Homeಮುಖಪುಟವಿದೇಶಿ ವಿವಿಗಳ ಆಗಮನ: ತಜ್ಞರ ವಿರೋಧ ಏಕೆ?

ವಿದೇಶಿ ವಿವಿಗಳ ಆಗಮನ: ತಜ್ಞರ ವಿರೋಧ ಏಕೆ?

- Advertisement -
- Advertisement -

ದೇಶದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ಮಾನದಂಡಗಳನ್ನು ರೂಪಿಸಿದೆ. ಇತ್ತ ತಮಿಳುನಾಡಿನ ಶಿಕ್ಷಣ ತಜ್ಞರು, ಇತರ ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ವಿದೇಶಿ ಘಟಕಗಳಿಗೆ ಹೋಲಿಸಿದರೆ ಶೈಕ್ಷಣಿಕ ಸಂಸ್ಥೆಗಳಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ವ್ಯಕ್ತಪಡಿಸಿದ್ದಾರೆ.

ಯುಜಿಸಿ ನಿಗದಿಪಡಿಸಿರುವ ಮಾನದಂಡಗಳಿಗೆ ಈ ವಿದೇಶಿ ವಿಶ್ವವಿದ್ಯಾನಿಲಯಗಳು ಶುಲ್ಕ ರಚನೆ, ಪರೀಕ್ಷೆಯ ನಮೂನೆಗಳು ಮತ್ತು ಕೋರ್ಸ್ ರಚನೆ ಸೇರಿದಂತೆ ಇನ್ನಿತರ ವಿಚಾರಗಳಲ್ಲಿ ಬದ್ಧವಾಗಿವೆಯೇ ಎಂಬುದು ಶಿಕ್ಷಣತಜ್ಞರು ಎತ್ತಿದ ಪ್ರಮುಖ ಕಾಳಜಿಯಾಗಿದೆ. ಇನ್ನು ಶುಲ್ಕ ರಚನೆ, ಪ್ರವೇಶ ಪ್ರಕ್ರಿಯೆಗಳು ಮತ್ತು ಕೋರ್ಸ್ ರಚನೆಯನ್ನು ನಿರ್ಧರಿಸಲು ವಿದೇಶಿ ವಿಶ್ವವಿದ್ಯಾಲಯಗಳಿಗೆ ಸ್ವಾಯತ್ತತೆಯನ್ನು ನೀಡಲಾಗುವುದು ಎಂದು ಯುಜಿಸಿ ಕರಡು ಹೇಳುತ್ತದೆ.

ವಿದೇಶಿ ವಿಶ್ವವಿದ್ಯಾಲಯಗಳು ಮೂಲಸೌಕರ್ಯಗಳನ್ನು ಸುಧಾರಿಸುವ ಮತ್ತು ಗುಣಮಟ್ಟದ ಶಿಕ್ಷಣವನ್ನು ನೀಡುವ ಬದಲು ಹಣ ಗಳಿಸುವ ಅಜೆಂಡಾದೊಂದಿಗೆ ಭಾರತದಲ್ಲಿ ಕ್ಯಾಂಪಸ್‌ಗಳನ್ನು ಸ್ಥಾಪಿಸುತ್ತವೆ. ಆ ಲಾಭವನ್ನು ತಮ್ಮ ದೇಶಗಳಿಗೆ ಹಿಂದಿರುಗಿಸುತ್ತವೆ. ಇದು ಭಾರತದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣಕ್ಕೆ ಒಳ್ಳೆಯದಲ್ಲ ಎಂದು ಶಿಕ್ಷಣ ತಜ್ಞರು ಹೇಳುತ್ತಾರೆ.

ಇನ್ನು ಈ ಬಗ್ಗೆ ಅಣ್ಣಾ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಡಾ.ಇ.ಬಾಲಗುರುಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, “ಯುಜಿಸಿಯ ಈ ಕ್ರಮವು ಇನ್ನು ಕೆಲವು ವರ್ಷಗಳ ನಂತರ ದೇಶದ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಲಿದೆ. ಭಾರತದ ಗಣ್ಯ ವಿಶ್ವವಿದ್ಯಾನಿಲಯಗಳು ಸಹ ಜಾಗತಿಕವಾಗಿ ಟಾಪ್ 200 ರಲ್ಲಿವೆ. ಹಾಗಾಗಿ ವಿದೇಶಿ ವಿವಿಗಳಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುವ ಬದಲಿಗೆ ಭಾರತೀಯ ವಿಶ್ವವಿದ್ಯಾಲಯಗಳ ಗುಣಮಟ್ಟವನ್ನು ಸುಧಾರಿಸುವತ್ತ ಗಮಣಹರಿಸುವುದು ಓಳ್ಳೆಯದು ಎಂದು ಅವರು ಹೇಳಿದರು.

