Homeಮುಖಪುಟವಿದೇಶಿ ವಿವಿಗಳ ಆಗಮನ: ತಜ್ಞರ ವಿರೋಧ ಏಕೆ?

ವಿದೇಶಿ ವಿವಿಗಳ ಆಗಮನ: ತಜ್ಞರ ವಿರೋಧ ಏಕೆ?

- Advertisement -
- Advertisement -

ದೇಶದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ಮಾನದಂಡಗಳನ್ನು ರೂಪಿಸಿದೆ. ಇತ್ತ ತಮಿಳುನಾಡಿನ ಶಿಕ್ಷಣ ತಜ್ಞರು, ಇತರ ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ವಿದೇಶಿ ಘಟಕಗಳಿಗೆ ಹೋಲಿಸಿದರೆ ಶೈಕ್ಷಣಿಕ ಸಂಸ್ಥೆಗಳಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ವ್ಯಕ್ತಪಡಿಸಿದ್ದಾರೆ.

ಯುಜಿಸಿ ನಿಗದಿಪಡಿಸಿರುವ ಮಾನದಂಡಗಳಿಗೆ ಈ ವಿದೇಶಿ ವಿಶ್ವವಿದ್ಯಾನಿಲಯಗಳು ಶುಲ್ಕ ರಚನೆ, ಪರೀಕ್ಷೆಯ ನಮೂನೆಗಳು ಮತ್ತು ಕೋರ್ಸ್ ರಚನೆ ಸೇರಿದಂತೆ ಇನ್ನಿತರ ವಿಚಾರಗಳಲ್ಲಿ ಬದ್ಧವಾಗಿವೆಯೇ ಎಂಬುದು ಶಿಕ್ಷಣತಜ್ಞರು ಎತ್ತಿದ ಪ್ರಮುಖ ಕಾಳಜಿಯಾಗಿದೆ. ಇನ್ನು ಶುಲ್ಕ ರಚನೆ, ಪ್ರವೇಶ ಪ್ರಕ್ರಿಯೆಗಳು ಮತ್ತು ಕೋರ್ಸ್ ರಚನೆಯನ್ನು ನಿರ್ಧರಿಸಲು ವಿದೇಶಿ ವಿಶ್ವವಿದ್ಯಾಲಯಗಳಿಗೆ ಸ್ವಾಯತ್ತತೆಯನ್ನು ನೀಡಲಾಗುವುದು ಎಂದು ಯುಜಿಸಿ ಕರಡು ಹೇಳುತ್ತದೆ.

ವಿದೇಶಿ ವಿಶ್ವವಿದ್ಯಾಲಯಗಳು ಮೂಲಸೌಕರ್ಯಗಳನ್ನು ಸುಧಾರಿಸುವ ಮತ್ತು ಗುಣಮಟ್ಟದ ಶಿಕ್ಷಣವನ್ನು ನೀಡುವ ಬದಲು ಹಣ ಗಳಿಸುವ ಅಜೆಂಡಾದೊಂದಿಗೆ ಭಾರತದಲ್ಲಿ ಕ್ಯಾಂಪಸ್‌ಗಳನ್ನು ಸ್ಥಾಪಿಸುತ್ತವೆ. ಆ ಲಾಭವನ್ನು ತಮ್ಮ ದೇಶಗಳಿಗೆ ಹಿಂದಿರುಗಿಸುತ್ತವೆ. ಇದು ಭಾರತದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣಕ್ಕೆ ಒಳ್ಳೆಯದಲ್ಲ ಎಂದು ಶಿಕ್ಷಣ ತಜ್ಞರು ಹೇಳುತ್ತಾರೆ.

ಇನ್ನು ಈ ಬಗ್ಗೆ ಅಣ್ಣಾ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಡಾ.ಇ.ಬಾಲಗುರುಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, “ಯುಜಿಸಿಯ ಈ ಕ್ರಮವು ಇನ್ನು ಕೆಲವು ವರ್ಷಗಳ ನಂತರ ದೇಶದ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಲಿದೆ. ಭಾರತದ ಗಣ್ಯ ವಿಶ್ವವಿದ್ಯಾನಿಲಯಗಳು ಸಹ ಜಾಗತಿಕವಾಗಿ ಟಾಪ್ 200 ರಲ್ಲಿವೆ. ಹಾಗಾಗಿ ವಿದೇಶಿ ವಿವಿಗಳಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುವ ಬದಲಿಗೆ ಭಾರತೀಯ ವಿಶ್ವವಿದ್ಯಾಲಯಗಳ ಗುಣಮಟ್ಟವನ್ನು ಸುಧಾರಿಸುವತ್ತ ಗಮಣಹರಿಸುವುದು ಓಳ್ಳೆಯದು ಎಂದು ಅವರು ಹೇಳಿದರು.

