Homeಮುಖಪುಟಪ.ಬಂಗಾಳ: ಎನ್‌ಐಎ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಪ.ಬಂಗಾಳ: ಎನ್‌ಐಎ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪ.ಬಂಗಾಳದಲ್ಲಿ ಎನ್‌ಐಎ ಅಧಿಕಾರಿಗಳ ಮೇಲೆ ದಾಳಿ ಪ್ರಕರಣ ವಿಭಿನ್ನವಾದಂತಹ ತಿರುವನ್ನು ಪಡೆದುಕೊಂಡಿದೆ. ಇದೀಗ ಎನ್‌ಐಎ ಅಧಿಕಾರಿಗಳ ವಿರುದ್ಧ ಟಿಎಂಸಿ ನಾಯಕ ಮೊನೊಬ್ರತಾ ಜಾನಾ ಅವರ ಪತ್ನಿ ಎಫ್‌ಐಆರ್‌ ದಾಖಲಿಸಿದ್ದಾರೆ.

ತನಿಖೆ ನಡೆಸುವ ನೆಪದಲ್ಲಿ ಭೂಪತಿನಗರದಲ್ಲಿರುವ ತಮ್ಮ ನಿವಾಸಕ್ಕೆ ಬಲವಂತವಾಗಿ ಪ್ರವೇಶಿಸಿದ ಎನ್‌ಐಎ ಅಧಿಕಾರಿಗಳು ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಬಂಧಿತ ಟಿಎಂಸಿ ನಾಯಕನ ಪತ್ನಿ ಆರೋಪಿಸಿದ್ದಾರೆ.

2022ರಲ್ಲಿ ಪಶ್ಚಿಮ ಬಂಗಾಳದ ಪುರ್ಬಾ ಮೇದಿನ್‌ಪುರ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಸಂಚುಕೋರರಾದ ಬಲಾಯಿ ಚರಣ್ ಮೈತಿ ಮತ್ತು ಮನೋಬ್ರತ ಜನಾ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದಾಗ ತಮ್ಮ ನಿವಾಸದಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ ಜಾನ ಪತ್ನಿ ಮೋನಿ ಜಾನಾ ಭೂಪತಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಎನ್‌ಐಎ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿದ ದೂರನ್ನು ಸ್ವೀಕರಿಸಿದ ನಂತರ ನಾವು ಎಫ್‌ಐಆರ್ ದಾಖಲಿಸಿದ್ದೇವೆ. ನಾವು ದೂರಿನ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೋರ್ವರು ಹೇಳಿದ್ದಾರೆ.

ಎನ್‌ಐಎ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ:

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡವೊಂದರ ಮೇಲೆ ಸ್ಥಳೀಯರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿತ್ತು, ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 2022ರಲ್ಲಿ ‘ಪಟಾಕಿ ಸಿಡಿದ” ಘಟನೆಯನ್ನು ಮುಂದಿಟ್ಟು ಎನ್ಐಎ ತಂಡವು ಮುಂಜಾನೆ ಹಲವಾರು ಮನೆಗಳಿಗೆ ನುಗ್ಗಿದೆ, ಈ ವೇಳೆ ಆತ್ಮ ರಕ್ಷಣೆಗೆ ಗ್ರಾಮಸ್ಥರು ಪ್ರತಿರೋಧ ತೋರಿದ್ದಾರೆ ಎಂದು ಹೇಳಿದ್ದರು.

ಸ್ಥಳೀಯರ ಮೇಲೆ ಎನ್‌ಐಎ ದಾಳಿ ನಡೆಸಿದೆ ಎಂದು ಆರೋಪಿಸಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ದಾಳಿಯ ನೇತೃತ್ವ ವಹಿಸಿದವರು ಯಾರು? ಮಹಿಳೆಯರು ದಾಳಿ ಮಾಡಲಿಲ್ಲ, ಎನ್‌ಐಎ ದಾಳಿ ನಡೆಸಿತ್ತು. ಮಧ್ಯರಾತ್ರಿಯ ನಂತರ ಯಾರಾದರೂ ಮಹಿಳೆಯರಿರುವ ಮನೆಗೆ ನುಗ್ಗಿ ಅವರಿಗೆ ಹಿಂಸಿಸಿದರೆ, ಮಹಿಳೆಯರು ಏನು ಮಾಡಬೇಕು? ಅವರು ಕುಳಿತುಕೊಂಡು ನೋಡಬೇಕೆ? ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಲ್ಲವೇ ಮತ್ತು ತಮ್ಮ ಘನತೆಯನ್ನು ಕಾಪಾಡಬೇಕಲ್ಲವೇ? ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದರು.

