Homeಮುಖಪುಟವಿದೇಶಿ ವಿವಿಗಳ ಆಗಮನ: ತಜ್ಞರ ವಿರೋಧ ಏಕೆ?

ವಿದೇಶಿ ವಿವಿಗಳ ಆಗಮನ: ತಜ್ಞರ ವಿರೋಧ ಏಕೆ?

- Advertisement -
- Advertisement -

ದೇಶದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ಮಾನದಂಡಗಳನ್ನು ರೂಪಿಸಿದೆ. ಇತ್ತ ತಮಿಳುನಾಡಿನ ಶಿಕ್ಷಣ ತಜ್ಞರು, ಇತರ ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ವಿದೇಶಿ ಘಟಕಗಳಿಗೆ ಹೋಲಿಸಿದರೆ ಶೈಕ್ಷಣಿಕ ಸಂಸ್ಥೆಗಳಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ವ್ಯಕ್ತಪಡಿಸಿದ್ದಾರೆ.

ಯುಜಿಸಿ ನಿಗದಿಪಡಿಸಿರುವ ಮಾನದಂಡಗಳಿಗೆ ಈ ವಿದೇಶಿ ವಿಶ್ವವಿದ್ಯಾನಿಲಯಗಳು ಶುಲ್ಕ ರಚನೆ, ಪರೀಕ್ಷೆಯ ನಮೂನೆಗಳು ಮತ್ತು ಕೋರ್ಸ್ ರಚನೆ ಸೇರಿದಂತೆ ಇನ್ನಿತರ ವಿಚಾರಗಳಲ್ಲಿ ಬದ್ಧವಾಗಿವೆಯೇ ಎಂಬುದು ಶಿಕ್ಷಣತಜ್ಞರು ಎತ್ತಿದ ಪ್ರಮುಖ ಕಾಳಜಿಯಾಗಿದೆ. ಇನ್ನು ಶುಲ್ಕ ರಚನೆ, ಪ್ರವೇಶ ಪ್ರಕ್ರಿಯೆಗಳು ಮತ್ತು ಕೋರ್ಸ್ ರಚನೆಯನ್ನು ನಿರ್ಧರಿಸಲು ವಿದೇಶಿ ವಿಶ್ವವಿದ್ಯಾಲಯಗಳಿಗೆ ಸ್ವಾಯತ್ತತೆಯನ್ನು ನೀಡಲಾಗುವುದು ಎಂದು ಯುಜಿಸಿ ಕರಡು ಹೇಳುತ್ತದೆ.

ವಿದೇಶಿ ವಿಶ್ವವಿದ್ಯಾಲಯಗಳು ಮೂಲಸೌಕರ್ಯಗಳನ್ನು ಸುಧಾರಿಸುವ ಮತ್ತು ಗುಣಮಟ್ಟದ ಶಿಕ್ಷಣವನ್ನು ನೀಡುವ ಬದಲು ಹಣ ಗಳಿಸುವ ಅಜೆಂಡಾದೊಂದಿಗೆ ಭಾರತದಲ್ಲಿ ಕ್ಯಾಂಪಸ್‌ಗಳನ್ನು ಸ್ಥಾಪಿಸುತ್ತವೆ. ಆ ಲಾಭವನ್ನು ತಮ್ಮ ದೇಶಗಳಿಗೆ ಹಿಂದಿರುಗಿಸುತ್ತವೆ. ಇದು ಭಾರತದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣಕ್ಕೆ ಒಳ್ಳೆಯದಲ್ಲ ಎಂದು ಶಿಕ್ಷಣ ತಜ್ಞರು ಹೇಳುತ್ತಾರೆ.

ಇನ್ನು ಈ ಬಗ್ಗೆ ಅಣ್ಣಾ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಡಾ.ಇ.ಬಾಲಗುರುಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, “ಯುಜಿಸಿಯ ಈ ಕ್ರಮವು ಇನ್ನು ಕೆಲವು ವರ್ಷಗಳ ನಂತರ ದೇಶದ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಲಿದೆ. ಭಾರತದ ಗಣ್ಯ ವಿಶ್ವವಿದ್ಯಾನಿಲಯಗಳು ಸಹ ಜಾಗತಿಕವಾಗಿ ಟಾಪ್ 200 ರಲ್ಲಿವೆ. ಹಾಗಾಗಿ ವಿದೇಶಿ ವಿವಿಗಳಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುವ ಬದಲಿಗೆ ಭಾರತೀಯ ವಿಶ್ವವಿದ್ಯಾಲಯಗಳ ಗುಣಮಟ್ಟವನ್ನು ಸುಧಾರಿಸುವತ್ತ ಗಮಣಹರಿಸುವುದು ಓಳ್ಳೆಯದು ಎಂದು ಅವರು ಹೇಳಿದರು.