ಈ ವಿದೇಶಿ ವಿಶ್ವವಿದ್ಯಾನಿಲಯಗಳ ಮೇಲೆ ನಿಯಂತ್ರಣದ ಕೊರತೆ ಉಂಟಾಗುತ್ತದೆ. ಅದೇ ರೀತಿ ಅವರು ಹೇಗೆ ಕೋರ್ಸ್ ರಚನೆ ಮಾಡುತ್ತಾರೆ ಎನ್ನುವ ಗೊಂದಲ ಹಾಗೂ ವಿದೇಶಿ ಪದವಿ ನೀಡುವ ನೆಪದಲ್ಲಿ ಅವರು ಅತಿಯಾದ ಶುಲ್ಕವನ್ನು ವಿಧಿಸುತ್ತಾರೆ ಎನ್ನುವುದು ಇಲ್ಲಿಯ ಶಿಕ್ಷಣತಜ್ಞರ ಪ್ರಮುಖ ಆತಂಕವಾಗಿದೆ.

ಮಧುರೈ ಮೂಲದ ಚಿಂತಕರ ಚಾವಡಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕ ಡಾ.ಜಿ.ಪದ್ಮನಾಭನ್ ಈ ವಿಚಾರವಾಗಿ ಮಾತನಾಡಿ, “ಈ ವಿದೇಶಿ ಶಿಕ್ಷಣ  ಸಂಸ್ಥೆಗಳಿಗೆ ಅವರ ಇಚ್ಛೆಯಂತೆ ವಿಶ್ವವಿದ್ಯಾಲಯ ತೆರೆಯಲು ಅವಕಾಶ ನೀಡಬಾರದು. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಹಣ ಮತ್ತು ಗುಣಮಟ್ಟದಿಂದ ತೊಂದರೆ ಅನುಭವಿಸಬಾರದು. ವಿದೇಶಿ ವಿಶ್ವವಿದ್ಯಾನಿಲಯಗಳು ಅತಿಯಾದ ಶುಲ್ಕ ವಿಧಿಸಲು ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಸಂಶೋಧನಾ ವಿದ್ಯಾರ್ಥಿ ಶಶಾಂಕ ಅವರು ನಾನುಗೌರಿ.ಕಾಂ ಪ್ರತಿನಿಧಿಯೊಂದಿಗೆ ಆಭಿಪ್ರಾಯ ಹಂಚಿಕೊಂಡಿದ್ದು, “ವಿದೇಶಿ ವಿಶ್ವವಿದ್ಯಾಲಯಗಳು ದೇಶದಲ್ಲಿ ಸ್ಥಾಪನೆಯಾದರೆ, ಬಡ ಹಾಗೂ ಮದ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅಲ್ಲಿ ಅವಕಾಶವೇ ಸಿಗಲ್ಲ. ಏಕೆಂದರೆ ವೆಚ್ಚ ಭರಿಸುವ ಶಕ್ತಿ ಇರದ ಕಾರಣ ಅಲ್ಲಿಯೂ ಕೂಡ ಹಣವಂತರ ಮಕ್ಕಳಿಗೆ ಹೆಚ್ಚಿನ ಅವಕಾಶ ಸಿಗುತ್ತದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ. ಇನ್ನು ನಮ್ಮ ದೇಶದಲ್ಲಿ ಶೈಕ್ಷಣಿಕೆ ಕ್ಷೇತ್ರದಿಂದ ಬರುವಂತಹ ಹಣವನ್ನು ಮರಳಿ ಶಿಕ್ಷಣಕ್ಕೆ ಬಳಕೆ ಮಾಡಬೇಕು ಎನ್ನುವ ನಿಯಮ ಇದೆ. ಆದರೆ ಇದೀಗ ವಿದೇಶಿ ವಿವಿ ಗಳು ಇಲ್ಲಿ ಕೇವಲ ಲಾಭಕ್ಕೊಸ್ಕರ ಬಂದು ವಿಪರೀತ ಶುಲ್ಕ ಪಡೆದು ವಿದೇಶದಲ್ಲಿರುವ ತಮ್ಮ ಮಾತೃ ಸಂಸ್ಥೆಗೆ ನೀಡುತ್ತವೆ. ಇದರಿಂದ ನಮ್ಮ ದೇಶಕ್ಕೆ ಯಾವುದೇ ಲಾಭವಿಲ್ಲ. ಇಲ್ಲಿಯ ಉನ್ನತ ಶಿಕ್ಷಣಕ್ಕೆ ಸರ್ಕಾರ ಅನುದಾನ ನೀಡುವಲ್ಲಿ ಹಿಂದೆ ಬಿದ್ದಿದೆ. ಸ್ವದೇಶಿಯ ಸಂಸ್ಥೆಗಳಿಗೆ ಹೆಚ್ಚಿನ ಅವಕಾಶ ನೀಡುವ ಬದಲಿಗೆ ವಿದೇಶಿಗರಿಗೆ ಅವಕಾಶ ನೀಡುವುದರಲ್ಲಿ ಯಾವುದೇ ಅರ್ಥ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸಮಾನ ಶಿಕ್ಷಣದ ಹೋರಾಟಗಾರರು ಹಾಗೂ ಚಿಂತಕರಾದ ಶ್ರೀಪಾದ ಭಟ್ ಈ ವಿಚಾರವಾಗಿ ನಮ್ಮ ಪ್ರತಿನಿಧಿಯೊಂದಿಗೆ ಮಾತನಾಡಿ, “ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯ ಅವಶ್ಯಕತೆ ಇದೆ. ಆದರೆ ಈಗಿನ ನೂತನ ಶಿಕ್ಷಣ ನೀತಿ ಸಂವಿಧಾನದ ಆಶಯಗಳಿಗೆ ವಿರುದ್ಧವಿದೆ. ಇನ್ನು ಈ ವಿದೇಶಿ ವಿವಿಗಳನ್ನು ದೇಶಕ್ಕೆ ತರುತ್ತೇವೆ ಎಂದು ಹೇಳುವುದು ಸರಿಯಲ್ಲ. ವಿದೇಶಿ ವಿವಿಗಳು ಬೇರೆ ದೇಶಗಳನ್ನು ಬಿಟ್ಟು, ನಮ್ಮ ದೇಶಕ್ಕೆ ಬರಲು ಒಪ್ಪಿರೊದಕ್ಕೆ ಕಾರಣ ಏನು? ಇವರು ನೀಡುವ ರಿಯಾಯತಿಗಳು ಅಲ್ಲವೇ? ಅದೇ ರಿಯಾಯತಿ ಮತ್ತು ಸವಲತ್ತುಗಳನ್ನು ದೇಶದಲ್ಲಿರುವ ಸರ್ಕಾರಿ ವಿವಿಗಳಿಗೆ ನೀಡಬಹುದಲ್ಲವೇ? ಇನ್ನು ಈ ವಿದೇಶಿ ಶಿಕ್ಷಣ ಸಂಸ್ಥೆಗಳಿಂದ ಯಾರಿಗೆ ಲಾಭ ಇದೆ? ಅವರ ಶಿಕ್ಷಣದ ಶೈಲಿ ಭಾರತೀಯ ವಿದ್ಯಾರ್ಥಿಗಳಿಗೆ ಎಷ್ಟು ಅನಕೂಲ ಆಗಲಿದೆ? ದಲಿತ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ಸಿಗುತ್ತದೆಯೇ? ಆ ವಿವಿ ಗಳಲ್ಲಿ ಇಲ್ಲಿಯ ಪ್ರಾಧ್ಯಾಪಕರಿಗೆ ಅವಕಾಶ ನೀಡಲಾಗುತ್ತದೆ? ಒಂದು ವೇಳೆ ಅವಕಾಶವಿದ್ದು, ಇಲ್ಲಿಯ ಪ್ರಧ್ಯಾಪಕರು ಹೆಚ್ಚಿನ ಸಂಬಳದ ಕಾರಣಕ್ಕೆ ಆ ವಿವಿ ಗೆ ಹೋದರೆ ಇಲ್ಲಿಯ ಸರ್ಕಾರಿ ವಿವಿಗಳ ಗತಿ ಏನು?” ಎಂದು ಪ್ರಶ್ನೆಗಳ ಸುರಿಮಳೆಗೈದು ವಿದೇಶಿ ವಿವಿಗಳ ಆಗಮನವನ್ನು ವಿರೋಧಿಸಿದರು.

