Homeಮುಖಪುಟವರದಿ ಮಾಡುತ್ತಿದ್ದಾಗ ಬಂಧನ: ಕಾರವಾನ್ ಪತ್ರಕರ್ತನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ವರದಿ ಮಾಡುತ್ತಿದ್ದಾಗ ಬಂಧನ: ಕಾರವಾನ್ ಪತ್ರಕರ್ತನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ಎಸಿಪಿ ಅಜಯ್ ಕುಮಾರ್ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು. ಕಾಲಿನಿಂದ ಒದ್ದರು. ಅದೇ ಸಮಯದಲ್ಲಿ ಒಬ್ಬ ಮುಸ್ಲಿಂ ಮತ್ತು ಒಬ್ಬ ಸಿಖ್ ಯುವಕನ ಮೇಲಯೂ ಪೊಲೀಸರು ಹಲ್ಲೆ ನಡೆಸುತ್ತಿದ್ದರು. - ಅಹಾನ್ ಪೆಂಕರ್

- Advertisement -
- Advertisement -

ಉತ್ತರ ದೆಹಲಿಯಲ್ಲಿ 14 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ‘ದಿ ಕಾರವಾನ್ ಮ್ಯಾಗಜಿನ್’ನ ಪತ್ರಕರ್ತನನ್ನು ನಾಲ್ಕು ಗಂಟೆಗಳ ಕಾಲ ಬಂಧಿಸಿದ್ದಲ್ಲದೆ, ಆತನ ಮೇಲೆ ದೆಹಲಿಯ ಹಿರಿಯ ಪೊಲೀಸರು ತೀವ್ರ ಹಲ್ಲೆ ನಡೆಸಿದ್ದಾರೆ ಎಂದು ಪತ್ರಿಕೆ ಆರೋಪಿಸಿದೆ.

ಕಾರವಾನ್‌ ಪತ್ರಿಕೆಯ ವರದಿಗಾರ ಅಹಾನ್ ಪೆಂಕಾರ್ ಮೇಲೆ, ಮಾಡೆಲ್ ಟೌನ್ ಪೊಲೀಸ್ ಠಾಣೆ ಆವರಣದಲ್ಲಿ ಎಸಿಪಿ ಅಜಯ್ ಕುಮಾರ್ ಕಾಲಿನಿಂದ ಒದ್ದು, ಕೆನ್ನಗೆ ಬಾರಿಸಿ ಹಲ್ಲೆ ನಡೆಸಿದ್ದಾರೆ. ಅಹಾನ್ ಪೆಂಕಾರ ತಾನು ವರದಿಗಾರನೆಂದು ಪದೇ ಪದೇ ಹೇಳಿ ಗುರುತಿನ ಚೀಟಿ ತೋರಿಸಿದರೂ ಸಹ ಅಮಾನವೀಯವಾಗಿ ಹಲ್ಲೆ ನಡೆಸಿದರು ಎಂದು ಕಾರವಾನ್ ಟ್ವೀಟ್ ಮಾಡಿದೆ.

ಉತ್ತರ ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ವಿರೋಧಿಸಿ, ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಮಾಡೆಲ್ ಟೌನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವರದಿ ಮಾಡುತ್ತಿದ್ದಾಗ ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾರವಾನ್ ಪತ್ರಿಕೆಯ “ಬೆನ್ನಿನ ಮೇಲೆ ಬಾಸುಂಡೆಗಳನ್ನು ಹೊಂದಿರುವ” ಅಹಾನ್ ಪೆಂಕರ್‌ರವರ ಚಿತ್ರವನ್ನು ಕಾರವಾನ್ ಪ್ರಕಟಿಸಿದೆ.