ಈ ವಿದೇಶಿ ವಿಶ್ವವಿದ್ಯಾನಿಲಯಗಳ ಮೇಲೆ ನಿಯಂತ್ರಣದ ಕೊರತೆ ಉಂಟಾಗುತ್ತದೆ. ಅದೇ ರೀತಿ ಅವರು ಹೇಗೆ ಕೋರ್ಸ್ ರಚನೆ ಮಾಡುತ್ತಾರೆ ಎನ್ನುವ ಗೊಂದಲ ಹಾಗೂ ವಿದೇಶಿ ಪದವಿ ನೀಡುವ ನೆಪದಲ್ಲಿ ಅವರು ಅತಿಯಾದ ಶುಲ್ಕವನ್ನು ವಿಧಿಸುತ್ತಾರೆ ಎನ್ನುವುದು ಇಲ್ಲಿಯ ಶಿಕ್ಷಣತಜ್ಞರ ಪ್ರಮುಖ ಆತಂಕವಾಗಿದೆ.

ಮಧುರೈ ಮೂಲದ ಚಿಂತಕರ ಚಾವಡಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕ ಡಾ.ಜಿ.ಪದ್ಮನಾಭನ್ ಈ ವಿಚಾರವಾಗಿ ಮಾತನಾಡಿ, “ಈ ವಿದೇಶಿ ಶಿಕ್ಷಣ  ಸಂಸ್ಥೆಗಳಿಗೆ ಅವರ ಇಚ್ಛೆಯಂತೆ ವಿಶ್ವವಿದ್ಯಾಲಯ ತೆರೆಯಲು ಅವಕಾಶ ನೀಡಬಾರದು. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಹಣ ಮತ್ತು ಗುಣಮಟ್ಟದಿಂದ ತೊಂದರೆ ಅನುಭವಿಸಬಾರದು. ವಿದೇಶಿ ವಿಶ್ವವಿದ್ಯಾನಿಲಯಗಳು ಅತಿಯಾದ ಶುಲ್ಕ ವಿಧಿಸಲು ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಸಂಶೋಧನಾ ವಿದ್ಯಾರ್ಥಿ ಶಶಾಂಕ ಅವರು ನಾನುಗೌರಿ.ಕಾಂ ಪ್ರತಿನಿಧಿಯೊಂದಿಗೆ ಆಭಿಪ್ರಾಯ ಹಂಚಿಕೊಂಡಿದ್ದು, “ವಿದೇಶಿ ವಿಶ್ವವಿದ್ಯಾಲಯಗಳು ದೇಶದಲ್ಲಿ ಸ್ಥಾಪನೆಯಾದರೆ, ಬಡ ಹಾಗೂ ಮದ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅಲ್ಲಿ ಅವಕಾಶವೇ ಸಿಗಲ್ಲ. ಏಕೆಂದರೆ ವೆಚ್ಚ ಭರಿಸುವ ಶಕ್ತಿ ಇರದ ಕಾರಣ ಅಲ್ಲಿಯೂ ಕೂಡ ಹಣವಂತರ ಮಕ್ಕಳಿಗೆ ಹೆಚ್ಚಿನ ಅವಕಾಶ ಸಿಗುತ್ತದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ. ಇನ್ನು ನಮ್ಮ ದೇಶದಲ್ಲಿ ಶೈಕ್ಷಣಿಕೆ ಕ್ಷೇತ್ರದಿಂದ ಬರುವಂತಹ ಹಣವನ್ನು ಮರಳಿ ಶಿಕ್ಷಣಕ್ಕೆ ಬಳಕೆ ಮಾಡಬೇಕು ಎನ್ನುವ ನಿಯಮ ಇದೆ. ಆದರೆ ಇದೀಗ ವಿದೇಶಿ ವಿವಿ ಗಳು ಇಲ್ಲಿ ಕೇವಲ ಲಾಭಕ್ಕೊಸ್ಕರ ಬಂದು ವಿಪರೀತ ಶುಲ್ಕ ಪಡೆದು ವಿದೇಶದಲ್ಲಿರುವ ತಮ್ಮ ಮಾತೃ ಸಂಸ್ಥೆಗೆ ನೀಡುತ್ತವೆ. ಇದರಿಂದ ನಮ್ಮ ದೇಶಕ್ಕೆ ಯಾವುದೇ ಲಾಭವಿಲ್ಲ. ಇಲ್ಲಿಯ ಉನ್ನತ ಶಿಕ್ಷಣಕ್ಕೆ ಸರ್ಕಾರ ಅನುದಾನ ನೀಡುವಲ್ಲಿ ಹಿಂದೆ ಬಿದ್ದಿದೆ. ಸ್ವದೇಶಿಯ ಸಂಸ್ಥೆಗಳಿಗೆ ಹೆಚ್ಚಿನ ಅವಕಾಶ ನೀಡುವ ಬದಲಿಗೆ ವಿದೇಶಿಗರಿಗೆ ಅವಕಾಶ ನೀಡುವುದರಲ್ಲಿ ಯಾವುದೇ ಅರ್ಥ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸಮಾನ ಶಿಕ್ಷಣದ ಹೋರಾಟಗಾರರು ಹಾಗೂ ಚಿಂತಕರಾದ ಶ್ರೀಪಾದ ಭಟ್ ಈ ವಿಚಾರವಾಗಿ ನಮ್ಮ ಪ್ರತಿನಿಧಿಯೊಂದಿಗೆ ಮಾತನಾಡಿ, “ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯ ಅವಶ್ಯಕತೆ ಇದೆ. ಆದರೆ ಈಗಿನ ನೂತನ ಶಿಕ್ಷಣ ನೀತಿ ಸಂವಿಧಾನದ ಆಶಯಗಳಿಗೆ ವಿರುದ್ಧವಿದೆ. ಇನ್ನು ಈ ವಿದೇಶಿ ವಿವಿಗಳನ್ನು ದೇಶಕ್ಕೆ ತರುತ್ತೇವೆ ಎಂದು ಹೇಳುವುದು ಸರಿಯಲ್ಲ. ವಿದೇಶಿ ವಿವಿಗಳು ಬೇರೆ ದೇಶಗಳನ್ನು ಬಿಟ್ಟು, ನಮ್ಮ ದೇಶಕ್ಕೆ ಬರಲು ಒಪ್ಪಿರೊದಕ್ಕೆ ಕಾರಣ ಏನು? ಇವರು ನೀಡುವ ರಿಯಾಯತಿಗಳು ಅಲ್ಲವೇ? ಅದೇ ರಿಯಾಯತಿ ಮತ್ತು ಸವಲತ್ತುಗಳನ್ನು ದೇಶದಲ್ಲಿರುವ ಸರ್ಕಾರಿ ವಿವಿಗಳಿಗೆ ನೀಡಬಹುದಲ್ಲವೇ? ಇನ್ನು ಈ ವಿದೇಶಿ ಶಿಕ್ಷಣ ಸಂಸ್ಥೆಗಳಿಂದ ಯಾರಿಗೆ ಲಾಭ ಇದೆ? ಅವರ ಶಿಕ್ಷಣದ ಶೈಲಿ ಭಾರತೀಯ ವಿದ್ಯಾರ್ಥಿಗಳಿಗೆ ಎಷ್ಟು ಅನಕೂಲ ಆಗಲಿದೆ? ದಲಿತ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ಸಿಗುತ್ತದೆಯೇ? ಆ ವಿವಿ ಗಳಲ್ಲಿ ಇಲ್ಲಿಯ ಪ್ರಾಧ್ಯಾಪಕರಿಗೆ ಅವಕಾಶ ನೀಡಲಾಗುತ್ತದೆ? ಒಂದು ವೇಳೆ ಅವಕಾಶವಿದ್ದು, ಇಲ್ಲಿಯ ಪ್ರಧ್ಯಾಪಕರು ಹೆಚ್ಚಿನ ಸಂಬಳದ ಕಾರಣಕ್ಕೆ ಆ ವಿವಿ ಗೆ ಹೋದರೆ ಇಲ್ಲಿಯ ಸರ್ಕಾರಿ ವಿವಿಗಳ ಗತಿ ಏನು?” ಎಂದು ಪ್ರಶ್ನೆಗಳ ಸುರಿಮಳೆಗೈದು ವಿದೇಶಿ ವಿವಿಗಳ ಆಗಮನವನ್ನು ವಿರೋಧಿಸಿದರು.

