Homeಮುಖಪುಟಕಾರಣವಿಲ್ಲದೆ ಬಂಧಿಸಲಾಗಿದೆ: ಸಂಜಯ್ ರಾವತ್‌ಗೆ ಮುಂಬೈ ಕೋರ್ಟ್ ಜಾಮೀನು

ಕಾರಣವಿಲ್ಲದೆ ಬಂಧಿಸಲಾಗಿದೆ: ಸಂಜಯ್ ರಾವತ್‌ಗೆ ಮುಂಬೈ ಕೋರ್ಟ್ ಜಾಮೀನು

ಮೂರು ತಿಂಗಳ ಬಳಿಕ ಶಿವಸೇನೆ ಸಂಸದ ಸಂಜಯ್‌ ರಾವತ್‌ ಅವರಿಗೆ ಜಾಮೀನು ದೊರೆತಿದೆ

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿದ್ದ ಶಿವಸೇನಾ ಸಂಸದ ಸಂಜಯ್ ರಾವತ್‌ ಅವರಿಗೆ ಜಾಮೀನು ದೊರೆತಿದೆ.

ಮಧ್ಯ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಹೊರಬಂದ ಅವರಿಗೆ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಸದಸ್ಯರು ಕೇಸರಿ ಶಾಲು ಬೀಸುವ ಮೂಲಕ ಸ್ವಾಗತಿಸಿದರು. ಕಳೆದ ಮೂರು ತಿಂಗಳಿನಿಂದ ಅವರು ಬಂಧನದಲ್ಲಿದ್ದರು.

“ನನಗೆ ಸಂತೋಷವಾಗಿದೆ. ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇತ್ತು. ಅದು ಮತ್ತಷ್ಟು ಹೆಚ್ಚಿದೆ” ಎಂದು ಜೈಲಿನಿಂದ ಹೊರಬಂದ ನಂತರ ರಾವತ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾವುತ್ ಅವರ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ಅಸಮ್ಮತಿ ಸೂಚಿಸಿತು. ಆರ್ಥಿಕ ಅಪರಾಧಗಳ ತನಿಖೆಗೆ ನಿಯೋಜಿಸಲಾದ ಕೇಂದ್ರೀಯ ಏಜೆನ್ಸಿಯ ಕೋರಿಕೆಯಂತೆ ಜಾಮೀನನ್ನು ತಡೆಹಿಡಿಯಲು ಕೋರ್ಟ್ ನಿರಾಕರಿಸಿತು. ವಿಶೇಷ ನ್ಯಾಯಾಲಯವು ರಾವುತ್‌ಗೆ ಮಧ್ಯಾಹ್ನ ಜಾಮೀನು ನೀಡಿತು.

ಉಭಯ ಪಾರ್ಟಿಗಳ ವಿಚಾರಣೆಯಿಲ್ಲದೆ ಇಂತಹ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿದ ಹೈಕೋರ್ಟ್ ಗುರುವಾರಕ್ಕೆ ವಿಚಾರಣೆಯನ್ನು ಮುಂದೂಡಿತು.

“ನಾನು ಆದೇಶವನ್ನು ನೋಡಿಲ್ಲ. ಯಾವ ಆಧಾರದ ಮೇಲೆ ಜಾಮೀನು ನೀಡಲಾಗಿದೆ ಎಂದು ನನಗೆ ತಿಳಿದಿಲ್ಲ. ನೀವು (ಇಡಿ) ಯಾವ ಆಧಾರದ ಮೇಲೆ ಆದೇಶವನ್ನು ಪ್ರಶ್ನಿಸಿದ್ದೀರಿ ಎಂದು ನನಗೆ ತಿಳಿದಿಲ್ಲ. ನಾನು ಈಗ ತಡೆಯಾಜ್ಞೆ ನೀಡುವುದು ಹೇಗೆ? ಕಕ್ಷಿದಾರರನ್ನು ಆಲಿಸಬೇಕು” ಎಂದು ಹೈಕೋರ್ಟ್ ನ್ಯಾಯಮೂರ್ತಿ ಭಾರತಿ ಡಾಂಗ್ರೆ ಹೇಳಿದ್ದಾರೆ.

ಇದನ್ನೂ ಓದಿರಿ: ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ. ಚಂದ್ರಚೂಡ್

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತರಲ್ಲಿ ಒಬ್ಬರಾಗಿರುವ ಸಂಸದ ಸಂಜಯ್ ರಾವುತ್ ಅವರನ್ನು ಪತ್ರಾ ಚಾಲ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು “ಕಾರಣವಿಲ್ಲದೆ, ಕಾನೂನುಬಾಹಿರವಾಗಿ ಬಂಧಿಸಿದ” ಎಂದು ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಹೇಳಿದೆ. ಜಾಮೀನು ಮಂಜೂರು ಮಾಡುವ ವಿವರವಾದ ಆದೇಶದಲ್ಲಿ ಈ ಕುರಿತು ತಿಳಿಸಿದೆ ಎಂದು ‘ಲೈವ್‌ ಲಾ’ ವರದಿ ಮಾಡಿದೆ.

ವಿಶೇಷ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರು, “ಪ್ರವೀಣ್ ರಾವತ್ ಅವರನ್ನು ಸಿವಿಲ್ ವಿವಾದಕ್ಕಾಗಿ ಬಂಧಿಸಿದ್ದರೆ, ಸಂಜಯ್ ರಾವತ್ ಅವರನ್ನು ಯಾವುದೇ ಕಾರಣವಿಲ್ಲದೆ ಬಂಧಿಸಲಾಗಿದೆ ಎಂದು ಹೇಳಲು ಯಾವುದೇ ಮಾತುಗಳಿಲ್ಲ. ಈ ಸತ್ಯವು ಕಣ್ಣಿಗೆ ಕಾಣುತ್ತಿದೆ” ಎಂದಿದ್ದಾರೆ.

ಪತ್ರಾ ‘ಚಾಲ್’ (ವಠಾರ) ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜುಲೈ 31ರಂದು ರಾವತ್ ಅವರನ್ನು ಬಂಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...