Homeಮುಖಪುಟಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

 ’ಅರ್ನಾಬ್ ಆತ್ಮಹತ್ಯೆ ಪ್ರಕರಣದ ಆರೋಪಿ. ಅವರ ಬಂಧನವನ್ನು ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಪತಿ ಮತ್ತು ಇತರ ಪತ್ರಕರ್ತರು ಕಾರ್ಯಕರ್ತರ ಬಂಧನವನ್ನು ಏಕೆ ಪ್ರಶ್ನಿಸುತ್ತಿಲ್ಲ?’

- Advertisement -
- Advertisement -

ರಿಪಬ್ಲಿಕ್ ಟಿವಿ ವ್ಯವಸ್ಥಾಪಕ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಪರವಾಗಿ ಮಾತನಾಡುತ್ತಿರುವ ಬಿಜೆಪಿ ನಾಯಕರ ದ್ವಿನೀತಿ ಬಗ್ಗೆ ಕೇರಳ ಪತ್ರಕರ್ತನ ಪತ್ನಿ ಟೀಕಿಸಿದ್ದಾರೆ. ಕಳೆದ  36 ದಿನಗಳಿಂದ ಉತ್ತರ ಪ್ರದೇಶದ ಜೈಲಿನಲ್ಲಿರುವ ಕೇರಳ ಮೂಲದ ಪತ್ರಕರ್ತನ ಬಂಧನದ ಬಗ್ಗೆ ಮತಾನಾಡದ ಬಿಜೆಪಿ ನಾಯಕರ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

36 ದಿನಗಳ ಹಿಂದೆ ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಉತ್ತರಪ್ರದೇಶಕ್ಕೆ ತೆರಳಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಪರ್ತಕರ್ತ ಸಿದ್ದೀಕ್ ಕಪ್ಪನ್ ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ತನ್ನ ಪತಿ ಆತನ ಕೆಲಸವನ್ನು ಮಾಡಲು ತೆರಳಿದ್ದಾಗ ಅವರನ್ನು ಬಂಧಿಸಲಾಗಿದೆ ಎಂದು ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರ ಪತ್ನಿ ರೈಹನಾಥ್ ಕಪ್ಪನ್ ಹೇಳಿದ್ದಾರೆ. ಬಿಜೆಪಿ ನಾಯಕರ ಈ ದ್ವಿನೀತಿ ಏಕೆ..? ಗೋಸ್ವಾಮಿ ಆತ್ಮಹತ್ಯೆ ಪ್ರಕರಣದ ಆರೋಪಿ. ಅವರ ಬಂಧನವನ್ನು ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಪತಿ ಮತ್ತು ಇತರ ಪತ್ರಕರ್ತರು ಮತ್ತು ಕಾರ್ಯಕರ್ತರ ಬಂಧನವನ್ನು ಈ ಜನರು ಏಕೆ ಪ್ರಶ್ನಿಸುತ್ತಿಲ್ಲ? ಎಂದು ರೈಹನಾಥ್ ಪ್ರಶ್ನಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: PFI ಸಂಬಂಧ ಆರೋಪ; ಹತ್ರಾಸ್‌ಗೆ ಹೊರಟ ಕೇರಳದ ಪತ್ರಕರ್ತ ಸೇರಿ ಮೂವರ ಬಂಧನ

PFI ಜೊತೆಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಿ, ಕೇರಳದ ಮಲಪ್ಪುರಂ ಮೂಲದ 41 ವರ್ಷದ ಸಿದ್ದಿಕ್ ಅವರನ್ನು ಇತರ ಮೂವರೊಂದಿಗೆ ಉತ್ತರ ಪ್ರದೇಶ ಪೊಲೀಸರು ಮಥುರಾದಲ್ಲಿ ಬಂಧಿಸಿದ್ದರು. ಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ದಂಡ ಸಂಹಿತೆಯ ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

’ದೆಹಲಿಯಲ್ಲಿ ನಮ್ಮವರೇ ಆದ ಸಚಿವ ವಿ.ಮುರಳೀಧರನ್, ಅರ್ನಾಬ್ ಗೋಸ್ವಾಮಿಯ ಬಂಧನವನ್ನು ಖಂಡಿಸಿ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಕರೆದರು. ಆದರೆ ಯುಪಿ ಜೈಲಿನಲ್ಲಿ ಬಂಧಿಸಲ್ಪಟ್ಟಿರುವ ತನ್ನ ಸ್ವಂತ ರಾಜ್ಯದ ವ್ಯಕ್ತಿಯ ಬಗ್ಗೆ ಅವರು ಯೋಚಿಸಲಿಲ್ಲ” ಎಂದು ರೈಹನಾಥ್ ವಿಷಾದ ವ್ಯಕ್ತಪಡಿಸಿದ್ದಾರೆ.

