Homeಮುಖಪುಟವರದಿ ಮಾಡುತ್ತಿದ್ದಾಗ ಬಂಧನ: ಕಾರವಾನ್ ಪತ್ರಕರ್ತನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ವರದಿ ಮಾಡುತ್ತಿದ್ದಾಗ ಬಂಧನ: ಕಾರವಾನ್ ಪತ್ರಕರ್ತನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ಎಸಿಪಿ ಅಜಯ್ ಕುಮಾರ್ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು. ಕಾಲಿನಿಂದ ಒದ್ದರು. ಅದೇ ಸಮಯದಲ್ಲಿ ಒಬ್ಬ ಮುಸ್ಲಿಂ ಮತ್ತು ಒಬ್ಬ ಸಿಖ್ ಯುವಕನ ಮೇಲಯೂ ಪೊಲೀಸರು ಹಲ್ಲೆ ನಡೆಸುತ್ತಿದ್ದರು. - ಅಹಾನ್ ಪೆಂಕರ್

- Advertisement -
- Advertisement -

ಉತ್ತರ ದೆಹಲಿಯಲ್ಲಿ 14 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ‘ದಿ ಕಾರವಾನ್ ಮ್ಯಾಗಜಿನ್’ನ ಪತ್ರಕರ್ತನನ್ನು ನಾಲ್ಕು ಗಂಟೆಗಳ ಕಾಲ ಬಂಧಿಸಿದ್ದಲ್ಲದೆ, ಆತನ ಮೇಲೆ ದೆಹಲಿಯ ಹಿರಿಯ ಪೊಲೀಸರು ತೀವ್ರ ಹಲ್ಲೆ ನಡೆಸಿದ್ದಾರೆ ಎಂದು ಪತ್ರಿಕೆ ಆರೋಪಿಸಿದೆ.

ಕಾರವಾನ್‌ ಪತ್ರಿಕೆಯ ವರದಿಗಾರ ಅಹಾನ್ ಪೆಂಕಾರ್ ಮೇಲೆ, ಮಾಡೆಲ್ ಟೌನ್ ಪೊಲೀಸ್ ಠಾಣೆ ಆವರಣದಲ್ಲಿ ಎಸಿಪಿ ಅಜಯ್ ಕುಮಾರ್ ಕಾಲಿನಿಂದ ಒದ್ದು, ಕೆನ್ನಗೆ ಬಾರಿಸಿ ಹಲ್ಲೆ ನಡೆಸಿದ್ದಾರೆ. ಅಹಾನ್ ಪೆಂಕಾರ ತಾನು ವರದಿಗಾರನೆಂದು ಪದೇ ಪದೇ ಹೇಳಿ ಗುರುತಿನ ಚೀಟಿ ತೋರಿಸಿದರೂ ಸಹ ಅಮಾನವೀಯವಾಗಿ ಹಲ್ಲೆ ನಡೆಸಿದರು ಎಂದು ಕಾರವಾನ್ ಟ್ವೀಟ್ ಮಾಡಿದೆ.

ಉತ್ತರ ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ವಿರೋಧಿಸಿ, ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಮಾಡೆಲ್ ಟೌನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವರದಿ ಮಾಡುತ್ತಿದ್ದಾಗ ಪೊಲೀಸರು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾರವಾನ್ ಪತ್ರಿಕೆಯ “ಬೆನ್ನಿನ ಮೇಲೆ ಬಾಸುಂಡೆಗಳನ್ನು ಹೊಂದಿರುವ” ಅಹಾನ್ ಪೆಂಕರ್‌ರವರ ಚಿತ್ರವನ್ನು ಕಾರವಾನ್ ಪ್ರಕಟಿಸಿದೆ.

