Homeಮುಖಪುಟನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

- Advertisement -
- Advertisement -

ರೈಲ್ವೆ ಇಲಾಖೆ ಪ್ರಾರಂಭಿಸಲಿರುವ ವಿಶೇಷ ಪ್ರಯಾಣಿಕ ರೈಲು ಸೇವೆಯ ಬಗ್ಗೆ “ನಕಲಿ ಸುದ್ದಿ” ಪ್ರಸಾರ ಮಾಡಿದ್ದಕ್ಕಾಗಿ 43 ವರ್ಷದ ಪತ್ರಕರ್ತ ರಾಹುಲ್ ಕುಲಕರ್ಣಿಯನ್ನು ಮುಂಬೈ ಪೊಲೀಸರು ಬಂಧಿಸಿದ ನಾಲ್ಕು ತಿಂಗಳ ನಂತರ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತರನ್ನಾಗಿ ಮಾಡಲಾಗಿದೆ.

ಪ್ರಮುಖ ಮರಾಠಿ ಸುದ್ದಿ ಚಾನೆಲ್ ಎಬಿಪಿ ಮಝಾದ ಕಾರ್ಯನಿರ್ವಾಹಕ ಸಂಪಾದಕ ಕುಲಕರ್ಣಿಯನ್ನು ಏಪ್ರಿಲ್ 14 ರಂದು ಸಾವಿರಾರು ಜನರು ಸೇರಿದ್ದ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಬಂಧಿಸಲಾಗಿತ್ತು.

ಬಾಂದ್ರಾದ 12 ನೇ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 83 ಪುಟಗಳ ಪ್ರಕರಣ ಮುಚ್ಚುವ ವರದಿಯನ್ನು ಸಲ್ಲಿಸಿರುವ ಪೊಲೀಸರು ವಿಶೇಷ ರೈಲುಗಳನ್ನು ಪ್ರಾರಂಭಿಸುವ ಸ್ಥಳ ಮತ್ತು ದಿನವನ್ನು ಕುಲಕರ್ಣಿಯ ಸುದ್ದಿಯಲ್ಲಿ ಉಲ್ಲೇಖಿಸಿಲ್ಲ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಜನರು ರಾಹುಲ್ ಕುಲಕರ್ಣಿ ಅವರ ಸುದ್ದಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವರದಿ ತೀರ್ಮಾನಿಸಿದೆ.

ತಪ್ಪು ಮಾಹಿತಿಗಳ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ವಿವರವಾದ ತನಿಖೆ ನಡೆಸಿದ ನಂತರ ಪೊಲೀಸರು ಜುಲೈ ತಿಂಗಳ ಅಂತ್ಯದಲ್ಲಿ ಮುಚ್ಚುವ ವರದಿಯನ್ನು ಸಲ್ಲಿಸಿದರು. ದೂರುದಾರ ಮತ್ತು ರೈಲ್ವೆ ನಿಲ್ದಾಣಗಳ ಹೊರಗೆ ಸೇರಿದ್ದ ಜನರು ಸೇರಿದಂತೆ 11 ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 14 ರಂದು ಕುಲಕರ್ಣಿ ತಮ್ಮ ಸುದ್ದಿ ಚಾನೆಲ್ ಎಬಿಪಿ ಮಝಾದಲ್ಲಿ, ದಕ್ಷಿಣ-ಮಧ್ಯ ರೈಲ್ವೆ ಇಲಾಖೆ ಶೀಘ್ರದಲ್ಲೇ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ರೈಲು ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಸುದ್ಧಿ ಪ್ರಸಾರ ಮಾಡಿತ್ತು.

ಈ ಸುದ್ದಿ ಬೆಳಿಗ್ಗೆ 9 ರಿಂದ 11:30 ರ ನಡುವೆ ಪ್ರಸಾರವಾಗಿತ್ತು. ಈ ಸುದ್ದಿಯಿಂದ ಪ್ರೇರಿತರಾದ ಜನ ಮಧ್ಯಾಹ್ನ 3:45 ರ ಸುಮಾರಿಗೆ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಒಂದೇ ಸ್ಥಳದಲ್ಲಿ ಹಲವಾರು ಜನರು ಸೇರಲು ಪ್ರಾರಂಭಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಸೇರಿದ್ದ ಬಹುಪಾಲು ಜನರು ಹತ್ತಿರದ ಶಾಸ್ತ್ರಿನಗರ, ಖುರೇಶಿನಗರ, ಮಹಾರಾಷ್ಟ್ರ ನಗರ ಮತ್ತು ನರ್ಗಿಸ್ ದತ್ ನಗರ ಕೊಳೆಗೇರಿ ಪ್ರದೇಶಕ್ಕೆ ಸೇರಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ತೀವ್ರ ಲಾಠಿ ಪ್ರಹಾರ ನಡೆಸಿದ್ದರು.