“ವಿದೇಶಿ ವಿವಿಗಳಿಗೆ ಅವಕಾಶ ನೀಡುವ ಜವಾಬ್ಧಾರಿನ್ನು ಯುಜಿಸಿ ವಹಿಸುವುದು ಸರಿಯಲ್ಲ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕಿತ್ತು. ದೇಶಕ್ಕೆ ಅದರಿಂದ ಎಷ್ಟು ಅನುಕೂಲ ಹಾಗೂ ಅನಾನುಕೂಲತೆ ಬಗ್ಗೆ ಚರ್ಚೆಯಾಗಬೇಕಿತ್ತು. ದೇಶದ ಭದ್ರತೆಯೂ ಅಷ್ಟೇ ಮುಖ್ಯ. ಹಾಗೆಯೆ ಇಲ್ಲಿಯ ಶಿಕ್ಷಣ ವ್ಯವಸ್ಥೆಯ ಮೇಲೆ ಹೇರಿರುವ ನಿಯಮಗಳನ್ನೇ ಅವುಗಳ ಮೇಲೆ ಹೇರಲು ಸಾಧ್ಯವಿದೆಯೇ.. ಇಲ್ಲ. ಹಾಗಾಗಿ ಇದು ದೇಶಕ್ಕೂ, ಇಲ್ಲಿಯ ವಿದ್ಯಾಥಿಗಳಿಗೂ ಮಾರಕವಾಗುವಂತಹದ್ದು” ಎಂದು ಅವರು ಅಸಮಾಧಾನ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...