ಕಪ್ಪನ್ ದೀರ್ಘಕಾಲದಿಂದ ಮಧುಮೇಹದಿಂದ ಬಳಲುತ್ತಿದ್ದಾರೆ. ಅವರಿಗೆ ನಿಯಮಿತವಾಗಿ ಔಷಧಿ ಮತ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ. ಅವರಿಗೆ ವೈದ್ಯಕೀಯ ಸವಲತ್ತು ಸಿಗುತ್ತಿದ್ದೇಯೋ ಇಲ್ಲವೋ ತಿಳಿದಿಲ್ಲ.  ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಸುಪ್ರೀಂ ಕೋರ್ಟ್‌‌ಗೆ  ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿ ಒಂದೇ ಈಗ ನಮಗೆ ಉಳಿದಿರುವ ಏಕೈಕ ನಂಬಿಕೆ” ಎಂದಿದ್ದಾರೆ. ಅರ್ಜಿ ವಿಚಾರಣೆ ನವೆಂಬರ್‌ 16 ರಂದು ನಡೆಯಲಿದೆ.

ಇದನ್ನೂ ಓದಿ: ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ಇನ್ನು, ಬಂಧಿತ ಪತ್ರಕರ್ತ ಕಪ್ಪನ್ ಅಪಾರ ಪ್ರಮಾಣದ ಹಣವನ್ನು ಪಡೆದಿದ್ದಾರೆ ಎಂದು ವರದಿ ಮಾಡುತ್ತಿರುವ ಮಾಧ್ಯಮಗಳ ಮೇಲೆ ರೈಹನಾಥ್ ವಾಗ್ದಾಳಿ ನಡೆಸಿದ್ದಾರೆ. “ಎಂಟು ವರ್ಷಗಳ ಹಿಂದೆ ಪ್ರಾರಂಭವಾದ ನಮ್ಮ ಮನೆಯ ನಿರ್ಮಾಣವನ್ನು ಪೂರ್ಣಗೊಳಿಸಲು ಇನ್ನೂ ನಮಗೆ ಸಾಧ್ಯವಾಗಲಿಲ್ಲ. ನಮ್ಮ ಬಳಿ ಏನು ಇರುವುದೋ ಅಷ್ಟರಲ್ಲೇ ಖರ್ಚು ಮಾಡಬೇಕು ಎಂದು ನಂಬಿರುವ ನನ್ನ ಪತಿ ಬ್ಯಾಂಕ್ ಸಾಲವನ್ನು ಸಹ ತೆಗೆದುಕೊಂಡಿಲ್ಲ” ಎಂದು ಅವರು ಹೇಳಿದರು.

“ನಾನು ಕುಟುಂಬ ಮತ್ತು ಸ್ನೇಹಿತರ ಸಹಾಯದಿಂದ ಬದುಕುಳಿದಿದ್ದೇನೆ. ಆದರೆ ಈ ಸಮಯದಲ್ಲಿ ನನಗೆ ನನ್ನ ಗಂಡನ ಬಗ್ಗೆಯೇ ಆತಂಕ ಇದೆ. ಅವರು ಆದಷ್ಟು ಬೇಗನೆ ಮನೆಗೆ ಹಿಂದಿರುಗಬೇಕೆಂದು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಸಿದ್ದೀಕ್ ಕಪ್ಪನ್ ಪಕತ್ರಕರ್ತರಾಗಿದ್ದು, ’ಹತ್ರಾಸ್‌‌ನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿಗಾಗಿ ಹೊರಟಿದ್ದರು’ ಎಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಅವರು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ದೆಹಲಿ ಘಟಕದ ಕಾರ್ಯದರ್ಶಿಯೂ ಆಗಿದ್ದಾರೆ.


ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...