“ವಿದೇಶಿ ವಿವಿಗಳಿಗೆ ಅವಕಾಶ ನೀಡುವ ಜವಾಬ್ಧಾರಿನ್ನು ಯುಜಿಸಿ ವಹಿಸುವುದು ಸರಿಯಲ್ಲ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕಿತ್ತು. ದೇಶಕ್ಕೆ ಅದರಿಂದ ಎಷ್ಟು ಅನುಕೂಲ ಹಾಗೂ ಅನಾನುಕೂಲತೆ ಬಗ್ಗೆ ಚರ್ಚೆಯಾಗಬೇಕಿತ್ತು. ದೇಶದ ಭದ್ರತೆಯೂ ಅಷ್ಟೇ ಮುಖ್ಯ. ಹಾಗೆಯೆ ಇಲ್ಲಿಯ ಶಿಕ್ಷಣ ವ್ಯವಸ್ಥೆಯ ಮೇಲೆ ಹೇರಿರುವ ನಿಯಮಗಳನ್ನೇ ಅವುಗಳ ಮೇಲೆ ಹೇರಲು ಸಾಧ್ಯವಿದೆಯೇ.. ಇಲ್ಲ. ಹಾಗಾಗಿ ಇದು ದೇಶಕ್ಕೂ, ಇಲ್ಲಿಯ ವಿದ್ಯಾಥಿಗಳಿಗೂ ಮಾರಕವಾಗುವಂತಹದ್ದು” ಎಂದು ಅವರು ಅಸಮಾಧಾನ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...