Homeಮುಖಪುಟವರದಿ ಮಾಡುತ್ತಿದ್ದಾಗ ಬಂಧನ: ಕಾರವಾನ್ ಪತ್ರಕರ್ತನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ವರದಿ ಮಾಡುತ್ತಿದ್ದಾಗ ಬಂಧನ: ಕಾರವಾನ್ ಪತ್ರಕರ್ತನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ಎಸಿಪಿ ಅಜಯ್ ಕುಮಾರ್ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು. ಕಾಲಿನಿಂದ ಒದ್ದರು. ಅದೇ ಸಮಯದಲ್ಲಿ ಒಬ್ಬ ಮುಸ್ಲಿಂ ಮತ್ತು ಒಬ್ಬ ಸಿಖ್ ಯುವಕನ ಮೇಲಯೂ ಪೊಲೀಸರು ಹಲ್ಲೆ ನಡೆಸುತ್ತಿದ್ದರು. - ಅಹಾನ್ ಪೆಂಕರ್

- Advertisement -
- Advertisement -

ಉತ್ತರ ದೆಹಲಿಯಲ್ಲಿ 14 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ‘ದಿ ಕಾರವಾನ್ ಮ್ಯಾಗಜಿನ್’ನ ಪತ್ರಕರ್ತನನ್ನು ನಾಲ್ಕು ಗಂಟೆಗಳ ಕಾಲ ಬಂಧಿಸಿದ್ದಲ್ಲದೆ, ಆತನ ಮೇಲೆ ದೆಹಲಿಯ ಹಿರಿಯ ಪೊಲೀಸರು ತೀವ್ರ ಹಲ್ಲೆ ನಡೆಸಿದ್ದಾರೆ ಎಂದು ಪತ್ರಿಕೆ ಆರೋಪಿಸಿದೆ.

ಕಾರವಾನ್‌ ಪತ್ರಿಕೆಯ ವರದಿಗಾರ ಅಹಾನ್ ಪೆಂಕಾರ್ ಮೇಲೆ, ಮಾಡೆಲ್ ಟೌನ್ ಪೊಲೀಸ್ ಠಾಣೆ ಆವರಣದಲ್ಲಿ ಎಸಿಪಿ ಅಜಯ್ ಕುಮಾರ್ ಕಾಲಿನಿಂದ ಒದ್ದು, ಕೆನ್ನಗೆ ಬಾರಿಸಿ ಹಲ್ಲೆ ನಡೆಸಿದ್ದಾರೆ. ಅಹಾನ್ ಪೆಂಕಾರ ತಾನು ವರದಿಗಾರನೆಂದು ಪದೇ ಪದೇ ಹೇಳಿ ಗುರುತಿನ ಚೀಟಿ ತೋರಿಸಿದರೂ ಸಹ ಅಮಾನವೀಯವಾಗಿ ಹಲ್ಲೆ ನಡೆಸಿದರು ಎಂದು ಕಾರವಾನ್ ಟ್ವೀಟ್ ಮಾಡಿದೆ.

ಉತ್ತರ ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ವಿರೋಧಿಸಿ, ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಮಾಡೆಲ್ ಟೌನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವರದಿ ಮಾಡುತ್ತಿದ್ದಾಗ ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾರವಾನ್ ಪತ್ರಿಕೆಯ “ಬೆನ್ನಿನ ಮೇಲೆ ಬಾಸುಂಡೆಗಳನ್ನು ಹೊಂದಿರುವ” ಅಹಾನ್ ಪೆಂಕರ್‌ರವರ ಚಿತ್ರವನ್ನು ಕಾರವಾನ್ ಪ್ರಕಟಿಸಿದೆ.

