Homeಮುಖಪುಟವರದಿ ಮಾಡುತ್ತಿದ್ದಾಗ ಬಂಧನ: ಕಾರವಾನ್ ಪತ್ರಕರ್ತನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ವರದಿ ಮಾಡುತ್ತಿದ್ದಾಗ ಬಂಧನ: ಕಾರವಾನ್ ಪತ್ರಕರ್ತನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ಎಸಿಪಿ ಅಜಯ್ ಕುಮಾರ್ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು. ಕಾಲಿನಿಂದ ಒದ್ದರು. ಅದೇ ಸಮಯದಲ್ಲಿ ಒಬ್ಬ ಮುಸ್ಲಿಂ ಮತ್ತು ಒಬ್ಬ ಸಿಖ್ ಯುವಕನ ಮೇಲಯೂ ಪೊಲೀಸರು ಹಲ್ಲೆ ನಡೆಸುತ್ತಿದ್ದರು. - ಅಹಾನ್ ಪೆಂಕರ್

- Advertisement -
- Advertisement -

ಉತ್ತರ ದೆಹಲಿಯಲ್ಲಿ 14 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ‘ದಿ ಕಾರವಾನ್ ಮ್ಯಾಗಜಿನ್’ನ ಪತ್ರಕರ್ತನನ್ನು ನಾಲ್ಕು ಗಂಟೆಗಳ ಕಾಲ ಬಂಧಿಸಿದ್ದಲ್ಲದೆ, ಆತನ ಮೇಲೆ ದೆಹಲಿಯ ಹಿರಿಯ ಪೊಲೀಸರು ತೀವ್ರ ಹಲ್ಲೆ ನಡೆಸಿದ್ದಾರೆ ಎಂದು ಪತ್ರಿಕೆ ಆರೋಪಿಸಿದೆ.

ಕಾರವಾನ್‌ ಪತ್ರಿಕೆಯ ವರದಿಗಾರ ಅಹಾನ್ ಪೆಂಕಾರ್ ಮೇಲೆ, ಮಾಡೆಲ್ ಟೌನ್ ಪೊಲೀಸ್ ಠಾಣೆ ಆವರಣದಲ್ಲಿ ಎಸಿಪಿ ಅಜಯ್ ಕುಮಾರ್ ಕಾಲಿನಿಂದ ಒದ್ದು, ಕೆನ್ನಗೆ ಬಾರಿಸಿ ಹಲ್ಲೆ ನಡೆಸಿದ್ದಾರೆ. ಅಹಾನ್ ಪೆಂಕಾರ ತಾನು ವರದಿಗಾರನೆಂದು ಪದೇ ಪದೇ ಹೇಳಿ ಗುರುತಿನ ಚೀಟಿ ತೋರಿಸಿದರೂ ಸಹ ಅಮಾನವೀಯವಾಗಿ ಹಲ್ಲೆ ನಡೆಸಿದರು ಎಂದು ಕಾರವಾನ್ ಟ್ವೀಟ್ ಮಾಡಿದೆ.

ಉತ್ತರ ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ವಿರೋಧಿಸಿ, ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಮಾಡೆಲ್ ಟೌನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವರದಿ ಮಾಡುತ್ತಿದ್ದಾಗ ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾರವಾನ್ ಪತ್ರಿಕೆಯ “ಬೆನ್ನಿನ ಮೇಲೆ ಬಾಸುಂಡೆಗಳನ್ನು ಹೊಂದಿರುವ” ಅಹಾನ್ ಪೆಂಕರ್‌ರವರ ಚಿತ್ರವನ್ನು ಕಾರವಾನ್ ಪ್ರಕಟಿಸಿದೆ.

