Homeಮುಖಪುಟಪ.ಬಂಗಾಳ: ಎನ್‌ಐಎ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಪ.ಬಂಗಾಳ: ಎನ್‌ಐಎ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ.ಬಂಗಾಳದಲ್ಲಿ ಎನ್‌ಐಎ ಅಧಿಕಾರಿಗಳ ಮೇಲೆ ದಾಳಿ ಪ್ರಕರಣ ವಿಭಿನ್ನವಾದಂತಹ ತಿರುವನ್ನು ಪಡೆದುಕೊಂಡಿದೆ. ಇದೀಗ ಎನ್‌ಐಎ ಅಧಿಕಾರಿಗಳ ವಿರುದ್ಧ ಟಿಎಂಸಿ ನಾಯಕ ಮೊನೊಬ್ರತಾ ಜಾನಾ ಅವರ ಪತ್ನಿ ಎಫ್‌ಐಆರ್‌ ದಾಖಲಿಸಿದ್ದಾರೆ.

ತನಿಖೆ ನಡೆಸುವ ನೆಪದಲ್ಲಿ ಭೂಪತಿನಗರದಲ್ಲಿರುವ ತಮ್ಮ ನಿವಾಸಕ್ಕೆ ಬಲವಂತವಾಗಿ ಪ್ರವೇಶಿಸಿದ ಎನ್‌ಐಎ ಅಧಿಕಾರಿಗಳು ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಬಂಧಿತ ಟಿಎಂಸಿ ನಾಯಕನ ಪತ್ನಿ ಆರೋಪಿಸಿದ್ದಾರೆ.

2022ರಲ್ಲಿ ಪಶ್ಚಿಮ ಬಂಗಾಳದ ಪುರ್ಬಾ ಮೇದಿನ್‌ಪುರ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಸಂಚುಕೋರರಾದ ಬಲಾಯಿ ಚರಣ್ ಮೈತಿ ಮತ್ತು ಮನೋಬ್ರತ ಜನಾ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದಾಗ ತಮ್ಮ ನಿವಾಸದಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ ಜಾನ ಪತ್ನಿ ಮೋನಿ ಜಾನಾ ಭೂಪತಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಎನ್‌ಐಎ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿದ ದೂರನ್ನು ಸ್ವೀಕರಿಸಿದ ನಂತರ ನಾವು ಎಫ್‌ಐಆರ್ ದಾಖಲಿಸಿದ್ದೇವೆ. ನಾವು ದೂರಿನ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೋರ್ವರು ಹೇಳಿದ್ದಾರೆ.

ಎನ್‌ಐಎ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ:

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡವೊಂದರ ಮೇಲೆ ಸ್ಥಳೀಯರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿತ್ತು, ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 2022ರಲ್ಲಿ ‘ಪಟಾಕಿ ಸಿಡಿದ” ಘಟನೆಯನ್ನು ಮುಂದಿಟ್ಟು ಎನ್ಐಎ ತಂಡವು ಮುಂಜಾನೆ ಹಲವಾರು ಮನೆಗಳಿಗೆ ನುಗ್ಗಿದೆ, ಈ ವೇಳೆ ಆತ್ಮ ರಕ್ಷಣೆಗೆ ಗ್ರಾಮಸ್ಥರು ಪ್ರತಿರೋಧ ತೋರಿದ್ದಾರೆ ಎಂದು ಹೇಳಿದ್ದರು.

ಸ್ಥಳೀಯರ ಮೇಲೆ ಎನ್‌ಐಎ ದಾಳಿ ನಡೆಸಿದೆ ಎಂದು ಆರೋಪಿಸಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ದಾಳಿಯ ನೇತೃತ್ವ ವಹಿಸಿದವರು ಯಾರು? ಮಹಿಳೆಯರು ದಾಳಿ ಮಾಡಲಿಲ್ಲ, ಎನ್‌ಐಎ ದಾಳಿ ನಡೆಸಿತ್ತು. ಮಧ್ಯರಾತ್ರಿಯ ನಂತರ ಯಾರಾದರೂ ಮಹಿಳೆಯರಿರುವ ಮನೆಗೆ ನುಗ್ಗಿ ಅವರಿಗೆ ಹಿಂಸಿಸಿದರೆ, ಮಹಿಳೆಯರು ಏನು ಮಾಡಬೇಕು? ಅವರು ಕುಳಿತುಕೊಂಡು ನೋಡಬೇಕೆ? ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಲ್ಲವೇ ಮತ್ತು ತಮ್ಮ ಘನತೆಯನ್ನು ಕಾಪಾಡಬೇಕಲ್ಲವೇ? ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದರು.

