Homeಮುಖಪುಟಡಿಡಿಸಿ ಚುನಾವಣೆ: NIA ಬಂಧಿಸಿದ್ದ ಪಿಡಿಪಿಯ ವಹೀದ್‌ ಪರ್ರಾಗೆ ಜಯ

ಡಿಡಿಸಿ ಚುನಾವಣೆ: NIA ಬಂಧಿಸಿದ್ದ ಪಿಡಿಪಿಯ ವಹೀದ್‌ ಪರ್ರಾಗೆ ಜಯ

ದಕ್ಷಿಣ ಕಾಶ್ಮೀರದಲ್ಲಿ ಪಿಡಿಪಿಯ ಸಂಘಟನೆಗೆ, ವಿಶೇಷವಾಗಿ ಉಗ್ರಗಾಮಿ-ಪೀಡಿತ ಪುಲ್ವಾಮಾದಲ್ಲಿ ಪಕ್ಷ ಸಂಘಟನೆಯಲ್ಲಿ ವಹೀದ್ ಪ್ರಮುಖ ಪಾತ್ರ ವಹಿಸಿದ್ದರು.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕೆಲವೇ ದಿನಗಳಲ್ಲಿ ಎನ್‌ಐಎಯಿಂದ ಬಂಧನಕ್ಕೆ ಒಳಗಾಗಿದ್ದ ಪೀಪಲ್‌ ಡೆಮಾಕ್ರಟಿಕ್‌ ಪಕ್ಷದ (ಪಿಡಿಪಿ) ಯುವ ಘಟಕದ ಅಧ್ಯಕ್ಷ ವಹೀದ್ ಪರ್ರಾ ಡಿಡಿಸಿ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.

ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಯೊಂದಿಗೆ ಜೊತೆ ಸಂಬಂಧ ಹಾಗೂ ಬಂಧನಕ್ಕೊಳಗಾಗಿರುವ ಹಿಜ್ಬುಲ್ ಕಮಾಂಡರ್ ನವೀನ್ ಬಾಬು ಜೊತೆ ನಂಟಿರುವ ಆರೋಪದಲ್ಲಿ ವಹೀದ್‌ ಪರ್ರಾ ಅವರನ್ನು ನವೆಂಬರ್‌ 25ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈಗ  ವಹೀದ್ ಪರ್ರಾ‍ ತಿಹಾರ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮಂಗಳವಾರ (ಡಿ.22) ನಡೆದ ಡಿಡಿಸಿ ಚುನಾವನಾ ಮತ ಏಣಿಕೆಯಲ್ಲಿ ಕ್ಷಿಣ ಕಾಶ್ಮೀರದ ಪುಲ್ವಾಮಾದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಸದಸ್ಯರಾಗಿ ಮೆಹಬೂಬಾ ಮುಫ್ತಿ ಅವರ ಆಪ್ತ ಸಹಾಯಕ ವಹೀದ್‌ ಪರ್ರಾ ಚುನಾಯಿತರಾಗಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

ಪಿಡಿಪಿ ಅಧ್ಯಕ್ಷೆ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಟ್ವಿಟರ್‌ನಲ್ಲಿ ಪಕ್ಷದ ಯುವ ಘಟಕದ ಅಧ್ಯಕ್ಷ ವಹೀದ್ ಅವರನ್ನು ಅಭಿನಂದಿಸಿದ್ದಾರೆ.

 

“ಪಿಡಿಪಿಯ ವಹೀದ್ ಪರ್ರಾ‍ ಮೊದಲ ಚುನಾವಣೆಯಲ್ಲಿ ಭಾರಿ ಅಂತರದ ಮತಗಳಿಂದ ಜಯಗಳಿಸಿದ್ದಾರೆ. ವಹೀದ್ ನಾಮಪತ್ರ ಸಲ್ಲಿಸಿದ ಕೂಡಲೇ ಆಧಾರ ರಹಿತ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದರೂ ಸಹ ಜನರು ತಮ್ಮ ಪ್ರೀತಿ ಮತ್ತು ನಂಬಿಕೆಯನ್ನು ತೋರಿಸಿದ್ದಾರೆ. ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ಭಾವಿಸುತ್ತೇನೆ” ಎಂದು ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿದ್ದಾರೆ.

ಪೀಪಲ್ಸ್‌‌ ಅಲಯನ್ಸ್‌ ಫಾರ್‌ ಗುಪ್ಕರ್‌ ಡಿಕ್ಲೆರೇಷನ್‌ (PAGD) ಅಭ್ಯರ್ಥಿಯಾಗಿ ವಹೀದ್‌ ಚುನಾವಣಾ ಕಣಕ್ಕಿಳಿದಿದ್ದರು. ಬಿಜೆಪಿಯ ಸಜ್ದಾ ಅಹ್ಮದ್ ರೈನಾ ವಿರುದ್ಧ ದೊಡ್ಡ ಅಂತರದಿಂದ ಗೆದ್ದಿದ್ದಾರೆ. ವಹೀದ್‌ 1,322 ಮತಗಳನ್ನು ಪಡೆದರೆ, ರೈನಾ ಕೇವಲ 314 ಮತ ಗಳಿಸಿದ್ದಾರೆ.

ದಕ್ಷಿಣ ಕಾಶ್ಮೀರದಲ್ಲಿ ಪಿಡಿಪಿಯ ಸಂಘಟನೆಗೆ, ವಿಶೇಷವಾಗಿ ಉಗ್ರಗಾಮಿ-ಪೀಡಿತ ಪುಲ್ವಾಮಾದಲ್ಲಿ ಪಕ್ಷ ಸಂಘಟನೆಯಲ್ಲಿ ವಹೀದ್ ಪ್ರಮುಖ ಪಾತ್ರ ವಹಿಸಿದ್ದರು. ಇಲ್ಲಿಂದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ನವೆಂಬರ್‌ 20 ರಂದು ನಾಮಪತ್ರ ಸಲ್ಲಿಸಿದರು. ನವೆಂಬರ್‌ 25ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಮೆಹಬೂಬ ಮುಫ್ತಿ ಆಪ್ತ ಸಹಾಯಕನನ್ನು ಬಂಧಿಸಿದ ಎನ್‌ಐಎ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...