ಘಟನೆಯ ನಂತರ ಅಹಾನ್ ಪೆಂಕರ್ ದೆಹಲಿಯ ಪೊಲೀಸ್ ಕಮಿಷನರ್‌ ಎಸ್‌ಎನ್ ಶ್ರೀವತ್ಸರವರಿಗೆ ದೂರು ಸಲ್ಲಿಸಿದ್ದಾರೆ. “ನಾನು ಸಂತ್ರಸ್ತ ಬಾಲಕಿಯ ಚಿಕ್ಕಮ್ಮನೊಂದಿಗೆ ಮಾತನಾಡುತ್ತಿದ್ದೆ. ಆಗ ಪೊಲೀಸರು ಏಕಾಏಕಿ ನನ್ನನ್ನು ಎಳೆದೊಯ್ದರು. ಪತ್ರಿಕೆಯ ವರದಿಗಾರನೆಂದು ಗುರುತಿನ ಪತ್ರ ತೋರಿಸಿದರೂ ನನ್ನ ಮೇಲೆ ಹಲ್ಲೆ ನಡೆಸಿದರು. ಬಲವಂತವಾಗಿ ನನ್ನ ಮೊಬೈಲ್ ಕಿತ್ತುಕೊಂಡು ಪ್ರತಿಭಟನೆಗೆ ಸಂಬಂಧಿಸಿದಂತೆ ರೆಕಾರ್ಡ್ ಮಾಡಿದ ಎಲ್ಲಾ ವಿಡಿಯೋಗಳನ್ನು ಡಿಲೀಟ್ ಮಾಡಿದರು. ಅವಾಚ್ಯ ಶಬ್ದಗಳಿಂದ ನಿಂದಿಸಿ, ನನ್ನ ಮೇಲೆ ಕೇಸು ದಾಖಲಿಸುವ ಬೆದರಿಕೆ ಹಾಕಿದರು. ಎಸಿಪಿ ಅಜಯ್ ಕುಮಾರ್ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು. ಕಾಲಿನಿಂದ ಒದ್ದರು. ಅದೇ ಸಮಯದಲ್ಲಿ ಒಬ್ಬ ಮುಸ್ಲಿಂ ಮತ್ತು ಒಬ್ಬ ಸಿಖ್ ಯುವಕನ ಮೇಲೆ ಸಹ ಪೊಲೀಸರು ಹಲ್ಲೆ ನಡೆಸುತ್ತಿದ್ದರು. ಆ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸಬೇಕೆಂದು” ಪೆಂಕರ್ ದೂರಿನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ


ಎರಡು ತಿಂಗಳ ಹಿಂದೆಯಷ್ಟೇ ಕಾರವಾನ್ ಪತ್ರಿಕೆಯ ಮೂವರು ವರದಿಗಾರರು ಈಶಾನ್ಯ ದೆಹಲಿಯ ಸುಭಾಷ್ ಮೊಹಲ್ಲಾದಲ್ಲಿ ವರದಿ ಮಾಡುತ್ತಿದ್ದಾಗ ಹಲ್ಲೆಗೊಳಗಾಗಿದ್ದರು. ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿಯಲ್ಲಿನ ಗಲಭೆ ಪರಿಸ್ಥಿತಿ ಕುರಿತು ವರದಿ ಮಾಡುತ್ತಿದ್ದಾಗ ಅವರ ಮೇಲೆ ಉದ್ರಿಕ್ತ ಗುಂಪು ಪೊಲೀಸರ ಎದುರೇ ದಾಳಿ ನಡೆಸಿತ್ತು.

ಆ ಸಂದರ್ಭದಲ್ಲಿ ಎಡಿಟರ್ ಗಿಲ್ಡ್ ಆಫ್ ಇಂಡಿಯಾ ಸೇರಿದಂತೆ ಹಲವು ಪತ್ರಕರ್ತರ ಸಂಘಗಳು ‘ಪತ್ರಕರ್ತರ ಮೇಲಿನ ಹಲ್ಲೆಯನ್ನು’ ತೀವ್ರವಾಗಿ ಖಂಡಿಸಿದ್ದರು. ಎಫ್‌ಐಆರ್ ದಾಖಲಿಸಿ, ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರ ಮೇಲೆ ಒತ್ತಡ ತಂದಿದ್ದರು.

ಕಾರವಾನ್ ಸ್ವತಂತ್ರ ಮಾಧ್ಯಮವಾಗಿದ್ದು, ಅದು ಶೋಷಿತರ ಪರವಾಗಿ ವರದಿ ಮಾಡುವುದರ ಜೊತೆಗೆ ಆಳುವ ಸರ್ಕಾರಗಳ ನೀತಿಗಳನ್ನು ಕಟುವಾಗಿ ಟೀಕಿಸುತ್ತಿದೆ. ಹಾಗಾಗಿ ಅದರ ಮೇಲೆ ಹಲ್ಲೆ, ಬೆದರಿಕೆಗಳು ಬರುತ್ತಿವೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಕಾರವಾನ್ ಪತ್ರಕರ್ತರ ಮೇಲೆ ಹಲ್ಲೆ: ಪೋಲೀಸರಿಂದ ವರದಿ ಕೇಳಿದ ಪ್ರೆಸ್ ಕೌನ್ಸಿಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...