Homeಮುಖಪುಟವರದಿ ಮಾಡುತ್ತಿದ್ದಾಗ ಬಂಧನ: ಕಾರವಾನ್ ಪತ್ರಕರ್ತನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ವರದಿ ಮಾಡುತ್ತಿದ್ದಾಗ ಬಂಧನ: ಕಾರವಾನ್ ಪತ್ರಕರ್ತನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ಎಸಿಪಿ ಅಜಯ್ ಕುಮಾರ್ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು. ಕಾಲಿನಿಂದ ಒದ್ದರು. ಅದೇ ಸಮಯದಲ್ಲಿ ಒಬ್ಬ ಮುಸ್ಲಿಂ ಮತ್ತು ಒಬ್ಬ ಸಿಖ್ ಯುವಕನ ಮೇಲಯೂ ಪೊಲೀಸರು ಹಲ್ಲೆ ನಡೆಸುತ್ತಿದ್ದರು. - ಅಹಾನ್ ಪೆಂಕರ್

- Advertisement -
- Advertisement -

ಉತ್ತರ ದೆಹಲಿಯಲ್ಲಿ 14 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ‘ದಿ ಕಾರವಾನ್ ಮ್ಯಾಗಜಿನ್’ನ ಪತ್ರಕರ್ತನನ್ನು ನಾಲ್ಕು ಗಂಟೆಗಳ ಕಾಲ ಬಂಧಿಸಿದ್ದಲ್ಲದೆ, ಆತನ ಮೇಲೆ ದೆಹಲಿಯ ಹಿರಿಯ ಪೊಲೀಸರು ತೀವ್ರ ಹಲ್ಲೆ ನಡೆಸಿದ್ದಾರೆ ಎಂದು ಪತ್ರಿಕೆ ಆರೋಪಿಸಿದೆ.

ಕಾರವಾನ್‌ ಪತ್ರಿಕೆಯ ವರದಿಗಾರ ಅಹಾನ್ ಪೆಂಕಾರ್ ಮೇಲೆ, ಮಾಡೆಲ್ ಟೌನ್ ಪೊಲೀಸ್ ಠಾಣೆ ಆವರಣದಲ್ಲಿ ಎಸಿಪಿ ಅಜಯ್ ಕುಮಾರ್ ಕಾಲಿನಿಂದ ಒದ್ದು, ಕೆನ್ನಗೆ ಬಾರಿಸಿ ಹಲ್ಲೆ ನಡೆಸಿದ್ದಾರೆ. ಅಹಾನ್ ಪೆಂಕಾರ ತಾನು ವರದಿಗಾರನೆಂದು ಪದೇ ಪದೇ ಹೇಳಿ ಗುರುತಿನ ಚೀಟಿ ತೋರಿಸಿದರೂ ಸಹ ಅಮಾನವೀಯವಾಗಿ ಹಲ್ಲೆ ನಡೆಸಿದರು ಎಂದು ಕಾರವಾನ್ ಟ್ವೀಟ್ ಮಾಡಿದೆ.

ಉತ್ತರ ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ವಿರೋಧಿಸಿ, ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಮಾಡೆಲ್ ಟೌನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವರದಿ ಮಾಡುತ್ತಿದ್ದಾಗ ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾರವಾನ್ ಪತ್ರಿಕೆಯ “ಬೆನ್ನಿನ ಮೇಲೆ ಬಾಸುಂಡೆಗಳನ್ನು ಹೊಂದಿರುವ” ಅಹಾನ್ ಪೆಂಕರ್‌ರವರ ಚಿತ್ರವನ್ನು ಕಾರವಾನ್ ಪ್ರಕಟಿಸಿದೆ.