ಮೂಲತಃ ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ ವಲಸೆ ಕಾರ್ಮಿಕರು ನಿಲ್ದಾಣದ ಹೊರಗೆ ಒಟ್ಟುಗೂಡಿದ್ದರು. ಅವರು ಬಾಂದ್ರಾ ನಿಲ್ದಾಣದ ಸುತ್ತ ಮುತ್ತ ವಾಸಿಸುತ್ತಿದ್ದರು ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಪೊಲೀಸರು ಸಂಗ್ರಹಿಸಿದ ಸಾಕ್ಷಿ ಸಾಕ್ಷ್ಯಗಳು ಕುಲಕರ್ಣಿಯ ಸುದ್ದಿಗಳನ್ನು ವೀಕ್ಷಿಸಿಲ್ಲ ಎಂದು ಹೇಳಿಕೊಂಡಿವೆ. ವಾಸ್ತವದಲ್ಲಿ ತಮ್ಮ ನಿವಾಸದ ಸುತ್ತಲೂ ಬಾಯಿಂದ ಬಾಯಿಗೆ ಹರಡಿದ ಸಂಭಾಷಣೆಗಳ ಆಧಾರದ ಮೇಲೆ ಒಟ್ಟುಗೂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಬಾಂದ್ರಾ ವೆಸ್ಟರ್ನ್ ರೈಲ್ವೆ ನಿಲ್ದಾಣವು ಸ್ಥಳೀಯ ರೈಲುಗಳನ್ನು ಮಾತ್ರ ಓಡಿಸುತ್ತದೆ ಎಂಬುದು ಸಾಮಾನ್ಯ ತಿಳುವಳಿಕೆ. ಇನ್ನೊಂದು ರೈಲು ನಿಲ್ದಾಣ ಬಾಂದ್ರಾ ಟರ್ಮಿನಸ್ ಹೊರರಾಜ್ಯದ ರೈಲುಗಳಿಗೆ ಮೀಸಲಾಗಿರುತ್ತದೆ. ಈ ಹೊರ ರಾಜ್ಯದ ರೈಲು ನಿಲ್ದಾಣದಲ್ಲಿ ಜನಸಮೂಹ ಸೇರಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಜನಸಮೂಹ ಸೇರುತ್ತಿದ್ದಂತೆಯೇ, ಮಹಾರಾಷ್ಟ್ರ ರಾಜ್ಯ ಸರ್ಕಾರವು, ಎಬಿಪಿ ಮಝಾ ಸುದ್ದಿ ಸಂಸ್ಥೆ ಮತ್ತು ಕುಲಕರ್ಣಿಯನ್ನು ವದಂತಿಯನ್ನು ಹುಟ್ಟುಹಾಕಿದೆ ಎಂದು ಟೀಕಿಸಿತ್ತು. ಸಾಂಕ್ರಾಮಿಕ ಸಮಯದಲ್ಲಿ ಜನರ ಅವ್ಯವಸ್ಥೆ ಮತ್ತು ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದ ಕಾರಣಕ್ಕಾಗಿ ಕುಲಕರ್ಣಿಯ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಉಸ್ಮಾನಾಬಾದ್ ನಿವಾಸಿ ಕುಲಕರ್ಣಿಯನ್ನು ಬಂಧಿಸಿ ಮುಂಬೈಗೆ ಕರೆತಂದು ಒಂದು ದಿನ ಬಂಧನದಲ್ಲಿಡಲಾಗಿತ್ತು.

ಅಂತಿಮ ವರದಿಯಲ್ಲಿ, ಪೊಲೀಸರು ವದಂತಿಯನ್ನು ದುರುಪಯೋಗ ಮಾಡಿದ್ದಕ್ಕಾಗಿ ವಿನಯ್ ದುಬೆ ಎಂಬ ಇನ್ನೊಬ್ಬ ವ್ಯಕ್ತಿಯ ಮೇಲೆ ಆರೋಪ ಹೊರಿಸಿದ್ದಾರೆ. ದುಬೆಯ ಪ್ರಚೋದನೆಯನ್ನು ಅನುಸರಿಸಿ ಜನಸಮೂಹವು ಒಟ್ಟುಗೂಡಿದೆ. ಇಲ್ಲಿ ಕುಲಕರ್ಣಿಯ ಪಾತ್ರವಿಲ್ಲ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಕನಿಷ್ಠ 15 ಇತರ ವರದಿಗಾರರ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಕೊರೊನಾ ಎದುರಿಸಲು ರಾಜ್ಯ ಸರ್ಕಾರದ ವಿಫಲತೆ ಮತ್ತು ಸಾಮಾನ್ಯ ಜನರು ಮತ್ತು ಕೊರೊನಾ ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ಮಾಡಿದ ಹೆಚ್ಚಿನ ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸುಮಾರು ಎರಡು ದಶಕಗಳನ್ನು ಕಳೆದಿರುವ ಕುಲಕರ್ಣಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ಸಲ್ಲಿಸಿ, ರಾಜ್ಯದ ನಿರ್ಧಾರವನ್ನು ವಿರೋಧಿಸಿದ್ದರು. ಅವರು ಮಾಡಿದ್ದ ಸುದ್ಧಿ, ರೈಲ್ವೆ ಇಲಾಖೆಯಿಂದ ದೊರೆತ ವಿಶ್ವಾಸಾರ್ಹ ಅಧಿಕೃತ ಮೂಲವನ್ನು ಆಧರಿಸಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರು ಮತ್ತು ಗೃಹ ಇಲಾಖೆ ಸುದ್ದಿಯ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಆಸಕ್ತಿ ತೋರದೆ ನನ್ನನ್ನು ಬಂಧಿಸಿದ್ದರು. ಬಾಂದ್ರಾ  ನಿಲ್ದಾಣದಿಂದ ಯಾವುದೇ ಹೊರ ರಾಜ್ಯದ ರೈಲುಗಳನ್ನು ಓಡಿಸುವುದಿಲ್ಲ ಎಂದು ಮುಂಬೈ ನಲ್ಲಿರುವ ಯಾರಿಗಾದರೂ ತಿಳಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆಗಾರರ ​​ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು, ನನ್ನನ್ನು ಬಲಿಪಶುವನ್ನಾಗಿ ಮಾಡಿ, ಬಂಧಿಸುವ ಮೂಲಕ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: Fact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...