ಮಧ್ಯರಾತ್ರಿಯ ನಂತರ ಕೆಲವು ಅಪರಿಚಿತರು ಗ್ರಾಮಕ್ಕೆ ಪ್ರವೇಶಿಸುವುದನ್ನು ಗ್ರಾಮಸ್ಥರು ನೋಡಿದರೆ, ಅವರು ಹೇಗೆ ಗುರುತಿಸುತ್ತಾರೆ? ಚುನಾವಣೆಗೂ ಮುನ್ನವೇಕೆ ಜನರನ್ನು ಬಂಧಿಸಲಾಗುತ್ತಿದೆ? ಟಿಎಂಸಿಯ ಎಲ್ಲಾ ಬೂತ್ ಏಜೆಂಟ್‌ಗಳನ್ನು ಬಂಧಿಸಿ ನಂತರ ಬಿಜೆಪಿ ಚುನಾವಣೆಯಲ್ಲಿ ಗೆಲ್ಲುವ ಭರವಸೆ ಇಟ್ಟುಕೊಂಡಿದೆಯಾ? ಬಿಜೆಪಿಯನ್ನು ಬೆಂಬಲಿಸಲು ಈ ಬಂಧನಗಳನ್ನು ಮಾಡಲಾಗಿದೆ ಎಂದು ಬ್ಯಾನರ್ಜಿ ಹೇಳಿದ್ದರು.

ಅಧಿಕಾರಿಗಳು ಗಾಯಗೊಂಡಿದ್ದಾರೆ: ಎನ್‌ಐಎ

ಭೂಪತಿನಗರದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ತೆರಳಿದ್ದ ವೇಳೆ ಸ್ಥಳೀಯರು ಕಲ್ಲುಗಳು ಮತ್ತು ಇಟ್ಟಿಗೆಗಳಿಂದ ದಾಳಿ ನಡೆಸಿದ್ದು, ಕಾರು ಸಂಪೂರ್ಣವಾಗಿ ಜಖಂಗೊಂಡಿದೆ ಮತ್ತು ಅಧಿಕಾರಿಯೋರ್ವರು ಗಾಯಗೊಂಡಿದ್ದಾರೆ ಎಂದು ಹೇಳಿದ್ದರು.

ಏನಿದು ಸ್ಪೋಟ ಪ್ರಕರಣ?

ಡಿಸೆಂಬರ್ 3, 2022ರಂದು ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ರಾಜ್‌ಕುಮಾರ್ ಮನ್ನಾ ಅವರ ಮನೆಯಲ್ಲಿ ನಡೆದ ಸ್ಫೋಟದಲ್ಲಿ ಮನ್ನಾ ಮತ್ತು ಇಬ್ಬರು ಪಕ್ಷದ ಕಾರ್ಯಕರ್ತರಾದ ಬಿಸ್ವಜಿತ್ ಗಯೆನ್ ಮತ್ತು ಬುದ್ಧದೇಬ್ ಮನ್ನಾ ಸೇರಿದಂತೆ ಮೂವರು ಸಾವನ್ನಪ್ಪಿದ್ದರು. ಮಾರ್ಚ್ 2023ರಲ್ಲಿ ಕಲ್ಕತ್ತಾ ಹೈಕೋರ್ಟ್ ಘಟನೆಯ ಬಗ್ಗೆ NIA ತನಿಖೆಗೆ ಆದೇಶಿಸಿದೆ. ತನಿಖಾ ಸಂಸ್ಥೆಯು ಕಳೆದ ವರ್ಷ ಜೂನ್‌ನಲ್ಲಿ ಈ ಕುರಿತು ತನಿಖೆಯನ್ನು ಪ್ರಾರಂಭಿಸಿದೆ ಮತ್ತು 8 ಟಿಎಂಸಿ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರಿಗೆ ಸಮನ್ಸ್ ಕಳುಹಿಸಿತ್ತು.

ಇದನ್ನು ಓದಿ: ಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ: ಸಂಜಯ್ ಸಿಂಗ್ ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...