Homeಮುಖಪುಟಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

 ’ಅರ್ನಾಬ್ ಆತ್ಮಹತ್ಯೆ ಪ್ರಕರಣದ ಆರೋಪಿ. ಅವರ ಬಂಧನವನ್ನು ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಪತಿ ಮತ್ತು ಇತರ ಪತ್ರಕರ್ತರು ಕಾರ್ಯಕರ್ತರ ಬಂಧನವನ್ನು ಏಕೆ ಪ್ರಶ್ನಿಸುತ್ತಿಲ್ಲ?’

- Advertisement -
- Advertisement -

ರಿಪಬ್ಲಿಕ್ ಟಿವಿ ವ್ಯವಸ್ಥಾಪಕ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಪರವಾಗಿ ಮಾತನಾಡುತ್ತಿರುವ ಬಿಜೆಪಿ ನಾಯಕರ ದ್ವಿನೀತಿ ಬಗ್ಗೆ ಕೇರಳ ಪತ್ರಕರ್ತನ ಪತ್ನಿ ಟೀಕಿಸಿದ್ದಾರೆ. ಕಳೆದ  36 ದಿನಗಳಿಂದ ಉತ್ತರ ಪ್ರದೇಶದ ಜೈಲಿನಲ್ಲಿರುವ ಕೇರಳ ಮೂಲದ ಪತ್ರಕರ್ತನ ಬಂಧನದ ಬಗ್ಗೆ ಮತಾನಾಡದ ಬಿಜೆಪಿ ನಾಯಕರ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

36 ದಿನಗಳ ಹಿಂದೆ ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಉತ್ತರಪ್ರದೇಶಕ್ಕೆ ತೆರಳಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಪರ್ತಕರ್ತ ಸಿದ್ದೀಕ್ ಕಪ್ಪನ್ ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ತನ್ನ ಪತಿ ಆತನ ಕೆಲಸವನ್ನು ಮಾಡಲು ತೆರಳಿದ್ದಾಗ ಅವರನ್ನು ಬಂಧಿಸಲಾಗಿದೆ ಎಂದು ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರ ಪತ್ನಿ ರೈಹನಾಥ್ ಕಪ್ಪನ್ ಹೇಳಿದ್ದಾರೆ. ಬಿಜೆಪಿ ನಾಯಕರ ಈ ದ್ವಿನೀತಿ ಏಕೆ..? ಗೋಸ್ವಾಮಿ ಆತ್ಮಹತ್ಯೆ ಪ್ರಕರಣದ ಆರೋಪಿ. ಅವರ ಬಂಧನವನ್ನು ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಪತಿ ಮತ್ತು ಇತರ ಪತ್ರಕರ್ತರು ಮತ್ತು ಕಾರ್ಯಕರ್ತರ ಬಂಧನವನ್ನು ಈ ಜನರು ಏಕೆ ಪ್ರಶ್ನಿಸುತ್ತಿಲ್ಲ? ಎಂದು ರೈಹನಾಥ್ ಪ್ರಶ್ನಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: PFI ಸಂಬಂಧ ಆರೋಪ; ಹತ್ರಾಸ್‌ಗೆ ಹೊರಟ ಕೇರಳದ ಪತ್ರಕರ್ತ ಸೇರಿ ಮೂವರ ಬಂಧನ

PFI ಜೊತೆಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ, ಕೇರಳದ ಮಲಪ್ಪುರಂ ಮೂಲದ 41 ವರ್ಷದ ಸಿದ್ದಿಕ್ ಅವರನ್ನು ಇತರ ಮೂವರೊಂದಿಗೆ ಉತ್ತರ ಪ್ರದೇಶ ಪೊಲೀಸರು ಮಥುರಾದಲ್ಲಿ ಬಂಧಿಸಿದ್ದರು. ಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ದಂಡ ಸಂಹಿತೆಯ ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

’ದೆಹಲಿಯಲ್ಲಿ ನಮ್ಮವರೇ ಆದ ಸಚಿವ ವಿ.ಮುರಳೀಧರನ್, ಅರ್ನಾಬ್ ಗೋಸ್ವಾಮಿಯ ಬಂಧನವನ್ನು ಖಂಡಿಸಿ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಕರೆದರು. ಆದರೆ ಯುಪಿ ಜೈಲಿನಲ್ಲಿ ಬಂಧಿಸಲ್ಪಟ್ಟಿರುವ ತನ್ನ ಸ್ವಂತ ರಾಜ್ಯದ ವ್ಯಕ್ತಿಯ ಬಗ್ಗೆ ಅವರು ಯೋಚಿಸಲಿಲ್ಲ” ಎಂದು ರೈಹನಾಥ್ ವಿಷಾದ ವ್ಯಕ್ತಪಡಿಸಿದ್ದಾರೆ.