ಈ ವಿದೇಶಿ ವಿಶ್ವವಿದ್ಯಾನಿಲಯಗಳ ಮೇಲೆ ನಿಯಂತ್ರಣದ ಕೊರತೆ ಉಂಟಾಗುತ್ತದೆ. ಅದೇ ರೀತಿ ಅವರು ಹೇಗೆ ಕೋರ್ಸ್ ರಚನೆ ಮಾಡುತ್ತಾರೆ ಎನ್ನುವ ಗೊಂದಲ ಹಾಗೂ ವಿದೇಶಿ ಪದವಿ ನೀಡುವ ನೆಪದಲ್ಲಿ ಅವರು ಅತಿಯಾದ ಶುಲ್ಕವನ್ನು ವಿಧಿಸುತ್ತಾರೆ ಎನ್ನುವುದು ಇಲ್ಲಿಯ ಶಿಕ್ಷಣತಜ್ಞರ ಪ್ರಮುಖ ಆತಂಕವಾಗಿದೆ.

ಮಧುರೈ ಮೂಲದ ಚಿಂತಕರ ಚಾವಡಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕ ಡಾ.ಜಿ.ಪದ್ಮನಾಭನ್ ಈ ವಿಚಾರವಾಗಿ ಮಾತನಾಡಿ, “ಈ ವಿದೇಶಿ ಶಿಕ್ಷಣ  ಸಂಸ್ಥೆಗಳಿಗೆ ಅವರ ಇಚ್ಛೆಯಂತೆ ವಿಶ್ವವಿದ್ಯಾಲಯ ತೆರೆಯಲು ಅವಕಾಶ ನೀಡಬಾರದು. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಹಣ ಮತ್ತು ಗುಣಮಟ್ಟದಿಂದ ತೊಂದರೆ ಅನುಭವಿಸಬಾರದು. ವಿದೇಶಿ ವಿಶ್ವವಿದ್ಯಾನಿಲಯಗಳು ಅತಿಯಾದ ಶುಲ್ಕ ವಿಧಿಸಲು ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಸಂಶೋಧನಾ ವಿದ್ಯಾರ್ಥಿ ಶಶಾಂಕ ಅವರು ನಾನುಗೌರಿ.ಕಾಂ ಪ್ರತಿನಿಧಿಯೊಂದಿಗೆ ಆಭಿಪ್ರಾಯ ಹಂಚಿಕೊಂಡಿದ್ದು, “ವಿದೇಶಿ ವಿಶ್ವವಿದ್ಯಾಲಯಗಳು ದೇಶದಲ್ಲಿ ಸ್ಥಾಪನೆಯಾದರೆ, ಬಡ ಹಾಗೂ ಮದ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅಲ್ಲಿ ಅವಕಾಶವೇ ಸಿಗಲ್ಲ. ಏಕೆಂದರೆ ವೆಚ್ಚ ಭರಿಸುವ ಶಕ್ತಿ ಇರದ ಕಾರಣ ಅಲ್ಲಿಯೂ ಕೂಡ ಹಣವಂತರ ಮಕ್ಕಳಿಗೆ ಹೆಚ್ಚಿನ ಅವಕಾಶ ಸಿಗುತ್ತದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ. ಇನ್ನು ನಮ್ಮ ದೇಶದಲ್ಲಿ ಶೈಕ್ಷಣಿಕೆ ಕ್ಷೇತ್ರದಿಂದ ಬರುವಂತಹ ಹಣವನ್ನು ಮರಳಿ ಶಿಕ್ಷಣಕ್ಕೆ ಬಳಕೆ ಮಾಡಬೇಕು ಎನ್ನುವ ನಿಯಮ ಇದೆ. ಆದರೆ ಇದೀಗ ವಿದೇಶಿ ವಿವಿ ಗಳು ಇಲ್ಲಿ ಕೇವಲ ಲಾಭಕ್ಕೊಸ್ಕರ ಬಂದು ವಿಪರೀತ ಶುಲ್ಕ ಪಡೆದು ವಿದೇಶದಲ್ಲಿರುವ ತಮ್ಮ ಮಾತೃ ಸಂಸ್ಥೆಗೆ ನೀಡುತ್ತವೆ. ಇದರಿಂದ ನಮ್ಮ ದೇಶಕ್ಕೆ ಯಾವುದೇ ಲಾಭವಿಲ್ಲ. ಇಲ್ಲಿಯ ಉನ್ನತ ಶಿಕ್ಷಣಕ್ಕೆ ಸರ್ಕಾರ ಅನುದಾನ ನೀಡುವಲ್ಲಿ ಹಿಂದೆ ಬಿದ್ದಿದೆ. ಸ್ವದೇಶಿಯ ಸಂಸ್ಥೆಗಳಿಗೆ ಹೆಚ್ಚಿನ ಅವಕಾಶ ನೀಡುವ ಬದಲಿಗೆ ವಿದೇಶಿಗರಿಗೆ ಅವಕಾಶ ನೀಡುವುದರಲ್ಲಿ ಯಾವುದೇ ಅರ್ಥ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸಮಾನ ಶಿಕ್ಷಣದ ಹೋರಾಟಗಾರರು ಹಾಗೂ ಚಿಂತಕರಾದ ಶ್ರೀಪಾದ ಭಟ್ ಈ ವಿಚಾರವಾಗಿ ನಮ್ಮ ಪ್ರತಿನಿಧಿಯೊಂದಿಗೆ ಮಾತನಾಡಿ, “ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯ ಅವಶ್ಯಕತೆ ಇದೆ. ಆದರೆ ಈಗಿನ ನೂತನ ಶಿಕ್ಷಣ ನೀತಿ ಸಂವಿಧಾನದ ಆಶಯಗಳಿಗೆ ವಿರುದ್ಧವಿದೆ. ಇನ್ನು ಈ ವಿದೇಶಿ ವಿವಿಗಳನ್ನು ದೇಶಕ್ಕೆ ತರುತ್ತೇವೆ ಎಂದು ಹೇಳುವುದು ಸರಿಯಲ್ಲ. ವಿದೇಶಿ ವಿವಿಗಳು ಬೇರೆ ದೇಶಗಳನ್ನು ಬಿಟ್ಟು, ನಮ್ಮ ದೇಶಕ್ಕೆ ಬರಲು ಒಪ್ಪಿರೊದಕ್ಕೆ ಕಾರಣ ಏನು? ಇವರು ನೀಡುವ ರಿಯಾಯತಿಗಳು ಅಲ್ಲವೇ? ಅದೇ ರಿಯಾಯತಿ ಮತ್ತು ಸವಲತ್ತುಗಳನ್ನು ದೇಶದಲ್ಲಿರುವ ಸರ್ಕಾರಿ ವಿವಿಗಳಿಗೆ ನೀಡಬಹುದಲ್ಲವೇ? ಇನ್ನು ಈ ವಿದೇಶಿ ಶಿಕ್ಷಣ ಸಂಸ್ಥೆಗಳಿಂದ ಯಾರಿಗೆ ಲಾಭ ಇದೆ? ಅವರ ಶಿಕ್ಷಣದ ಶೈಲಿ ಭಾರತೀಯ ವಿದ್ಯಾರ್ಥಿಗಳಿಗೆ ಎಷ್ಟು ಅನಕೂಲ ಆಗಲಿದೆ? ದಲಿತ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ಸಿಗುತ್ತದೆಯೇ? ಆ ವಿವಿ ಗಳಲ್ಲಿ ಇಲ್ಲಿಯ ಪ್ರಾಧ್ಯಾಪಕರಿಗೆ ಅವಕಾಶ ನೀಡಲಾಗುತ್ತದೆ? ಒಂದು ವೇಳೆ ಅವಕಾಶವಿದ್ದು, ಇಲ್ಲಿಯ ಪ್ರಧ್ಯಾಪಕರು ಹೆಚ್ಚಿನ ಸಂಬಳದ ಕಾರಣಕ್ಕೆ ಆ ವಿವಿ ಗೆ ಹೋದರೆ ಇಲ್ಲಿಯ ಸರ್ಕಾರಿ ವಿವಿಗಳ ಗತಿ ಏನು?” ಎಂದು ಪ್ರಶ್ನೆಗಳ ಸುರಿಮಳೆಗೈದು ವಿದೇಶಿ ವಿವಿಗಳ ಆಗಮನವನ್ನು ವಿರೋಧಿಸಿದರು.