ಮಧ್ಯರಾತ್ರಿಯ ನಂತರ ಕೆಲವು ಅಪರಿಚಿತರು ಗ್ರಾಮಕ್ಕೆ ಪ್ರವೇಶಿಸುವುದನ್ನು ಗ್ರಾಮಸ್ಥರು ನೋಡಿದರೆ, ಅವರು ಹೇಗೆ ಗುರುತಿಸುತ್ತಾರೆ? ಚುನಾವಣೆಗೂ ಮುನ್ನವೇಕೆ ಜನರನ್ನು ಬಂಧಿಸಲಾಗುತ್ತಿದೆ? ಟಿಎಂಸಿಯ ಎಲ್ಲಾ ಬೂತ್ ಏಜೆಂಟ್‌ಗಳನ್ನು ಬಂಧಿಸಿ ನಂತರ ಬಿಜೆಪಿ ಚುನಾವಣೆಯಲ್ಲಿ ಗೆಲ್ಲುವ ಭರವಸೆ ಇಟ್ಟುಕೊಂಡಿದೆಯಾ? ಬಿಜೆಪಿಯನ್ನು ಬೆಂಬಲಿಸಲು ಈ ಬಂಧನಗಳನ್ನು ಮಾಡಲಾಗಿದೆ ಎಂದು ಬ್ಯಾನರ್ಜಿ ಹೇಳಿದ್ದರು.

ಅಧಿಕಾರಿಗಳು ಗಾಯಗೊಂಡಿದ್ದಾರೆ: ಎನ್‌ಐಎ

ಭೂಪತಿನಗರದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ತೆರಳಿದ್ದ ವೇಳೆ ಸ್ಥಳೀಯರು ಕಲ್ಲುಗಳು ಮತ್ತು ಇಟ್ಟಿಗೆಗಳಿಂದ ದಾಳಿ ನಡೆಸಿದ್ದು, ಕಾರು ಸಂಪೂರ್ಣವಾಗಿ ಜಖಂಗೊಂಡಿದೆ ಮತ್ತು ಅಧಿಕಾರಿಯೋರ್ವರು ಗಾಯಗೊಂಡಿದ್ದಾರೆ ಎಂದು ಹೇಳಿದ್ದರು.

ಏನಿದು ಸ್ಪೋಟ ಪ್ರಕರಣ?

ಡಿಸೆಂಬರ್ 3, 2022ರಂದು ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ರಾಜ್‌ಕುಮಾರ್ ಮನ್ನಾ ಅವರ ಮನೆಯಲ್ಲಿ ನಡೆದ ಸ್ಫೋಟದಲ್ಲಿ ಮನ್ನಾ ಮತ್ತು ಇಬ್ಬರು ಪಕ್ಷದ ಕಾರ್ಯಕರ್ತರಾದ ಬಿಸ್ವಜಿತ್ ಗಯೆನ್ ಮತ್ತು ಬುದ್ಧದೇಬ್ ಮನ್ನಾ ಸೇರಿದಂತೆ ಮೂವರು ಸಾವನ್ನಪ್ಪಿದ್ದರು. ಮಾರ್ಚ್ 2023ರಲ್ಲಿ ಕಲ್ಕತ್ತಾ ಹೈಕೋರ್ಟ್ ಘಟನೆಯ ಬಗ್ಗೆ NIA ತನಿಖೆಗೆ ಆದೇಶಿಸಿದೆ. ತನಿಖಾ ಸಂಸ್ಥೆಯು ಕಳೆದ ವರ್ಷ ಜೂನ್‌ನಲ್ಲಿ ಈ ಕುರಿತು ತನಿಖೆಯನ್ನು ಪ್ರಾರಂಭಿಸಿದೆ ಮತ್ತು 8 ಟಿಎಂಸಿ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರಿಗೆ ಸಮನ್ಸ್ ಕಳುಹಿಸಿತ್ತು.

ಇದನ್ನು ಓದಿ: ಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ: ಸಂಜಯ್ ಸಿಂಗ್ ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...