ಘಟನೆಯ ನಂತರ ಅಹಾನ್ ಪೆಂಕರ್ ದೆಹಲಿಯ ಪೊಲೀಸ್ ಕಮಿಷನರ್‌ ಎಸ್‌ಎನ್ ಶ್ರೀವತ್ಸರವರಿಗೆ ದೂರು ಸಲ್ಲಿಸಿದ್ದಾರೆ. “ನಾನು ಸಂತ್ರಸ್ತ ಬಾಲಕಿಯ ಚಿಕ್ಕಮ್ಮನೊಂದಿಗೆ ಮಾತನಾಡುತ್ತಿದ್ದೆ. ಆಗ ಪೊಲೀಸರು ಏಕಾಏಕಿ ನನ್ನನ್ನು ಎಳೆದೊಯ್ದರು. ಪತ್ರಿಕೆಯ ವರದಿಗಾರನೆಂದು ಗುರುತಿನ ಪತ್ರ ತೋರಿಸಿದರೂ ನನ್ನ ಮೇಲೆ ಹಲ್ಲೆ ನಡೆಸಿದರು. ಬಲವಂತವಾಗಿ ನನ್ನ ಮೊಬೈಲ್ ಕಿತ್ತುಕೊಂಡು ಪ್ರತಿಭಟನೆಗೆ ಸಂಬಂಧಿಸಿದಂತೆ ರೆಕಾರ್ಡ್ ಮಾಡಿದ ಎಲ್ಲಾ ವಿಡಿಯೋಗಳನ್ನು ಡಿಲೀಟ್ ಮಾಡಿದರು. ಅವಾಚ್ಯ ಶಬ್ದಗಳಿಂದ ನಿಂದಿಸಿ, ನನ್ನ ಮೇಲೆ ಕೇಸು ದಾಖಲಿಸುವ ಬೆದರಿಕೆ ಹಾಕಿದರು. ಎಸಿಪಿ ಅಜಯ್ ಕುಮಾರ್ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು. ಕಾಲಿನಿಂದ ಒದ್ದರು. ಅದೇ ಸಮಯದಲ್ಲಿ ಒಬ್ಬ ಮುಸ್ಲಿಂ ಮತ್ತು ಒಬ್ಬ ಸಿಖ್ ಯುವಕನ ಮೇಲೆ ಸಹ ಪೊಲೀಸರು ಹಲ್ಲೆ ನಡೆಸುತ್ತಿದ್ದರು. ಆ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸಬೇಕೆಂದು” ಪೆಂಕರ್ ದೂರಿನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ


ಎರಡು ತಿಂಗಳ ಹಿಂದೆಯಷ್ಟೇ ಕಾರವಾನ್ ಪತ್ರಿಕೆಯ ಮೂವರು ವರದಿಗಾರರು ಈಶಾನ್ಯ ದೆಹಲಿಯ ಸುಭಾಷ್ ಮೊಹಲ್ಲಾದಲ್ಲಿ ವರದಿ ಮಾಡುತ್ತಿದ್ದಾಗ ಹಲ್ಲೆಗೊಳಗಾಗಿದ್ದರು. ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿಯಲ್ಲಿನ ಗಲಭೆ ಪರಿಸ್ಥಿತಿ ಕುರಿತು ವರದಿ ಮಾಡುತ್ತಿದ್ದಾಗ ಅವರ ಮೇಲೆ ಉದ್ರಿಕ್ತ ಗುಂಪು ಪೊಲೀಸರ ಎದುರೇ ದಾಳಿ ನಡೆಸಿತ್ತು.

ಆ ಸಂದರ್ಭದಲ್ಲಿ ಎಡಿಟರ್ ಗಿಲ್ಡ್ ಆಫ್ ಇಂಡಿಯಾ ಸೇರಿದಂತೆ ಹಲವು ಪತ್ರಕರ್ತರ ಸಂಘಗಳು ‘ಪತ್ರಕರ್ತರ ಮೇಲಿನ ಹಲ್ಲೆಯನ್ನು’ ತೀವ್ರವಾಗಿ ಖಂಡಿಸಿದ್ದರು. ಎಫ್‌ಐಆರ್ ದಾಖಲಿಸಿ, ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರ ಮೇಲೆ ಒತ್ತಡ ತಂದಿದ್ದರು.

ಕಾರವಾನ್ ಸ್ವತಂತ್ರ ಮಾಧ್ಯಮವಾಗಿದ್ದು, ಅದು ಶೋಷಿತರ ಪರವಾಗಿ ವರದಿ ಮಾಡುವುದರ ಜೊತೆಗೆ ಆಳುವ ಸರ್ಕಾರಗಳ ನೀತಿಗಳನ್ನು ಕಟುವಾಗಿ ಟೀಕಿಸುತ್ತಿದೆ. ಹಾಗಾಗಿ ಅದರ ಮೇಲೆ ಹಲ್ಲೆ, ಬೆದರಿಕೆಗಳು ಬರುತ್ತಿವೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಕಾರವಾನ್ ಪತ್ರಕರ್ತರ ಮೇಲೆ ಹಲ್ಲೆ: ಪೋಲೀಸರಿಂದ ವರದಿ ಕೇಳಿದ ಪ್ರೆಸ್ ಕೌನ್ಸಿಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....