“ವಿದೇಶಿ ವಿವಿಗಳಿಗೆ ಅವಕಾಶ ನೀಡುವ ಜವಾಬ್ಧಾರಿನ್ನು ಯುಜಿಸಿ ವಹಿಸುವುದು ಸರಿಯಲ್ಲ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕಿತ್ತು. ದೇಶಕ್ಕೆ ಅದರಿಂದ ಎಷ್ಟು ಅನುಕೂಲ ಹಾಗೂ ಅನಾನುಕೂಲತೆ ಬಗ್ಗೆ ಚರ್ಚೆಯಾಗಬೇಕಿತ್ತು. ದೇಶದ ಭದ್ರತೆಯೂ ಅಷ್ಟೇ ಮುಖ್ಯ. ಹಾಗೆಯೆ ಇಲ್ಲಿಯ ಶಿಕ್ಷಣ ವ್ಯವಸ್ಥೆಯ ಮೇಲೆ ಹೇರಿರುವ ನಿಯಮಗಳನ್ನೇ ಅವುಗಳ ಮೇಲೆ ಹೇರಲು ಸಾಧ್ಯವಿದೆಯೇ.. ಇಲ್ಲ. ಹಾಗಾಗಿ ಇದು ದೇಶಕ್ಕೂ, ಇಲ್ಲಿಯ ವಿದ್ಯಾಥಿಗಳಿಗೂ ಮಾರಕವಾಗುವಂತಹದ್ದು” ಎಂದು ಅವರು ಅಸಮಾಧಾನ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...