ಘಟನೆಯ ನಂತರ ಅಹಾನ್ ಪೆಂಕರ್ ದೆಹಲಿಯ ಪೊಲೀಸ್ ಕಮಿಷನರ್‌ ಎಸ್‌ಎನ್ ಶ್ರೀವತ್ಸರವರಿಗೆ ದೂರು ಸಲ್ಲಿಸಿದ್ದಾರೆ. “ನಾನು ಸಂತ್ರಸ್ತ ಬಾಲಕಿಯ ಚಿಕ್ಕಮ್ಮನೊಂದಿಗೆ ಮಾತನಾಡುತ್ತಿದ್ದೆ. ಆಗ ಪೊಲೀಸರು ಏಕಾಏಕಿ ನನ್ನನ್ನು ಎಳೆದೊಯ್ದರು. ಪತ್ರಿಕೆಯ ವರದಿಗಾರನೆಂದು ಗುರುತಿನ ಪತ್ರ ತೋರಿಸಿದರೂ ನನ್ನ ಮೇಲೆ ಹಲ್ಲೆ ನಡೆಸಿದರು. ಬಲವಂತವಾಗಿ ನನ್ನ ಮೊಬೈಲ್ ಕಿತ್ತುಕೊಂಡು ಪ್ರತಿಭಟನೆಗೆ ಸಂಬಂಧಿಸಿದಂತೆ ರೆಕಾರ್ಡ್ ಮಾಡಿದ ಎಲ್ಲಾ ವಿಡಿಯೋಗಳನ್ನು ಡಿಲೀಟ್ ಮಾಡಿದರು. ಅವಾಚ್ಯ ಶಬ್ದಗಳಿಂದ ನಿಂದಿಸಿ, ನನ್ನ ಮೇಲೆ ಕೇಸು ದಾಖಲಿಸುವ ಬೆದರಿಕೆ ಹಾಕಿದರು. ಎಸಿಪಿ ಅಜಯ್ ಕುಮಾರ್ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು. ಕಾಲಿನಿಂದ ಒದ್ದರು. ಅದೇ ಸಮಯದಲ್ಲಿ ಒಬ್ಬ ಮುಸ್ಲಿಂ ಮತ್ತು ಒಬ್ಬ ಸಿಖ್ ಯುವಕನ ಮೇಲೆ ಸಹ ಪೊಲೀಸರು ಹಲ್ಲೆ ನಡೆಸುತ್ತಿದ್ದರು. ಆ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸಬೇಕೆಂದು” ಪೆಂಕರ್ ದೂರಿನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ


ಎರಡು ತಿಂಗಳ ಹಿಂದೆಯಷ್ಟೇ ಕಾರವಾನ್ ಪತ್ರಿಕೆಯ ಮೂವರು ವರದಿಗಾರರು ಈಶಾನ್ಯ ದೆಹಲಿಯ ಸುಭಾಷ್ ಮೊಹಲ್ಲಾದಲ್ಲಿ ವರದಿ ಮಾಡುತ್ತಿದ್ದಾಗ ಹಲ್ಲೆಗೊಳಗಾಗಿದ್ದರು. ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿಯಲ್ಲಿನ ಗಲಭೆ ಪರಿಸ್ಥಿತಿ ಕುರಿತು ವರದಿ ಮಾಡುತ್ತಿದ್ದಾಗ ಅವರ ಮೇಲೆ ಉದ್ರಿಕ್ತ ಗುಂಪು ಪೊಲೀಸರ ಎದುರೇ ದಾಳಿ ನಡೆಸಿತ್ತು.

ಆ ಸಂದರ್ಭದಲ್ಲಿ ಎಡಿಟರ್ ಗಿಲ್ಡ್ ಆಫ್ ಇಂಡಿಯಾ ಸೇರಿದಂತೆ ಹಲವು ಪತ್ರಕರ್ತರ ಸಂಘಗಳು ‘ಪತ್ರಕರ್ತರ ಮೇಲಿನ ಹಲ್ಲೆಯನ್ನು’ ತೀವ್ರವಾಗಿ ಖಂಡಿಸಿದ್ದರು. ಎಫ್‌ಐಆರ್ ದಾಖಲಿಸಿ, ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರ ಮೇಲೆ ಒತ್ತಡ ತಂದಿದ್ದರು.

ಕಾರವಾನ್ ಸ್ವತಂತ್ರ ಮಾಧ್ಯಮವಾಗಿದ್ದು, ಅದು ಶೋಷಿತರ ಪರವಾಗಿ ವರದಿ ಮಾಡುವುದರ ಜೊತೆಗೆ ಆಳುವ ಸರ್ಕಾರಗಳ ನೀತಿಗಳನ್ನು ಕಟುವಾಗಿ ಟೀಕಿಸುತ್ತಿದೆ. ಹಾಗಾಗಿ ಅದರ ಮೇಲೆ ಹಲ್ಲೆ, ಬೆದರಿಕೆಗಳು ಬರುತ್ತಿವೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಕಾರವಾನ್ ಪತ್ರಕರ್ತರ ಮೇಲೆ ಹಲ್ಲೆ: ಪೋಲೀಸರಿಂದ ವರದಿ ಕೇಳಿದ ಪ್ರೆಸ್ ಕೌನ್ಸಿಲ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’;...

0
ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್...