Homeಮುಖಪುಟಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

- Advertisement -
- Advertisement -

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಭೆ ನಡೆಸಿ ಅಪ್ರಾಪ್ತರು ಸೇರಿದಂತೆ ಬಂಧಿತ ಕಾರ್ಮಿಕರ ಅಂತರರಾಜ್ಯ ಕಳ್ಳಸಾಗಣೆ ಸಮಸ್ಯೆಯನ್ನು ಪರಿಹರಿಸಲು ಪ್ರಸ್ತಾವನೆಯನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಉತ್ತರ ಪ್ರದೇಶದಲ್ಲಿ ಬಿಡುಗಡೆಯಾದ 5,264 ಬಂಧಿತ ಕಾರ್ಮಿಕರಲ್ಲಿ 1,101 ಮಂದಿ ಮಾತ್ರ ತಕ್ಷಣದ ಆರ್ಥಿಕ ನೆರವು ಪಡೆದಿದ್ದಾರೆ ಎಂಬ ಅಂಕಿಅಂಶಗಳನ್ನು “ಆತಂಕಕಾರಿ” ಎಂದು ಬಣ್ಣಿಸಿದೆ. ಕಾರ್ಮಿಕರ ಕಳ್ಳ ಸಾಗಾಣಿಕೆ

ಬಂಧಿತ ಕಾರ್ಮಿಕರಾಗಿ ಕಳ್ಳಸಾಗಣೆ ಮಾಡಲಾದ ಜನರ ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಮುಂದಿನ ವಿಚಾರಣೆಯನ್ನು ಆರು ವಾರಗಳ ನಂತರ ಸುಪ್ರಿಂಕೋರ್ಟ್ ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೆಲವು ಪ್ರಕರಣಗಳಲ್ಲಿ ಅಪ್ರಾಪ್ತರನ್ನು ಅವರ ತವರು ರಾಜ್ಯಗಳಿಂದ ಕರೆದೊಯ್ದು ಪಕ್ಕದ ರಾಜ್ಯಗಳಲ್ಲಿ ಬಂಧಿಸಿ ದುಡಿಮೆಗೆ ಬಲವಂತಪಡಿಸಲಾಗಿತ್ತು. ಇದರಲ್ಲಿ ರಕ್ಷಿಸಿಸಲ್ಪಟ್ಟ ಮಕ್ಕಳಿಗೆ ತಕ್ಷಣದ ಆರ್ಥಿಕ ನೆರವು ವಿತರಣೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. “ಮಕ್ಕಳ ಅಂತರ-ರಾಜ್ಯ ಕಳ್ಳಸಾಗಣೆ ಸಮಸ್ಯೆಯನ್ನು ಒಕ್ಕೂಟ ಸರ್ಕಾರ ಮತ್ತು ಎಲ್ಲಾ ರಾಜ್ಯಗಳು ಏಕೀಕೃತ ರೀತಿಯಲ್ಲಿ ಪರಿಹರಿಸಬೇಕಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ” ಎಂದು ಪೀಠ ಹೇಳಿದೆ.

ಆದ್ದರಿಂದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಯದರ್ಶಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ತಮ್ಮ ಸಹವರ್ತಿಗಳೊಂದಿಗೆ ಸಭೆ ನಡೆಸಿ ಸಾಮಾಜಿಕ ಅನಿಷ್ಟವನ್ನು ಪರಿಹರಿಸಲು ಪ್ರಸ್ತಾವನೆಯನ್ನು ರೂಪಿಸುವಂತೆ ನ್ಯಾಯಾಲಯ ಸೂಚಿಸಿದೆ. ರಕ್ಷಿಸಲ್ಪಟ್ಟ ಬಾಲಕಾರ್ಮಿಕರಿಗೆ ತಕ್ಷಣದ ಆರ್ಥಿಕ ನೆರವು ನೀಡುವ ಯೋಜನೆಗೆ ಸಹಾಯ ಮಾಡಲು ಸರಳೀಕೃತ ಕಾರ್ಯವಿಧಾನವನ್ನು ಒಳಗೊಂಡಿರುವ ಪ್ರಸ್ತಾವನೆಯನ್ನು ಬಯಸುತ್ತಿರುವುದಾಗಿ ಪೀಠವು ಹೇಳಿದೆ. ಕಾರ್ಮಿಕರ ಕಳ್ಳ ಸಾಗಾಣಿಕೆ

“ಪ್ರಕರಣದ ಪ್ರಾಮುಖ್ಯತೆಯನ್ನು ಪರಿಗಣಿಸಿ, ಅಟಾರ್ನಿ ಜನರಲ್ ಅವರ ಸಹಾಯವನ್ನು ಪಡೆಯುವುದು ಸೂಕ್ತವೆಂದು ನಾವು ಕಂಡುಕೊಂಡಿದ್ದೇವೆ. ಆದ್ದರಿಂದ, ಈ ವಿಷಯದಲ್ಲಿ ನಮಗೆ ಸಹಾಯ ಮಾಡಲು ನಾವು ಅಟಾರ್ನಿ ಜನರಲ್ ಅವರನ್ನು ಕೋರುತ್ತೇವೆ” ಎಂದು ಕೋರ್ಟ್ ಹೇಳಿದೆ. ಕಾರ್ಯವಿಧಾನವನ್ನು ಅಂತಿಮಗೊಳಿಸುವಾಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು (ಎನ್‌ಎಚ್‌ಆರ್‌ಸಿ) ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ವಿಚಾರಣೆಯ ಸಂದರ್ಭದಲ್ಲಿ, ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ರಕ್ಷಿಸಲ್ಪಟ್ಟ ಬಂಧಿತ ಕಾರ್ಮಿಕರಿಗೆ ತಕ್ಷಣದ ಆರ್ಥಿಕ ಸಹಾಯವನ್ನು ವಿತರಿಸುವ ಸಮಸ್ಯೆಯನ್ನು ಸುಪ್ರೀಂಕೋರ್ಟ್ ಗಮನಕ್ಕೆ ತಂದರು. ಉತ್ತರ ಪ್ರದೇಶದ ಅಂಕಿಅಂಶಗಳನ್ನು ಉಲ್ಲೇಖಿಸಿದ ಪೀಠವು, ಬಿಡುಗಡೆಯಾದ 4,100 ಕ್ಕೂ ಹೆಚ್ಚು ಬಂಧಿತ ಕಾರ್ಮಿಕರಿಗೆ ಹಣಕಾಸಿನ ನೆರವು ಸಿಕ್ಕಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಪರಿಷ್ಕರಣೆ | ಮಾನದಂಡಗಳ ಪ್ರಕಾರ ಸರ್ಕಾರ ಕ್ರಮ ಕೈಗೊಂಡಿದೆ : ಸಚಿವ ಮುನಿಯಪ್ಪ

ಬಿಪಿಎಲ್ ಕಾರ್ಡ್ ಪರಿಷ್ಕರಣೆ | ಮಾನದಂಡಗಳ ಪ್ರಕಾರ ಸರ್ಕಾರ ಕ್ರಮ ಕೈಗೊಂಡಿದೆ : ಸಚಿವ ಮುನಿಯಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...