ಘಟನೆಯ ನಂತರ ಅಹಾನ್ ಪೆಂಕರ್ ದೆಹಲಿಯ ಪೊಲೀಸ್ ಕಮಿಷನರ್‌ ಎಸ್‌ಎನ್ ಶ್ರೀವತ್ಸರವರಿಗೆ ದೂರು ಸಲ್ಲಿಸಿದ್ದಾರೆ. “ನಾನು ಸಂತ್ರಸ್ತ ಬಾಲಕಿಯ ಚಿಕ್ಕಮ್ಮನೊಂದಿಗೆ ಮಾತನಾಡುತ್ತಿದ್ದೆ. ಆಗ ಪೊಲೀಸರು ಏಕಾಏಕಿ ನನ್ನನ್ನು ಎಳೆದೊಯ್ದರು. ಪತ್ರಿಕೆಯ ವರದಿಗಾರನೆಂದು ಗುರುತಿನ ಪತ್ರ ತೋರಿಸಿದರೂ ನನ್ನ ಮೇಲೆ ಹಲ್ಲೆ ನಡೆಸಿದರು. ಬಲವಂತವಾಗಿ ನನ್ನ ಮೊಬೈಲ್ ಕಿತ್ತುಕೊಂಡು ಪ್ರತಿಭಟನೆಗೆ ಸಂಬಂಧಿಸಿದಂತೆ ರೆಕಾರ್ಡ್ ಮಾಡಿದ ಎಲ್ಲಾ ವಿಡಿಯೋಗಳನ್ನು ಡಿಲೀಟ್ ಮಾಡಿದರು. ಅವಾಚ್ಯ ಶಬ್ದಗಳಿಂದ ನಿಂದಿಸಿ, ನನ್ನ ಮೇಲೆ ಕೇಸು ದಾಖಲಿಸುವ ಬೆದರಿಕೆ ಹಾಕಿದರು. ಎಸಿಪಿ ಅಜಯ್ ಕುಮಾರ್ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು. ಕಾಲಿನಿಂದ ಒದ್ದರು. ಅದೇ ಸಮಯದಲ್ಲಿ ಒಬ್ಬ ಮುಸ್ಲಿಂ ಮತ್ತು ಒಬ್ಬ ಸಿಖ್ ಯುವಕನ ಮೇಲೆ ಸಹ ಪೊಲೀಸರು ಹಲ್ಲೆ ನಡೆಸುತ್ತಿದ್ದರು. ಆ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸಬೇಕೆಂದು” ಪೆಂಕರ್ ದೂರಿನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ


ಎರಡು ತಿಂಗಳ ಹಿಂದೆಯಷ್ಟೇ ಕಾರವಾನ್ ಪತ್ರಿಕೆಯ ಮೂವರು ವರದಿಗಾರರು ಈಶಾನ್ಯ ದೆಹಲಿಯ ಸುಭಾಷ್ ಮೊಹಲ್ಲಾದಲ್ಲಿ ವರದಿ ಮಾಡುತ್ತಿದ್ದಾಗ ಹಲ್ಲೆಗೊಳಗಾಗಿದ್ದರು. ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿಯಲ್ಲಿನ ಗಲಭೆ ಪರಿಸ್ಥಿತಿ ಕುರಿತು ವರದಿ ಮಾಡುತ್ತಿದ್ದಾಗ ಅವರ ಮೇಲೆ ಉದ್ರಿಕ್ತ ಗುಂಪು ಪೊಲೀಸರ ಎದುರೇ ದಾಳಿ ನಡೆಸಿತ್ತು.

ಆ ಸಂದರ್ಭದಲ್ಲಿ ಎಡಿಟರ್ ಗಿಲ್ಡ್ ಆಫ್ ಇಂಡಿಯಾ ಸೇರಿದಂತೆ ಹಲವು ಪತ್ರಕರ್ತರ ಸಂಘಗಳು ‘ಪತ್ರಕರ್ತರ ಮೇಲಿನ ಹಲ್ಲೆಯನ್ನು’ ತೀವ್ರವಾಗಿ ಖಂಡಿಸಿದ್ದರು. ಎಫ್‌ಐಆರ್ ದಾಖಲಿಸಿ, ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರ ಮೇಲೆ ಒತ್ತಡ ತಂದಿದ್ದರು.

ಕಾರವಾನ್ ಸ್ವತಂತ್ರ ಮಾಧ್ಯಮವಾಗಿದ್ದು, ಅದು ಶೋಷಿತರ ಪರವಾಗಿ ವರದಿ ಮಾಡುವುದರ ಜೊತೆಗೆ ಆಳುವ ಸರ್ಕಾರಗಳ ನೀತಿಗಳನ್ನು ಕಟುವಾಗಿ ಟೀಕಿಸುತ್ತಿದೆ. ಹಾಗಾಗಿ ಅದರ ಮೇಲೆ ಹಲ್ಲೆ, ಬೆದರಿಕೆಗಳು ಬರುತ್ತಿವೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಕಾರವಾನ್ ಪತ್ರಕರ್ತರ ಮೇಲೆ ಹಲ್ಲೆ: ಪೋಲೀಸರಿಂದ ವರದಿ ಕೇಳಿದ ಪ್ರೆಸ್ ಕೌನ್ಸಿಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...