ಕಪ್ಪನ್ ದೀರ್ಘಕಾಲದಿಂದ ಮಧುಮೇಹದಿಂದ ಬಳಲುತ್ತಿದ್ದಾರೆ. ಅವರಿಗೆ ನಿಯಮಿತವಾಗಿ ಔಷಧಿ ಮತ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ. ಅವರಿಗೆ ವೈದ್ಯಕೀಯ ಸವಲತ್ತು ಸಿಗುತ್ತಿದ್ದೇಯೋ ಇಲ್ಲವೋ ತಿಳಿದಿಲ್ಲ.  ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಸುಪ್ರೀಂ ಕೋರ್ಟ್‌‌ಗೆ  ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿ ಒಂದೇ ಈಗ ನಮಗೆ ಉಳಿದಿರುವ ಏಕೈಕ ನಂಬಿಕೆ” ಎಂದಿದ್ದಾರೆ. ಅರ್ಜಿ ವಿಚಾರಣೆ ನವೆಂಬರ್‌ 16 ರಂದು ನಡೆಯಲಿದೆ.

ಇದನ್ನೂ ಓದಿ: ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ಇನ್ನು, ಬಂಧಿತ ಪತ್ರಕರ್ತ ಕಪ್ಪನ್ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ ಎಂದು ವರದಿ ಮಾಡುತ್ತಿರುವ ಮಾಧ್ಯಮಗಳ ಮೇಲೆ ರೈಹನಾಥ್ ವಾಗ್ದಾಳಿ ನಡೆಸಿದ್ದಾರೆ. “ಎಂಟು ವರ್ಷಗಳ ಹಿಂದೆ ಪ್ರಾರಂಭವಾದ ನಮ್ಮ ಮನೆಯ ನಿರ್ಮಾಣವನ್ನು ಪೂರ್ಣಗೊಳಿಸಲು ಇನ್ನೂ ನಮಗೆ ಸಾಧ್ಯವಾಗಲಿಲ್ಲ. ನಮ್ಮ ಬಳಿ ಏನು ಇರುವುದೋ ಅಷ್ಟರಲ್ಲೇ ಖರ್ಚು ಮಾಡಬೇಕು ಎಂದು ನಂಬಿರುವ ನನ್ನ ಪತಿ ಬ್ಯಾಂಕ್ ಸಾಲವನ್ನು ಸಹ ತೆಗೆದುಕೊಂಡಿಲ್ಲ” ಎಂದು ಅವರು ಹೇಳಿದರು.

“ನಾನು ಕುಟುಂಬ ಮತ್ತು ಸ್ನೇಹಿತರ ಸಹಾಯದಿಂದ ಬದುಕುಳಿದಿದ್ದೇನೆ. ಆದರೆ ಈ ಸಮಯದಲ್ಲಿ ನನಗೆ ನನ್ನ ಗಂಡನ ಬಗ್ಗೆಯೇ ಆತಂಕ ಇದೆ. ಅವರು ಆದಷ್ಟು ಬೇಗನೆ ಮನೆಗೆ ಹಿಂದಿರುಗಬೇಕೆಂದು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಸಿದ್ದೀಕ್ ಕಪ್ಪನ್ ಪಕತ್ರಕರ್ತರಾಗಿದ್ದು, ’ಹತ್ರಾಸ್‌‌ನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿಗಾಗಿ ಹೊರಟಿದ್ದರು’ ಎಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಅವರು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ದೆಹಲಿ ಘಟಕದ ಕಾರ್ಯದರ್ಶಿಯೂ ಆಗಿದ್ದಾರೆ.


ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...