಲ್ಲ ಎಂದು ಹೇಳಿಕೊಂಡಿವೆ. ವಾಸ್ತವದಲ್ಲಿ ತಮ್ಮ ನಿವಾಸದ ಸುತ್ತಲೂ ಬಾಯಿಂದ ಬಾಯಿಗೆ ಹರಡಿದ ಸಂಭಾಷಣೆಗಳ ಆಧಾರದ ಮೇಲೆ ಒಟ್ಟುಗೂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಬಾಂದ್ರಾ ವೆಸ್ಟರ್ನ್ ರೈಲ್ವೆ ನಿಲ್ದಾಣವು ಸ್ಥಳೀಯ ರೈಲುಗಳನ್ನು ಮಾತ್ರ ಓಡಿಸುತ್ತದೆ ಎಂಬುದು ಸಾಮಾನ್ಯ ತಿಳುವಳಿಕೆ. ಇನ್ನೊಂದು ರೈಲು ನಿಲ್ದಾಣ ಬಾಂದ್ರಾ ಟರ್ಮಿನಸ್ ಹೊರರಾಜ್ಯದ ರೈಲುಗಳಿಗೆ ಮೀಸಲಾಗಿರುತ್ತದೆ. ಈ ಹೊರ ರಾಜ್ಯದ ರೈಲು ನಿಲ್ದಾಣದಲ್ಲಿ ಜನಸಮೂಹ ಸೇರಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಜನಸಮೂಹ ಸೇರುತ್ತಿದ್ದಂತೆಯೇ, ಮಹಾರಾಷ್ಟ್ರ ರಾಜ್ಯ ಸರ್ಕಾರವು, ಎಬಿಪಿ ಮಝಾ ಸುದ್ದಿ ಸಂಸ್ಥೆ ಮತ್ತು ಕುಲಕರ್ಣಿಯನ್ನು ವದಂತಿಯನ್ನು ಹುಟ್ಟುಹಾಕಿದೆ ಎಂದು ಟೀಕಿಸಿತ್ತು. ಸಾಂಕ್ರಾಮಿಕ ಸಮಯದಲ್ಲಿ ಜನರ ಅವ್ಯವಸ್ಥೆ ಮತ್ತು ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದ ಕಾರಣಕ್ಕಾಗಿ ಕುಲಕರ್ಣಿಯ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಉಸ್ಮಾನಾಬಾದ್ ನಿವಾಸಿ ಕುಲಕರ್ಣಿಯನ್ನು ಬಂಧಿಸಿ ಮುಂಬೈಗೆ ಕರೆತಂದು ಒಂದು ದಿನ ಬಂಧನದಲ್ಲಿಡಲಾಗಿತ್ತು.

ಅಂತಿಮ ವರದಿಯಲ್ಲಿ, ಪೊಲೀಸರು ವದಂತಿಯನ್ನು ದುರುಪಯೋಗ ಮಾಡಿದ್ದಕ್ಕಾಗಿ ವಿನಯ್ ದುಬೆ ಎಂಬ ಇನ್ನೊಬ್ಬ ವ್ಯಕ್ತಿಯ ಮೇಲೆ ಆರೋಪ ಹೊರಿಸಿದ್ದಾರೆ. ದುಬೆಯ ಪ್ರಚೋದನೆಯನ್ನು ಅನುಸರಿಸಿ ಜನಸಮೂಹವು ಒಟ್ಟುಗೂಡಿದೆ. ಇಲ್ಲಿ ಕುಲಕರ್ಣಿಯ ಪಾತ್ರವಿಲ್ಲ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಕನಿಷ್ಠ 15 ಇತರ ವರದಿಗಾರರ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಕೊರೊನಾ ಎದುರಿಸಲು ರಾಜ್ಯ ಸರ್ಕಾರದ ವಿಫಲತೆ ಮತ್ತು ಸಾಮಾನ್ಯ ಜನರು ಮತ್ತು ಕೊರೊನಾ ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ಮಾಡಿದ ಹೆಚ್ಚಿನ ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸುಮಾರು ಎರಡು ದಶಕಗಳನ್ನು ಕಳೆದಿರುವ ಕುಲಕರ್ಣಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ಸಲ್ಲಿಸಿ, ರಾಜ್ಯದ ನಿರ್ಧಾರವನ್ನು ವಿರೋಧಿಸಿದ್ದರು. ಅವರು ಮಾಡಿದ್ದ ಸುದ್ಧಿ, ರೈಲ್ವೆ ಇಲಾಖೆಯಿಂದ ದೊರೆತ ವಿಶ್ವಾಸಾರ್ಹ ಅಧಿಕೃತ ಮೂಲವನ್ನು ಆಧರಿಸಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರು ಮತ್ತು ಗೃಹ ಇಲಾಖೆ ಸುದ್ದಿಯ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಆಸಕ್ತಿ ತೋರದೆ ನನ್ನನ್ನು ಬಂಧಿಸಿದ್ದರು. ಬಾಂದ್ರಾ  ನಿಲ್ದಾಣದಿಂದ ಯಾವುದೇ ಹೊರ ರಾಜ್ಯದ ರೈಲುಗಳನ್ನು ಓಡಿಸುವುದಿಲ್ಲ ಎಂದು ಮುಂಬೈ ನಲ್ಲಿರುವ ಯಾರಿಗಾದರೂ ತಿಳಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆಗಾರರ ​​ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು, ನನ್ನನ್ನು ಬಲಿಪಶುವನ್ನಾಗಿ ಮಾಡಿ, ಬಂಧಿಸುವ ಮೂಲಕ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: Fact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...