ಘಟನೆಯ ನಂತರ ಅಹಾನ್ ಪೆಂಕರ್ ದೆಹಲಿಯ ಪೊಲೀಸ್ ಕಮಿಷನರ್‌ ಎಸ್‌ಎನ್ ಶ್ರೀವತ್ಸರವರಿಗೆ ದೂರು ಸಲ್ಲಿಸಿದ್ದಾರೆ. “ನಾನು ಸಂತ್ರಸ್ತ ಬಾಲಕಿಯ ಚಿಕ್ಕಮ್ಮನೊಂದಿಗೆ ಮಾತನಾಡುತ್ತಿದ್ದೆ. ಆಗ ಪೊಲೀಸರು ಏಕಾಏಕಿ ನನ್ನನ್ನು ಎಳೆದೊಯ್ದರು. ಪತ್ರಿಕೆಯ ವರದಿಗಾರನೆಂದು ಗುರುತಿನ ಪತ್ರ ತೋರಿಸಿದರೂ ನನ್ನ ಮೇಲೆ ಹಲ್ಲೆ ನಡೆಸಿದರು. ಬಲವಂತವಾಗಿ ನನ್ನ ಮೊಬೈಲ್ ಕಿತ್ತುಕೊಂಡು ಪ್ರತಿಭಟನೆಗೆ ಸಂಬಂಧಿಸಿದಂತೆ ರೆಕಾರ್ಡ್ ಮಾಡಿದ ಎಲ್ಲಾ ವಿಡಿಯೋಗಳನ್ನು ಡಿಲೀಟ್ ಮಾಡಿದರು. ಅವಾಚ್ಯ ಶಬ್ದಗಳಿಂದ ನಿಂದಿಸಿ, ನನ್ನ ಮೇಲೆ ಕೇಸು ದಾಖಲಿಸುವ ಬೆದರಿಕೆ ಹಾಕಿದರು. ಎಸಿಪಿ ಅಜಯ್ ಕುಮಾರ್ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು. ಕಾಲಿನಿಂದ ಒದ್ದರು. ಅದೇ ಸಮಯದಲ್ಲಿ ಒಬ್ಬ ಮುಸ್ಲಿಂ ಮತ್ತು ಒಬ್ಬ ಸಿಖ್ ಯುವಕನ ಮೇಲೆ ಸಹ ಪೊಲೀಸರು ಹಲ್ಲೆ ನಡೆಸುತ್ತಿದ್ದರು. ಆ ಪೊಲೀಸರ ಮೇಲೆ ಎಫ್‌ಐಆರ್ ದಾಖಲಿಸಬೇಕೆಂದು” ಪೆಂಕರ್ ದೂರಿನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ


ಎರಡು ತಿಂಗಳ ಹಿಂದೆಯಷ್ಟೇ ಕಾರವಾನ್ ಪತ್ರಿಕೆಯ ಮೂವರು ವರದಿಗಾರರು ಈಶಾನ್ಯ ದೆಹಲಿಯ ಸುಭಾಷ್ ಮೊಹಲ್ಲಾದಲ್ಲಿ ವರದಿ ಮಾಡುತ್ತಿದ್ದಾಗ ಹಲ್ಲೆಗೊಳಗಾಗಿದ್ದರು. ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿಯಲ್ಲಿನ ಗಲಭೆ ಪರಿಸ್ಥಿತಿ ಕುರಿತು ವರದಿ ಮಾಡುತ್ತಿದ್ದಾಗ ಅವರ ಮೇಲೆ ಉದ್ರಿಕ್ತ ಗುಂಪು ಪೊಲೀಸರ ಎದುರೇ ದಾಳಿ ನಡೆಸಿತ್ತು.

ಆ ಸಂದರ್ಭದಲ್ಲಿ ಎಡಿಟರ್ ಗಿಲ್ಡ್ ಆಫ್ ಇಂಡಿಯಾ ಸೇರಿದಂತೆ ಹಲವು ಪತ್ರಕರ್ತರ ಸಂಘಗಳು ‘ಪತ್ರಕರ್ತರ ಮೇಲಿನ ಹಲ್ಲೆಯನ್ನು’ ತೀವ್ರವಾಗಿ ಖಂಡಿಸಿದ್ದರು. ಎಫ್‌ಐಆರ್ ದಾಖಲಿಸಿ, ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರ ಮೇಲೆ ಒತ್ತಡ ತಂದಿದ್ದರು.

ಕಾರವಾನ್ ಸ್ವತಂತ್ರ ಮಾಧ್ಯಮವಾಗಿದ್ದು, ಅದು ಶೋಷಿತರ ಪರವಾಗಿ ವರದಿ ಮಾಡುವುದರ ಜೊತೆಗೆ ಆಳುವ ಸರ್ಕಾರಗಳ ನೀತಿಗಳನ್ನು ಕಟುವಾಗಿ ಟೀಕಿಸುತ್ತಿದೆ. ಹಾಗಾಗಿ ಅದರ ಮೇಲೆ ಹಲ್ಲೆ, ಬೆದರಿಕೆಗಳು ಬರುತ್ತಿವೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಕಾರವಾನ್ ಪತ್ರಕರ್ತರ ಮೇಲೆ ಹಲ್ಲೆ: ಪೋಲೀಸರಿಂದ ವರದಿ ಕೇಳಿದ ಪ್ರೆಸ್ ಕೌನ್ಸಿಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...